Homeಮುಖಪುಟಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಉದ್ದೇಶ. ಈ ಮೂಲಕ ಚುನಾವಣಾ ಪ್ರಚಾರದಿಂದ ತಡೆಯಬಹುದು ಎಂಬುವುದು ಅವರ ತಂತ್ರ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಂದು ಮಧ್ಯಾಹ್ನ ತನ್ನ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ಎರಡು ವರ್ಷಗಳಿಂದ ಇಡಿ ತನಿಖೆ ನಡೆಸುತ್ತಿದ್ದರೂ, ನನ್ನ ಬಳಿ ಒಂದು ಪೈಸೆಯ ಅವ್ಯಹಾರ ಪತ್ತೆ ಮಾಡಲು ಅವರಿಂದ ಆಗಿಲ್ಲ ಎಂದಿದ್ದಾರೆ.

“ಕಳೆದ ಎರಡು ವರ್ಷಗಳಿಂದ ಈ ತನಿಖೆ ನಡೆಯುತ್ತಿದೆ. ಆದರೆ ಒಂದು ಪೈಸೆಯ ಅವ್ಯವಹಾರ ಕಂಡುಬಂದಿಲ್ಲ. ಯಾರ ವಿರುದ್ಧವೂ ಅವರ ಬಳಿ ಯಾವುದೇ ಸಾಕ್ಷ್ಯಗಳಿಲ್ಲ. ಯಾವುದೂ ಸಾಬೀತಾಗಿಲ್ಲ. ಈಗ ಬಿಜೆಪಿಯವರು ನನ್ನನ್ನು ಬಂಧಿಸಲು ಬಯಸುತ್ತಿದ್ದಾರೆ. ನನ್ನ ದೊಡ್ಡ ಶಕ್ತಿ ನನ್ನ ಪ್ರಾಮಾಣಿಕತೆ. ಸುಳ್ಳು ಪ್ರಕರಣಗಳು ಮತ್ತು ನಕಲಿ ಸಮನ್ಸ್‌ಗಳ ಮೂಲಕ ಅವರು ನನ್ನ ಇಮೇಜ್‌ಗೆ ಧಕ್ಕೆ ತರಲು ಬಯಸುತ್ತಿದ್ದಾರೆ. ಬಿಜೆಪಿಯ ಉದ್ದೇಶ ತನಿಖೆ ನಡೆಸುವುದಲ್ಲ, ಲೋಕಸಭೆ ಚುನಾವಣೆಯಲ್ಲಿ ನಾನು ಪ್ರಚಾರ ಮಾಡದಂತೆ ತಡೆಯುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ

ಇಡಿ ನೀಡುತ್ತಿರುವ ಸಮನ್ಸ್‌ಗಳೆಲ್ಲವೂ ನಕಲಿ ಮತ್ತು ಅಕ್ರಮ ಎಂದು ನನ್ನ ವಕೀಲರು ಹೇಳಿದ್ದಾರೆ. ನಾನು ಎಲ್ಲೂ ತಪ್ಪಿಸಿಕೊಂಡಿಲ್ಲ. ಹಾಗಾಗಿ, ಅವರು ಸಮನ್ಸ್ ನೀಡುವ ಅಗತ್ಯ ಬರುವುದಿಲ್ಲ. ನನಗೆ ಯಾಕೆ ಸಮನ್ಸ್ ನೀಡಬಾರದು ಎಂದು ನಾನು ಇಡಿಗೆ ಪತ್ರ ಬರೆದು ವಿವರಿಸಿದ್ದೇನೆ. ಆದರೆ, ಇಡಿ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಇದರರ್ಥ ಅವರ ಬಳಿ ಯಾವುದೇ ಉತ್ತರ ಇಲ್ಲ ಎಂದಲ್ಲವೇ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಸಂಬಂಧ ಇಡಿ ತನಿಖೆ ಆರಂಭಿಸಿ ಎರಡು ವರ್ಷಗಳಾಗಿವೆ. ಇದುವರೆಗೆ ಇಲ್ಲದ ಸಮನ್ಸ್ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಯಾಕೆ ಬರ್ತಿದೆ? ಎಂದು ಕ್ರೇಜಿವಾಲ್ ಪ್ರಶ್ನಿಸಿದ್ದಾರೆ.

ಎಂಟು ತಿಂಗಳ ಹಿಂದೆ ಸಿಬಿಐ (ಕೇಂದ್ರ ತನಿಖಾ ದಳ) ನನಗೆ ಸಮನ್ಸ್ ನೀಡಿತ್ತು. ನಾನು ಖುದ್ದಾಗಿ ಹಾಜರಾಗಿ ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೆ. ಈಗ ಲೋಕಸಭೆ ಚುನಾವಣೆಗೆ ಎರಡು ತಿಂಗಳಿರುವಾಗ ಇಡಿ ನನಗೆ ಸಮನ್ಸ್ ನೀಡುತ್ತಿದೆ. ಬಿಜೆಪಿಯ ಉದ್ದೇಶ ನನ್ನನ್ನು ಪ್ರಶ್ನಿಸುವುದಲ್ಲ, ನನ್ನನ್ನು ಬಂಧಿಸುವುದು ಎಂದು ಕೇಜ್ರಿವಾಲ್ ಪುನರುಚ್ಚರಿಸಿದ್ದಾರೆ.

ಅಬಕಾರಿ ನೀತಿ ಹಗರಣ ಸಂಬಂಧ ನಡೆಯುವ ಎಲ್ಲಾ ತನಿಖೆಗಳಿಗೆ ನಾನು ಸಹಕರಿಸುತ್ತೇನೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ನಿನ್ನೆ(3) ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ ಅವರಿಗೆ ಇಡಿ ಮೂರನೇ ಸಮನ್ಸ್ ನೀಡಿದ್ದಾರೆ. ಅದನ್ನೂ ಅವರು ತಿರಸ್ಕರಿಸಿದ್ದಾರೆ.

ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಅಬಕಾರಿ ನೀತಿಯನ್ನು ರೂಪಿಸಲು ಕೇಜ್ರಿವಾಲ್ ನೇತೃತ್ವದ ಎಎಪಿ ₹100 ಕೋಟಿ ಕಿಕ್‌ಬ್ಯಾಕ್ ಪಡೆದಿದೆ ಮತ್ತು ಇದರ ಭಾಗವನ್ನು ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...