Homeಕರ್ನಾಟಕ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

- Advertisement -
- Advertisement -

‘40 ಪರ್ಸೆಂಟ್‌ ಬಿಜೆಪಿ ಸರ್ಕಾರ’ ಎಂದು ಕಾಂಗ್ರೆಸ್‌ ಪ್ರಚಾರ ಮಾಡುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿಯು ಪ್ರತಿದಾಳಿ ಮಾಡಲು ಯತ್ನಿಸುತ್ತಿದೆ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದೆ. ಇದಕ್ಕೆ ಸಿದ್ದರಾಮಯ್ಯನವರೂ ಸವಾಲು ಹಾಕಿದ್ದಾರೆ. ಕುತೂಹಲಕಾರಿ ಸಂಗತಿ ಏನೆಂದರೆ- ಈ ಹಿಂದೆಯೇ ಬಿಜೆಪಿ ಮಾಡಿದ್ದ ಸಾಲು ಸಾಲು ಆರೋಪಗಳಿಗೆ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂಬುದು ತಿಳಿದು ಬಂದಿದೆ.

“ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ರಾಜಕೀಯ ಜಾಹೀರಾತುಗಳಿಗೆ ಸೂಕ್ತ ಸಾಕ್ಷ್ಯಾಧಾರ ಮತ್ತು ಪುರಾವೆ ಮತ್ತು ಸಮರ್ಪಕ ದಾಖಲೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ, ಪ್ರಮಾಣೀಕರಣ ಸಮಿತಿಗೆ ಬಿಜೆಪಿಗೆ ಒದಗಿಸಿರಲಿಲ್ಲ. ಕೇವಲ ಪತ್ರಿಕಾ ವರದಿಗಳನ್ನಷ್ಟೇ ಸಲ್ಲಿಸಿತ್ತು. ಇವುಗಳನ್ನು ಸಾಕ್ಷ್ಯಗಳಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿತ್ತು” ಎಂದು ‘ದಿ ಫೈಲ್‌’ ತನಿಖಾ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾಖಲೆಗಳನ್ನು ಸಲ್ಲಿಸದೇ ಕೇವಲ ಪತ್ರಿಕಾ ತುಣುಕುಗಳನ್ನಷ್ಟೇ ಸಲ್ಲಿಸಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು” ಎಂದು ವರದಿ ಉಲ್ಲೇಖಿಸಿದೆ.

“2018ರ ಚುನಾವಣೆ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರ ವಿರುದ್ಧ ವಿಫಲ ಸರ್ಕಾರ, ಜನ ವಿರೋಧಿ ಸರ್ಕಾರ, ಮೂರು ಭಾಗ್ಯ ಹೆಸರಿನಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ್ದ ರಾಜಕೀಯ ಜಾಹೀರಾತುಗಳು ಟಿ ವಿ ಗಳಲ್ಲಿ ಪ್ರಸಾರವಾಗಿತ್ತು. ಆದರೆ, ಈ ಆರೋಪಗಳನ್ನು ಸಾಬೀತುಪಡಿಸುವಂತಹ ಯಾವುದೇ ಸಮರ್ಥನೆ, ದಾಖಲೆ, ಸಾಕ್ಷಾಧಾರ ಮತ್ತು ಪುರಾವೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಮತ್ತು ಪ್ರಮಾಣೀಕೃತ ಸಮಿತಿಗೆ ಬಿಜೆಪಿ ಒದಗಿಸಿರಲಿಲ್ಲ. ಹೀಗಾಗಿ ರಾಜಕೀಯ ಆರೋಪಗಳನ್ನೊಳಗೊಂಡ ಜಾಹೀರಾತುಗಳ ಪ್ರಸಾರಕ್ಕೆ ಚುನಾವಣಾ ಆಯೋಗ ತಡೆ ಒಡ್ಡಿತ್ತು” ಎಂಬುದು ತಿಳಿದುಬಂದಿದೆ.

“ಒಂದು ವಾಚ್‌ನ ಕಥೆ, ಅನ್ನಭಾಗ್ಯ ಕನ್ನ ಭಾಗ್ಯ, ಕೆಪಿಸಿ ಕಲ್ಲಿದ್ದಲು ಟೆಂಡರ್‌ನಲ್ಲಿ ರೂಪಾಯಿ 400 ಕೋಟಿ ಗುಳುಂ, ಶೇ.10 ಕಮಿಷನ್ ವಾಚ್, ಇಂದಿರಾ ಕ್ಯಾಂಟೀನ್ ಕೋಟಿ ಕೋಟಿ ಲೂಟಿ, ಬಿಬಿಎಂಪಿ ಕಸ ವಿಲೇವಾರಿ ರೂಪಾಯಿ 400 ಕೋಟಿ ಗುಳುಂ, ಹ್ಯುಬ್ಲಾಟ್ ವಾಚ್: 40 ಲಕ್ಷ, ಸೋಲಾರ್‌ ಪವರ್‌ ಟೆಂಡರ್ ಕೆಪಿಸಿ ಕಲ್ಲಿದ್ದಲು ಟೆಂಡರ್, ಬಿಬಿಎಂಪಿ ಕಸ ವಿಲೇವಾರಿ ಟೆಂಡರ್ ರೂ 1,500 ಕೋಟಿ ಗುಳುಂ, ಗೂಂಡಾ ಸರ್ಕಾರ, ರೈತರನ್ನು ಬಲಿಕೊಟ್ಟ ಸರ್ಕಾರ, ನಗರಗಳನ್ನು ನರಕ ಮಾಡಿದ ಸರ್ಕಾರ, ದೇಶಭಕ್ತರ ಕೊಲೆಗಳನ್ನು ತಡೆಯದ ಸರ್ಕಾರ, ಸಮಾಜ ಒಡೆಯುವ ಸರ್ಕಾರ, ನಕಲಿ ಭಾಗ್ಯಗಳ ಭ್ರಷ್ಟ ಸರ್ಕಾರ, ಲೋಕಾಯುಕ್ತರಿಗೆ ರಕ್ಷಣೆ ಇಲ್ಲ” ಇತ್ಯಾದಿ ಆರೋಪಗಳನ್ನು ಒಳಗೊಂಡ ಜಾಹೀರಾತುಗಳನ್ನು ನೀಡಿದ್ದ ಬಿಜೆಪಿ, ಇದಕ್ಕೆ ಪುರಾವೆಗಳನ್ನೇ ಒದಗಿಸಿರಲಿಲ್ಲ.

ಬಿಜೆಪಿ ನೀಡಿದ್ದ ಈ ಜಾಹೀರಾತುಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಆಕ್ಷೇಪಣೆ ಎತ್ತಿತ್ತು. ಈ ಸಂಬಂಧ ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಕಳಿಸಿದ್ದ ನೋಟೀಸ್‌ಗೆ ಉತ್ತರಿಸಿದ್ದ ಬಿಜೆಪಿ, ಆರೋಪಗಳನ್ನು ಸಾಬೀತುಪಡಿಸುವಲ್ಲಿ ಸಮರ್ಪಕವಾದ ದಾಖಲೆಗಳನ್ನು ಒದಗಿಸಿರಲಿಲ್ಲ ಎಂಬ ಅಂಶ 2018ರ ಮೇ 5ರಂದು ಚುನಾವಣಾ ಆಯೋಗ ನಡೆಸಿದ್ದ ಸಭೆಯ ನಡವಳಿಯಿಂದ ತಿಳಿದು ಬಂದಿದೆ ಎಂದು ‘ದಿ ಫೈಲ್‌’ ವರದಿ ಮಾಡಿದೆ.

ಕಾಂಗ್ರೆಸ್‌ನಿಂದ ಡರ್ಟಿ ಪಾಲಿಟಿಕ್ಸ್‌: ಬೊಮ್ಮಾಯಿ ಆರೋಪ

“ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿನದ್ದು ಡರ್ಟಿ ಪಾಲಿಟಿಕ್ಸ್” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶನಿವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಯಾವುದಾದರೂ ವಿಚಾರವಿದ್ದರೆ, ನೇರವಾಗಿ ಮಾತಾಡಬೇಕು, ದಾಖಲೆ ನೀಡಬೇಕು ಹಾಗೂ ತನಿಖೆಯಾಗಬೇಕು. ಯಾವುದೇ ವಿಚಾರವಿಲ್ಲದೆ, ಪೂರ್ಣಪ್ರಮಾಣದ ತಯಾರಿ ಇಲ್ಲದೆ ಸದನಕ್ಕೆ ಬರುತ್ತಾರೆ. ಇದು ಅವರ ನೈತಿಕತೆಯ ಅಧ:ಪತನ ತೋರುತ್ತದೆ. ನೈತಿಕತೆ ಇಲ್ಲದೆ ಹೆಸರು ಕೆಡಿಸುವ ಕಾರ್ಯಕ್ರಮವಿದು” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ಜನಪರ ಕಾಳಜಿ ಇಲ್ಲದೆ ಡರ್ಟಿ ಪಾಲಿಟಿಕ್ಸ್ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಇದೆಲ್ಲಾ ಕರ್ನಾಟಕದಲ್ಲಿ ಸಾಧ್ಯವಿಲ್ಲ. ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳನ್ನು ಗುರಿಯಾಗಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, “ನಾನು ಅದರ ಭಾಗವಲ್ಲ. ಹಾಗಾಗಿ ಏನೋ ಹೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Paycm ಸರಿಯಿದೆ! ಬೊಮ್ಮಣ್ಣ ನಿಮ್ಮದೇ ಸರ್ಕಾರ ಅಧಿಕಾರದಲ್ಲಿ ಇದೆಯಲ್ಲ, ನೀವು ಕಂಡುಹಿಡಿದಿರುವ ಕಾಂಗ್ರೆಸ್ಸ್ ನವರ ಎಲ್ಲಾ ಭ್ರಷ್ಟಾಚಾರಗಳನ್ನು ತನಿಖೆಗೆ ಆದೇಶಿಸಿ ಎಲ್ಲಾ ಕಾಂಗ್ರೆಸ್ಸಿನ ಭ್ರಷ್ಟರನ್ನು ಜೈಲಿಗೆ ಹಾಕಿಸಿ. ಆಗ ಕರ್ನಾಟಕದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿದ ಕೀರ್ತಿ ತಮಗೆ ಬರುತ್ತದೆಯಲ್ಲ. ಹಾಗೆಯೇ ದೇಶದಲ್ಲಿ ಭ್ರಷ್ಟ ಕಾಂಗ್ರೆಸ್ ಮುಕ್ತವಾಗಿ. ಕೇವಲ 40% ಬಿಜೆಪಿ ಸರ್ಕಾರ ಮಾತ್ರ ಉಳಿಸಿಕೊಳ್ಳಬಹುದು! ಮುಂದಿನ ಚುನಾವಣೆಗಳಲ್ಲಿ ಜನರ ಬಳಿ ಹೋಗಿ ನೀವೇ ಹೇಳಿ ನಾವು ಕೇವಲ 40% ಮಾತ್ರ ಕಮಿಷನ್ ತೆಗೊಳ್ಳುತ್ತೀವಿ ಆದ್ರೆ ಕಾಂಗ್ರೇಸ್ ನವರು 100% ತೆಗೊಂಡು ಎಲ್ಲವನ್ನೂ ಗುಳುಂ ಮಾಡ್ತಿದ್ರು ಅದಕ್ಕೆ ಈಗ ಅವರನ್ನೆಲ್ಲ ಜೈಲಿಗೆ ಕಳುಹಿಸಿದ್ದೇವೆ. ನಮ್ದು ಕೇವಲ 40% ಸರ್ಕಾರ ಅಂತ ಎದೆ ತಟ್ಟಿ ಹೇಳಿ. ಮುಂದೆ ನೀವೆಲ್ಲಾ ನಮ್ಮ ಪಕ್ಷಕ್ಕೆ ಓಟ್ ಹಾಕಬೇಕು ಇಲ್ದಿದ್ರೆ ನಿಮ್ಗೂ ಜೈಲೇ ಗತಿ ಅಂತ ಗಟ್ಟಿಯಾಗಿ ಎದೆತಟ್ಟಿ ಧಮ್ ಇದ್ರೆ ಹೇಳಿ ಬೊಮ್ಮಣ್ಣ!

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...