Homeಮುಖಪುಟ'ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ'; ಭಗವಂತ್...

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’; ಭಗವಂತ್ ಮಾನ್

- Advertisement -
- Advertisement -

ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಸಿಂಗ್ ಮಾನ್, ನನಗೆ ಲೋಕಸಭೆ ಚುನಾವಣೆ ಎರಡು ವಿಚಾರದಲ್ಲಿ ಮಹತ್ವದ್ದಾಗಿದೆ. ಮೊದಲನೆಯದಾಗಿ, ಈ ಲೋಕಸಭೆ ಚುನಾವಣೆ ದೇಶದ ಪ್ರಜಾಪ್ರಭುತ್ವದ ಭವಿಷ್ಯದ ದೃಷ್ಟಿಯಿಂದ ಅಗ್ನಿಪರೀಕ್ಷೆಯಾಗಿದೆ. ಎರಡನೆಯದಾಗಿ, ಪಂಜಾಬ್‌ನ ಎಎಪಿ ಸರಕಾರದ ಎರಡು ವರ್ಷದ ಆಡಳಿತದ ಸಾಧನೆಯ ರಿಯಾಲಿಟಿ ಚೆಕ್ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಚುನಾವಣೆ ಸೋಲು-ಗೆಲುವಿನ ಪ್ರಶ್ನೆಯಲ್ಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವ ಚುನಾವಣೆಯಾಗಿದೆ. ಎರಡು-ಮೂರು ಬಿಜೆಪಿ ಪ್ರಮುಖ ನಾಯಕರು ನಮಗೆ 400 ಸ್ಥಾನಗಳನ್ನು ನೀಡಿ ಮತ್ತು ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಎಷ್ಟು ಧೈರ್ಯ? ಹಾಗೆ ನೋಡಿದರೆ ಅವರು ಸಂವಿಧಾನವನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಸರ್ವೋಚ್ಚವಾಗಿದೆ, ಆದರೆ ಅವರು ಅದರ ನಿರ್ದೇಶನಗಳನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಪರವಾಗಿ 5-0 ತೀರ್ಪು ನೀಡಿತು, ಆದರೆ ಅವರು ಸಂಜೆ 6 ಗಂಟೆಗೆ ಸುಗ್ರೀವಾಜ್ಞೆಯನ್ನು ತಂದು ತೀರ್ಪನ್ನು ಬದಲಾಯಿಸಿದರು. ಚುನಾವಣಾ ಆಯೋಗದ ಮಾತನ್ನೂ ಅವರು ಕೇಳುವುದಿಲ್ಲ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅವರ ಜೀಬು ತುಂಬಿಸುವ ಸಾಧನವಾಗಿದೆ. ಮೊದಲು ಇಡಿ ದಾಳಿ ನಡೆಸಿ ನಂತರ ಕಂಪನಿಗಳು ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸುವಂತೆ ಮಾಡುತ್ತಾರೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರು ಮಾತ್ರ ಇಷ್ಟೊಂದು ಪ್ರಶ್ನೆಗಳನ್ನು ಕೇಳುವುದು ಹೇಗೆ? ಅವರು ಮಮತಾ ದೀದಿ, ಸ್ಟಾಲಿನ್, ಹೇಮಂತ್ ಸೋರೆನ್, ನವೀನ್ ಜಿ ಅವರನ್ನು ತೊಂದರೆಗೊಳಿಸುತ್ತಿದ್ದಾರೆ.  ನನ್ನ ಪ್ರಕರಣದಲ್ಲಿ, ನಾನು ಸುಪ್ರೀಂ ಕೋರ್ಟ್‌ನ್ನು ಸಂಪರ್ಕಿಸುವವರೆಗೆ ಬಜೆಟ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರು ನಿರಾಕರಿಸಿದ್ದರು. ಎಲ್ಲಿ ಚುನಾಯಿತರಾಗುವುದಿಲ್ಲವೋ ಅಲ್ಲಿ ಆಯ್ಕೆಯಾದವರಿಗೆ ತೊಂದರೆ ಕೊಡುತ್ತಾರೆ. ಇದು ಬಿಜೆಪಿಯ ನೀತಿ ಎಂದು ಹೇಳಿದ್ದಾರೆ. ಜನರು ಈ ಬಾರಿಯ ಅವಕಾಶವನ್ನು ತಪ್ಪಿಸಿಕೊಂಡರೆ, ಭಾರತದ ಆಡಳಿತವು ರಷ್ಯಾದಲ್ಲಿ ಪುಟಿನ್ ಆಡಳಿತದಂತೆ ಇರುತ್ತದೆ ಮತ್ತು ಯಾವುದೇ ವಿರೋಧ ಪಕ್ಷಗಳು ಇರುವುದಿಲ್ಲ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ದೇಶದಾದ್ಯಂತ ವಿವಿಧ ರಾಜ್ಯಗಳಿಂದ ನನಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮಮತಾ ಅವರು ಪಶ್ಚಿಮ ಬಂಗಾಳದಿಂದ ಹೋರಾಡುತ್ತಿದ್ದಾರೆ, ನಾನು ಪಂಜಾಬ್‌ನಿಂದ ಹೋರಾಡುತ್ತಿದ್ದೇನೆ, ಅಖಿಲೇಶ್ ಯಾದವ್‌ ಯುಪಿಯಿಂದ, ತೇಜಸ್ವಿ ಬಿಹಾರದಿಂದ, ಠಾಕ್ರೆ ಮತ್ತು ಪವಾರ್ ಮಹಾರಾಷ್ಟ್ರದಿಂದ, ಸ್ಟಾಲಿನ್ ತಮಿಳುನಾಡಿನಿಂದ ಹೋರಾಡುತ್ತಿದ್ದಾರೆ. ನಮ್ಮ ಇಂಡಿಯಾ ಬಣ ಅವರನ್ನು ಪೂರ್ಣವಾಗಿ ಸೋಲಿಸುತ್ತದೆ. ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಮೊದಲ ಹಂತದ ಮತದಾನದ ನಂತರ ಹೊರಬಿದ್ದಿರುವ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಜೆಪಿ ಪಕ್ಷಕ್ಕೆ ಉತ್ತಮ ಬೆಂಬಲ ಇಲ್ಲ ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಚಿಂತನೆಯಾಗಿದ್ದಾರೆ. ನೀವು ಒಬ್ಬ ವ್ಯಕ್ತಿಯನ್ನು ಬಂಧಿಸಬಹುದು ಆದರೆ ಅವನ ಆಲೋಚನೆಯಲ್ಲ. ಎಎಪಿ ಎನ್‌ಜಿಒ ಅಲ್ಲ, ರಾಷ್ಟ್ರೀಯ ಪಕ್ಷ, ಗುಜರಾತ್‌ನಲ್ಲಿ ಐದು ಶಾಸಕರಿದ್ದಾರೆ, ಗೋವಾದಲ್ಲಿ ಇಬ್ಬರು, ರಾಜ್ಯಸಭೆಯಲ್ಲಿ 13 ಜನರಿದ್ದಾರೆ, ಇಬ್ಬರು ಮೇಯರ್‌ಗಳಿದ್ದಾರೆ. ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಕಳುಹಿಸಲಾಗಿದೆ ಆದರೆ ಎಎಪಿ ಅವರ ಹಿಂದೆ ಬಂಡೆಯಂತೆ ನಿಂತಿದೆ. ನಿನ್ನೆ ಸುನೀತಾ ಜಿ ಕೂಡ ರಾಂಚಿಗೆ ಹೋಗಿದ್ದರು. ಕೇಜ್ರಿವಾಲ್‌ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಅದನ್ನು ಮಾಡುತ್ತೇನೆ. ನಮ್ಮದು ಕಿರಿಯ ಮತ್ತು ಇತ್ತೀಚೆಗೆ ವೇಗವಾಗಿ ಬೆಳೆಯುತ್ತಿರುವ ಪಕ್ಷ. ಜನಸಂಘವು 1958ರಲ್ಲಿ ಹುಟ್ಟಿತು ಮತ್ತು 26 ವರ್ಷಗಳ ನಂತರ 1984ರಲ್ಲಿ ಇಬ್ಬರು ಸಂಸದರನ್ನು ಪಡೆದರು. ಕಾಂಗ್ರೆಸ್ 1885ರಲ್ಲಿ ಹುಟ್ಟಿಕೊಂಡಿತು, ಆದರೆ ಅದು 1930ರಲ್ಲಿ ಇಬ್ಬರು ಕೌನ್ಸಿಲರ್‌ಗಳನ್ನು ಪಡೆದಿದೆ. ನಾವು 2012ರಲ್ಲಿ ಹುಟ್ಟಿದ್ದೇವೆ ಮತ್ತು ನಾವು ಈಗಾಗಲೇ ಎರಡು ರಾಜ್ಯಗಳಲ್ಲಿ ಎರಡು ಸರ್ಕಾರಗಳನ್ನು ಹೊಂದಿದ್ದೇವೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...