Homeಮುಖಪುಟಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

“ಭಾರತ ಮೌನವಾಗಿರಬೇಕೆಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಬಯಸುತ್ತದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರು ಲಂಡನ್‌ನಲ್ಲಿ ಆರೋಪಿಸಿದ್ದಾರೆ.

ಲಂಡನ್‌ನಲ್ಲಿ ಭಾರತೀಯ ಪತ್ರಕರ್ತರ ಸಂಘ (ಐಜೆಎ)ದ ಜೊತೆಯಲ್ಲಿ ಸಂವಾದ ನಡೆಸಿರುವ ರಾಹುಲ್‌ ಗಾಂಧಿಯವರಿಗೆ “ಭಾರತದಲ್ಲಿ ಬಿಬಿಸಿ ಡಾಕ್ಯುಮೆಂಟರಿ ಬ್ಯಾನ್‌” ವಿಷಯ ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಕೇಳಲಾಗಿದೆ.

“ರಾಜಕೀಯ ಮತ್ತು ಸಾರ್ವಜನಿಕರು: ಗ್ರಹಿಕೆಯಿಂದ ಕಾರ್ಯಕ್ಷಮತೆಯೆಡೆಗೆ” ಎಂಬ ವಿಷಯದ ಕುರಿತ ಸಂವಾದ ಇದಾಗಿತ್ತು. ಭಾರತ್ ಜೋಡೋ ಯಾತ್ರೆ, ಚೀನಾ ಮತ್ತು ರಷ್ಯಾದ ಕುರಿತ ಭಾರತದ ವಿದೇಶಾಂಗ ನೀತಿ, ಕ್ರೋನಿ ಕ್ಯಾಪಿಟಲಿಸಂ ಮತ್ತು 2024ರ ಸಾರ್ವತ್ರಿಕ ಚುನಾವಣೆಗಳ ಕುರಿತ ಪ್ರಶ್ನೆಗಳಿಗೆ ಸಂವಾದದಲ್ಲಿ ಅವರು ಉತ್ತರಿಸಿದ್ದಾರೆ.

ಐಜೆಎ ಅಧ್ಯಕ್ಷ ಡ್ಯಾನಿಶ್ ಖಾನ್ ಅವರು ಸಂವಾದವನ್ನು ಆಯೋಜಿಸಿದ್ದರು. ಭಾರತ ಮತ್ತು ಯುಕೆಯ ಪತ್ರಕರ್ತರು ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. “ಬಿಬಿಸಿ ಸಾಕ್ಷ್ಯಚಿತ್ರದ ಸುತ್ತಲಿನ ವಿವಾದ, ಹೊಸದಿಲ್ಲಿಯ ಬಿಬಿಸಿ ಕಚೇರಿಗಳ ಮೇಲಿನ ದಾಳಿ ಕುರಿತು ರಾಹುಲ್‌ ಅಭಿಪ್ರಾಯವೇನು?” ಎಂದು ಕೇಳಲಾಯಿತು.

“ಭಾರತದಲ್ಲಿ ಎಲ್ಲೆಡೆ ಬಾಯಿ ಮುಚ್ಚಿಸಲಾಗುತ್ತಿದೆ. ಬಿಬಿಸಿ ಸಾಕ್ಷ್ಯಾಚಿತ್ರವೇ ಇದಕ್ಕೆ ಉದಾಹರಣೆ. ಪತ್ರಕರ್ತರನ್ನು (ಭಾರತದಲ್ಲಿ) ಬೆದರಿಸಲಾಗುತ್ತದೆ, ಅವರ ಮೇಲೆ ದಾಳಿ ಮಾಡಲಾಗುತ್ತದೆ. ಸರ್ಕಾರ ಹೇಳಿದಂತೆ ಕೇಳುವ ಪತ್ರಕರ್ತರಿಗೆ ಬಹುಮಾನ ನೀಡಲಾಗುತ್ತದೆ” ಎಂದು ರಾಹುಲ್‌ ದೂರಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನೀಡಿದ ಉಪನ್ಯಾಸದ ಅಂಶಗಳನ್ನು ರಾಹುಲ್ ಗಾಂಧಿಯವರು ಇಲ್ಲಿಯೂ ಪ್ರತಿಧ್ವನಿಸಿದರು. “ಭಾರತದಲ್ಲಿನ ಸಂಸ್ಥೆಗಳು ಅಪಾಯದಲ್ಲಿವೆ ಮತ್ತು ಅಲ್ಪಸಂಖ್ಯಾತರು ತೊಂದರೆಗೆ ಸಿಲುಕಿದ್ದಾರೆ” ಎಂದು ಪುನರುಚ್ಚರಿಸಿದ್ದಾರೆ.

“ಅಂತಾರಾಷ್ಟ್ರೀಯ ಪ್ರವಾಸಗಳ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿದರೆ, ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಮಾನಿಸಿದಂತೆ” ಎಂಬ ವಾದಗಳಿಗೆ ಪ್ರತಿಕ್ರಿಯಿಸಿರುವ ರಾಹು‌ಲ್, “ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಮಾಡಿರುವ ಭಾಷಣಗಳನ್ನು ಗಮನಿಸಿ” ಎಂದು ತಿಳಿಸಿದ್ದಾರೆ.

“60 ವರ್ಷಗಳಲ್ಲಿ ಭಾರತದಲ್ಲಿ ಏನೂ ಆಗಿಲ್ಲ”, “ಭಾರತದಲ್ಲಿ ಅನಿಯಮಿತ ಭ್ರಷ್ಟಾಚಾರವಿದೆ” ಮೊದಲಾಗಿ ಮೋದಿ ಹೇಳಿರುವುದನ್ನು ಪ್ರಸ್ತಾಪಿಸಿರುವ ರಾಹುಲ್‌, “ಭಾರತವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರನ್ನು ಮೋದಿ ಅವಮಾನಿಸಿದ್ದಾರೆ” ಎಂದಿದ್ದಾರೆ.

“ಹಾಗಾಗಿ, ವಿದೇಶಕ್ಕೆ ಹೋದಾಗ ಭಾರತವನ್ನು ದೂಷಿಸುವ ವ್ಯಕ್ತಿ ಭಾರತದ ಪ್ರಧಾನಿ ಮೋದಿ” ಎಂದು ಟೀಕಿಸಿದ್ದಾರೆ.

“ನಾನು ಎಂದಿಗೂ ನನ್ನ ದೇಶಕ್ಕೆ ಮಾನಹಾನಿ ಮಾಡಿಲ್ಲ. ನಾನು ಅದನ್ನು ಎಂದಿಗೂ ಮಾಡುವುದಿಲ್ಲ” ಎಂದು ರಾಹುಲ್‌ ಸ್ಪಷ್ಟವಾಗಿ ಹೇಳಿದ್ದಾರೆ. “ನಾನು ಹೇಳುದ ವಿಚಾರವನ್ನು ತಿರುಚಲು ಬಿಜೆಪಿಯವರು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷಗಳು ದುರ್ಬಲವಾಗಿದೆ ಮತ್ತು ಅದರೊಳಗೆ ಬಿರುಕುಗಳಿವೆ ಎಂಬ ವಾದಗಳನ್ನು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. “ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಹೋರಾಡಿ ಸೋಲಿಸಬೇಕು ಎಂಬ ಮೂಲ ಕಲ್ಪನೆಯು ಪ್ರತಿಪಕ್ಷಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

“ಕೆಲವು ಚರ್ಚೆಯ ಅಗತ್ಯವಿದೆ. ಆದರೆ ವಿರೋಧ ಪಕ್ಷಗಳು ಸಮಸ್ಯೆಯನ್ನು ಬಗೆಹರಿಸಲು ಸಮರ್ಥವಾಗಿವೆ. ಈ ಕುರಿತು ಚರ್ಚೆಗಳು ನಡೆಯುತ್ತಿವೆ” ಎಂದು ಸುಳಿವು ನೀಡಿದ್ದಾರೆ.

“ನಾವು ಭಾರತದ ಸಾಂಸ್ಥಿಕ ರಚನೆಗಳ ವಿರುದ್ಧ ಹೋರಾಡುತ್ತಿದ್ದೇವೆ. ಭಾರತದ ಬಹುತೇಕ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಾವು ಹೋರಾಡುತ್ತಿದ್ದೇವೆ” ಎಂದು ಸಂವಾದದಲ್ಲಿ ತಿಳಿಸಿದ್ದಾರೆ.

ನಿರೂಪಣೆಗಳನ್ನು (ನೆರೇಟಿವ್‌ಗಳನ್ನು) ಕಟ್ಟುವಲ್ಲಿ ಕಾಂಗ್ರೆಸ್ ಸೋಲುತ್ತಿದೆ ಎಂಬುದನ್ನು ರಾಹುಲ್ ನಿರಾಕರಿಸಿದ್ದಾರೆ. “ಭಾರತ್ ಜೋಡೋ ಯಾತ್ರೆಯು ಪರಿಸ್ಥಿತಿಯನ್ನು ಬದಲಾಯಿಸಿದೆ. ಕಾಂಗ್ರೆಸ್ ಈಗ ನೆರೇಟಿವ್‌ಗಳನ್ನು ಮುನ್ನಡೆಸುತ್ತಿದೆ. ನಾವು ದೇಶಾದ್ಯಂತ ಯಾತ್ರೆಯನ್ನು ನಡೆಸಿದ್ದೇವೆ. ಇದರಿಂದಾಗಿ ಕಳೆದ ನಾಲ್ಕು ತಿಂಗಳಲ್ಲಿ ನೆರೇಟಿವ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದ್ದೇವೆ. ಇದು ರೂಪಾಂತರ ಸ್ಥಿತಿ. ರಾಷ್ಟ್ರೀಯ ಪತ್ರಿಕೆಗಳು ಯಾತ್ರೆಯನ್ನು ಕವರ್‌ ಮಾಡಲೇಬೇಕಾಯಿತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...