Homeಮುಖಪುಟ'ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ'; ಭಗವಂತ್...

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’; ಭಗವಂತ್ ಮಾನ್

- Advertisement -
- Advertisement -

ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಸಿಂಗ್ ಮಾನ್, ನನಗೆ ಲೋಕಸಭೆ ಚುನಾವಣೆ ಎರಡು ವಿಚಾರದಲ್ಲಿ ಮಹತ್ವದ್ದಾಗಿದೆ. ಮೊದಲನೆಯದಾಗಿ, ಈ ಲೋಕಸಭೆ ಚುನಾವಣೆ ದೇಶದ ಪ್ರಜಾಪ್ರಭುತ್ವದ ಭವಿಷ್ಯದ ದೃಷ್ಟಿಯಿಂದ ಅಗ್ನಿಪರೀಕ್ಷೆಯಾಗಿದೆ. ಎರಡನೆಯದಾಗಿ, ಪಂಜಾಬ್‌ನ ಎಎಪಿ ಸರಕಾರದ ಎರಡು ವರ್ಷದ ಆಡಳಿತದ ಸಾಧನೆಯ ರಿಯಾಲಿಟಿ ಚೆಕ್ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಚುನಾವಣೆ ಸೋಲು-ಗೆಲುವಿನ ಪ್ರಶ್ನೆಯಲ್ಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವ ಚುನಾವಣೆಯಾಗಿದೆ. ಎರಡು-ಮೂರು ಬಿಜೆಪಿ ಪ್ರಮುಖ ನಾಯಕರು ನಮಗೆ 400 ಸ್ಥಾನಗಳನ್ನು ನೀಡಿ ಮತ್ತು ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಎಷ್ಟು ಧೈರ್ಯ? ಹಾಗೆ ನೋಡಿದರೆ ಅವರು ಸಂವಿಧಾನವನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಸರ್ವೋಚ್ಚವಾಗಿದೆ, ಆದರೆ ಅವರು ಅದರ ನಿರ್ದೇಶನಗಳನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಪರವಾಗಿ 5-0 ತೀರ್ಪು ನೀಡಿತು, ಆದರೆ ಅವರು ಸಂಜೆ 6 ಗಂಟೆಗೆ ಸುಗ್ರೀವಾಜ್ಞೆಯನ್ನು ತಂದು ತೀರ್ಪನ್ನು ಬದಲಾಯಿಸಿದರು. ಚುನಾವಣಾ ಆಯೋಗದ ಮಾತನ್ನೂ ಅವರು ಕೇಳುವುದಿಲ್ಲ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅವರ ಜೀಬು ತುಂಬಿಸುವ ಸಾಧನವಾಗಿದೆ. ಮೊದಲು ಇಡಿ ದಾಳಿ ನಡೆಸಿ ನಂತರ ಕಂಪನಿಗಳು ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸುವಂತೆ ಮಾಡುತ್ತಾರೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರು ಮಾತ್ರ ಇಷ್ಟೊಂದು ಪ್ರಶ್ನೆಗಳನ್ನು ಕೇಳುವುದು ಹೇಗೆ? ಅವರು ಮಮತಾ ದೀದಿ, ಸ್ಟಾಲಿನ್, ಹೇಮಂತ್ ಸೋರೆನ್, ನವೀನ್ ಜಿ ಅವರನ್ನು ತೊಂದರೆಗೊಳಿಸುತ್ತಿದ್ದಾರೆ.  ನನ್ನ ಪ್ರಕರಣದಲ್ಲಿ, ನಾನು ಸುಪ್ರೀಂ ಕೋರ್ಟ್‌ನ್ನು ಸಂಪರ್ಕಿಸುವವರೆಗೆ ಬಜೆಟ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರು ನಿರಾಕರಿಸಿದ್ದರು. ಎಲ್ಲಿ ಚುನಾಯಿತರಾಗುವುದಿಲ್ಲವೋ ಅಲ್ಲಿ ಆಯ್ಕೆಯಾದವರಿಗೆ ತೊಂದರೆ ಕೊಡುತ್ತಾರೆ. ಇದು ಬಿಜೆಪಿಯ ನೀತಿ ಎಂದು ಹೇಳಿದ್ದಾರೆ. ಜನರು ಈ ಬಾರಿಯ ಅವಕಾಶವನ್ನು ತಪ್ಪಿಸಿಕೊಂಡರೆ, ಭಾರತದ ಆಡಳಿತವು ರಷ್ಯಾದಲ್ಲಿ ಪುಟಿನ್ ಆಡಳಿತದಂತೆ ಇರುತ್ತದೆ ಮತ್ತು ಯಾವುದೇ ವಿರೋಧ ಪಕ್ಷಗಳು ಇರುವುದಿಲ್ಲ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ದೇಶದಾದ್ಯಂತ ವಿವಿಧ ರಾಜ್ಯಗಳಿಂದ ನನಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮಮತಾ ಅವರು ಪಶ್ಚಿಮ ಬಂಗಾಳದಿಂದ ಹೋರಾಡುತ್ತಿದ್ದಾರೆ, ನಾನು ಪಂಜಾಬ್‌ನಿಂದ ಹೋರಾಡುತ್ತಿದ್ದೇನೆ, ಅಖಿಲೇಶ್ ಯಾದವ್‌ ಯುಪಿಯಿಂದ, ತೇಜಸ್ವಿ ಬಿಹಾರದಿಂದ, ಠಾಕ್ರೆ ಮತ್ತು ಪವಾರ್ ಮಹಾರಾಷ್ಟ್ರದಿಂದ, ಸ್ಟಾಲಿನ್ ತಮಿಳುನಾಡಿನಿಂದ ಹೋರಾಡುತ್ತಿದ್ದಾರೆ. ನಮ್ಮ ಇಂಡಿಯಾ ಬಣ ಅವರನ್ನು ಪೂರ್ಣವಾಗಿ ಸೋಲಿಸುತ್ತದೆ. ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಮೊದಲ ಹಂತದ ಮತದಾನದ ನಂತರ ಹೊರಬಿದ್ದಿರುವ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಜೆಪಿ ಪಕ್ಷಕ್ಕೆ ಉತ್ತಮ ಬೆಂಬಲ ಇಲ್ಲ ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಚಿಂತನೆಯಾಗಿದ್ದಾರೆ. ನೀವು ಒಬ್ಬ ವ್ಯಕ್ತಿಯನ್ನು ಬಂಧಿಸಬಹುದು ಆದರೆ ಅವನ ಆಲೋಚನೆಯಲ್ಲ. ಎಎಪಿ ಎನ್‌ಜಿಒ ಅಲ್ಲ, ರಾಷ್ಟ್ರೀಯ ಪಕ್ಷ, ಗುಜರಾತ್‌ನಲ್ಲಿ ಐದು ಶಾಸಕರಿದ್ದಾರೆ, ಗೋವಾದಲ್ಲಿ ಇಬ್ಬರು, ರಾಜ್ಯಸಭೆಯಲ್ಲಿ 13 ಜನರಿದ್ದಾರೆ, ಇಬ್ಬರು ಮೇಯರ್‌ಗಳಿದ್ದಾರೆ. ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಕಳುಹಿಸಲಾಗಿದೆ ಆದರೆ ಎಎಪಿ ಅವರ ಹಿಂದೆ ಬಂಡೆಯಂತೆ ನಿಂತಿದೆ. ನಿನ್ನೆ ಸುನೀತಾ ಜಿ ಕೂಡ ರಾಂಚಿಗೆ ಹೋಗಿದ್ದರು. ಕೇಜ್ರಿವಾಲ್‌ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಅದನ್ನು ಮಾಡುತ್ತೇನೆ. ನಮ್ಮದು ಕಿರಿಯ ಮತ್ತು ಇತ್ತೀಚೆಗೆ ವೇಗವಾಗಿ ಬೆಳೆಯುತ್ತಿರುವ ಪಕ್ಷ. ಜನಸಂಘವು 1958ರಲ್ಲಿ ಹುಟ್ಟಿತು ಮತ್ತು 26 ವರ್ಷಗಳ ನಂತರ 1984ರಲ್ಲಿ ಇಬ್ಬರು ಸಂಸದರನ್ನು ಪಡೆದರು. ಕಾಂಗ್ರೆಸ್ 1885ರಲ್ಲಿ ಹುಟ್ಟಿಕೊಂಡಿತು, ಆದರೆ ಅದು 1930ರಲ್ಲಿ ಇಬ್ಬರು ಕೌನ್ಸಿಲರ್‌ಗಳನ್ನು ಪಡೆದಿದೆ. ನಾವು 2012ರಲ್ಲಿ ಹುಟ್ಟಿದ್ದೇವೆ ಮತ್ತು ನಾವು ಈಗಾಗಲೇ ಎರಡು ರಾಜ್ಯಗಳಲ್ಲಿ ಎರಡು ಸರ್ಕಾರಗಳನ್ನು ಹೊಂದಿದ್ದೇವೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...