Homeಮುಖಪುಟಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಒಂದು ಪ್ರಬಲ ಲೋಕಲ್ ಮುಖವಿಲ್ಲದೇ ಪರದಾಡುತ್ತಿರುವ ಬಿಜೆಪಿ ಕೊನೆಗೂ ‘ಕೋಬ್ರಾ’ ಒಂದನ್ನು ಕ್ಯಾಚ್ ಮಾಡಿದೆ. ‘ನಾನು ಪಕ್ಕಾ ಕೋಬ್ರಾ. ಒಂದ್ಸಲ ಕಚ್ಚಿದರೆ ಅಷ್ಟೇ, ಫಿನಿಷ್’ ಎಂದು ರವಿವಾರ ಬಹಿರಂಗ ವೇದಿಕೆಯಲ್ಲಿ ಹೇಳಿದ ಪುರಾತನ ನಟ ಮಿಥುನ್ ಚಕ್ರವರ್ತಿ ಈಗ ಬಿಜೆಪಿ ಪಾಲಿಗೆ ಸ್ಟಾರ್ ಪ್ರಚಾರಕ ಆಗಲಿದ್ದಾರೆ.

ಬಿಸಿಸಿಐ ಅಧ್ಯಕ್ಷ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಯನ್ನು ಕ್ಯಾಚ್ ಮಾಡಲು ಇನ್ನಿಲ್ಲದ ಪ್ರಯತ್ನ ಮಾಡಿ ಸೋತ ನಂತರ ಕೊನೆಗೂ ಒಂದು ಪುರಾತನ ಕೋಬ್ರಾ ಹಿಡಿದುಕೊಂಡು ಬಿಜೆಪಿ ಶೋ ಮಾಡುತ್ತಿದೆ.

‘ಐ ಯಾಮ್ ಎ ಡಿಸ್ಕೋ ಡ್ಯಾನ್ಸರ್’ ಎಂದು ಬಾಲಿವುಡ್‌ಗೆ ಬಂದ ಮಿಥುನ್ ಚಕ್ರವರ್ತಿ ನಂತರ ಹೊಡಿ-ಬಡಿ ಕಥಾನಕದ ಎರಡನೇ ದರ್ಜೆ ಸಿನಿಮಾಗಳಿಗಷ್ಟೇ ಸಿಮೀತವಾದರು. ಬಂಗಾಲಿ ಭಾಷೆ ಚಿತ್ರವೊಂದರ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಮಿಥುನ್, ಬಾಲಿವುಡ್‌ನಲ್ಲಿ ಚಿರಕಾಲ ನೆನಪಿನಲ್ಲಿಡುವ ನಟನಾಗಿಯೇನೂ ಬೆಳೆಯಲಿಲ್ಲ.

ಹದಿಹರೆಯದಲ್ಲಿ ನಕ್ಸಲಿಸಂ ಪರ ಒಲವು… ನಂತರ ಸಿಪಿಎಂ ನಂಟು… ಆಮೇಲೆ ಟಿಎಂಸಿ ಸ್ನೇಹ. ಟಿಎಂಸಿಯಿಂದ ರಾಜ್ಯಸಭೆ ಸದಸ್ಯರಾದರು. ಆದರೆ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದ ನಂತರ ಎರಡೇ ವರ್ಷಕ್ಕೆ ರಾಜಿನಾಮೆ ನೀಡಿದರು.

ಈಗ ‘ಕೋಬ್ರಾ’ ಕಮಲ ಮುಡಿಗೇರಿಸಿಕೊಂಡಿದೆ. ‘ಏಕ್ ಛೊಬೊಲೆ ಛೋಬಿ’ (ಒಮ್ಮೆ ಕಚ್ಚಿದರೆ ನೀವ್ ಫೋಟೊ ಅಷ್ಟೇ) ಎಂಬ ಹೊಸ ಡೈಲಾಗ್ ಅನ್ನು ಮಿಥುನ್ ಉದುರಿಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವ್ಯಂಗ್ಯ ಮಾಡಿರುವ ನೆಟ್ಟಿಗರು, ವಿಷ ಕಕ್ಕುವ ಪಾರ್ಟಿಯಲ್ಲಿ ಕೋಬ್ರಾ ಇರುವುದು ತಪ್ಪಲ್ಲ ಬಿಡಿ ಎಂದಿದ್ದಾರೆ.

2016 ರ ಅಸೆಂಬ್ಲಿ ಚುನಾವಣೆಗಳಿಗಿಂತ ಭಿನ್ನವಾಗಿ, ಈ ಬಾರಿ ಬಿಜೆಪಿ ಸಾಧ್ಯವಾದಷ್ಟು ಪ್ರಸಿದ್ಧ ವ್ಯಕ್ತಿಗಳ, ವಿಶೇಷವಾಗಿ ಬಂಗಾಳಿ ಸಿನಿಮಾ ಮಂದಿಯ ಹಿಂದೆ ಬಿದ್ದಿದೆ. ರುದ್ರಾನಿಲ್ ಘೋಷ್, ಯಶ್ ದಾಸ್‌ಗುಪ್ತಾ, ಹಿರಾನ್ ಚಟರ್ಜಿ, ಪಾಯೆಲ್ ಸರ್ಕಾರ್, ಶ್ರಬಂತಿ ಚಟರ್ಜಿಯಿಂದ ರಾಜ್ಯದ ದೂರದರ್ಶನ ಉದ್ಯಮದ ಜನಪ್ರಿಯ ನಟರನ್ನು ಅದು ಸೇರಿಸಿಕೊಂಡಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಾಂಗ್ಲಾದೇಶದ ನಟ ಫಿರ್ದೌಸ್ ಕೂಡ ಟಿಎಂಸಿ ಪರ ಪ್ರಚಾರ ನಡೆಸಿದ್ದರು. ಈಗ ಮಿಥುನ್ ಚಕ್ರವರ್ತಿ ಬಿಜೆಪಿಯ ರ‍್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾರಿ ಜನಸಂದಣಿಯನ್ನು ಪಡೆಯುವ ನಿರೀಕ್ಷೆಯಿದೆ. ಆದರೆ, ಆರಂಭದಲ್ಲೇ ಅವರು ಕೋಬ್ರಾ ತರಹ ವಿಷ ಕಾರು ಮೂಲಕ ಅಡ್ಡ ದಾರಿ ತುಳಿದಂತಿದೆ. ಮಮತಾ ಎದುರು ಕೋಬ್ರಾ ಆಟ ಅಷ್ಟಕ್ಕಷ್ಟೇ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.


ಇದನ್ನೂ ಓದಿ: ರಾಮ ಮಂದಿರಕ್ಕೆ ದೇಣಿಗೆ ನೀಡಲು ನಿರಾಕರಣೆ: ಶಿಕ್ಷಕನನ್ನೇ ಶಾಲೆಯಿಂದ ಹೊರಹಾಕಿದ ಆಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಮಾಜದಲ್ಲಿ ಶಾಂತಿ ಹಾಳು ಮಾಡಲು BJP ಗೆ ಇಂತಹ ಕೋಬ್ರಾ ಗಳೇ ಬೇಕಾಗಿರುವುದು…
    ಸಮಾಜ ಘಾತುಕ BJP…

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...