Homeಮುಖಪುಟ'ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ'; ಭಗವಂತ್...

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’; ಭಗವಂತ್ ಮಾನ್

- Advertisement -
- Advertisement -

ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಸಿಂಗ್ ಮಾನ್, ನನಗೆ ಲೋಕಸಭೆ ಚುನಾವಣೆ ಎರಡು ವಿಚಾರದಲ್ಲಿ ಮಹತ್ವದ್ದಾಗಿದೆ. ಮೊದಲನೆಯದಾಗಿ, ಈ ಲೋಕಸಭೆ ಚುನಾವಣೆ ದೇಶದ ಪ್ರಜಾಪ್ರಭುತ್ವದ ಭವಿಷ್ಯದ ದೃಷ್ಟಿಯಿಂದ ಅಗ್ನಿಪರೀಕ್ಷೆಯಾಗಿದೆ. ಎರಡನೆಯದಾಗಿ, ಪಂಜಾಬ್‌ನ ಎಎಪಿ ಸರಕಾರದ ಎರಡು ವರ್ಷದ ಆಡಳಿತದ ಸಾಧನೆಯ ರಿಯಾಲಿಟಿ ಚೆಕ್ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಚುನಾವಣೆ ಸೋಲು-ಗೆಲುವಿನ ಪ್ರಶ್ನೆಯಲ್ಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವ ಚುನಾವಣೆಯಾಗಿದೆ. ಎರಡು-ಮೂರು ಬಿಜೆಪಿ ಪ್ರಮುಖ ನಾಯಕರು ನಮಗೆ 400 ಸ್ಥಾನಗಳನ್ನು ನೀಡಿ ಮತ್ತು ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಎಷ್ಟು ಧೈರ್ಯ? ಹಾಗೆ ನೋಡಿದರೆ ಅವರು ಸಂವಿಧಾನವನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಸರ್ವೋಚ್ಚವಾಗಿದೆ, ಆದರೆ ಅವರು ಅದರ ನಿರ್ದೇಶನಗಳನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಪರವಾಗಿ 5-0 ತೀರ್ಪು ನೀಡಿತು, ಆದರೆ ಅವರು ಸಂಜೆ 6 ಗಂಟೆಗೆ ಸುಗ್ರೀವಾಜ್ಞೆಯನ್ನು ತಂದು ತೀರ್ಪನ್ನು ಬದಲಾಯಿಸಿದರು. ಚುನಾವಣಾ ಆಯೋಗದ ಮಾತನ್ನೂ ಅವರು ಕೇಳುವುದಿಲ್ಲ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅವರ ಜೀಬು ತುಂಬಿಸುವ ಸಾಧನವಾಗಿದೆ. ಮೊದಲು ಇಡಿ ದಾಳಿ ನಡೆಸಿ ನಂತರ ಕಂಪನಿಗಳು ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸುವಂತೆ ಮಾಡುತ್ತಾರೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರು ಮಾತ್ರ ಇಷ್ಟೊಂದು ಪ್ರಶ್ನೆಗಳನ್ನು ಕೇಳುವುದು ಹೇಗೆ? ಅವರು ಮಮತಾ ದೀದಿ, ಸ್ಟಾಲಿನ್, ಹೇಮಂತ್ ಸೋರೆನ್, ನವೀನ್ ಜಿ ಅವರನ್ನು ತೊಂದರೆಗೊಳಿಸುತ್ತಿದ್ದಾರೆ.  ನನ್ನ ಪ್ರಕರಣದಲ್ಲಿ, ನಾನು ಸುಪ್ರೀಂ ಕೋರ್ಟ್‌ನ್ನು ಸಂಪರ್ಕಿಸುವವರೆಗೆ ಬಜೆಟ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರು ನಿರಾಕರಿಸಿದ್ದರು. ಎಲ್ಲಿ ಚುನಾಯಿತರಾಗುವುದಿಲ್ಲವೋ ಅಲ್ಲಿ ಆಯ್ಕೆಯಾದವರಿಗೆ ತೊಂದರೆ ಕೊಡುತ್ತಾರೆ. ಇದು ಬಿಜೆಪಿಯ ನೀತಿ ಎಂದು ಹೇಳಿದ್ದಾರೆ. ಜನರು ಈ ಬಾರಿಯ ಅವಕಾಶವನ್ನು ತಪ್ಪಿಸಿಕೊಂಡರೆ, ಭಾರತದ ಆಡಳಿತವು ರಷ್ಯಾದಲ್ಲಿ ಪುಟಿನ್ ಆಡಳಿತದಂತೆ ಇರುತ್ತದೆ ಮತ್ತು ಯಾವುದೇ ವಿರೋಧ ಪಕ್ಷಗಳು ಇರುವುದಿಲ್ಲ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ದೇಶದಾದ್ಯಂತ ವಿವಿಧ ರಾಜ್ಯಗಳಿಂದ ನನಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮಮತಾ ಅವರು ಪಶ್ಚಿಮ ಬಂಗಾಳದಿಂದ ಹೋರಾಡುತ್ತಿದ್ದಾರೆ, ನಾನು ಪಂಜಾಬ್‌ನಿಂದ ಹೋರಾಡುತ್ತಿದ್ದೇನೆ, ಅಖಿಲೇಶ್ ಯಾದವ್‌ ಯುಪಿಯಿಂದ, ತೇಜಸ್ವಿ ಬಿಹಾರದಿಂದ, ಠಾಕ್ರೆ ಮತ್ತು ಪವಾರ್ ಮಹಾರಾಷ್ಟ್ರದಿಂದ, ಸ್ಟಾಲಿನ್ ತಮಿಳುನಾಡಿನಿಂದ ಹೋರಾಡುತ್ತಿದ್ದಾರೆ. ನಮ್ಮ ಇಂಡಿಯಾ ಬಣ ಅವರನ್ನು ಪೂರ್ಣವಾಗಿ ಸೋಲಿಸುತ್ತದೆ. ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಮೊದಲ ಹಂತದ ಮತದಾನದ ನಂತರ ಹೊರಬಿದ್ದಿರುವ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಜೆಪಿ ಪಕ್ಷಕ್ಕೆ ಉತ್ತಮ ಬೆಂಬಲ ಇಲ್ಲ ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಚಿಂತನೆಯಾಗಿದ್ದಾರೆ. ನೀವು ಒಬ್ಬ ವ್ಯಕ್ತಿಯನ್ನು ಬಂಧಿಸಬಹುದು ಆದರೆ ಅವನ ಆಲೋಚನೆಯಲ್ಲ. ಎಎಪಿ ಎನ್‌ಜಿಒ ಅಲ್ಲ, ರಾಷ್ಟ್ರೀಯ ಪಕ್ಷ, ಗುಜರಾತ್‌ನಲ್ಲಿ ಐದು ಶಾಸಕರಿದ್ದಾರೆ, ಗೋವಾದಲ್ಲಿ ಇಬ್ಬರು, ರಾಜ್ಯಸಭೆಯಲ್ಲಿ 13 ಜನರಿದ್ದಾರೆ, ಇಬ್ಬರು ಮೇಯರ್‌ಗಳಿದ್ದಾರೆ. ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಕಳುಹಿಸಲಾಗಿದೆ ಆದರೆ ಎಎಪಿ ಅವರ ಹಿಂದೆ ಬಂಡೆಯಂತೆ ನಿಂತಿದೆ. ನಿನ್ನೆ ಸುನೀತಾ ಜಿ ಕೂಡ ರಾಂಚಿಗೆ ಹೋಗಿದ್ದರು. ಕೇಜ್ರಿವಾಲ್‌ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಅದನ್ನು ಮಾಡುತ್ತೇನೆ. ನಮ್ಮದು ಕಿರಿಯ ಮತ್ತು ಇತ್ತೀಚೆಗೆ ವೇಗವಾಗಿ ಬೆಳೆಯುತ್ತಿರುವ ಪಕ್ಷ. ಜನಸಂಘವು 1958ರಲ್ಲಿ ಹುಟ್ಟಿತು ಮತ್ತು 26 ವರ್ಷಗಳ ನಂತರ 1984ರಲ್ಲಿ ಇಬ್ಬರು ಸಂಸದರನ್ನು ಪಡೆದರು. ಕಾಂಗ್ರೆಸ್ 1885ರಲ್ಲಿ ಹುಟ್ಟಿಕೊಂಡಿತು, ಆದರೆ ಅದು 1930ರಲ್ಲಿ ಇಬ್ಬರು ಕೌನ್ಸಿಲರ್‌ಗಳನ್ನು ಪಡೆದಿದೆ. ನಾವು 2012ರಲ್ಲಿ ಹುಟ್ಟಿದ್ದೇವೆ ಮತ್ತು ನಾವು ಈಗಾಗಲೇ ಎರಡು ರಾಜ್ಯಗಳಲ್ಲಿ ಎರಡು ಸರ್ಕಾರಗಳನ್ನು ಹೊಂದಿದ್ದೇವೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...