HomeಮುಖಪುಟED, CBI ನೆರವಿನಿಂದ ಬಿಜೆಪಿ ಚುನಾವಣೆ ಎದುರಿಸುತ್ತಿದೆ: ಸಿಎಂ ಭೂಪೇಶ್ ಬಘೇಲ್ ಆರೋಪ

ED, CBI ನೆರವಿನಿಂದ ಬಿಜೆಪಿ ಚುನಾವಣೆ ಎದುರಿಸುತ್ತಿದೆ: ಸಿಎಂ ಭೂಪೇಶ್ ಬಘೇಲ್ ಆರೋಪ

- Advertisement -
- Advertisement -

ಬಿಜೆಪಿಯು ಕೇಂದ್ರೀಯ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳದ (ಸಿಬಿಐ) ನೆರವಿನೊಂದಿಗೆ ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು ಬಯಸಿದೆ ಎಂದು ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಶುಕ್ರವಾರ ಆರೋಪಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕಾಗಿ ಮಹಾದೇವ್ ಬೆಟ್ಟಿಂಗ್ ಆ್ಯಪ್‌ನಿಂದ ಅಕ್ರಮವಾಗಿ ಪಡೆದ ಹಣವನ್ನು ಬಳಸುತ್ತಿದೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ. ಆ್ಯಪ್‌ನ ಪ್ರವರ್ತಕರಿಂದ ₹ 500 ಕೋಟಿಗೂ ಹೆಚ್ಚು ಕಿಕ್‌ಬ್ಯಾಕ್‌ಗಳನ್ನು ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಪಡೆದಿದ್ದಾರೆ ಎಂದು ಪಕ್ಷ ಆರೋಪಿಸಿದೆ.

ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾ ಆ್ಯಪ್‌ನ ಪ್ರವರ್ತಕರು, ಬಘೇಲ್‌ಗೆ 508 ಕೋಟಿ ರೂಪಾಯಿ ಪಾವತಿಸಿದ್ದಾರೆ ಎಂದು ಹೇಳಿದ್ದಾರೆ.

”ಬಿಜೆಪಿಗೆ ಚುನಾವಣೆ ಎದುರಿಸುವ ತಾಕತ್ತು ಇಲ್ಲ ಎಂಬುದು ಸ್ಪಷ್ಟವಾಗಿದೆ, ಆದ್ದರಿಂದ ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ನಂತಹ ಕೇಂದ್ರೀಯ ಸಂಸ್ಥೆಗಳ ಸಹಾಯವನ್ನು ಪಡೆಯುತ್ತಿದೆ” ಎಂದು ಮುಖ್ಯಮಂತ್ರಿ ಬಘೆಲ್ ಎನ್‌ಡಿಟಿವಿಗೆ ತಿಳಿಸಿದರು.

“ಯಾರು ಕೊರಿಯರ್ ಕಳುಹಿಸಿದ್ದರೂ ನೀವು (ಬಿಜೆಪಿ) ಅವನನ್ನು ಏಕೆ ಹಿಡಿಯುತ್ತಿಲ್ಲ? ಆ ವ್ಯಕ್ತಿಯನ್ನು ಏಕೆ ಬಂಧಿಸುತ್ತಿಲ್ಲ? ಇದರರ್ಥ ಹೊಣೆಗಾರ ಬಿಜೆಪಿ ಮತ್ತು ಇಡಿಯವರು ಶಾಮೀಲಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

”ಇದು ನನ್ನ ವರ್ಚಸ್ಸು ಹಾಳು ಮಾಡುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ, ನಾನು ಇದನ್ನು ಮೊದಲೇ ಹೇಳಿದ್ದೇನೆ, ಅವರು ಭ್ರಷ್ಟಾಚಾರದಲ್ಲಿ ತೊಡಗುತ್ತಾರೆ, ಆದರೆ ನಮ್ಮ ಮೇಲೆ ಆರೋಪವನ್ನು ಮಾಡುತ್ತಾರೆ” ಎಂದು ಅವರು ಹೇಳಿದರು.

ಮಹಾದೇವ್ ಬೆಟ್ಟಿಂಗ್ ಆಪ್ ಹಗರಣದ ತನಿಖೆಯನ್ನು ಆರಂಭಿಸಿದ್ದು ನಮ್ಮ ಸರ್ಕಾರ ಎಂದು ಬಾಘೇಲ್ ಹೇಳಿದ್ದಾರೆ.

”ನಾವು ಮಹಾದೇವ್ ಆ್ಯಪ್ ಹಗರಣದ ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಹಲವಾರು ಜನರನ್ನು ಬಂಧಿಸಿದ್ದೇವೆ. ನಾವು ಕೇಂದ್ರಕ್ಕೆ ಮಾತ್ರವಲ್ಲದೆ ಇತರ ರಾಜ್ಯಗಳಿಗೂ ಹಗರಣದಲ್ಲಿ ಭಾಗಿಯಾದವರನ್ನು ಬಂಧಿಸಲು ಕಟ್ಟುನಿಟ್ಟಾದ ತನಿಖೆಗಳನ್ನು ಕೈಗೊಳ್ಳಲು ಪತ್ರ ಬರೆದಿದ್ದೇವೆ. ಆದರೆ ಕೇಂದ್ರವು ಸಹಕರಿಸಲಿಲ್ಲ” ಎಂದು ಬಘೆಲ್ ಆರೋಪಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನವೆಂಬರ್ 7 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್ 17 ರಂದು ನಡೆಯಲಿದೆ.

ಇದನ್ನೂ ಓದಿ: ನನ್ನ ದೇಹವನ್ನು ಬಂಧಿಸಬಹುದು, ಆಲೋಚನೆಯನ್ನಲ್ಲ: BJP ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...