HomeಮುಖಪುಟED, CBI ನೆರವಿನಿಂದ ಬಿಜೆಪಿ ಚುನಾವಣೆ ಎದುರಿಸುತ್ತಿದೆ: ಸಿಎಂ ಭೂಪೇಶ್ ಬಘೇಲ್ ಆರೋಪ

ED, CBI ನೆರವಿನಿಂದ ಬಿಜೆಪಿ ಚುನಾವಣೆ ಎದುರಿಸುತ್ತಿದೆ: ಸಿಎಂ ಭೂಪೇಶ್ ಬಘೇಲ್ ಆರೋಪ

- Advertisement -
- Advertisement -

ಬಿಜೆಪಿಯು ಕೇಂದ್ರೀಯ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳದ (ಸಿಬಿಐ) ನೆರವಿನೊಂದಿಗೆ ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು ಬಯಸಿದೆ ಎಂದು ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಶುಕ್ರವಾರ ಆರೋಪಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕಾಗಿ ಮಹಾದೇವ್ ಬೆಟ್ಟಿಂಗ್ ಆ್ಯಪ್‌ನಿಂದ ಅಕ್ರಮವಾಗಿ ಪಡೆದ ಹಣವನ್ನು ಬಳಸುತ್ತಿದೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ. ಆ್ಯಪ್‌ನ ಪ್ರವರ್ತಕರಿಂದ ₹ 500 ಕೋಟಿಗೂ ಹೆಚ್ಚು ಕಿಕ್‌ಬ್ಯಾಕ್‌ಗಳನ್ನು ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಪಡೆದಿದ್ದಾರೆ ಎಂದು ಪಕ್ಷ ಆರೋಪಿಸಿದೆ.

ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾ ಆ್ಯಪ್‌ನ ಪ್ರವರ್ತಕರು, ಬಘೇಲ್‌ಗೆ 508 ಕೋಟಿ ರೂಪಾಯಿ ಪಾವತಿಸಿದ್ದಾರೆ ಎಂದು ಹೇಳಿದ್ದಾರೆ.

”ಬಿಜೆಪಿಗೆ ಚುನಾವಣೆ ಎದುರಿಸುವ ತಾಕತ್ತು ಇಲ್ಲ ಎಂಬುದು ಸ್ಪಷ್ಟವಾಗಿದೆ, ಆದ್ದರಿಂದ ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ನಂತಹ ಕೇಂದ್ರೀಯ ಸಂಸ್ಥೆಗಳ ಸಹಾಯವನ್ನು ಪಡೆಯುತ್ತಿದೆ” ಎಂದು ಮುಖ್ಯಮಂತ್ರಿ ಬಘೆಲ್ ಎನ್‌ಡಿಟಿವಿಗೆ ತಿಳಿಸಿದರು.

“ಯಾರು ಕೊರಿಯರ್ ಕಳುಹಿಸಿದ್ದರೂ ನೀವು (ಬಿಜೆಪಿ) ಅವನನ್ನು ಏಕೆ ಹಿಡಿಯುತ್ತಿಲ್ಲ? ಆ ವ್ಯಕ್ತಿಯನ್ನು ಏಕೆ ಬಂಧಿಸುತ್ತಿಲ್ಲ? ಇದರರ್ಥ ಹೊಣೆಗಾರ ಬಿಜೆಪಿ ಮತ್ತು ಇಡಿಯವರು ಶಾಮೀಲಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

”ಇದು ನನ್ನ ವರ್ಚಸ್ಸು ಹಾಳು ಮಾಡುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ, ನಾನು ಇದನ್ನು ಮೊದಲೇ ಹೇಳಿದ್ದೇನೆ, ಅವರು ಭ್ರಷ್ಟಾಚಾರದಲ್ಲಿ ತೊಡಗುತ್ತಾರೆ, ಆದರೆ ನಮ್ಮ ಮೇಲೆ ಆರೋಪವನ್ನು ಮಾಡುತ್ತಾರೆ” ಎಂದು ಅವರು ಹೇಳಿದರು.

ಮಹಾದೇವ್ ಬೆಟ್ಟಿಂಗ್ ಆಪ್ ಹಗರಣದ ತನಿಖೆಯನ್ನು ಆರಂಭಿಸಿದ್ದು ನಮ್ಮ ಸರ್ಕಾರ ಎಂದು ಬಾಘೇಲ್ ಹೇಳಿದ್ದಾರೆ.

”ನಾವು ಮಹಾದೇವ್ ಆ್ಯಪ್ ಹಗರಣದ ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಹಲವಾರು ಜನರನ್ನು ಬಂಧಿಸಿದ್ದೇವೆ. ನಾವು ಕೇಂದ್ರಕ್ಕೆ ಮಾತ್ರವಲ್ಲದೆ ಇತರ ರಾಜ್ಯಗಳಿಗೂ ಹಗರಣದಲ್ಲಿ ಭಾಗಿಯಾದವರನ್ನು ಬಂಧಿಸಲು ಕಟ್ಟುನಿಟ್ಟಾದ ತನಿಖೆಗಳನ್ನು ಕೈಗೊಳ್ಳಲು ಪತ್ರ ಬರೆದಿದ್ದೇವೆ. ಆದರೆ ಕೇಂದ್ರವು ಸಹಕರಿಸಲಿಲ್ಲ” ಎಂದು ಬಘೆಲ್ ಆರೋಪಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನವೆಂಬರ್ 7 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್ 17 ರಂದು ನಡೆಯಲಿದೆ.

ಇದನ್ನೂ ಓದಿ: ನನ್ನ ದೇಹವನ್ನು ಬಂಧಿಸಬಹುದು, ಆಲೋಚನೆಯನ್ನಲ್ಲ: BJP ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...