Homeಕರ್ನಾಟಕ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

- Advertisement -
- Advertisement -

‘40 ಪರ್ಸೆಂಟ್‌ ಬಿಜೆಪಿ ಸರ್ಕಾರ’ ಎಂದು ಕಾಂಗ್ರೆಸ್‌ ಪ್ರಚಾರ ಮಾಡುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿಯು ಪ್ರತಿದಾಳಿ ಮಾಡಲು ಯತ್ನಿಸುತ್ತಿದೆ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದೆ. ಇದಕ್ಕೆ ಸಿದ್ದರಾಮಯ್ಯನವರೂ ಸವಾಲು ಹಾಕಿದ್ದಾರೆ. ಕುತೂಹಲಕಾರಿ ಸಂಗತಿ ಏನೆಂದರೆ- ಈ ಹಿಂದೆಯೇ ಬಿಜೆಪಿ ಮಾಡಿದ್ದ ಸಾಲು ಸಾಲು ಆರೋಪಗಳಿಗೆ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂಬುದು ತಿಳಿದು ಬಂದಿದೆ.

“ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ರಾಜಕೀಯ ಜಾಹೀರಾತುಗಳಿಗೆ ಸೂಕ್ತ ಸಾಕ್ಷ್ಯಾಧಾರ ಮತ್ತು ಪುರಾವೆ ಮತ್ತು ಸಮರ್ಪಕ ದಾಖಲೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ, ಪ್ರಮಾಣೀಕರಣ ಸಮಿತಿಗೆ ಬಿಜೆಪಿಗೆ ಒದಗಿಸಿರಲಿಲ್ಲ. ಕೇವಲ ಪತ್ರಿಕಾ ವರದಿಗಳನ್ನಷ್ಟೇ ಸಲ್ಲಿಸಿತ್ತು. ಇವುಗಳನ್ನು ಸಾಕ್ಷ್ಯಗಳಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿತ್ತು” ಎಂದು ‘ದಿ ಫೈಲ್‌’ ತನಿಖಾ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾಖಲೆಗಳನ್ನು ಸಲ್ಲಿಸದೇ ಕೇವಲ ಪತ್ರಿಕಾ ತುಣುಕುಗಳನ್ನಷ್ಟೇ ಸಲ್ಲಿಸಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು” ಎಂದು ವರದಿ ಉಲ್ಲೇಖಿಸಿದೆ.

“2018ರ ಚುನಾವಣೆ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರ ವಿರುದ್ಧ ವಿಫಲ ಸರ್ಕಾರ, ಜನ ವಿರೋಧಿ ಸರ್ಕಾರ, ಮೂರು ಭಾಗ್ಯ ಹೆಸರಿನಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ್ದ ರಾಜಕೀಯ ಜಾಹೀರಾತುಗಳು ಟಿ ವಿ ಗಳಲ್ಲಿ ಪ್ರಸಾರವಾಗಿತ್ತು. ಆದರೆ, ಈ ಆರೋಪಗಳನ್ನು ಸಾಬೀತುಪಡಿಸುವಂತಹ ಯಾವುದೇ ಸಮರ್ಥನೆ, ದಾಖಲೆ, ಸಾಕ್ಷಾಧಾರ ಮತ್ತು ಪುರಾವೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಮತ್ತು ಪ್ರಮಾಣೀಕೃತ ಸಮಿತಿಗೆ ಬಿಜೆಪಿ ಒದಗಿಸಿರಲಿಲ್ಲ. ಹೀಗಾಗಿ ರಾಜಕೀಯ ಆರೋಪಗಳನ್ನೊಳಗೊಂಡ ಜಾಹೀರಾತುಗಳ ಪ್ರಸಾರಕ್ಕೆ ಚುನಾವಣಾ ಆಯೋಗ ತಡೆ ಒಡ್ಡಿತ್ತು” ಎಂಬುದು ತಿಳಿದುಬಂದಿದೆ.

“ಒಂದು ವಾಚ್‌ನ ಕಥೆ, ಅನ್ನಭಾಗ್ಯ ಕನ್ನ ಭಾಗ್ಯ, ಕೆಪಿಸಿ ಕಲ್ಲಿದ್ದಲು ಟೆಂಡರ್‌ನಲ್ಲಿ ರೂಪಾಯಿ 400 ಕೋಟಿ ಗುಳುಂ, ಶೇ.10 ಕಮಿಷನ್ ವಾಚ್, ಇಂದಿರಾ ಕ್ಯಾಂಟೀನ್ ಕೋಟಿ ಕೋಟಿ ಲೂಟಿ, ಬಿಬಿಎಂಪಿ ಕಸ ವಿಲೇವಾರಿ ರೂಪಾಯಿ 400 ಕೋಟಿ ಗುಳುಂ, ಹ್ಯುಬ್ಲಾಟ್ ವಾಚ್: 40 ಲಕ್ಷ, ಸೋಲಾರ್‌ ಪವರ್‌ ಟೆಂಡರ್ ಕೆಪಿಸಿ ಕಲ್ಲಿದ್ದಲು ಟೆಂಡರ್, ಬಿಬಿಎಂಪಿ ಕಸ ವಿಲೇವಾರಿ ಟೆಂಡರ್ ರೂ 1,500 ಕೋಟಿ ಗುಳುಂ, ಗೂಂಡಾ ಸರ್ಕಾರ, ರೈತರನ್ನು ಬಲಿಕೊಟ್ಟ ಸರ್ಕಾರ, ನಗರಗಳನ್ನು ನರಕ ಮಾಡಿದ ಸರ್ಕಾರ, ದೇಶಭಕ್ತರ ಕೊಲೆಗಳನ್ನು ತಡೆಯದ ಸರ್ಕಾರ, ಸಮಾಜ ಒಡೆಯುವ ಸರ್ಕಾರ, ನಕಲಿ ಭಾಗ್ಯಗಳ ಭ್ರಷ್ಟ ಸರ್ಕಾರ, ಲೋಕಾಯುಕ್ತರಿಗೆ ರಕ್ಷಣೆ ಇಲ್ಲ” ಇತ್ಯಾದಿ ಆರೋಪಗಳನ್ನು ಒಳಗೊಂಡ ಜಾಹೀರಾತುಗಳನ್ನು ನೀಡಿದ್ದ ಬಿಜೆಪಿ, ಇದಕ್ಕೆ ಪುರಾವೆಗಳನ್ನೇ ಒದಗಿಸಿರಲಿಲ್ಲ.

ಬಿಜೆಪಿ ನೀಡಿದ್ದ ಈ ಜಾಹೀರಾತುಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಆಕ್ಷೇಪಣೆ ಎತ್ತಿತ್ತು. ಈ ಸಂಬಂಧ ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಕಳಿಸಿದ್ದ ನೋಟೀಸ್‌ಗೆ ಉತ್ತರಿಸಿದ್ದ ಬಿಜೆಪಿ, ಆರೋಪಗಳನ್ನು ಸಾಬೀತುಪಡಿಸುವಲ್ಲಿ ಸಮರ್ಪಕವಾದ ದಾಖಲೆಗಳನ್ನು ಒದಗಿಸಿರಲಿಲ್ಲ ಎಂಬ ಅಂಶ 2018ರ ಮೇ 5ರಂದು ಚುನಾವಣಾ ಆಯೋಗ ನಡೆಸಿದ್ದ ಸಭೆಯ ನಡವಳಿಯಿಂದ ತಿಳಿದು ಬಂದಿದೆ ಎಂದು ‘ದಿ ಫೈಲ್‌’ ವರದಿ ಮಾಡಿದೆ.

ಕಾಂಗ್ರೆಸ್‌ನಿಂದ ಡರ್ಟಿ ಪಾಲಿಟಿಕ್ಸ್‌: ಬೊಮ್ಮಾಯಿ ಆರೋಪ

“ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿನದ್ದು ಡರ್ಟಿ ಪಾಲಿಟಿಕ್ಸ್” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶನಿವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಯಾವುದಾದರೂ ವಿಚಾರವಿದ್ದರೆ, ನೇರವಾಗಿ ಮಾತಾಡಬೇಕು, ದಾಖಲೆ ನೀಡಬೇಕು ಹಾಗೂ ತನಿಖೆಯಾಗಬೇಕು. ಯಾವುದೇ ವಿಚಾರವಿಲ್ಲದೆ, ಪೂರ್ಣಪ್ರಮಾಣದ ತಯಾರಿ ಇಲ್ಲದೆ ಸದನಕ್ಕೆ ಬರುತ್ತಾರೆ. ಇದು ಅವರ ನೈತಿಕತೆಯ ಅಧ:ಪತನ ತೋರುತ್ತದೆ. ನೈತಿಕತೆ ಇಲ್ಲದೆ ಹೆಸರು ಕೆಡಿಸುವ ಕಾರ್ಯಕ್ರಮವಿದು” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ಜನಪರ ಕಾಳಜಿ ಇಲ್ಲದೆ ಡರ್ಟಿ ಪಾಲಿಟಿಕ್ಸ್ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಇದೆಲ್ಲಾ ಕರ್ನಾಟಕದಲ್ಲಿ ಸಾಧ್ಯವಿಲ್ಲ. ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳನ್ನು ಗುರಿಯಾಗಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, “ನಾನು ಅದರ ಭಾಗವಲ್ಲ. ಹಾಗಾಗಿ ಏನೋ ಹೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Paycm ಸರಿಯಿದೆ! ಬೊಮ್ಮಣ್ಣ ನಿಮ್ಮದೇ ಸರ್ಕಾರ ಅಧಿಕಾರದಲ್ಲಿ ಇದೆಯಲ್ಲ, ನೀವು ಕಂಡುಹಿಡಿದಿರುವ ಕಾಂಗ್ರೆಸ್ಸ್ ನವರ ಎಲ್ಲಾ ಭ್ರಷ್ಟಾಚಾರಗಳನ್ನು ತನಿಖೆಗೆ ಆದೇಶಿಸಿ ಎಲ್ಲಾ ಕಾಂಗ್ರೆಸ್ಸಿನ ಭ್ರಷ್ಟರನ್ನು ಜೈಲಿಗೆ ಹಾಕಿಸಿ. ಆಗ ಕರ್ನಾಟಕದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿದ ಕೀರ್ತಿ ತಮಗೆ ಬರುತ್ತದೆಯಲ್ಲ. ಹಾಗೆಯೇ ದೇಶದಲ್ಲಿ ಭ್ರಷ್ಟ ಕಾಂಗ್ರೆಸ್ ಮುಕ್ತವಾಗಿ. ಕೇವಲ 40% ಬಿಜೆಪಿ ಸರ್ಕಾರ ಮಾತ್ರ ಉಳಿಸಿಕೊಳ್ಳಬಹುದು! ಮುಂದಿನ ಚುನಾವಣೆಗಳಲ್ಲಿ ಜನರ ಬಳಿ ಹೋಗಿ ನೀವೇ ಹೇಳಿ ನಾವು ಕೇವಲ 40% ಮಾತ್ರ ಕಮಿಷನ್ ತೆಗೊಳ್ಳುತ್ತೀವಿ ಆದ್ರೆ ಕಾಂಗ್ರೇಸ್ ನವರು 100% ತೆಗೊಂಡು ಎಲ್ಲವನ್ನೂ ಗುಳುಂ ಮಾಡ್ತಿದ್ರು ಅದಕ್ಕೆ ಈಗ ಅವರನ್ನೆಲ್ಲ ಜೈಲಿಗೆ ಕಳುಹಿಸಿದ್ದೇವೆ. ನಮ್ದು ಕೇವಲ 40% ಸರ್ಕಾರ ಅಂತ ಎದೆ ತಟ್ಟಿ ಹೇಳಿ. ಮುಂದೆ ನೀವೆಲ್ಲಾ ನಮ್ಮ ಪಕ್ಷಕ್ಕೆ ಓಟ್ ಹಾಕಬೇಕು ಇಲ್ದಿದ್ರೆ ನಿಮ್ಗೂ ಜೈಲೇ ಗತಿ ಅಂತ ಗಟ್ಟಿಯಾಗಿ ಎದೆತಟ್ಟಿ ಧಮ್ ಇದ್ರೆ ಹೇಳಿ ಬೊಮ್ಮಣ್ಣ!

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...