Homeಮುಖಪುಟಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಒಂದು ಪ್ರಬಲ ಲೋಕಲ್ ಮುಖವಿಲ್ಲದೇ ಪರದಾಡುತ್ತಿರುವ ಬಿಜೆಪಿ ಕೊನೆಗೂ ‘ಕೋಬ್ರಾ’ ಒಂದನ್ನು ಕ್ಯಾಚ್ ಮಾಡಿದೆ. ‘ನಾನು ಪಕ್ಕಾ ಕೋಬ್ರಾ. ಒಂದ್ಸಲ ಕಚ್ಚಿದರೆ ಅಷ್ಟೇ, ಫಿನಿಷ್’ ಎಂದು ರವಿವಾರ ಬಹಿರಂಗ ವೇದಿಕೆಯಲ್ಲಿ ಹೇಳಿದ ಪುರಾತನ ನಟ ಮಿಥುನ್ ಚಕ್ರವರ್ತಿ ಈಗ ಬಿಜೆಪಿ ಪಾಲಿಗೆ ಸ್ಟಾರ್ ಪ್ರಚಾರಕ ಆಗಲಿದ್ದಾರೆ.

ಬಿಸಿಸಿಐ ಅಧ್ಯಕ್ಷ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಯನ್ನು ಕ್ಯಾಚ್ ಮಾಡಲು ಇನ್ನಿಲ್ಲದ ಪ್ರಯತ್ನ ಮಾಡಿ ಸೋತ ನಂತರ ಕೊನೆಗೂ ಒಂದು ಪುರಾತನ ಕೋಬ್ರಾ ಹಿಡಿದುಕೊಂಡು ಬಿಜೆಪಿ ಶೋ ಮಾಡುತ್ತಿದೆ.

‘ಐ ಯಾಮ್ ಎ ಡಿಸ್ಕೋ ಡ್ಯಾನ್ಸರ್’ ಎಂದು ಬಾಲಿವುಡ್‌ಗೆ ಬಂದ ಮಿಥುನ್ ಚಕ್ರವರ್ತಿ ನಂತರ ಹೊಡಿ-ಬಡಿ ಕಥಾನಕದ ಎರಡನೇ ದರ್ಜೆ ಸಿನಿಮಾಗಳಿಗಷ್ಟೇ ಸಿಮೀತವಾದರು. ಬಂಗಾಲಿ ಭಾಷೆ ಚಿತ್ರವೊಂದರ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಮಿಥುನ್, ಬಾಲಿವುಡ್‌ನಲ್ಲಿ ಚಿರಕಾಲ ನೆನಪಿನಲ್ಲಿಡುವ ನಟನಾಗಿಯೇನೂ ಬೆಳೆಯಲಿಲ್ಲ.

ಹದಿಹರೆಯದಲ್ಲಿ ನಕ್ಸಲಿಸಂ ಪರ ಒಲವು… ನಂತರ ಸಿಪಿಎಂ ನಂಟು… ಆಮೇಲೆ ಟಿಎಂಸಿ ಸ್ನೇಹ. ಟಿಎಂಸಿಯಿಂದ ರಾಜ್ಯಸಭೆ ಸದಸ್ಯರಾದರು. ಆದರೆ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದ ನಂತರ ಎರಡೇ ವರ್ಷಕ್ಕೆ ರಾಜಿನಾಮೆ ನೀಡಿದರು.

ಈಗ ‘ಕೋಬ್ರಾ’ ಕಮಲ ಮುಡಿಗೇರಿಸಿಕೊಂಡಿದೆ. ‘ಏಕ್ ಛೊಬೊಲೆ ಛೋಬಿ’ (ಒಮ್ಮೆ ಕಚ್ಚಿದರೆ ನೀವ್ ಫೋಟೊ ಅಷ್ಟೇ) ಎಂಬ ಹೊಸ ಡೈಲಾಗ್ ಅನ್ನು ಮಿಥುನ್ ಉದುರಿಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವ್ಯಂಗ್ಯ ಮಾಡಿರುವ ನೆಟ್ಟಿಗರು, ವಿಷ ಕಕ್ಕುವ ಪಾರ್ಟಿಯಲ್ಲಿ ಕೋಬ್ರಾ ಇರುವುದು ತಪ್ಪಲ್ಲ ಬಿಡಿ ಎಂದಿದ್ದಾರೆ.

2016 ರ ಅಸೆಂಬ್ಲಿ ಚುನಾವಣೆಗಳಿಗಿಂತ ಭಿನ್ನವಾಗಿ, ಈ ಬಾರಿ ಬಿಜೆಪಿ ಸಾಧ್ಯವಾದಷ್ಟು ಪ್ರಸಿದ್ಧ ವ್ಯಕ್ತಿಗಳ, ವಿಶೇಷವಾಗಿ ಬಂಗಾಳಿ ಸಿನಿಮಾ ಮಂದಿಯ ಹಿಂದೆ ಬಿದ್ದಿದೆ. ರುದ್ರಾನಿಲ್ ಘೋಷ್, ಯಶ್ ದಾಸ್‌ಗುಪ್ತಾ, ಹಿರಾನ್ ಚಟರ್ಜಿ, ಪಾಯೆಲ್ ಸರ್ಕಾರ್, ಶ್ರಬಂತಿ ಚಟರ್ಜಿಯಿಂದ ರಾಜ್ಯದ ದೂರದರ್ಶನ ಉದ್ಯಮದ ಜನಪ್ರಿಯ ನಟರನ್ನು ಅದು ಸೇರಿಸಿಕೊಂಡಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಾಂಗ್ಲಾದೇಶದ ನಟ ಫಿರ್ದೌಸ್ ಕೂಡ ಟಿಎಂಸಿ ಪರ ಪ್ರಚಾರ ನಡೆಸಿದ್ದರು. ಈಗ ಮಿಥುನ್ ಚಕ್ರವರ್ತಿ ಬಿಜೆಪಿಯ ರ‍್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾರಿ ಜನಸಂದಣಿಯನ್ನು ಪಡೆಯುವ ನಿರೀಕ್ಷೆಯಿದೆ. ಆದರೆ, ಆರಂಭದಲ್ಲೇ ಅವರು ಕೋಬ್ರಾ ತರಹ ವಿಷ ಕಾರು ಮೂಲಕ ಅಡ್ಡ ದಾರಿ ತುಳಿದಂತಿದೆ. ಮಮತಾ ಎದುರು ಕೋಬ್ರಾ ಆಟ ಅಷ್ಟಕ್ಕಷ್ಟೇ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.


ಇದನ್ನೂ ಓದಿ: ರಾಮ ಮಂದಿರಕ್ಕೆ ದೇಣಿಗೆ ನೀಡಲು ನಿರಾಕರಣೆ: ಶಿಕ್ಷಕನನ್ನೇ ಶಾಲೆಯಿಂದ ಹೊರಹಾಕಿದ ಆಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಮಾಜದಲ್ಲಿ ಶಾಂತಿ ಹಾಳು ಮಾಡಲು BJP ಗೆ ಇಂತಹ ಕೋಬ್ರಾ ಗಳೇ ಬೇಕಾಗಿರುವುದು…
    ಸಮಾಜ ಘಾತುಕ BJP…

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...