Homeಮುಖಪುಟ'ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ'; ಭಗವಂತ್...

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’; ಭಗವಂತ್ ಮಾನ್

- Advertisement -
- Advertisement -

ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಸಿಂಗ್ ಮಾನ್, ನನಗೆ ಲೋಕಸಭೆ ಚುನಾವಣೆ ಎರಡು ವಿಚಾರದಲ್ಲಿ ಮಹತ್ವದ್ದಾಗಿದೆ. ಮೊದಲನೆಯದಾಗಿ, ಈ ಲೋಕಸಭೆ ಚುನಾವಣೆ ದೇಶದ ಪ್ರಜಾಪ್ರಭುತ್ವದ ಭವಿಷ್ಯದ ದೃಷ್ಟಿಯಿಂದ ಅಗ್ನಿಪರೀಕ್ಷೆಯಾಗಿದೆ. ಎರಡನೆಯದಾಗಿ, ಪಂಜಾಬ್‌ನ ಎಎಪಿ ಸರಕಾರದ ಎರಡು ವರ್ಷದ ಆಡಳಿತದ ಸಾಧನೆಯ ರಿಯಾಲಿಟಿ ಚೆಕ್ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಚುನಾವಣೆ ಸೋಲು-ಗೆಲುವಿನ ಪ್ರಶ್ನೆಯಲ್ಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವ ಚುನಾವಣೆಯಾಗಿದೆ. ಎರಡು-ಮೂರು ಬಿಜೆಪಿ ಪ್ರಮುಖ ನಾಯಕರು ನಮಗೆ 400 ಸ್ಥಾನಗಳನ್ನು ನೀಡಿ ಮತ್ತು ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಎಷ್ಟು ಧೈರ್ಯ? ಹಾಗೆ ನೋಡಿದರೆ ಅವರು ಸಂವಿಧಾನವನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಸರ್ವೋಚ್ಚವಾಗಿದೆ, ಆದರೆ ಅವರು ಅದರ ನಿರ್ದೇಶನಗಳನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಪರವಾಗಿ 5-0 ತೀರ್ಪು ನೀಡಿತು, ಆದರೆ ಅವರು ಸಂಜೆ 6 ಗಂಟೆಗೆ ಸುಗ್ರೀವಾಜ್ಞೆಯನ್ನು ತಂದು ತೀರ್ಪನ್ನು ಬದಲಾಯಿಸಿದರು. ಚುನಾವಣಾ ಆಯೋಗದ ಮಾತನ್ನೂ ಅವರು ಕೇಳುವುದಿಲ್ಲ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅವರ ಜೀಬು ತುಂಬಿಸುವ ಸಾಧನವಾಗಿದೆ. ಮೊದಲು ಇಡಿ ದಾಳಿ ನಡೆಸಿ ನಂತರ ಕಂಪನಿಗಳು ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸುವಂತೆ ಮಾಡುತ್ತಾರೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರು ಮಾತ್ರ ಇಷ್ಟೊಂದು ಪ್ರಶ್ನೆಗಳನ್ನು ಕೇಳುವುದು ಹೇಗೆ? ಅವರು ಮಮತಾ ದೀದಿ, ಸ್ಟಾಲಿನ್, ಹೇಮಂತ್ ಸೋರೆನ್, ನವೀನ್ ಜಿ ಅವರನ್ನು ತೊಂದರೆಗೊಳಿಸುತ್ತಿದ್ದಾರೆ.  ನನ್ನ ಪ್ರಕರಣದಲ್ಲಿ, ನಾನು ಸುಪ್ರೀಂ ಕೋರ್ಟ್‌ನ್ನು ಸಂಪರ್ಕಿಸುವವರೆಗೆ ಬಜೆಟ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರು ನಿರಾಕರಿಸಿದ್ದರು. ಎಲ್ಲಿ ಚುನಾಯಿತರಾಗುವುದಿಲ್ಲವೋ ಅಲ್ಲಿ ಆಯ್ಕೆಯಾದವರಿಗೆ ತೊಂದರೆ ಕೊಡುತ್ತಾರೆ. ಇದು ಬಿಜೆಪಿಯ ನೀತಿ ಎಂದು ಹೇಳಿದ್ದಾರೆ. ಜನರು ಈ ಬಾರಿಯ ಅವಕಾಶವನ್ನು ತಪ್ಪಿಸಿಕೊಂಡರೆ, ಭಾರತದ ಆಡಳಿತವು ರಷ್ಯಾದಲ್ಲಿ ಪುಟಿನ್ ಆಡಳಿತದಂತೆ ಇರುತ್ತದೆ ಮತ್ತು ಯಾವುದೇ ವಿರೋಧ ಪಕ್ಷಗಳು ಇರುವುದಿಲ್ಲ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ದೇಶದಾದ್ಯಂತ ವಿವಿಧ ರಾಜ್ಯಗಳಿಂದ ನನಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮಮತಾ ಅವರು ಪಶ್ಚಿಮ ಬಂಗಾಳದಿಂದ ಹೋರಾಡುತ್ತಿದ್ದಾರೆ, ನಾನು ಪಂಜಾಬ್‌ನಿಂದ ಹೋರಾಡುತ್ತಿದ್ದೇನೆ, ಅಖಿಲೇಶ್ ಯಾದವ್‌ ಯುಪಿಯಿಂದ, ತೇಜಸ್ವಿ ಬಿಹಾರದಿಂದ, ಠಾಕ್ರೆ ಮತ್ತು ಪವಾರ್ ಮಹಾರಾಷ್ಟ್ರದಿಂದ, ಸ್ಟಾಲಿನ್ ತಮಿಳುನಾಡಿನಿಂದ ಹೋರಾಡುತ್ತಿದ್ದಾರೆ. ನಮ್ಮ ಇಂಡಿಯಾ ಬಣ ಅವರನ್ನು ಪೂರ್ಣವಾಗಿ ಸೋಲಿಸುತ್ತದೆ. ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಮೊದಲ ಹಂತದ ಮತದಾನದ ನಂತರ ಹೊರಬಿದ್ದಿರುವ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಜೆಪಿ ಪಕ್ಷಕ್ಕೆ ಉತ್ತಮ ಬೆಂಬಲ ಇಲ್ಲ ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಚಿಂತನೆಯಾಗಿದ್ದಾರೆ. ನೀವು ಒಬ್ಬ ವ್ಯಕ್ತಿಯನ್ನು ಬಂಧಿಸಬಹುದು ಆದರೆ ಅವನ ಆಲೋಚನೆಯಲ್ಲ. ಎಎಪಿ ಎನ್‌ಜಿಒ ಅಲ್ಲ, ರಾಷ್ಟ್ರೀಯ ಪಕ್ಷ, ಗುಜರಾತ್‌ನಲ್ಲಿ ಐದು ಶಾಸಕರಿದ್ದಾರೆ, ಗೋವಾದಲ್ಲಿ ಇಬ್ಬರು, ರಾಜ್ಯಸಭೆಯಲ್ಲಿ 13 ಜನರಿದ್ದಾರೆ, ಇಬ್ಬರು ಮೇಯರ್‌ಗಳಿದ್ದಾರೆ. ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಕಳುಹಿಸಲಾಗಿದೆ ಆದರೆ ಎಎಪಿ ಅವರ ಹಿಂದೆ ಬಂಡೆಯಂತೆ ನಿಂತಿದೆ. ನಿನ್ನೆ ಸುನೀತಾ ಜಿ ಕೂಡ ರಾಂಚಿಗೆ ಹೋಗಿದ್ದರು. ಕೇಜ್ರಿವಾಲ್‌ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಅದನ್ನು ಮಾಡುತ್ತೇನೆ. ನಮ್ಮದು ಕಿರಿಯ ಮತ್ತು ಇತ್ತೀಚೆಗೆ ವೇಗವಾಗಿ ಬೆಳೆಯುತ್ತಿರುವ ಪಕ್ಷ. ಜನಸಂಘವು 1958ರಲ್ಲಿ ಹುಟ್ಟಿತು ಮತ್ತು 26 ವರ್ಷಗಳ ನಂತರ 1984ರಲ್ಲಿ ಇಬ್ಬರು ಸಂಸದರನ್ನು ಪಡೆದರು. ಕಾಂಗ್ರೆಸ್ 1885ರಲ್ಲಿ ಹುಟ್ಟಿಕೊಂಡಿತು, ಆದರೆ ಅದು 1930ರಲ್ಲಿ ಇಬ್ಬರು ಕೌನ್ಸಿಲರ್‌ಗಳನ್ನು ಪಡೆದಿದೆ. ನಾವು 2012ರಲ್ಲಿ ಹುಟ್ಟಿದ್ದೇವೆ ಮತ್ತು ನಾವು ಈಗಾಗಲೇ ಎರಡು ರಾಜ್ಯಗಳಲ್ಲಿ ಎರಡು ಸರ್ಕಾರಗಳನ್ನು ಹೊಂದಿದ್ದೇವೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...