Homeಮುಖಪುಟಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಒಂದು ಪ್ರಬಲ ಲೋಕಲ್ ಮುಖವಿಲ್ಲದೇ ಪರದಾಡುತ್ತಿರುವ ಬಿಜೆಪಿ ಕೊನೆಗೂ ‘ಕೋಬ್ರಾ’ ಒಂದನ್ನು ಕ್ಯಾಚ್ ಮಾಡಿದೆ. ‘ನಾನು ಪಕ್ಕಾ ಕೋಬ್ರಾ. ಒಂದ್ಸಲ ಕಚ್ಚಿದರೆ ಅಷ್ಟೇ, ಫಿನಿಷ್’ ಎಂದು ರವಿವಾರ ಬಹಿರಂಗ ವೇದಿಕೆಯಲ್ಲಿ ಹೇಳಿದ ಪುರಾತನ ನಟ ಮಿಥುನ್ ಚಕ್ರವರ್ತಿ ಈಗ ಬಿಜೆಪಿ ಪಾಲಿಗೆ ಸ್ಟಾರ್ ಪ್ರಚಾರಕ ಆಗಲಿದ್ದಾರೆ.

ಬಿಸಿಸಿಐ ಅಧ್ಯಕ್ಷ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಯನ್ನು ಕ್ಯಾಚ್ ಮಾಡಲು ಇನ್ನಿಲ್ಲದ ಪ್ರಯತ್ನ ಮಾಡಿ ಸೋತ ನಂತರ ಕೊನೆಗೂ ಒಂದು ಪುರಾತನ ಕೋಬ್ರಾ ಹಿಡಿದುಕೊಂಡು ಬಿಜೆಪಿ ಶೋ ಮಾಡುತ್ತಿದೆ.

‘ಐ ಯಾಮ್ ಎ ಡಿಸ್ಕೋ ಡ್ಯಾನ್ಸರ್’ ಎಂದು ಬಾಲಿವುಡ್‌ಗೆ ಬಂದ ಮಿಥುನ್ ಚಕ್ರವರ್ತಿ ನಂತರ ಹೊಡಿ-ಬಡಿ ಕಥಾನಕದ ಎರಡನೇ ದರ್ಜೆ ಸಿನಿಮಾಗಳಿಗಷ್ಟೇ ಸಿಮೀತವಾದರು. ಬಂಗಾಲಿ ಭಾಷೆ ಚಿತ್ರವೊಂದರ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಮಿಥುನ್, ಬಾಲಿವುಡ್‌ನಲ್ಲಿ ಚಿರಕಾಲ ನೆನಪಿನಲ್ಲಿಡುವ ನಟನಾಗಿಯೇನೂ ಬೆಳೆಯಲಿಲ್ಲ.

ಹದಿಹರೆಯದಲ್ಲಿ ನಕ್ಸಲಿಸಂ ಪರ ಒಲವು… ನಂತರ ಸಿಪಿಎಂ ನಂಟು… ಆಮೇಲೆ ಟಿಎಂಸಿ ಸ್ನೇಹ. ಟಿಎಂಸಿಯಿಂದ ರಾಜ್ಯಸಭೆ ಸದಸ್ಯರಾದರು. ಆದರೆ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದ ನಂತರ ಎರಡೇ ವರ್ಷಕ್ಕೆ ರಾಜಿನಾಮೆ ನೀಡಿದರು.

ಈಗ ‘ಕೋಬ್ರಾ’ ಕಮಲ ಮುಡಿಗೇರಿಸಿಕೊಂಡಿದೆ. ‘ಏಕ್ ಛೊಬೊಲೆ ಛೋಬಿ’ (ಒಮ್ಮೆ ಕಚ್ಚಿದರೆ ನೀವ್ ಫೋಟೊ ಅಷ್ಟೇ) ಎಂಬ ಹೊಸ ಡೈಲಾಗ್ ಅನ್ನು ಮಿಥುನ್ ಉದುರಿಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವ್ಯಂಗ್ಯ ಮಾಡಿರುವ ನೆಟ್ಟಿಗರು, ವಿಷ ಕಕ್ಕುವ ಪಾರ್ಟಿಯಲ್ಲಿ ಕೋಬ್ರಾ ಇರುವುದು ತಪ್ಪಲ್ಲ ಬಿಡಿ ಎಂದಿದ್ದಾರೆ.

2016 ರ ಅಸೆಂಬ್ಲಿ ಚುನಾವಣೆಗಳಿಗಿಂತ ಭಿನ್ನವಾಗಿ, ಈ ಬಾರಿ ಬಿಜೆಪಿ ಸಾಧ್ಯವಾದಷ್ಟು ಪ್ರಸಿದ್ಧ ವ್ಯಕ್ತಿಗಳ, ವಿಶೇಷವಾಗಿ ಬಂಗಾಳಿ ಸಿನಿಮಾ ಮಂದಿಯ ಹಿಂದೆ ಬಿದ್ದಿದೆ. ರುದ್ರಾನಿಲ್ ಘೋಷ್, ಯಶ್ ದಾಸ್‌ಗುಪ್ತಾ, ಹಿರಾನ್ ಚಟರ್ಜಿ, ಪಾಯೆಲ್ ಸರ್ಕಾರ್, ಶ್ರಬಂತಿ ಚಟರ್ಜಿಯಿಂದ ರಾಜ್ಯದ ದೂರದರ್ಶನ ಉದ್ಯಮದ ಜನಪ್ರಿಯ ನಟರನ್ನು ಅದು ಸೇರಿಸಿಕೊಂಡಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಾಂಗ್ಲಾದೇಶದ ನಟ ಫಿರ್ದೌಸ್ ಕೂಡ ಟಿಎಂಸಿ ಪರ ಪ್ರಚಾರ ನಡೆಸಿದ್ದರು. ಈಗ ಮಿಥುನ್ ಚಕ್ರವರ್ತಿ ಬಿಜೆಪಿಯ ರ‍್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾರಿ ಜನಸಂದಣಿಯನ್ನು ಪಡೆಯುವ ನಿರೀಕ್ಷೆಯಿದೆ. ಆದರೆ, ಆರಂಭದಲ್ಲೇ ಅವರು ಕೋಬ್ರಾ ತರಹ ವಿಷ ಕಾರು ಮೂಲಕ ಅಡ್ಡ ದಾರಿ ತುಳಿದಂತಿದೆ. ಮಮತಾ ಎದುರು ಕೋಬ್ರಾ ಆಟ ಅಷ್ಟಕ್ಕಷ್ಟೇ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.


ಇದನ್ನೂ ಓದಿ: ರಾಮ ಮಂದಿರಕ್ಕೆ ದೇಣಿಗೆ ನೀಡಲು ನಿರಾಕರಣೆ: ಶಿಕ್ಷಕನನ್ನೇ ಶಾಲೆಯಿಂದ ಹೊರಹಾಕಿದ ಆಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಮಾಜದಲ್ಲಿ ಶಾಂತಿ ಹಾಳು ಮಾಡಲು BJP ಗೆ ಇಂತಹ ಕೋಬ್ರಾ ಗಳೇ ಬೇಕಾಗಿರುವುದು…
    ಸಮಾಜ ಘಾತುಕ BJP…

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...