Homeಮುಖಪುಟ'ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ'; ಭಗವಂತ್...

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’; ಭಗವಂತ್ ಮಾನ್

- Advertisement -
- Advertisement -

ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಸಿಂಗ್ ಮಾನ್, ನನಗೆ ಲೋಕಸಭೆ ಚುನಾವಣೆ ಎರಡು ವಿಚಾರದಲ್ಲಿ ಮಹತ್ವದ್ದಾಗಿದೆ. ಮೊದಲನೆಯದಾಗಿ, ಈ ಲೋಕಸಭೆ ಚುನಾವಣೆ ದೇಶದ ಪ್ರಜಾಪ್ರಭುತ್ವದ ಭವಿಷ್ಯದ ದೃಷ್ಟಿಯಿಂದ ಅಗ್ನಿಪರೀಕ್ಷೆಯಾಗಿದೆ. ಎರಡನೆಯದಾಗಿ, ಪಂಜಾಬ್‌ನ ಎಎಪಿ ಸರಕಾರದ ಎರಡು ವರ್ಷದ ಆಡಳಿತದ ಸಾಧನೆಯ ರಿಯಾಲಿಟಿ ಚೆಕ್ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಚುನಾವಣೆ ಸೋಲು-ಗೆಲುವಿನ ಪ್ರಶ್ನೆಯಲ್ಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವ ಚುನಾವಣೆಯಾಗಿದೆ. ಎರಡು-ಮೂರು ಬಿಜೆಪಿ ಪ್ರಮುಖ ನಾಯಕರು ನಮಗೆ 400 ಸ್ಥಾನಗಳನ್ನು ನೀಡಿ ಮತ್ತು ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಎಷ್ಟು ಧೈರ್ಯ? ಹಾಗೆ ನೋಡಿದರೆ ಅವರು ಸಂವಿಧಾನವನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಸರ್ವೋಚ್ಚವಾಗಿದೆ, ಆದರೆ ಅವರು ಅದರ ನಿರ್ದೇಶನಗಳನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಪರವಾಗಿ 5-0 ತೀರ್ಪು ನೀಡಿತು, ಆದರೆ ಅವರು ಸಂಜೆ 6 ಗಂಟೆಗೆ ಸುಗ್ರೀವಾಜ್ಞೆಯನ್ನು ತಂದು ತೀರ್ಪನ್ನು ಬದಲಾಯಿಸಿದರು. ಚುನಾವಣಾ ಆಯೋಗದ ಮಾತನ್ನೂ ಅವರು ಕೇಳುವುದಿಲ್ಲ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅವರ ಜೀಬು ತುಂಬಿಸುವ ಸಾಧನವಾಗಿದೆ. ಮೊದಲು ಇಡಿ ದಾಳಿ ನಡೆಸಿ ನಂತರ ಕಂಪನಿಗಳು ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸುವಂತೆ ಮಾಡುತ್ತಾರೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರು ಮಾತ್ರ ಇಷ್ಟೊಂದು ಪ್ರಶ್ನೆಗಳನ್ನು ಕೇಳುವುದು ಹೇಗೆ? ಅವರು ಮಮತಾ ದೀದಿ, ಸ್ಟಾಲಿನ್, ಹೇಮಂತ್ ಸೋರೆನ್, ನವೀನ್ ಜಿ ಅವರನ್ನು ತೊಂದರೆಗೊಳಿಸುತ್ತಿದ್ದಾರೆ.  ನನ್ನ ಪ್ರಕರಣದಲ್ಲಿ, ನಾನು ಸುಪ್ರೀಂ ಕೋರ್ಟ್‌ನ್ನು ಸಂಪರ್ಕಿಸುವವರೆಗೆ ಬಜೆಟ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರು ನಿರಾಕರಿಸಿದ್ದರು. ಎಲ್ಲಿ ಚುನಾಯಿತರಾಗುವುದಿಲ್ಲವೋ ಅಲ್ಲಿ ಆಯ್ಕೆಯಾದವರಿಗೆ ತೊಂದರೆ ಕೊಡುತ್ತಾರೆ. ಇದು ಬಿಜೆಪಿಯ ನೀತಿ ಎಂದು ಹೇಳಿದ್ದಾರೆ. ಜನರು ಈ ಬಾರಿಯ ಅವಕಾಶವನ್ನು ತಪ್ಪಿಸಿಕೊಂಡರೆ, ಭಾರತದ ಆಡಳಿತವು ರಷ್ಯಾದಲ್ಲಿ ಪುಟಿನ್ ಆಡಳಿತದಂತೆ ಇರುತ್ತದೆ ಮತ್ತು ಯಾವುದೇ ವಿರೋಧ ಪಕ್ಷಗಳು ಇರುವುದಿಲ್ಲ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ದೇಶದಾದ್ಯಂತ ವಿವಿಧ ರಾಜ್ಯಗಳಿಂದ ನನಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮಮತಾ ಅವರು ಪಶ್ಚಿಮ ಬಂಗಾಳದಿಂದ ಹೋರಾಡುತ್ತಿದ್ದಾರೆ, ನಾನು ಪಂಜಾಬ್‌ನಿಂದ ಹೋರಾಡುತ್ತಿದ್ದೇನೆ, ಅಖಿಲೇಶ್ ಯಾದವ್‌ ಯುಪಿಯಿಂದ, ತೇಜಸ್ವಿ ಬಿಹಾರದಿಂದ, ಠಾಕ್ರೆ ಮತ್ತು ಪವಾರ್ ಮಹಾರಾಷ್ಟ್ರದಿಂದ, ಸ್ಟಾಲಿನ್ ತಮಿಳುನಾಡಿನಿಂದ ಹೋರಾಡುತ್ತಿದ್ದಾರೆ. ನಮ್ಮ ಇಂಡಿಯಾ ಬಣ ಅವರನ್ನು ಪೂರ್ಣವಾಗಿ ಸೋಲಿಸುತ್ತದೆ. ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಮೊದಲ ಹಂತದ ಮತದಾನದ ನಂತರ ಹೊರಬಿದ್ದಿರುವ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಜೆಪಿ ಪಕ್ಷಕ್ಕೆ ಉತ್ತಮ ಬೆಂಬಲ ಇಲ್ಲ ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಚಿಂತನೆಯಾಗಿದ್ದಾರೆ. ನೀವು ಒಬ್ಬ ವ್ಯಕ್ತಿಯನ್ನು ಬಂಧಿಸಬಹುದು ಆದರೆ ಅವನ ಆಲೋಚನೆಯಲ್ಲ. ಎಎಪಿ ಎನ್‌ಜಿಒ ಅಲ್ಲ, ರಾಷ್ಟ್ರೀಯ ಪಕ್ಷ, ಗುಜರಾತ್‌ನಲ್ಲಿ ಐದು ಶಾಸಕರಿದ್ದಾರೆ, ಗೋವಾದಲ್ಲಿ ಇಬ್ಬರು, ರಾಜ್ಯಸಭೆಯಲ್ಲಿ 13 ಜನರಿದ್ದಾರೆ, ಇಬ್ಬರು ಮೇಯರ್‌ಗಳಿದ್ದಾರೆ. ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಕಳುಹಿಸಲಾಗಿದೆ ಆದರೆ ಎಎಪಿ ಅವರ ಹಿಂದೆ ಬಂಡೆಯಂತೆ ನಿಂತಿದೆ. ನಿನ್ನೆ ಸುನೀತಾ ಜಿ ಕೂಡ ರಾಂಚಿಗೆ ಹೋಗಿದ್ದರು. ಕೇಜ್ರಿವಾಲ್‌ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಅದನ್ನು ಮಾಡುತ್ತೇನೆ. ನಮ್ಮದು ಕಿರಿಯ ಮತ್ತು ಇತ್ತೀಚೆಗೆ ವೇಗವಾಗಿ ಬೆಳೆಯುತ್ತಿರುವ ಪಕ್ಷ. ಜನಸಂಘವು 1958ರಲ್ಲಿ ಹುಟ್ಟಿತು ಮತ್ತು 26 ವರ್ಷಗಳ ನಂತರ 1984ರಲ್ಲಿ ಇಬ್ಬರು ಸಂಸದರನ್ನು ಪಡೆದರು. ಕಾಂಗ್ರೆಸ್ 1885ರಲ್ಲಿ ಹುಟ್ಟಿಕೊಂಡಿತು, ಆದರೆ ಅದು 1930ರಲ್ಲಿ ಇಬ್ಬರು ಕೌನ್ಸಿಲರ್‌ಗಳನ್ನು ಪಡೆದಿದೆ. ನಾವು 2012ರಲ್ಲಿ ಹುಟ್ಟಿದ್ದೇವೆ ಮತ್ತು ನಾವು ಈಗಾಗಲೇ ಎರಡು ರಾಜ್ಯಗಳಲ್ಲಿ ಎರಡು ಸರ್ಕಾರಗಳನ್ನು ಹೊಂದಿದ್ದೇವೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...