Homeಮುಖಪುಟಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಉದ್ದೇಶ. ಈ ಮೂಲಕ ಚುನಾವಣಾ ಪ್ರಚಾರದಿಂದ ತಡೆಯಬಹುದು ಎಂಬುವುದು ಅವರ ತಂತ್ರ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಂದು ಮಧ್ಯಾಹ್ನ ತನ್ನ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ಎರಡು ವರ್ಷಗಳಿಂದ ಇಡಿ ತನಿಖೆ ನಡೆಸುತ್ತಿದ್ದರೂ, ನನ್ನ ಬಳಿ ಒಂದು ಪೈಸೆಯ ಅವ್ಯಹಾರ ಪತ್ತೆ ಮಾಡಲು ಅವರಿಂದ ಆಗಿಲ್ಲ ಎಂದಿದ್ದಾರೆ.

“ಕಳೆದ ಎರಡು ವರ್ಷಗಳಿಂದ ಈ ತನಿಖೆ ನಡೆಯುತ್ತಿದೆ. ಆದರೆ ಒಂದು ಪೈಸೆಯ ಅವ್ಯವಹಾರ ಕಂಡುಬಂದಿಲ್ಲ. ಯಾರ ವಿರುದ್ಧವೂ ಅವರ ಬಳಿ ಯಾವುದೇ ಸಾಕ್ಷ್ಯಗಳಿಲ್ಲ. ಯಾವುದೂ ಸಾಬೀತಾಗಿಲ್ಲ. ಈಗ ಬಿಜೆಪಿಯವರು ನನ್ನನ್ನು ಬಂಧಿಸಲು ಬಯಸುತ್ತಿದ್ದಾರೆ. ನನ್ನ ದೊಡ್ಡ ಶಕ್ತಿ ನನ್ನ ಪ್ರಾಮಾಣಿಕತೆ. ಸುಳ್ಳು ಪ್ರಕರಣಗಳು ಮತ್ತು ನಕಲಿ ಸಮನ್ಸ್‌ಗಳ ಮೂಲಕ ಅವರು ನನ್ನ ಇಮೇಜ್‌ಗೆ ಧಕ್ಕೆ ತರಲು ಬಯಸುತ್ತಿದ್ದಾರೆ. ಬಿಜೆಪಿಯ ಉದ್ದೇಶ ತನಿಖೆ ನಡೆಸುವುದಲ್ಲ, ಲೋಕಸಭೆ ಚುನಾವಣೆಯಲ್ಲಿ ನಾನು ಪ್ರಚಾರ ಮಾಡದಂತೆ ತಡೆಯುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ

ಇಡಿ ನೀಡುತ್ತಿರುವ ಸಮನ್ಸ್‌ಗಳೆಲ್ಲವೂ ನಕಲಿ ಮತ್ತು ಅಕ್ರಮ ಎಂದು ನನ್ನ ವಕೀಲರು ಹೇಳಿದ್ದಾರೆ. ನಾನು ಎಲ್ಲೂ ತಪ್ಪಿಸಿಕೊಂಡಿಲ್ಲ. ಹಾಗಾಗಿ, ಅವರು ಸಮನ್ಸ್ ನೀಡುವ ಅಗತ್ಯ ಬರುವುದಿಲ್ಲ. ನನಗೆ ಯಾಕೆ ಸಮನ್ಸ್ ನೀಡಬಾರದು ಎಂದು ನಾನು ಇಡಿಗೆ ಪತ್ರ ಬರೆದು ವಿವರಿಸಿದ್ದೇನೆ. ಆದರೆ, ಇಡಿ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಇದರರ್ಥ ಅವರ ಬಳಿ ಯಾವುದೇ ಉತ್ತರ ಇಲ್ಲ ಎಂದಲ್ಲವೇ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಸಂಬಂಧ ಇಡಿ ತನಿಖೆ ಆರಂಭಿಸಿ ಎರಡು ವರ್ಷಗಳಾಗಿವೆ. ಇದುವರೆಗೆ ಇಲ್ಲದ ಸಮನ್ಸ್ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಯಾಕೆ ಬರ್ತಿದೆ? ಎಂದು ಕ್ರೇಜಿವಾಲ್ ಪ್ರಶ್ನಿಸಿದ್ದಾರೆ.

ಎಂಟು ತಿಂಗಳ ಹಿಂದೆ ಸಿಬಿಐ (ಕೇಂದ್ರ ತನಿಖಾ ದಳ) ನನಗೆ ಸಮನ್ಸ್ ನೀಡಿತ್ತು. ನಾನು ಖುದ್ದಾಗಿ ಹಾಜರಾಗಿ ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೆ. ಈಗ ಲೋಕಸಭೆ ಚುನಾವಣೆಗೆ ಎರಡು ತಿಂಗಳಿರುವಾಗ ಇಡಿ ನನಗೆ ಸಮನ್ಸ್ ನೀಡುತ್ತಿದೆ. ಬಿಜೆಪಿಯ ಉದ್ದೇಶ ನನ್ನನ್ನು ಪ್ರಶ್ನಿಸುವುದಲ್ಲ, ನನ್ನನ್ನು ಬಂಧಿಸುವುದು ಎಂದು ಕೇಜ್ರಿವಾಲ್ ಪುನರುಚ್ಚರಿಸಿದ್ದಾರೆ.

ಅಬಕಾರಿ ನೀತಿ ಹಗರಣ ಸಂಬಂಧ ನಡೆಯುವ ಎಲ್ಲಾ ತನಿಖೆಗಳಿಗೆ ನಾನು ಸಹಕರಿಸುತ್ತೇನೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ನಿನ್ನೆ(3) ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ ಅವರಿಗೆ ಇಡಿ ಮೂರನೇ ಸಮನ್ಸ್ ನೀಡಿದ್ದಾರೆ. ಅದನ್ನೂ ಅವರು ತಿರಸ್ಕರಿಸಿದ್ದಾರೆ.

ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಅಬಕಾರಿ ನೀತಿಯನ್ನು ರೂಪಿಸಲು ಕೇಜ್ರಿವಾಲ್ ನೇತೃತ್ವದ ಎಎಪಿ ₹100 ಕೋಟಿ ಕಿಕ್‌ಬ್ಯಾಕ್ ಪಡೆದಿದೆ ಮತ್ತು ಇದರ ಭಾಗವನ್ನು ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...