Homeಮುಖಪುಟಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

“ಭಾರತ ಮೌನವಾಗಿರಬೇಕೆಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಬಯಸುತ್ತದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರು ಲಂಡನ್‌ನಲ್ಲಿ ಆರೋಪಿಸಿದ್ದಾರೆ.

ಲಂಡನ್‌ನಲ್ಲಿ ಭಾರತೀಯ ಪತ್ರಕರ್ತರ ಸಂಘ (ಐಜೆಎ)ದ ಜೊತೆಯಲ್ಲಿ ಸಂವಾದ ನಡೆಸಿರುವ ರಾಹುಲ್‌ ಗಾಂಧಿಯವರಿಗೆ “ಭಾರತದಲ್ಲಿ ಬಿಬಿಸಿ ಡಾಕ್ಯುಮೆಂಟರಿ ಬ್ಯಾನ್‌” ವಿಷಯ ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಕೇಳಲಾಗಿದೆ.

“ರಾಜಕೀಯ ಮತ್ತು ಸಾರ್ವಜನಿಕರು: ಗ್ರಹಿಕೆಯಿಂದ ಕಾರ್ಯಕ್ಷಮತೆಯೆಡೆಗೆ” ಎಂಬ ವಿಷಯದ ಕುರಿತ ಸಂವಾದ ಇದಾಗಿತ್ತು. ಭಾರತ್ ಜೋಡೋ ಯಾತ್ರೆ, ಚೀನಾ ಮತ್ತು ರಷ್ಯಾದ ಕುರಿತ ಭಾರತದ ವಿದೇಶಾಂಗ ನೀತಿ, ಕ್ರೋನಿ ಕ್ಯಾಪಿಟಲಿಸಂ ಮತ್ತು 2024ರ ಸಾರ್ವತ್ರಿಕ ಚುನಾವಣೆಗಳ ಕುರಿತ ಪ್ರಶ್ನೆಗಳಿಗೆ ಸಂವಾದದಲ್ಲಿ ಅವರು ಉತ್ತರಿಸಿದ್ದಾರೆ.

ಐಜೆಎ ಅಧ್ಯಕ್ಷ ಡ್ಯಾನಿಶ್ ಖಾನ್ ಅವರು ಸಂವಾದವನ್ನು ಆಯೋಜಿಸಿದ್ದರು. ಭಾರತ ಮತ್ತು ಯುಕೆಯ ಪತ್ರಕರ್ತರು ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. “ಬಿಬಿಸಿ ಸಾಕ್ಷ್ಯಚಿತ್ರದ ಸುತ್ತಲಿನ ವಿವಾದ, ಹೊಸದಿಲ್ಲಿಯ ಬಿಬಿಸಿ ಕಚೇರಿಗಳ ಮೇಲಿನ ದಾಳಿ ಕುರಿತು ರಾಹುಲ್‌ ಅಭಿಪ್ರಾಯವೇನು?” ಎಂದು ಕೇಳಲಾಯಿತು.

“ಭಾರತದಲ್ಲಿ ಎಲ್ಲೆಡೆ ಬಾಯಿ ಮುಚ್ಚಿಸಲಾಗುತ್ತಿದೆ. ಬಿಬಿಸಿ ಸಾಕ್ಷ್ಯಾಚಿತ್ರವೇ ಇದಕ್ಕೆ ಉದಾಹರಣೆ. ಪತ್ರಕರ್ತರನ್ನು (ಭಾರತದಲ್ಲಿ) ಬೆದರಿಸಲಾಗುತ್ತದೆ, ಅವರ ಮೇಲೆ ದಾಳಿ ಮಾಡಲಾಗುತ್ತದೆ. ಸರ್ಕಾರ ಹೇಳಿದಂತೆ ಕೇಳುವ ಪತ್ರಕರ್ತರಿಗೆ ಬಹುಮಾನ ನೀಡಲಾಗುತ್ತದೆ” ಎಂದು ರಾಹುಲ್‌ ದೂರಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನೀಡಿದ ಉಪನ್ಯಾಸದ ಅಂಶಗಳನ್ನು ರಾಹುಲ್ ಗಾಂಧಿಯವರು ಇಲ್ಲಿಯೂ ಪ್ರತಿಧ್ವನಿಸಿದರು. “ಭಾರತದಲ್ಲಿನ ಸಂಸ್ಥೆಗಳು ಅಪಾಯದಲ್ಲಿವೆ ಮತ್ತು ಅಲ್ಪಸಂಖ್ಯಾತರು ತೊಂದರೆಗೆ ಸಿಲುಕಿದ್ದಾರೆ” ಎಂದು ಪುನರುಚ್ಚರಿಸಿದ್ದಾರೆ.

“ಅಂತಾರಾಷ್ಟ್ರೀಯ ಪ್ರವಾಸಗಳ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿದರೆ, ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಮಾನಿಸಿದಂತೆ” ಎಂಬ ವಾದಗಳಿಗೆ ಪ್ರತಿಕ್ರಿಯಿಸಿರುವ ರಾಹು‌ಲ್, “ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಮಾಡಿರುವ ಭಾಷಣಗಳನ್ನು ಗಮನಿಸಿ” ಎಂದು ತಿಳಿಸಿದ್ದಾರೆ.

“60 ವರ್ಷಗಳಲ್ಲಿ ಭಾರತದಲ್ಲಿ ಏನೂ ಆಗಿಲ್ಲ”, “ಭಾರತದಲ್ಲಿ ಅನಿಯಮಿತ ಭ್ರಷ್ಟಾಚಾರವಿದೆ” ಮೊದಲಾಗಿ ಮೋದಿ ಹೇಳಿರುವುದನ್ನು ಪ್ರಸ್ತಾಪಿಸಿರುವ ರಾಹುಲ್‌, “ಭಾರತವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರನ್ನು ಮೋದಿ ಅವಮಾನಿಸಿದ್ದಾರೆ” ಎಂದಿದ್ದಾರೆ.

“ಹಾಗಾಗಿ, ವಿದೇಶಕ್ಕೆ ಹೋದಾಗ ಭಾರತವನ್ನು ದೂಷಿಸುವ ವ್ಯಕ್ತಿ ಭಾರತದ ಪ್ರಧಾನಿ ಮೋದಿ” ಎಂದು ಟೀಕಿಸಿದ್ದಾರೆ.

“ನಾನು ಎಂದಿಗೂ ನನ್ನ ದೇಶಕ್ಕೆ ಮಾನಹಾನಿ ಮಾಡಿಲ್ಲ. ನಾನು ಅದನ್ನು ಎಂದಿಗೂ ಮಾಡುವುದಿಲ್ಲ” ಎಂದು ರಾಹುಲ್‌ ಸ್ಪಷ್ಟವಾಗಿ ಹೇಳಿದ್ದಾರೆ. “ನಾನು ಹೇಳುದ ವಿಚಾರವನ್ನು ತಿರುಚಲು ಬಿಜೆಪಿಯವರು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷಗಳು ದುರ್ಬಲವಾಗಿದೆ ಮತ್ತು ಅದರೊಳಗೆ ಬಿರುಕುಗಳಿವೆ ಎಂಬ ವಾದಗಳನ್ನು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. “ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಹೋರಾಡಿ ಸೋಲಿಸಬೇಕು ಎಂಬ ಮೂಲ ಕಲ್ಪನೆಯು ಪ್ರತಿಪಕ್ಷಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

“ಕೆಲವು ಚರ್ಚೆಯ ಅಗತ್ಯವಿದೆ. ಆದರೆ ವಿರೋಧ ಪಕ್ಷಗಳು ಸಮಸ್ಯೆಯನ್ನು ಬಗೆಹರಿಸಲು ಸಮರ್ಥವಾಗಿವೆ. ಈ ಕುರಿತು ಚರ್ಚೆಗಳು ನಡೆಯುತ್ತಿವೆ” ಎಂದು ಸುಳಿವು ನೀಡಿದ್ದಾರೆ.

“ನಾವು ಭಾರತದ ಸಾಂಸ್ಥಿಕ ರಚನೆಗಳ ವಿರುದ್ಧ ಹೋರಾಡುತ್ತಿದ್ದೇವೆ. ಭಾರತದ ಬಹುತೇಕ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಾವು ಹೋರಾಡುತ್ತಿದ್ದೇವೆ” ಎಂದು ಸಂವಾದದಲ್ಲಿ ತಿಳಿಸಿದ್ದಾರೆ.

ನಿರೂಪಣೆಗಳನ್ನು (ನೆರೇಟಿವ್‌ಗಳನ್ನು) ಕಟ್ಟುವಲ್ಲಿ ಕಾಂಗ್ರೆಸ್ ಸೋಲುತ್ತಿದೆ ಎಂಬುದನ್ನು ರಾಹುಲ್ ನಿರಾಕರಿಸಿದ್ದಾರೆ. “ಭಾರತ್ ಜೋಡೋ ಯಾತ್ರೆಯು ಪರಿಸ್ಥಿತಿಯನ್ನು ಬದಲಾಯಿಸಿದೆ. ಕಾಂಗ್ರೆಸ್ ಈಗ ನೆರೇಟಿವ್‌ಗಳನ್ನು ಮುನ್ನಡೆಸುತ್ತಿದೆ. ನಾವು ದೇಶಾದ್ಯಂತ ಯಾತ್ರೆಯನ್ನು ನಡೆಸಿದ್ದೇವೆ. ಇದರಿಂದಾಗಿ ಕಳೆದ ನಾಲ್ಕು ತಿಂಗಳಲ್ಲಿ ನೆರೇಟಿವ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದ್ದೇವೆ. ಇದು ರೂಪಾಂತರ ಸ್ಥಿತಿ. ರಾಷ್ಟ್ರೀಯ ಪತ್ರಿಕೆಗಳು ಯಾತ್ರೆಯನ್ನು ಕವರ್‌ ಮಾಡಲೇಬೇಕಾಯಿತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...