Homeಮುಖಪುಟ'ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ'; ಭಗವಂತ್...

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’; ಭಗವಂತ್ ಮಾನ್

- Advertisement -
- Advertisement -

ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಸಿಂಗ್ ಮಾನ್, ನನಗೆ ಲೋಕಸಭೆ ಚುನಾವಣೆ ಎರಡು ವಿಚಾರದಲ್ಲಿ ಮಹತ್ವದ್ದಾಗಿದೆ. ಮೊದಲನೆಯದಾಗಿ, ಈ ಲೋಕಸಭೆ ಚುನಾವಣೆ ದೇಶದ ಪ್ರಜಾಪ್ರಭುತ್ವದ ಭವಿಷ್ಯದ ದೃಷ್ಟಿಯಿಂದ ಅಗ್ನಿಪರೀಕ್ಷೆಯಾಗಿದೆ. ಎರಡನೆಯದಾಗಿ, ಪಂಜಾಬ್‌ನ ಎಎಪಿ ಸರಕಾರದ ಎರಡು ವರ್ಷದ ಆಡಳಿತದ ಸಾಧನೆಯ ರಿಯಾಲಿಟಿ ಚೆಕ್ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಚುನಾವಣೆ ಸೋಲು-ಗೆಲುವಿನ ಪ್ರಶ್ನೆಯಲ್ಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವ ಚುನಾವಣೆಯಾಗಿದೆ. ಎರಡು-ಮೂರು ಬಿಜೆಪಿ ಪ್ರಮುಖ ನಾಯಕರು ನಮಗೆ 400 ಸ್ಥಾನಗಳನ್ನು ನೀಡಿ ಮತ್ತು ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಎಷ್ಟು ಧೈರ್ಯ? ಹಾಗೆ ನೋಡಿದರೆ ಅವರು ಸಂವಿಧಾನವನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಸರ್ವೋಚ್ಚವಾಗಿದೆ, ಆದರೆ ಅವರು ಅದರ ನಿರ್ದೇಶನಗಳನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಪರವಾಗಿ 5-0 ತೀರ್ಪು ನೀಡಿತು, ಆದರೆ ಅವರು ಸಂಜೆ 6 ಗಂಟೆಗೆ ಸುಗ್ರೀವಾಜ್ಞೆಯನ್ನು ತಂದು ತೀರ್ಪನ್ನು ಬದಲಾಯಿಸಿದರು. ಚುನಾವಣಾ ಆಯೋಗದ ಮಾತನ್ನೂ ಅವರು ಕೇಳುವುದಿಲ್ಲ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅವರ ಜೀಬು ತುಂಬಿಸುವ ಸಾಧನವಾಗಿದೆ. ಮೊದಲು ಇಡಿ ದಾಳಿ ನಡೆಸಿ ನಂತರ ಕಂಪನಿಗಳು ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸುವಂತೆ ಮಾಡುತ್ತಾರೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರು ಮಾತ್ರ ಇಷ್ಟೊಂದು ಪ್ರಶ್ನೆಗಳನ್ನು ಕೇಳುವುದು ಹೇಗೆ? ಅವರು ಮಮತಾ ದೀದಿ, ಸ್ಟಾಲಿನ್, ಹೇಮಂತ್ ಸೋರೆನ್, ನವೀನ್ ಜಿ ಅವರನ್ನು ತೊಂದರೆಗೊಳಿಸುತ್ತಿದ್ದಾರೆ.  ನನ್ನ ಪ್ರಕರಣದಲ್ಲಿ, ನಾನು ಸುಪ್ರೀಂ ಕೋರ್ಟ್‌ನ್ನು ಸಂಪರ್ಕಿಸುವವರೆಗೆ ಬಜೆಟ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರು ನಿರಾಕರಿಸಿದ್ದರು. ಎಲ್ಲಿ ಚುನಾಯಿತರಾಗುವುದಿಲ್ಲವೋ ಅಲ್ಲಿ ಆಯ್ಕೆಯಾದವರಿಗೆ ತೊಂದರೆ ಕೊಡುತ್ತಾರೆ. ಇದು ಬಿಜೆಪಿಯ ನೀತಿ ಎಂದು ಹೇಳಿದ್ದಾರೆ. ಜನರು ಈ ಬಾರಿಯ ಅವಕಾಶವನ್ನು ತಪ್ಪಿಸಿಕೊಂಡರೆ, ಭಾರತದ ಆಡಳಿತವು ರಷ್ಯಾದಲ್ಲಿ ಪುಟಿನ್ ಆಡಳಿತದಂತೆ ಇರುತ್ತದೆ ಮತ್ತು ಯಾವುದೇ ವಿರೋಧ ಪಕ್ಷಗಳು ಇರುವುದಿಲ್ಲ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ದೇಶದಾದ್ಯಂತ ವಿವಿಧ ರಾಜ್ಯಗಳಿಂದ ನನಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮಮತಾ ಅವರು ಪಶ್ಚಿಮ ಬಂಗಾಳದಿಂದ ಹೋರಾಡುತ್ತಿದ್ದಾರೆ, ನಾನು ಪಂಜಾಬ್‌ನಿಂದ ಹೋರಾಡುತ್ತಿದ್ದೇನೆ, ಅಖಿಲೇಶ್ ಯಾದವ್‌ ಯುಪಿಯಿಂದ, ತೇಜಸ್ವಿ ಬಿಹಾರದಿಂದ, ಠಾಕ್ರೆ ಮತ್ತು ಪವಾರ್ ಮಹಾರಾಷ್ಟ್ರದಿಂದ, ಸ್ಟಾಲಿನ್ ತಮಿಳುನಾಡಿನಿಂದ ಹೋರಾಡುತ್ತಿದ್ದಾರೆ. ನಮ್ಮ ಇಂಡಿಯಾ ಬಣ ಅವರನ್ನು ಪೂರ್ಣವಾಗಿ ಸೋಲಿಸುತ್ತದೆ. ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಮೊದಲ ಹಂತದ ಮತದಾನದ ನಂತರ ಹೊರಬಿದ್ದಿರುವ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಜೆಪಿ ಪಕ್ಷಕ್ಕೆ ಉತ್ತಮ ಬೆಂಬಲ ಇಲ್ಲ ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಚಿಂತನೆಯಾಗಿದ್ದಾರೆ. ನೀವು ಒಬ್ಬ ವ್ಯಕ್ತಿಯನ್ನು ಬಂಧಿಸಬಹುದು ಆದರೆ ಅವನ ಆಲೋಚನೆಯಲ್ಲ. ಎಎಪಿ ಎನ್‌ಜಿಒ ಅಲ್ಲ, ರಾಷ್ಟ್ರೀಯ ಪಕ್ಷ, ಗುಜರಾತ್‌ನಲ್ಲಿ ಐದು ಶಾಸಕರಿದ್ದಾರೆ, ಗೋವಾದಲ್ಲಿ ಇಬ್ಬರು, ರಾಜ್ಯಸಭೆಯಲ್ಲಿ 13 ಜನರಿದ್ದಾರೆ, ಇಬ್ಬರು ಮೇಯರ್‌ಗಳಿದ್ದಾರೆ. ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಕಳುಹಿಸಲಾಗಿದೆ ಆದರೆ ಎಎಪಿ ಅವರ ಹಿಂದೆ ಬಂಡೆಯಂತೆ ನಿಂತಿದೆ. ನಿನ್ನೆ ಸುನೀತಾ ಜಿ ಕೂಡ ರಾಂಚಿಗೆ ಹೋಗಿದ್ದರು. ಕೇಜ್ರಿವಾಲ್‌ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಅದನ್ನು ಮಾಡುತ್ತೇನೆ. ನಮ್ಮದು ಕಿರಿಯ ಮತ್ತು ಇತ್ತೀಚೆಗೆ ವೇಗವಾಗಿ ಬೆಳೆಯುತ್ತಿರುವ ಪಕ್ಷ. ಜನಸಂಘವು 1958ರಲ್ಲಿ ಹುಟ್ಟಿತು ಮತ್ತು 26 ವರ್ಷಗಳ ನಂತರ 1984ರಲ್ಲಿ ಇಬ್ಬರು ಸಂಸದರನ್ನು ಪಡೆದರು. ಕಾಂಗ್ರೆಸ್ 1885ರಲ್ಲಿ ಹುಟ್ಟಿಕೊಂಡಿತು, ಆದರೆ ಅದು 1930ರಲ್ಲಿ ಇಬ್ಬರು ಕೌನ್ಸಿಲರ್‌ಗಳನ್ನು ಪಡೆದಿದೆ. ನಾವು 2012ರಲ್ಲಿ ಹುಟ್ಟಿದ್ದೇವೆ ಮತ್ತು ನಾವು ಈಗಾಗಲೇ ಎರಡು ರಾಜ್ಯಗಳಲ್ಲಿ ಎರಡು ಸರ್ಕಾರಗಳನ್ನು ಹೊಂದಿದ್ದೇವೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...