Homeಮುಖಪುಟಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ಅಮೆರಿಕದಂತೆ ಇಲ್ಲಿಯೂ ಸಾಮಾಜಿಕ ಜಾಲತಾಣಗಳು ಕಾರ್ಯನಿರ್ವಹಿಸಿದ್ದರೆ, ಇಷ್ಟೊತ್ತಿಗಾಗಲೇ ಅಮಿತ್ ಮಾಳವಿಯ, ಕಪಿಲ್ ಮಿಶ್ರಾ, ತೇಜಸ್ವಿ ಸೂರ್ಯ ಇತ್ಯಾದಿ ವಿಭಜನಾಕಾರಿ ಸಂದೇಶ ವಾಹಕರ ಖಾತೆಗಳು ಎಂದೋ ಮಣ್ಣುಪಾಲು ಆಗಬೇಕಿತ್ತು. ಆದರೆ, ಅದೇಕೆ ಆಗಲಿಲ್ಲ?

- Advertisement -
- Advertisement -

ಫೇಸ್‌ಬುಕ್, ಟ್ವೀಟರ್‌ಗಳೇನೂ ಸಂಪೂರ್ಣ ಪ್ರಜಾಪ್ರಭುತ್ವವಾದಿಯಲ್ಲ ಎಂಬುದು ಭಾರತದಲ್ಲಿ ದೃಢಪಟ್ಟಿದೆ. ಆದರೆ ಅಮೆರಿಕದಲ್ಲಿ ಅವಕ್ಕೆ ಹೆಚ್ಚಿನ ಸ್ವಾತಂತ್ರ್ಯ ಇರುವ ಕಾರಣಕ್ಕೆ ಟ್ವೀಟರ್ ಖಾಯಂ ಆಗಿ ಟ್ರಂಪ್ ಖಾತೆಯನ್ನು ಸ್ಥಗಿತಗೊಳಿಸಲು ಸಾಧ್ಯವಾಗಿದೆಯಷ್ಟೇ.
ಇದೊಳ್ಳೆ ಕತೆ. ಬಿಜೆಪಿಯ ಹಲವರು ಈಗ ಅಭಿವ್ಯಕ್ತಿ ಸ್ವಾತಂತ್ರ್ಯ, ಫ್ರೀ ಸ್ಪೀಚ್ ಮತ್ತು ಡೆಮಾಕ್ರಸಿ-ಇತ್ಯಾದಿ ಪದಪುಂಜಗಳನ್ನು ಬಳಸುತ್ತಿದಾರಷ್ಟೇ. ಶುಕ್ರವಾರ ಟ್ರಂಪ್ ಸಾಹೇಬರ ಟ್ವೀಟರ್ ಖಾತೆಯನ್ನು ಖಾಯಂ ಆಗಿ ಸ್ಥಗಿತಗೊಳಿಸಿದ ನಂತರ ಅವರು ನೀಡುತ್ತಿರುವ ಪ್ರತಿಕ್ರಿಯೆಗಳು ಅವರ ಆಷಾಢಭೂತಿತನಕ್ಕೆ ಸಾಕ್ಷಿಯಾಗಿವೆ.

ಟ್ವೀಟರ್ ಖಾತೆ ಸ್ಥಗಿತಗೊಳಿಸಲು ಕಾರಣವಾದ, ಕ್ಯಾಪಿಟಲ್ ಮೇಲೆ ದಾಳಿಯಾಗುವಂತೆ ಟ್ರಂಪ್ ಪ್ರಚೋದನಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರ ಬಗ್ಗೆ ಬಿಜೆಪಿಯ ಈ ಧ್ವನಿಗಳು ಪ್ರಸ್ತಾಪಿಸುತ್ತಿಲ್ಲ. ಅಥವಾ ಟ್ವೀಟರ್ ಖಾತೆಯೊಂದರ ರದ್ದು ಅದ್ಹೇಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂಬುದನ್ನೂ ಹೇಳುತ್ತಿಲ್ಲ.

ಈ ಧ್ವನಿಗಳ ಒಟ್ಟೂ ಸಾರಾಂಶ: ಅಮೆರಿಕದ ಅಧ್ಯಕ್ಷರ ಟ್ವೀಟರ್ ಖಾತೆಯನ್ನೇ ರದ್ದು ಮಾಡಲಾಗಿದ್ದು, ತಮ್ಮ ಖಾತೆಗಳಿಗೂ ಈ ಅಪಾಯ ಒದಗಬಹುದೆಂಬ ಆತಂಕವಷ್ಟೇ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ಸಾಮಾಜಿಕ ಜಾಲತಾಣಗಳ ನಿಯಮ ಮತ್ತು ಷರತ್ತುಗಳು ಅಮೆರಿಕ ಮತ್ತು ಭಾರತದಲ್ಲಿ ಒಂದೇ ಆಗಿಲ್ಲ. ಅಲ್ಲಿ ಅವಕ್ಕೆ ಇಲ್ಲಿಗಿಂತ ಹೆಚ್ಚಿನ ಸ್ವಾತಂತ್ರ್ಯವಿದ್ದ ಕಾರಣಕ್ಕೆ ಈ ಹಿಂದೆಯೂ ಅವು ಟ್ರಂಪ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತ ಬಂದಿದ್ದವು.
ಭಾರತದಲ್ಲಿ ಆ ನಿಯಮಗಳು ಕಠಿಣವಾಗಿಲ್ಲ ಮತ್ತು ಆಡಳಿತರೂಢ ಬಿಜೆಪಿ 8-10 ವರ್ಷಗಳಿಂದ ಜಾಲತಾಣಗಳ ಜೊತೆ ’ಗುಪ್ತ’ ಮೈತ್ರಿ ಮಾಡಿಕೊಂಡೇ ಬಂದಿರುವುದನ್ನು ಫೇಸ್‌ಬುಕ್ ತಾರತಮ್ಯದ ಪ್ರಕರಣ ತೋರಿಸುತ್ತದೆ.

ಅಮೆರಿಕದಂತೆ ಇಲ್ಲಿಯೂ ಸಾಮಾಜಿಕ ಜಾಲತಾಣಗಳು ಕಾರ್ಯನಿರ್ವಹಿಸಿದ್ದರೆ, ಇಷ್ಟೊತ್ತಿಗಾಗಲೇ ಅಮಿತ್ ಮಾಳವಿಯ, ಕಪಿಲ್ ಮಿಶ್ರಾ, ತೇಜಸ್ವಿ ಸೂರ್ಯ ಇತ್ಯಾದಿ ವಿಭಜನಾಕಾರಿ ಸಂದೇಶ ವಾಹಕರ ಖಾತೆಗಳು ಎಂದೋ ಮಣ್ಣುಪಾಲು ಆಗಬೇಕಿತ್ತು. ಆದರೆ, ಅದೇಕೆ ಆಗಲಿಲ್ಲ?

ಕೋಮುವಾದಿ ಪ್ರಚೋದನ್ಮಾತಕ ಹೇಳಿಕೆ/ಸಂದೇಶಗಳಿಗೆ ಕುಖ್ಯಾತಿ ಪಡೆದಿರುವ ಬೆಂಗಳೂರು ದಕ್ಷಿಣದ ಸಂಸದ ಮತ್ತು ರಾಷ್ಟ್ರೀಯ ಬಿಜೆಪಿ ಯುವ ಘಟಕದ ಮುಖ್ಯಸ್ಥ ತೇಜಸ್ವಿ ಸೂರ್ಯ, ಟ್ರಂಪ್ ಪರ ಟ್ವೀಟ್ ಮಾಡಿ, ಅವರ ಖಾತೆ ರದ್ದುಗೊಳಿಸಿದ್ದನ್ನು ಪ್ರಜಾಪ್ರಭುತ್ವ ದೇಶಗಳ ನಾಯಕರಿಗೆ ಕಾದಿರುವ ಅಪಾಯ ಎಂದು ’ಬಿಗ್ ಟೆಕ್’ ಕಂಪನಿಗಳ ವಿರುದ್ಧ ಹರಿಹಾಯ್ದಿದ್ದು ಈ ಉಂಡಾಂಡಿಗುಂಡ ಹುಡುಗನ ಆಷಾಢಭೂತಿತನವನ್ನು ತೋರಿಸುತ್ತದೆ.

ಇದನ್ನೂ ಓದಿ: ಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? – ರಾಹುಲ್ ಗಾಂಧಿ ಪ್ರಶ್ನೆ

ಈತನ ಹಿಂದೆಯೇ, ಬಿಜೆಪಿಯ ದುಷ್ಟ ಟ್ರಾಲ್ ಸೇನೆಯ ಹಿಂದಿನ ಬ್ರೇನ್ ಎಂದೇ ಕುಖ್ಯಾತನಾಗಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಟ್ರಂಪ್ ಪರ ಬ್ಯಾಟಿಂಗ್ ಮಾಡಿದ್ದಾರೆ.

’ಈ ಅನಿಯಂತ್ರಿತ ದೈತ್ಯ ಟೆಕ್ ಕಂಪನಿಗಳಿಂದ ಪ್ರಜಾಪ್ರಭುತ್ವಗಳಿಗೆ ಇರುವ ಅಪಾಯವನ್ನು ಎಲ್ಲರೂ ಅರಿಯಬೇಕಿದೆ’ ಎಂದು ಪುಟಾಣಿ ತೇಜಸ್ವಿ ಸೂರ್ಯ ಡೆಮಾಕ್ರಸಿಯ ಪರ ಟ್ವೀಟ್ ಮಾಡಿದೆ!

’ಅವರು POTUS (President Of the United States) ಗೇ ಈ ರೀತಿ ಮಾಡುತ್ತಾರೆಂದರೆ, ಅವರು ಇದನ್ನು ಯಾರ ಮೇಲಾದರೂ ಪ್ರಯೋಗಿಸಬಹುದು’ ಎಂಬ ತೇಜಸ್ವಿ ಸೂರ್ಯರ ವಾಕ್ಯದಲ್ಲಿ ಸುಪ್ತವಾಗಿ ಟ್ರಂಪ್ ಆರಾಧನೆಯಿದೆ. ಅದಕ್ಕಿಂತ ಹೆಚ್ಚಾಗಿ, ’ಅಮೆರಿಕ ಅಧ್ಯಕ್ಷರಿಗೇ’ ಎಂಬುದರಲ್ಲಂತೂ ಆರಾಧನೆಯ ಭಾವವಿದೆ. ಆದರೆ ಈ ಹಿಂದೆಯೂ ಟ್ರಂಪ್ ತಮ್ಮ ಹುಚ್ಚು ಸಂದೇಶಗಳ ಕಾರಣಕ್ಕೆ ಫೇಸ್‌ಬುಕ್, ಟ್ವೀಟರ್‌ಗಳಿಂದ ತಾತ್ಕಾಲಿಕ ಖಾತೆ ನಿರ್ಬಂಧವನ್ನು ಎದುರಿಸಿದ್ದಾರೆ ಎಂಬುದನ್ನು ಈ ಪ್ರಖರ ಕೋಮುವಾದಿ ಸಂಸದ ಮರೆತಂತಿದೆ.

ಇದನ್ನೂ ಓದಿ: ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಅರಬ್ ಮಹಿಳೆಯರ ಕುರಿತಾದ ಟ್ವೀಟ್‌ಗೆ ಅರಬ್ ಆಡಳಿತದಿಂದ ತೀವ್ರ ಆಕ್ಷೇಪ ವ್ಯಕ್ತವಾದ ನಂತರ ತೇಜಸ್ವಿ ಸೂರ್ಯ ಆ ಟ್ವೀಟ್ ಡಿಲೀಟ್ ಮಾಡಿದ್ದರು. ಬಹುಷ: ಆಗಲೇ ಈತನ ಖಾತೆ ರದ್ದಾಗುವ ಸಂಭವವಿತ್ತೇನೊ? ಹೈದರಾಬಾದ್ ಸ್ಥಳೀಯ ಸಂಸ್ಥೆ ಚುನಾವಣೆ ಸಂದರ್ಭದಲ್ಲೂ ಒವೈಸಿ ಕುರಿತು ತೇಜಸ್ವಿ ನೀಡಿದ ಹೇಳಿಕೆ ಕೋಮು ಪ್ರಚೋದನಾಕಾರಿಯಾಗಿದೆ ಎಂದು ಅಲ್ಲಿನ ಪೊಲೀಸರು ಎಚ್ಚರಿಸಿದ್ದರು.

ಜೀವವಿರೋಧಿ ಸಿದ್ದಾಂತವನ್ನೆ ಮೈ-ಮನಸ್ಸುಗಳ ತುಂಬ ಹರಡಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ, ’ಅಮೆರಿಕದ ಅಧ್ಯಕ್ಷರನ್ನೇ ಒಂದು ವೇದಿಕೆಯಿಂದ ನಿರಾಕರಿಸುವುದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ’ ಎಂದು ಟ್ವೀಟ್ ಮಾಡಿದ್ದಾರೆ!

ಟ್ವೀಟರ್ ಕಂಪನಿಯ ಕ್ರಮವನ್ನು ಫ್ರೀ ಸ್ಪೀಚ್ ವಿರುದ್ಧದ ಕ್ರಮ ಎಂಬಂತೆ ಬಿಂಬಿಸಲು ಯತ್ನಿಸಿರುವ ಮಾಳವಿಯ, ಈ ಸಂದರ್ಭವನ್ನು ಬಿಜೆಪಿಯ ಸಿದ್ದಾಂತ ವಿರೋಧಿಸುವವರನ್ನು ಟಾರ್ಗೆಟ್ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಆಮ್ ಆದ್ಮಿ ದೆಹಲಿ ಘಟಕದ ಸಾಮಾಜಿಕ ಜಾಲತಾಣದ ಉಸ್ತುವಾರಿ ಅಂಕಿತ್ ಲಾಲ್ ಇದಕ್ಕೆ ಪ್ರತಿಕ್ರಿಯಿಸಿದ್ದು, ’ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ವತ: ಸುಳ್ ಸುದ್ದಿ ಹರಡುವ, ತಪ್ಪು ಮಾಹಿತಿ ಪ್ರಸರಿಸುವ, ಆ ಮೂಲಕ ಪರೋಕ್ಷವಾಗಿ ಹಿಂಸೆಯನ್ನು ಪ್ರಚೋದಿಸುವ ವ್ಯಕ್ತಿ ಇಂದು ಬಿಗ್ ಟೆಕ್ ಕಂಪನಿಗಳ ವಿರುದ್ಧ ಮಾತಾಡುತ್ತಿದ್ದಾರೆ. ಮಾಳವಿಯ ಅವರೆ, ಇಲ್ಲಿವರೆಗೂ ನಿಮ್ಮ ಅಕೌಂಟ್ ರದ್ದಾಗದೇ ಇರಲು ಕಾರಣ, ಫೇಸ್‌ಬುಕ್ ಮತ್ತು ಟ್ವೀಟರ್‌ಗಳು ಭಾರತ ಮತ್ತು ಅಮೆರಿಕಗಳಿಗೆ ಒಂದೇ ನಿಯಮಗಳನ್ನು ಅನ್ವಯಿಸದಿರುವುದೇ ಆಗಿದೆ’ ಎಂದಿದ್ದಾರೆ.

ಈ ಸೂರ್ಯ, ಮಾಳವಿಯಾಗಳು ಇದೇ ’ಬಿಗ್ ಟೆಕ್’ ಕಂಪನಿಗಳ ವೇದಿಕೆ ಬಳಸಿಕೊಂಡು, ಕೋಮು ಪ್ರಚೋದನಾತ್ಮಕ, ಹಿಂಸೆ ಪ್ರಚೋದನ್ಮಾತಕ ಸಂದೇಶಗಳನ್ನು ಹರಿಬಿಡುತ್ತ ಬಂದಿದ್ದಾರೆ. ಆದರೆ ಇಲ್ಲಿ ಕಠಿಣ ನಿಯಮ ಇಲ್ಲದ್ದರಿಂದ ಮತ್ತು ಈ ’ಬಿಗ್ ಟೆಕ್’ ಕಂಪನಿಗಳ ಆಯಕಟ್ಟಿನ ಸ್ಥಳಗಳಲ್ಲಿ ಹಿಂದೂತ್ವಾದಿಗಳೇ ತುಂಬಿದ ಕಾರಣಕ್ಕೆ ಇವರೆಲ್ಲರೂ ಅಕೌಂಟ್ ರದ್ದತಿಯಿಂದ ವಿನಾಯ್ತಿ ಪಡೆದಿದ್ದಾರೆ. ವಾಲ್‌ಸ್ಟ್ರೀಟ್ ಪ್ರಕಟಿಸಿದ್ದ ಫೇಸ್‌ಬುಕ್ ಪಕ್ಷಪಾತ ಕುರಿತಾದ ತನಿಖಾ ವರದಿ ಇದನ್ನೇ ಸೂಚಿಸುತ್ತದೆ.

ಟ್ರಂಪ್ ಖಾತೆ ರದ್ದಾದಾಗ ಹಲವಾರು ಟ್ವೀಟರಿಗರು ದೆಹಲಿ ಬಿಜೆಪಿ ಕಪಿಲ್ ಮಿಶ್ರಾ ಖಾತೆಯನ್ನೂ ರದ್ದು ಮಾಡಿ ಎಂದು ಒತ್ತಾಯಿಸಿದ್ದರು.
ದೆಹಲಿ ಗಲಭೆಗೆ ಪ್ರಚೋದನೆ ನೀಡಿದ ಸಂದೇಶ ಮತ್ತು ದೆಹಲಿ ಅಸೆಂಬ್ಲಿ ಚುನಾವಣೆಯನ್ನು ’ಇಂಡಿಯಾ ವರ್ಸಸ್ ಪಾಕಿಸ್ತಾನ್’ ಮ್ಯಾಚ್ ಎಂದು ಕೋಮುವಾದಿ ಸಂದೇಶ ಹಾಕಿದ್ದ ಕಪಿಲ್ ಮಿಶ್ರಾ ಮೇಲೆ ಈ ’ಬಿಗ್ ಟೆಕ್’ ಕಂಪನಿಗಳು ಕ್ರಮ ಕೈಗೊಳ್ಳಲು ಏನು ಅಡ್ಡಿಯಾಗಿದೆ ಎಂಬುದನ್ನು ಟ್ರಂಪ್ ಬೆಂಬಲಿಗ ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಲು ಸಿದ್ಧರಿಲ್ಲ.


ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...