Homeಮುಖಪುಟಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

“ಭಾರತ ಮೌನವಾಗಿರಬೇಕೆಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಬಯಸುತ್ತದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರು ಲಂಡನ್‌ನಲ್ಲಿ ಆರೋಪಿಸಿದ್ದಾರೆ.

ಲಂಡನ್‌ನಲ್ಲಿ ಭಾರತೀಯ ಪತ್ರಕರ್ತರ ಸಂಘ (ಐಜೆಎ)ದ ಜೊತೆಯಲ್ಲಿ ಸಂವಾದ ನಡೆಸಿರುವ ರಾಹುಲ್‌ ಗಾಂಧಿಯವರಿಗೆ “ಭಾರತದಲ್ಲಿ ಬಿಬಿಸಿ ಡಾಕ್ಯುಮೆಂಟರಿ ಬ್ಯಾನ್‌” ವಿಷಯ ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಕೇಳಲಾಗಿದೆ.

“ರಾಜಕೀಯ ಮತ್ತು ಸಾರ್ವಜನಿಕರು: ಗ್ರಹಿಕೆಯಿಂದ ಕಾರ್ಯಕ್ಷಮತೆಯೆಡೆಗೆ” ಎಂಬ ವಿಷಯದ ಕುರಿತ ಸಂವಾದ ಇದಾಗಿತ್ತು. ಭಾರತ್ ಜೋಡೋ ಯಾತ್ರೆ, ಚೀನಾ ಮತ್ತು ರಷ್ಯಾದ ಕುರಿತ ಭಾರತದ ವಿದೇಶಾಂಗ ನೀತಿ, ಕ್ರೋನಿ ಕ್ಯಾಪಿಟಲಿಸಂ ಮತ್ತು 2024ರ ಸಾರ್ವತ್ರಿಕ ಚುನಾವಣೆಗಳ ಕುರಿತ ಪ್ರಶ್ನೆಗಳಿಗೆ ಸಂವಾದದಲ್ಲಿ ಅವರು ಉತ್ತರಿಸಿದ್ದಾರೆ.

ಐಜೆಎ ಅಧ್ಯಕ್ಷ ಡ್ಯಾನಿಶ್ ಖಾನ್ ಅವರು ಸಂವಾದವನ್ನು ಆಯೋಜಿಸಿದ್ದರು. ಭಾರತ ಮತ್ತು ಯುಕೆಯ ಪತ್ರಕರ್ತರು ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. “ಬಿಬಿಸಿ ಸಾಕ್ಷ್ಯಚಿತ್ರದ ಸುತ್ತಲಿನ ವಿವಾದ, ಹೊಸದಿಲ್ಲಿಯ ಬಿಬಿಸಿ ಕಚೇರಿಗಳ ಮೇಲಿನ ದಾಳಿ ಕುರಿತು ರಾಹುಲ್‌ ಅಭಿಪ್ರಾಯವೇನು?” ಎಂದು ಕೇಳಲಾಯಿತು.

“ಭಾರತದಲ್ಲಿ ಎಲ್ಲೆಡೆ ಬಾಯಿ ಮುಚ್ಚಿಸಲಾಗುತ್ತಿದೆ. ಬಿಬಿಸಿ ಸಾಕ್ಷ್ಯಾಚಿತ್ರವೇ ಇದಕ್ಕೆ ಉದಾಹರಣೆ. ಪತ್ರಕರ್ತರನ್ನು (ಭಾರತದಲ್ಲಿ) ಬೆದರಿಸಲಾಗುತ್ತದೆ, ಅವರ ಮೇಲೆ ದಾಳಿ ಮಾಡಲಾಗುತ್ತದೆ. ಸರ್ಕಾರ ಹೇಳಿದಂತೆ ಕೇಳುವ ಪತ್ರಕರ್ತರಿಗೆ ಬಹುಮಾನ ನೀಡಲಾಗುತ್ತದೆ” ಎಂದು ರಾಹುಲ್‌ ದೂರಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನೀಡಿದ ಉಪನ್ಯಾಸದ ಅಂಶಗಳನ್ನು ರಾಹುಲ್ ಗಾಂಧಿಯವರು ಇಲ್ಲಿಯೂ ಪ್ರತಿಧ್ವನಿಸಿದರು. “ಭಾರತದಲ್ಲಿನ ಸಂಸ್ಥೆಗಳು ಅಪಾಯದಲ್ಲಿವೆ ಮತ್ತು ಅಲ್ಪಸಂಖ್ಯಾತರು ತೊಂದರೆಗೆ ಸಿಲುಕಿದ್ದಾರೆ” ಎಂದು ಪುನರುಚ್ಚರಿಸಿದ್ದಾರೆ.

“ಅಂತಾರಾಷ್ಟ್ರೀಯ ಪ್ರವಾಸಗಳ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿದರೆ, ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಮಾನಿಸಿದಂತೆ” ಎಂಬ ವಾದಗಳಿಗೆ ಪ್ರತಿಕ್ರಿಯಿಸಿರುವ ರಾಹು‌ಲ್, “ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಮಾಡಿರುವ ಭಾಷಣಗಳನ್ನು ಗಮನಿಸಿ” ಎಂದು ತಿಳಿಸಿದ್ದಾರೆ.

“60 ವರ್ಷಗಳಲ್ಲಿ ಭಾರತದಲ್ಲಿ ಏನೂ ಆಗಿಲ್ಲ”, “ಭಾರತದಲ್ಲಿ ಅನಿಯಮಿತ ಭ್ರಷ್ಟಾಚಾರವಿದೆ” ಮೊದಲಾಗಿ ಮೋದಿ ಹೇಳಿರುವುದನ್ನು ಪ್ರಸ್ತಾಪಿಸಿರುವ ರಾಹುಲ್‌, “ಭಾರತವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರನ್ನು ಮೋದಿ ಅವಮಾನಿಸಿದ್ದಾರೆ” ಎಂದಿದ್ದಾರೆ.

“ಹಾಗಾಗಿ, ವಿದೇಶಕ್ಕೆ ಹೋದಾಗ ಭಾರತವನ್ನು ದೂಷಿಸುವ ವ್ಯಕ್ತಿ ಭಾರತದ ಪ್ರಧಾನಿ ಮೋದಿ” ಎಂದು ಟೀಕಿಸಿದ್ದಾರೆ.

“ನಾನು ಎಂದಿಗೂ ನನ್ನ ದೇಶಕ್ಕೆ ಮಾನಹಾನಿ ಮಾಡಿಲ್ಲ. ನಾನು ಅದನ್ನು ಎಂದಿಗೂ ಮಾಡುವುದಿಲ್ಲ” ಎಂದು ರಾಹುಲ್‌ ಸ್ಪಷ್ಟವಾಗಿ ಹೇಳಿದ್ದಾರೆ. “ನಾನು ಹೇಳುದ ವಿಚಾರವನ್ನು ತಿರುಚಲು ಬಿಜೆಪಿಯವರು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷಗಳು ದುರ್ಬಲವಾಗಿದೆ ಮತ್ತು ಅದರೊಳಗೆ ಬಿರುಕುಗಳಿವೆ ಎಂಬ ವಾದಗಳನ್ನು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. “ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಹೋರಾಡಿ ಸೋಲಿಸಬೇಕು ಎಂಬ ಮೂಲ ಕಲ್ಪನೆಯು ಪ್ರತಿಪಕ್ಷಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

“ಕೆಲವು ಚರ್ಚೆಯ ಅಗತ್ಯವಿದೆ. ಆದರೆ ವಿರೋಧ ಪಕ್ಷಗಳು ಸಮಸ್ಯೆಯನ್ನು ಬಗೆಹರಿಸಲು ಸಮರ್ಥವಾಗಿವೆ. ಈ ಕುರಿತು ಚರ್ಚೆಗಳು ನಡೆಯುತ್ತಿವೆ” ಎಂದು ಸುಳಿವು ನೀಡಿದ್ದಾರೆ.

“ನಾವು ಭಾರತದ ಸಾಂಸ್ಥಿಕ ರಚನೆಗಳ ವಿರುದ್ಧ ಹೋರಾಡುತ್ತಿದ್ದೇವೆ. ಭಾರತದ ಬಹುತೇಕ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಾವು ಹೋರಾಡುತ್ತಿದ್ದೇವೆ” ಎಂದು ಸಂವಾದದಲ್ಲಿ ತಿಳಿಸಿದ್ದಾರೆ.

ನಿರೂಪಣೆಗಳನ್ನು (ನೆರೇಟಿವ್‌ಗಳನ್ನು) ಕಟ್ಟುವಲ್ಲಿ ಕಾಂಗ್ರೆಸ್ ಸೋಲುತ್ತಿದೆ ಎಂಬುದನ್ನು ರಾಹುಲ್ ನಿರಾಕರಿಸಿದ್ದಾರೆ. “ಭಾರತ್ ಜೋಡೋ ಯಾತ್ರೆಯು ಪರಿಸ್ಥಿತಿಯನ್ನು ಬದಲಾಯಿಸಿದೆ. ಕಾಂಗ್ರೆಸ್ ಈಗ ನೆರೇಟಿವ್‌ಗಳನ್ನು ಮುನ್ನಡೆಸುತ್ತಿದೆ. ನಾವು ದೇಶಾದ್ಯಂತ ಯಾತ್ರೆಯನ್ನು ನಡೆಸಿದ್ದೇವೆ. ಇದರಿಂದಾಗಿ ಕಳೆದ ನಾಲ್ಕು ತಿಂಗಳಲ್ಲಿ ನೆರೇಟಿವ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದ್ದೇವೆ. ಇದು ರೂಪಾಂತರ ಸ್ಥಿತಿ. ರಾಷ್ಟ್ರೀಯ ಪತ್ರಿಕೆಗಳು ಯಾತ್ರೆಯನ್ನು ಕವರ್‌ ಮಾಡಲೇಬೇಕಾಯಿತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...