Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಆದಿವಾಸಿಗಳ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸ್ನೇಹಿತರಿಗೆ ಹಂಚಲು ಬಿಜೆಪಿ ಬಯಸುತ್ತಿದೆ;...

ಭಾರತ್‌ ಜೋಡೋ ನ್ಯಾಯ ಯಾತ್ರೆ: ಆದಿವಾಸಿಗಳ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸ್ನೇಹಿತರಿಗೆ ಹಂಚಲು ಬಿಜೆಪಿ ಬಯಸುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್‌ನಲ್ಲಿ ಮೂರನೇ ದಿನ ಮುಂದುವರಿದಿದ್ದು, ಧನ್‌ಬಾದ್‌ನ ಬಿರ್ಸಾ ಮುಂಡಾ ಚೌಕ್‌ನಲ್ಲಿ ರಾಹುಲ್‌ ಗಾಂಧಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದಾರೆ.

ಶನಿವಾರ ಗೊಡ್ಡಾದ ಸರ್ಕಂದ ಚೌಕ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ದ್ವೇಷವನ್ನು ಉತ್ತೇಜಿಸುತ್ತಿದೆ ಮತ್ತು ದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ. ಜಾರ್ಖಂಡ್‌ನ ರಾಜಕೀಯ ಪರಿಸ್ಥಿತಿ ಅನ್ಯಾಯದಿಂದ ಕೂಡಿದೆ. ಜಾರ್ಖಂಡ್‌ ಜನರು ಕಾಂಗ್ರೆಸ್ ಬೆಂಬಲಿತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಆದರೆ ನರೇಂದ್ರ ಮೋದಿ ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಬಿಜೆಪಿಯನ್ನು ವಿರೋಧಿಸುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡುತ್ತಾರೆ ಎಂದು ಹೇಳಿದ್ದಾರೆ.

ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ರಕ್ಷಿಸುವಲ್ಲಿ ಕಾಂಗ್ರೆಸ್‌ನ ಪಾತ್ರವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ, ಬಿಜೆಪಿಯ ಸಿದ್ಧಾಂತವನ್ನು ವಿರೋಧಿಸುವ ಕಾಂಗ್ರೆಸ್‌ನ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ. ದೇಶದ ಯುವಕರು ಉದ್ಯೋಗ ಬಯಸುತ್ತಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ದೇಶದಲ್ಲಿ ನಿರುದ್ಯೋಗದ ರೋಗವನ್ನು ಹರಡಿದ್ದಾರೆ. ಈ ಹೊಸ ರೋಗವು ಭಾರತೀಯ ಯುವಜನರಿಗೆ ಸೋಂಕು ತಗುಲಿ ಅವರ ಭವಿಷ್ಯವನ್ನು ನಾಶಪಡಿಸಿದೆ. ದೇಶದ ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ನೈಜ ಪ್ರಾಶಸ್ತ್ಯ ನೀಡಲು ಜಾತಿ ಗಣತಿಯನ್ನು ನಡೆಸಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಗುರಿ ಆದಿವಾಸಿಗಳ ಭೂಮಿ ಮತ್ತು ಸಂಪನ್ಮೂಲಗಳನ್ನು ಕಿತ್ತುಕೊಂಡು ತನ್ನ ಕಾರ್ಪೊರೇಟ್ ಸ್ನೇಹಿತರಿಗೆ ನೀಡುವುದಾಗಿದೆ. ಇಂದು ಭಾರತದಲ್ಲಿ ಷಡ್ಯಂತ್ರದ ಭಾಗವಾಗಿ ಆದಿವಾಸಿಗಳ ಹಕ್ಕುಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಮೋದಿಯ ಪ್ರಚೋದನೆಯಿಂದ ಅವರ ‘ಮಾಧ್ಯಮ ಮಿತ್ರ’ ಆದಿವಾಸಿಗಳನ್ನು ಬಹಿರಂಗವಾಗಿ ನಿಂದಿಸುತ್ತಾನೆ ಮತ್ತು ಅವರ ‘ಕಾರ್ಪೊರೇಟ್ ಸ್ನೇಹಿತ’ ಅವರ ಸಂಪನ್ಮೂಲಗಳನ್ನು ಲೂಟಿ ಮಾಡುತ್ತಾನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಆದಿವಾಸಿಗಳಿಗೆ ಅರಣ್ಯ ಹಕ್ಕುಗಳಂತಹ ಕಾನೂನುಗಳು, ಬುಡಕಟ್ಟು ಮಸೂದೆಗಳನ್ನು ಜಾರಿಗೆ ತಂದಿದೆ, ಆದರೆ ಆದಿವಾಸಿಗಳ ಹಿತಾಸಕ್ತಿಗಳನ್ನು ಕಾಪಾಡುವ ಯಾವುದೇ ಕಾನೂನನ್ನು ಜಾರಿಗೆ ತರಲು ಬಿಜೆಪಿ ಅನುಮತಿಸುವುದಿಲ್ಲ ಏಕೆಂದರೆ ಅವರು ಭೂಮಿಯನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದ್ದಾರೆ. ಆದಿವಾಸಿಗಳ ಸಂಪನ್ಮೂಲಗಳನ್ನು ಕಸಿದುಕೊಂಡು ಅವರ ಕಾರ್ಪೊರೇಟ್ ಸ್ನೇಹಿತರಿಗೆ ನೀಡಲಾಗುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ರಾಜಕೀಯ ಪ್ರಕ್ಷುಬ್ಧ ಸಮಯದಲ್ಲೇ ರಾಜ್ಯದಲ್ಲಿ ರಾಹುಲ್‌ ಗಾಂಧಿಯ ಯಾತ್ರೆ ಸಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಮಂತ್ ಸೊರೆನ್ ಅವರನ್ನು ಬಂಧಿಸಿದ ಬೆನ್ನಲ್ಲಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಚಂಪೈ ಸೊರೆನ್ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ರಾಹುಲ್‌ ಗಾಂಧಿಗೆ ಖರ್ಗೆ ಪ್ರಶಂಸೆ:

ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಪ್ರತಿಕೂಲ ಪರಿಸ್ಥಿತಿಗಳಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ನಡೆಸುತ್ತಿದ್ದು, ಈ ಹೋರಾಟ ವಿಫಲವಾದರೆ ಮೋದಿ ಸರ್ಕಾರದಲ್ಲಿ ಜನರು ತೊಂದರೆ ಅನುಭವಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪರವಾಗಿ ಖರ್ಗೆ ರಾಹುಲ್‌ ಗಾಂಧಿಗೆ ಧನ್ಯವಾದ ಅರ್ಪಿಸಿದ್ದು, ಯಾತ್ರೆ ಕೈಗೊಳ್ಳುವ ನಿರ್ಧಾರ ಬಹುಶಃ ಪಕ್ಷದ ಯಾವುದೇ ನಾಯಕರು ತೆಗೆದುಕೊಳ್ಳದ ದೊಡ್ಡ ಹೆಜ್ಜೆಯಾಗಿದೆ. ಅವರು ಯುವಕರು, ಮಹಿಳೆಯರು, ರೈತರು ಮತ್ತು ಬಡವರು ಸೇರಿದಂತೆ ಎಲ್ಲರಿಗೂ ನ್ಯಾಯವನ್ನು ಕೋರುತ್ತಿದ್ದಾರೆ. ಇಂತಹ ಪ್ರತಿಕೂಲ ಪರಿಸ್ಥಿತಿ ಮತ್ತು ಚಳಿಯ ನಡುವೆಯೂ ಅವರು ಯಾತ್ರೆ ಹೋಗುತ್ತಿದ್ದಾರೆ. ಅವರು ಬಿಜೆಪಿ ಸರ್ಕಾರದ ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದು ಪ್ರಜಾಪ್ರಭುತ್ವ ಮತ್ತು ದೇಶದ ಸಂವಿಧಾನವನ್ನು ಉಳಿಸುವ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್‌ನ್ನು ನೀವು ಬೆಂಬಲಿಸಲು ವಿಫಲವಾದರೆ ನೀವು ಮೋದಿಯ ಗುಲಾಮರಾಗುತ್ತೀರಿ, ಯುವಕರಿಗೆ ಉದ್ಯೋಗ ಒದಗಿಸುವ ಮತ್ತು ಕಪ್ಪುಹಣವನ್ನು ಮರಳಿ ಪಡೆಯುವ ಭರವಸೆಗಳನ್ನು ಅವರು ಈಡೇರಿಸಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಪ್ರಧಾನಿಯವರು ದೇಶದ ಮೇಲೆ ತಮ್ಮ ಅಭಿಪ್ರಾಯಗಳನ್ನು ಹೇರಲು ಮತ್ತು ಅಧಿಕಾರಕ್ಕಾಗಿ ಪ್ರತಿಯೊಬ್ಬರನ್ನು ಶಿಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಹೋರಾಟ ಆರೆಸ್ಸೆಸ್ ಮತ್ತು ಬಿಜೆಪಿ ವಿರುದ್ಧವಾಗಿದೆ. ಅವರು ದೇಶವನ್ನು ಮುಗಿಸಲು ಮತ್ತು ಬಡವರನ್ನು ದೂರ ಮಾಡಲು ಬಯಸುತ್ತಾರೆ. ಬಿಜೆಪಿಯ ಒಡೆದು ಆಳುವ ನೀತಿಯ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪ್ರತಿ ಮನೆಗೂ ತೆರಳಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಡ್ವಾಣಿ: ರಥಯಾತ್ರೆಯಿಂದ ಭಾರತ ರತ್ನದವರೆಗೆ; ಹಿಂಸಾಚಾರ, ಧ್ರುವೀಕರಣದಿಂದ ಮುನ್ನಡೆದ ರಾಜಕೀಯ ಪಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...