Homeಮುಖಪುಟಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಉದ್ದೇಶ. ಈ ಮೂಲಕ ಚುನಾವಣಾ ಪ್ರಚಾರದಿಂದ ತಡೆಯಬಹುದು ಎಂಬುವುದು ಅವರ ತಂತ್ರ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಂದು ಮಧ್ಯಾಹ್ನ ತನ್ನ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ಎರಡು ವರ್ಷಗಳಿಂದ ಇಡಿ ತನಿಖೆ ನಡೆಸುತ್ತಿದ್ದರೂ, ನನ್ನ ಬಳಿ ಒಂದು ಪೈಸೆಯ ಅವ್ಯಹಾರ ಪತ್ತೆ ಮಾಡಲು ಅವರಿಂದ ಆಗಿಲ್ಲ ಎಂದಿದ್ದಾರೆ.

“ಕಳೆದ ಎರಡು ವರ್ಷಗಳಿಂದ ಈ ತನಿಖೆ ನಡೆಯುತ್ತಿದೆ. ಆದರೆ ಒಂದು ಪೈಸೆಯ ಅವ್ಯವಹಾರ ಕಂಡುಬಂದಿಲ್ಲ. ಯಾರ ವಿರುದ್ಧವೂ ಅವರ ಬಳಿ ಯಾವುದೇ ಸಾಕ್ಷ್ಯಗಳಿಲ್ಲ. ಯಾವುದೂ ಸಾಬೀತಾಗಿಲ್ಲ. ಈಗ ಬಿಜೆಪಿಯವರು ನನ್ನನ್ನು ಬಂಧಿಸಲು ಬಯಸುತ್ತಿದ್ದಾರೆ. ನನ್ನ ದೊಡ್ಡ ಶಕ್ತಿ ನನ್ನ ಪ್ರಾಮಾಣಿಕತೆ. ಸುಳ್ಳು ಪ್ರಕರಣಗಳು ಮತ್ತು ನಕಲಿ ಸಮನ್ಸ್‌ಗಳ ಮೂಲಕ ಅವರು ನನ್ನ ಇಮೇಜ್‌ಗೆ ಧಕ್ಕೆ ತರಲು ಬಯಸುತ್ತಿದ್ದಾರೆ. ಬಿಜೆಪಿಯ ಉದ್ದೇಶ ತನಿಖೆ ನಡೆಸುವುದಲ್ಲ, ಲೋಕಸಭೆ ಚುನಾವಣೆಯಲ್ಲಿ ನಾನು ಪ್ರಚಾರ ಮಾಡದಂತೆ ತಡೆಯುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ

ಇಡಿ ನೀಡುತ್ತಿರುವ ಸಮನ್ಸ್‌ಗಳೆಲ್ಲವೂ ನಕಲಿ ಮತ್ತು ಅಕ್ರಮ ಎಂದು ನನ್ನ ವಕೀಲರು ಹೇಳಿದ್ದಾರೆ. ನಾನು ಎಲ್ಲೂ ತಪ್ಪಿಸಿಕೊಂಡಿಲ್ಲ. ಹಾಗಾಗಿ, ಅವರು ಸಮನ್ಸ್ ನೀಡುವ ಅಗತ್ಯ ಬರುವುದಿಲ್ಲ. ನನಗೆ ಯಾಕೆ ಸಮನ್ಸ್ ನೀಡಬಾರದು ಎಂದು ನಾನು ಇಡಿಗೆ ಪತ್ರ ಬರೆದು ವಿವರಿಸಿದ್ದೇನೆ. ಆದರೆ, ಇಡಿ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಇದರರ್ಥ ಅವರ ಬಳಿ ಯಾವುದೇ ಉತ್ತರ ಇಲ್ಲ ಎಂದಲ್ಲವೇ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಸಂಬಂಧ ಇಡಿ ತನಿಖೆ ಆರಂಭಿಸಿ ಎರಡು ವರ್ಷಗಳಾಗಿವೆ. ಇದುವರೆಗೆ ಇಲ್ಲದ ಸಮನ್ಸ್ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಯಾಕೆ ಬರ್ತಿದೆ? ಎಂದು ಕ್ರೇಜಿವಾಲ್ ಪ್ರಶ್ನಿಸಿದ್ದಾರೆ.

ಎಂಟು ತಿಂಗಳ ಹಿಂದೆ ಸಿಬಿಐ (ಕೇಂದ್ರ ತನಿಖಾ ದಳ) ನನಗೆ ಸಮನ್ಸ್ ನೀಡಿತ್ತು. ನಾನು ಖುದ್ದಾಗಿ ಹಾಜರಾಗಿ ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೆ. ಈಗ ಲೋಕಸಭೆ ಚುನಾವಣೆಗೆ ಎರಡು ತಿಂಗಳಿರುವಾಗ ಇಡಿ ನನಗೆ ಸಮನ್ಸ್ ನೀಡುತ್ತಿದೆ. ಬಿಜೆಪಿಯ ಉದ್ದೇಶ ನನ್ನನ್ನು ಪ್ರಶ್ನಿಸುವುದಲ್ಲ, ನನ್ನನ್ನು ಬಂಧಿಸುವುದು ಎಂದು ಕೇಜ್ರಿವಾಲ್ ಪುನರುಚ್ಚರಿಸಿದ್ದಾರೆ.

ಅಬಕಾರಿ ನೀತಿ ಹಗರಣ ಸಂಬಂಧ ನಡೆಯುವ ಎಲ್ಲಾ ತನಿಖೆಗಳಿಗೆ ನಾನು ಸಹಕರಿಸುತ್ತೇನೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ನಿನ್ನೆ(3) ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ ಅವರಿಗೆ ಇಡಿ ಮೂರನೇ ಸಮನ್ಸ್ ನೀಡಿದ್ದಾರೆ. ಅದನ್ನೂ ಅವರು ತಿರಸ್ಕರಿಸಿದ್ದಾರೆ.

ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಅಬಕಾರಿ ನೀತಿಯನ್ನು ರೂಪಿಸಲು ಕೇಜ್ರಿವಾಲ್ ನೇತೃತ್ವದ ಎಎಪಿ ₹100 ಕೋಟಿ ಕಿಕ್‌ಬ್ಯಾಕ್ ಪಡೆದಿದೆ ಮತ್ತು ಇದರ ಭಾಗವನ್ನು ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...