Homeಮುಖಪುಟಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಒಂದು ಪ್ರಬಲ ಲೋಕಲ್ ಮುಖವಿಲ್ಲದೇ ಪರದಾಡುತ್ತಿರುವ ಬಿಜೆಪಿ ಕೊನೆಗೂ ‘ಕೋಬ್ರಾ’ ಒಂದನ್ನು ಕ್ಯಾಚ್ ಮಾಡಿದೆ. ‘ನಾನು ಪಕ್ಕಾ ಕೋಬ್ರಾ. ಒಂದ್ಸಲ ಕಚ್ಚಿದರೆ ಅಷ್ಟೇ, ಫಿನಿಷ್’ ಎಂದು ರವಿವಾರ ಬಹಿರಂಗ ವೇದಿಕೆಯಲ್ಲಿ ಹೇಳಿದ ಪುರಾತನ ನಟ ಮಿಥುನ್ ಚಕ್ರವರ್ತಿ ಈಗ ಬಿಜೆಪಿ ಪಾಲಿಗೆ ಸ್ಟಾರ್ ಪ್ರಚಾರಕ ಆಗಲಿದ್ದಾರೆ.

ಬಿಸಿಸಿಐ ಅಧ್ಯಕ್ಷ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಯನ್ನು ಕ್ಯಾಚ್ ಮಾಡಲು ಇನ್ನಿಲ್ಲದ ಪ್ರಯತ್ನ ಮಾಡಿ ಸೋತ ನಂತರ ಕೊನೆಗೂ ಒಂದು ಪುರಾತನ ಕೋಬ್ರಾ ಹಿಡಿದುಕೊಂಡು ಬಿಜೆಪಿ ಶೋ ಮಾಡುತ್ತಿದೆ.

‘ಐ ಯಾಮ್ ಎ ಡಿಸ್ಕೋ ಡ್ಯಾನ್ಸರ್’ ಎಂದು ಬಾಲಿವುಡ್‌ಗೆ ಬಂದ ಮಿಥುನ್ ಚಕ್ರವರ್ತಿ ನಂತರ ಹೊಡಿ-ಬಡಿ ಕಥಾನಕದ ಎರಡನೇ ದರ್ಜೆ ಸಿನಿಮಾಗಳಿಗಷ್ಟೇ ಸಿಮೀತವಾದರು. ಬಂಗಾಲಿ ಭಾಷೆ ಚಿತ್ರವೊಂದರ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಮಿಥುನ್, ಬಾಲಿವುಡ್‌ನಲ್ಲಿ ಚಿರಕಾಲ ನೆನಪಿನಲ್ಲಿಡುವ ನಟನಾಗಿಯೇನೂ ಬೆಳೆಯಲಿಲ್ಲ.

ಹದಿಹರೆಯದಲ್ಲಿ ನಕ್ಸಲಿಸಂ ಪರ ಒಲವು… ನಂತರ ಸಿಪಿಎಂ ನಂಟು… ಆಮೇಲೆ ಟಿಎಂಸಿ ಸ್ನೇಹ. ಟಿಎಂಸಿಯಿಂದ ರಾಜ್ಯಸಭೆ ಸದಸ್ಯರಾದರು. ಆದರೆ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದ ನಂತರ ಎರಡೇ ವರ್ಷಕ್ಕೆ ರಾಜಿನಾಮೆ ನೀಡಿದರು.

ಈಗ ‘ಕೋಬ್ರಾ’ ಕಮಲ ಮುಡಿಗೇರಿಸಿಕೊಂಡಿದೆ. ‘ಏಕ್ ಛೊಬೊಲೆ ಛೋಬಿ’ (ಒಮ್ಮೆ ಕಚ್ಚಿದರೆ ನೀವ್ ಫೋಟೊ ಅಷ್ಟೇ) ಎಂಬ ಹೊಸ ಡೈಲಾಗ್ ಅನ್ನು ಮಿಥುನ್ ಉದುರಿಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವ್ಯಂಗ್ಯ ಮಾಡಿರುವ ನೆಟ್ಟಿಗರು, ವಿಷ ಕಕ್ಕುವ ಪಾರ್ಟಿಯಲ್ಲಿ ಕೋಬ್ರಾ ಇರುವುದು ತಪ್ಪಲ್ಲ ಬಿಡಿ ಎಂದಿದ್ದಾರೆ.

2016 ರ ಅಸೆಂಬ್ಲಿ ಚುನಾವಣೆಗಳಿಗಿಂತ ಭಿನ್ನವಾಗಿ, ಈ ಬಾರಿ ಬಿಜೆಪಿ ಸಾಧ್ಯವಾದಷ್ಟು ಪ್ರಸಿದ್ಧ ವ್ಯಕ್ತಿಗಳ, ವಿಶೇಷವಾಗಿ ಬಂಗಾಳಿ ಸಿನಿಮಾ ಮಂದಿಯ ಹಿಂದೆ ಬಿದ್ದಿದೆ. ರುದ್ರಾನಿಲ್ ಘೋಷ್, ಯಶ್ ದಾಸ್‌ಗುಪ್ತಾ, ಹಿರಾನ್ ಚಟರ್ಜಿ, ಪಾಯೆಲ್ ಸರ್ಕಾರ್, ಶ್ರಬಂತಿ ಚಟರ್ಜಿಯಿಂದ ರಾಜ್ಯದ ದೂರದರ್ಶನ ಉದ್ಯಮದ ಜನಪ್ರಿಯ ನಟರನ್ನು ಅದು ಸೇರಿಸಿಕೊಂಡಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಾಂಗ್ಲಾದೇಶದ ನಟ ಫಿರ್ದೌಸ್ ಕೂಡ ಟಿಎಂಸಿ ಪರ ಪ್ರಚಾರ ನಡೆಸಿದ್ದರು. ಈಗ ಮಿಥುನ್ ಚಕ್ರವರ್ತಿ ಬಿಜೆಪಿಯ ರ‍್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾರಿ ಜನಸಂದಣಿಯನ್ನು ಪಡೆಯುವ ನಿರೀಕ್ಷೆಯಿದೆ. ಆದರೆ, ಆರಂಭದಲ್ಲೇ ಅವರು ಕೋಬ್ರಾ ತರಹ ವಿಷ ಕಾರು ಮೂಲಕ ಅಡ್ಡ ದಾರಿ ತುಳಿದಂತಿದೆ. ಮಮತಾ ಎದುರು ಕೋಬ್ರಾ ಆಟ ಅಷ್ಟಕ್ಕಷ್ಟೇ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.


ಇದನ್ನೂ ಓದಿ: ರಾಮ ಮಂದಿರಕ್ಕೆ ದೇಣಿಗೆ ನೀಡಲು ನಿರಾಕರಣೆ: ಶಿಕ್ಷಕನನ್ನೇ ಶಾಲೆಯಿಂದ ಹೊರಹಾಕಿದ ಆಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಮಾಜದಲ್ಲಿ ಶಾಂತಿ ಹಾಳು ಮಾಡಲು BJP ಗೆ ಇಂತಹ ಕೋಬ್ರಾ ಗಳೇ ಬೇಕಾಗಿರುವುದು…
    ಸಮಾಜ ಘಾತುಕ BJP…

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....