Homeಮುಖಪುಟಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಉದ್ದೇಶ. ಈ ಮೂಲಕ ಚುನಾವಣಾ ಪ್ರಚಾರದಿಂದ ತಡೆಯಬಹುದು ಎಂಬುವುದು ಅವರ ತಂತ್ರ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಂದು ಮಧ್ಯಾಹ್ನ ತನ್ನ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ಎರಡು ವರ್ಷಗಳಿಂದ ಇಡಿ ತನಿಖೆ ನಡೆಸುತ್ತಿದ್ದರೂ, ನನ್ನ ಬಳಿ ಒಂದು ಪೈಸೆಯ ಅವ್ಯಹಾರ ಪತ್ತೆ ಮಾಡಲು ಅವರಿಂದ ಆಗಿಲ್ಲ ಎಂದಿದ್ದಾರೆ.

“ಕಳೆದ ಎರಡು ವರ್ಷಗಳಿಂದ ಈ ತನಿಖೆ ನಡೆಯುತ್ತಿದೆ. ಆದರೆ ಒಂದು ಪೈಸೆಯ ಅವ್ಯವಹಾರ ಕಂಡುಬಂದಿಲ್ಲ. ಯಾರ ವಿರುದ್ಧವೂ ಅವರ ಬಳಿ ಯಾವುದೇ ಸಾಕ್ಷ್ಯಗಳಿಲ್ಲ. ಯಾವುದೂ ಸಾಬೀತಾಗಿಲ್ಲ. ಈಗ ಬಿಜೆಪಿಯವರು ನನ್ನನ್ನು ಬಂಧಿಸಲು ಬಯಸುತ್ತಿದ್ದಾರೆ. ನನ್ನ ದೊಡ್ಡ ಶಕ್ತಿ ನನ್ನ ಪ್ರಾಮಾಣಿಕತೆ. ಸುಳ್ಳು ಪ್ರಕರಣಗಳು ಮತ್ತು ನಕಲಿ ಸಮನ್ಸ್‌ಗಳ ಮೂಲಕ ಅವರು ನನ್ನ ಇಮೇಜ್‌ಗೆ ಧಕ್ಕೆ ತರಲು ಬಯಸುತ್ತಿದ್ದಾರೆ. ಬಿಜೆಪಿಯ ಉದ್ದೇಶ ತನಿಖೆ ನಡೆಸುವುದಲ್ಲ, ಲೋಕಸಭೆ ಚುನಾವಣೆಯಲ್ಲಿ ನಾನು ಪ್ರಚಾರ ಮಾಡದಂತೆ ತಡೆಯುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ

ಇಡಿ ನೀಡುತ್ತಿರುವ ಸಮನ್ಸ್‌ಗಳೆಲ್ಲವೂ ನಕಲಿ ಮತ್ತು ಅಕ್ರಮ ಎಂದು ನನ್ನ ವಕೀಲರು ಹೇಳಿದ್ದಾರೆ. ನಾನು ಎಲ್ಲೂ ತಪ್ಪಿಸಿಕೊಂಡಿಲ್ಲ. ಹಾಗಾಗಿ, ಅವರು ಸಮನ್ಸ್ ನೀಡುವ ಅಗತ್ಯ ಬರುವುದಿಲ್ಲ. ನನಗೆ ಯಾಕೆ ಸಮನ್ಸ್ ನೀಡಬಾರದು ಎಂದು ನಾನು ಇಡಿಗೆ ಪತ್ರ ಬರೆದು ವಿವರಿಸಿದ್ದೇನೆ. ಆದರೆ, ಇಡಿ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಇದರರ್ಥ ಅವರ ಬಳಿ ಯಾವುದೇ ಉತ್ತರ ಇಲ್ಲ ಎಂದಲ್ಲವೇ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಸಂಬಂಧ ಇಡಿ ತನಿಖೆ ಆರಂಭಿಸಿ ಎರಡು ವರ್ಷಗಳಾಗಿವೆ. ಇದುವರೆಗೆ ಇಲ್ಲದ ಸಮನ್ಸ್ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಯಾಕೆ ಬರ್ತಿದೆ? ಎಂದು ಕ್ರೇಜಿವಾಲ್ ಪ್ರಶ್ನಿಸಿದ್ದಾರೆ.

ಎಂಟು ತಿಂಗಳ ಹಿಂದೆ ಸಿಬಿಐ (ಕೇಂದ್ರ ತನಿಖಾ ದಳ) ನನಗೆ ಸಮನ್ಸ್ ನೀಡಿತ್ತು. ನಾನು ಖುದ್ದಾಗಿ ಹಾಜರಾಗಿ ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೆ. ಈಗ ಲೋಕಸಭೆ ಚುನಾವಣೆಗೆ ಎರಡು ತಿಂಗಳಿರುವಾಗ ಇಡಿ ನನಗೆ ಸಮನ್ಸ್ ನೀಡುತ್ತಿದೆ. ಬಿಜೆಪಿಯ ಉದ್ದೇಶ ನನ್ನನ್ನು ಪ್ರಶ್ನಿಸುವುದಲ್ಲ, ನನ್ನನ್ನು ಬಂಧಿಸುವುದು ಎಂದು ಕೇಜ್ರಿವಾಲ್ ಪುನರುಚ್ಚರಿಸಿದ್ದಾರೆ.

ಅಬಕಾರಿ ನೀತಿ ಹಗರಣ ಸಂಬಂಧ ನಡೆಯುವ ಎಲ್ಲಾ ತನಿಖೆಗಳಿಗೆ ನಾನು ಸಹಕರಿಸುತ್ತೇನೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ನಿನ್ನೆ(3) ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ ಅವರಿಗೆ ಇಡಿ ಮೂರನೇ ಸಮನ್ಸ್ ನೀಡಿದ್ದಾರೆ. ಅದನ್ನೂ ಅವರು ತಿರಸ್ಕರಿಸಿದ್ದಾರೆ.

ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಅಬಕಾರಿ ನೀತಿಯನ್ನು ರೂಪಿಸಲು ಕೇಜ್ರಿವಾಲ್ ನೇತೃತ್ವದ ಎಎಪಿ ₹100 ಕೋಟಿ ಕಿಕ್‌ಬ್ಯಾಕ್ ಪಡೆದಿದೆ ಮತ್ತು ಇದರ ಭಾಗವನ್ನು ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...