Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಆದಿವಾಸಿಗಳ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸ್ನೇಹಿತರಿಗೆ ಹಂಚಲು ಬಿಜೆಪಿ ಬಯಸುತ್ತಿದೆ;...

ಭಾರತ್‌ ಜೋಡೋ ನ್ಯಾಯ ಯಾತ್ರೆ: ಆದಿವಾಸಿಗಳ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸ್ನೇಹಿತರಿಗೆ ಹಂಚಲು ಬಿಜೆಪಿ ಬಯಸುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್‌ನಲ್ಲಿ ಮೂರನೇ ದಿನ ಮುಂದುವರಿದಿದ್ದು, ಧನ್‌ಬಾದ್‌ನ ಬಿರ್ಸಾ ಮುಂಡಾ ಚೌಕ್‌ನಲ್ಲಿ ರಾಹುಲ್‌ ಗಾಂಧಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದಾರೆ.

ಶನಿವಾರ ಗೊಡ್ಡಾದ ಸರ್ಕಂದ ಚೌಕ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ದ್ವೇಷವನ್ನು ಉತ್ತೇಜಿಸುತ್ತಿದೆ ಮತ್ತು ದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ. ಜಾರ್ಖಂಡ್‌ನ ರಾಜಕೀಯ ಪರಿಸ್ಥಿತಿ ಅನ್ಯಾಯದಿಂದ ಕೂಡಿದೆ. ಜಾರ್ಖಂಡ್‌ ಜನರು ಕಾಂಗ್ರೆಸ್ ಬೆಂಬಲಿತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಆದರೆ ನರೇಂದ್ರ ಮೋದಿ ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಬಿಜೆಪಿಯನ್ನು ವಿರೋಧಿಸುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡುತ್ತಾರೆ ಎಂದು ಹೇಳಿದ್ದಾರೆ.

ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ರಕ್ಷಿಸುವಲ್ಲಿ ಕಾಂಗ್ರೆಸ್‌ನ ಪಾತ್ರವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ, ಬಿಜೆಪಿಯ ಸಿದ್ಧಾಂತವನ್ನು ವಿರೋಧಿಸುವ ಕಾಂಗ್ರೆಸ್‌ನ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ. ದೇಶದ ಯುವಕರು ಉದ್ಯೋಗ ಬಯಸುತ್ತಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ದೇಶದಲ್ಲಿ ನಿರುದ್ಯೋಗದ ರೋಗವನ್ನು ಹರಡಿದ್ದಾರೆ. ಈ ಹೊಸ ರೋಗವು ಭಾರತೀಯ ಯುವಜನರಿಗೆ ಸೋಂಕು ತಗುಲಿ ಅವರ ಭವಿಷ್ಯವನ್ನು ನಾಶಪಡಿಸಿದೆ. ದೇಶದ ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ನೈಜ ಪ್ರಾಶಸ್ತ್ಯ ನೀಡಲು ಜಾತಿ ಗಣತಿಯನ್ನು ನಡೆಸಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಗುರಿ ಆದಿವಾಸಿಗಳ ಭೂಮಿ ಮತ್ತು ಸಂಪನ್ಮೂಲಗಳನ್ನು ಕಿತ್ತುಕೊಂಡು ತನ್ನ ಕಾರ್ಪೊರೇಟ್ ಸ್ನೇಹಿತರಿಗೆ ನೀಡುವುದಾಗಿದೆ. ಇಂದು ಭಾರತದಲ್ಲಿ ಷಡ್ಯಂತ್ರದ ಭಾಗವಾಗಿ ಆದಿವಾಸಿಗಳ ಹಕ್ಕುಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಮೋದಿಯ ಪ್ರಚೋದನೆಯಿಂದ ಅವರ ‘ಮಾಧ್ಯಮ ಮಿತ್ರ’ ಆದಿವಾಸಿಗಳನ್ನು ಬಹಿರಂಗವಾಗಿ ನಿಂದಿಸುತ್ತಾನೆ ಮತ್ತು ಅವರ ‘ಕಾರ್ಪೊರೇಟ್ ಸ್ನೇಹಿತ’ ಅವರ ಸಂಪನ್ಮೂಲಗಳನ್ನು ಲೂಟಿ ಮಾಡುತ್ತಾನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಆದಿವಾಸಿಗಳಿಗೆ ಅರಣ್ಯ ಹಕ್ಕುಗಳಂತಹ ಕಾನೂನುಗಳು, ಬುಡಕಟ್ಟು ಮಸೂದೆಗಳನ್ನು ಜಾರಿಗೆ ತಂದಿದೆ, ಆದರೆ ಆದಿವಾಸಿಗಳ ಹಿತಾಸಕ್ತಿಗಳನ್ನು ಕಾಪಾಡುವ ಯಾವುದೇ ಕಾನೂನನ್ನು ಜಾರಿಗೆ ತರಲು ಬಿಜೆಪಿ ಅನುಮತಿಸುವುದಿಲ್ಲ ಏಕೆಂದರೆ ಅವರು ಭೂಮಿಯನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದ್ದಾರೆ. ಆದಿವಾಸಿಗಳ ಸಂಪನ್ಮೂಲಗಳನ್ನು ಕಸಿದುಕೊಂಡು ಅವರ ಕಾರ್ಪೊರೇಟ್ ಸ್ನೇಹಿತರಿಗೆ ನೀಡಲಾಗುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ರಾಜಕೀಯ ಪ್ರಕ್ಷುಬ್ಧ ಸಮಯದಲ್ಲೇ ರಾಜ್ಯದಲ್ಲಿ ರಾಹುಲ್‌ ಗಾಂಧಿಯ ಯಾತ್ರೆ ಸಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಮಂತ್ ಸೊರೆನ್ ಅವರನ್ನು ಬಂಧಿಸಿದ ಬೆನ್ನಲ್ಲಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಚಂಪೈ ಸೊರೆನ್ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ರಾಹುಲ್‌ ಗಾಂಧಿಗೆ ಖರ್ಗೆ ಪ್ರಶಂಸೆ:

ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಪ್ರತಿಕೂಲ ಪರಿಸ್ಥಿತಿಗಳಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ನಡೆಸುತ್ತಿದ್ದು, ಈ ಹೋರಾಟ ವಿಫಲವಾದರೆ ಮೋದಿ ಸರ್ಕಾರದಲ್ಲಿ ಜನರು ತೊಂದರೆ ಅನುಭವಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪರವಾಗಿ ಖರ್ಗೆ ರಾಹುಲ್‌ ಗಾಂಧಿಗೆ ಧನ್ಯವಾದ ಅರ್ಪಿಸಿದ್ದು, ಯಾತ್ರೆ ಕೈಗೊಳ್ಳುವ ನಿರ್ಧಾರ ಬಹುಶಃ ಪಕ್ಷದ ಯಾವುದೇ ನಾಯಕರು ತೆಗೆದುಕೊಳ್ಳದ ದೊಡ್ಡ ಹೆಜ್ಜೆಯಾಗಿದೆ. ಅವರು ಯುವಕರು, ಮಹಿಳೆಯರು, ರೈತರು ಮತ್ತು ಬಡವರು ಸೇರಿದಂತೆ ಎಲ್ಲರಿಗೂ ನ್ಯಾಯವನ್ನು ಕೋರುತ್ತಿದ್ದಾರೆ. ಇಂತಹ ಪ್ರತಿಕೂಲ ಪರಿಸ್ಥಿತಿ ಮತ್ತು ಚಳಿಯ ನಡುವೆಯೂ ಅವರು ಯಾತ್ರೆ ಹೋಗುತ್ತಿದ್ದಾರೆ. ಅವರು ಬಿಜೆಪಿ ಸರ್ಕಾರದ ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದು ಪ್ರಜಾಪ್ರಭುತ್ವ ಮತ್ತು ದೇಶದ ಸಂವಿಧಾನವನ್ನು ಉಳಿಸುವ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್‌ನ್ನು ನೀವು ಬೆಂಬಲಿಸಲು ವಿಫಲವಾದರೆ ನೀವು ಮೋದಿಯ ಗುಲಾಮರಾಗುತ್ತೀರಿ, ಯುವಕರಿಗೆ ಉದ್ಯೋಗ ಒದಗಿಸುವ ಮತ್ತು ಕಪ್ಪುಹಣವನ್ನು ಮರಳಿ ಪಡೆಯುವ ಭರವಸೆಗಳನ್ನು ಅವರು ಈಡೇರಿಸಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಪ್ರಧಾನಿಯವರು ದೇಶದ ಮೇಲೆ ತಮ್ಮ ಅಭಿಪ್ರಾಯಗಳನ್ನು ಹೇರಲು ಮತ್ತು ಅಧಿಕಾರಕ್ಕಾಗಿ ಪ್ರತಿಯೊಬ್ಬರನ್ನು ಶಿಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಹೋರಾಟ ಆರೆಸ್ಸೆಸ್ ಮತ್ತು ಬಿಜೆಪಿ ವಿರುದ್ಧವಾಗಿದೆ. ಅವರು ದೇಶವನ್ನು ಮುಗಿಸಲು ಮತ್ತು ಬಡವರನ್ನು ದೂರ ಮಾಡಲು ಬಯಸುತ್ತಾರೆ. ಬಿಜೆಪಿಯ ಒಡೆದು ಆಳುವ ನೀತಿಯ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪ್ರತಿ ಮನೆಗೂ ತೆರಳಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಡ್ವಾಣಿ: ರಥಯಾತ್ರೆಯಿಂದ ಭಾರತ ರತ್ನದವರೆಗೆ; ಹಿಂಸಾಚಾರ, ಧ್ರುವೀಕರಣದಿಂದ ಮುನ್ನಡೆದ ರಾಜಕೀಯ ಪಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...