Homeಕರ್ನಾಟಕ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

- Advertisement -
- Advertisement -

‘40 ಪರ್ಸೆಂಟ್‌ ಬಿಜೆಪಿ ಸರ್ಕಾರ’ ಎಂದು ಕಾಂಗ್ರೆಸ್‌ ಪ್ರಚಾರ ಮಾಡುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿಯು ಪ್ರತಿದಾಳಿ ಮಾಡಲು ಯತ್ನಿಸುತ್ತಿದೆ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದೆ. ಇದಕ್ಕೆ ಸಿದ್ದರಾಮಯ್ಯನವರೂ ಸವಾಲು ಹಾಕಿದ್ದಾರೆ. ಕುತೂಹಲಕಾರಿ ಸಂಗತಿ ಏನೆಂದರೆ- ಈ ಹಿಂದೆಯೇ ಬಿಜೆಪಿ ಮಾಡಿದ್ದ ಸಾಲು ಸಾಲು ಆರೋಪಗಳಿಗೆ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂಬುದು ತಿಳಿದು ಬಂದಿದೆ.

“ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ರಾಜಕೀಯ ಜಾಹೀರಾತುಗಳಿಗೆ ಸೂಕ್ತ ಸಾಕ್ಷ್ಯಾಧಾರ ಮತ್ತು ಪುರಾವೆ ಮತ್ತು ಸಮರ್ಪಕ ದಾಖಲೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ, ಪ್ರಮಾಣೀಕರಣ ಸಮಿತಿಗೆ ಬಿಜೆಪಿಗೆ ಒದಗಿಸಿರಲಿಲ್ಲ. ಕೇವಲ ಪತ್ರಿಕಾ ವರದಿಗಳನ್ನಷ್ಟೇ ಸಲ್ಲಿಸಿತ್ತು. ಇವುಗಳನ್ನು ಸಾಕ್ಷ್ಯಗಳಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿತ್ತು” ಎಂದು ‘ದಿ ಫೈಲ್‌’ ತನಿಖಾ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾಖಲೆಗಳನ್ನು ಸಲ್ಲಿಸದೇ ಕೇವಲ ಪತ್ರಿಕಾ ತುಣುಕುಗಳನ್ನಷ್ಟೇ ಸಲ್ಲಿಸಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು” ಎಂದು ವರದಿ ಉಲ್ಲೇಖಿಸಿದೆ.

“2018ರ ಚುನಾವಣೆ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರ ವಿರುದ್ಧ ವಿಫಲ ಸರ್ಕಾರ, ಜನ ವಿರೋಧಿ ಸರ್ಕಾರ, ಮೂರು ಭಾಗ್ಯ ಹೆಸರಿನಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ್ದ ರಾಜಕೀಯ ಜಾಹೀರಾತುಗಳು ಟಿ ವಿ ಗಳಲ್ಲಿ ಪ್ರಸಾರವಾಗಿತ್ತು. ಆದರೆ, ಈ ಆರೋಪಗಳನ್ನು ಸಾಬೀತುಪಡಿಸುವಂತಹ ಯಾವುದೇ ಸಮರ್ಥನೆ, ದಾಖಲೆ, ಸಾಕ್ಷಾಧಾರ ಮತ್ತು ಪುರಾವೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಮತ್ತು ಪ್ರಮಾಣೀಕೃತ ಸಮಿತಿಗೆ ಬಿಜೆಪಿ ಒದಗಿಸಿರಲಿಲ್ಲ. ಹೀಗಾಗಿ ರಾಜಕೀಯ ಆರೋಪಗಳನ್ನೊಳಗೊಂಡ ಜಾಹೀರಾತುಗಳ ಪ್ರಸಾರಕ್ಕೆ ಚುನಾವಣಾ ಆಯೋಗ ತಡೆ ಒಡ್ಡಿತ್ತು” ಎಂಬುದು ತಿಳಿದುಬಂದಿದೆ.

“ಒಂದು ವಾಚ್‌ನ ಕಥೆ, ಅನ್ನಭಾಗ್ಯ ಕನ್ನ ಭಾಗ್ಯ, ಕೆಪಿಸಿ ಕಲ್ಲಿದ್ದಲು ಟೆಂಡರ್‌ನಲ್ಲಿ ರೂಪಾಯಿ 400 ಕೋಟಿ ಗುಳುಂ, ಶೇ.10 ಕಮಿಷನ್ ವಾಚ್, ಇಂದಿರಾ ಕ್ಯಾಂಟೀನ್ ಕೋಟಿ ಕೋಟಿ ಲೂಟಿ, ಬಿಬಿಎಂಪಿ ಕಸ ವಿಲೇವಾರಿ ರೂಪಾಯಿ 400 ಕೋಟಿ ಗುಳುಂ, ಹ್ಯುಬ್ಲಾಟ್ ವಾಚ್: 40 ಲಕ್ಷ, ಸೋಲಾರ್‌ ಪವರ್‌ ಟೆಂಡರ್ ಕೆಪಿಸಿ ಕಲ್ಲಿದ್ದಲು ಟೆಂಡರ್, ಬಿಬಿಎಂಪಿ ಕಸ ವಿಲೇವಾರಿ ಟೆಂಡರ್ ರೂ 1,500 ಕೋಟಿ ಗುಳುಂ, ಗೂಂಡಾ ಸರ್ಕಾರ, ರೈತರನ್ನು ಬಲಿಕೊಟ್ಟ ಸರ್ಕಾರ, ನಗರಗಳನ್ನು ನರಕ ಮಾಡಿದ ಸರ್ಕಾರ, ದೇಶಭಕ್ತರ ಕೊಲೆಗಳನ್ನು ತಡೆಯದ ಸರ್ಕಾರ, ಸಮಾಜ ಒಡೆಯುವ ಸರ್ಕಾರ, ನಕಲಿ ಭಾಗ್ಯಗಳ ಭ್ರಷ್ಟ ಸರ್ಕಾರ, ಲೋಕಾಯುಕ್ತರಿಗೆ ರಕ್ಷಣೆ ಇಲ್ಲ” ಇತ್ಯಾದಿ ಆರೋಪಗಳನ್ನು ಒಳಗೊಂಡ ಜಾಹೀರಾತುಗಳನ್ನು ನೀಡಿದ್ದ ಬಿಜೆಪಿ, ಇದಕ್ಕೆ ಪುರಾವೆಗಳನ್ನೇ ಒದಗಿಸಿರಲಿಲ್ಲ.

ಬಿಜೆಪಿ ನೀಡಿದ್ದ ಈ ಜಾಹೀರಾತುಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಆಕ್ಷೇಪಣೆ ಎತ್ತಿತ್ತು. ಈ ಸಂಬಂಧ ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಕಳಿಸಿದ್ದ ನೋಟೀಸ್‌ಗೆ ಉತ್ತರಿಸಿದ್ದ ಬಿಜೆಪಿ, ಆರೋಪಗಳನ್ನು ಸಾಬೀತುಪಡಿಸುವಲ್ಲಿ ಸಮರ್ಪಕವಾದ ದಾಖಲೆಗಳನ್ನು ಒದಗಿಸಿರಲಿಲ್ಲ ಎಂಬ ಅಂಶ 2018ರ ಮೇ 5ರಂದು ಚುನಾವಣಾ ಆಯೋಗ ನಡೆಸಿದ್ದ ಸಭೆಯ ನಡವಳಿಯಿಂದ ತಿಳಿದು ಬಂದಿದೆ ಎಂದು ‘ದಿ ಫೈಲ್‌’ ವರದಿ ಮಾಡಿದೆ.

ಕಾಂಗ್ರೆಸ್‌ನಿಂದ ಡರ್ಟಿ ಪಾಲಿಟಿಕ್ಸ್‌: ಬೊಮ್ಮಾಯಿ ಆರೋಪ

“ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿನದ್ದು ಡರ್ಟಿ ಪಾಲಿಟಿಕ್ಸ್” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶನಿವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಯಾವುದಾದರೂ ವಿಚಾರವಿದ್ದರೆ, ನೇರವಾಗಿ ಮಾತಾಡಬೇಕು, ದಾಖಲೆ ನೀಡಬೇಕು ಹಾಗೂ ತನಿಖೆಯಾಗಬೇಕು. ಯಾವುದೇ ವಿಚಾರವಿಲ್ಲದೆ, ಪೂರ್ಣಪ್ರಮಾಣದ ತಯಾರಿ ಇಲ್ಲದೆ ಸದನಕ್ಕೆ ಬರುತ್ತಾರೆ. ಇದು ಅವರ ನೈತಿಕತೆಯ ಅಧ:ಪತನ ತೋರುತ್ತದೆ. ನೈತಿಕತೆ ಇಲ್ಲದೆ ಹೆಸರು ಕೆಡಿಸುವ ಕಾರ್ಯಕ್ರಮವಿದು” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ಜನಪರ ಕಾಳಜಿ ಇಲ್ಲದೆ ಡರ್ಟಿ ಪಾಲಿಟಿಕ್ಸ್ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಇದೆಲ್ಲಾ ಕರ್ನಾಟಕದಲ್ಲಿ ಸಾಧ್ಯವಿಲ್ಲ. ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳನ್ನು ಗುರಿಯಾಗಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, “ನಾನು ಅದರ ಭಾಗವಲ್ಲ. ಹಾಗಾಗಿ ಏನೋ ಹೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Paycm ಸರಿಯಿದೆ! ಬೊಮ್ಮಣ್ಣ ನಿಮ್ಮದೇ ಸರ್ಕಾರ ಅಧಿಕಾರದಲ್ಲಿ ಇದೆಯಲ್ಲ, ನೀವು ಕಂಡುಹಿಡಿದಿರುವ ಕಾಂಗ್ರೆಸ್ಸ್ ನವರ ಎಲ್ಲಾ ಭ್ರಷ್ಟಾಚಾರಗಳನ್ನು ತನಿಖೆಗೆ ಆದೇಶಿಸಿ ಎಲ್ಲಾ ಕಾಂಗ್ರೆಸ್ಸಿನ ಭ್ರಷ್ಟರನ್ನು ಜೈಲಿಗೆ ಹಾಕಿಸಿ. ಆಗ ಕರ್ನಾಟಕದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿದ ಕೀರ್ತಿ ತಮಗೆ ಬರುತ್ತದೆಯಲ್ಲ. ಹಾಗೆಯೇ ದೇಶದಲ್ಲಿ ಭ್ರಷ್ಟ ಕಾಂಗ್ರೆಸ್ ಮುಕ್ತವಾಗಿ. ಕೇವಲ 40% ಬಿಜೆಪಿ ಸರ್ಕಾರ ಮಾತ್ರ ಉಳಿಸಿಕೊಳ್ಳಬಹುದು! ಮುಂದಿನ ಚುನಾವಣೆಗಳಲ್ಲಿ ಜನರ ಬಳಿ ಹೋಗಿ ನೀವೇ ಹೇಳಿ ನಾವು ಕೇವಲ 40% ಮಾತ್ರ ಕಮಿಷನ್ ತೆಗೊಳ್ಳುತ್ತೀವಿ ಆದ್ರೆ ಕಾಂಗ್ರೇಸ್ ನವರು 100% ತೆಗೊಂಡು ಎಲ್ಲವನ್ನೂ ಗುಳುಂ ಮಾಡ್ತಿದ್ರು ಅದಕ್ಕೆ ಈಗ ಅವರನ್ನೆಲ್ಲ ಜೈಲಿಗೆ ಕಳುಹಿಸಿದ್ದೇವೆ. ನಮ್ದು ಕೇವಲ 40% ಸರ್ಕಾರ ಅಂತ ಎದೆ ತಟ್ಟಿ ಹೇಳಿ. ಮುಂದೆ ನೀವೆಲ್ಲಾ ನಮ್ಮ ಪಕ್ಷಕ್ಕೆ ಓಟ್ ಹಾಕಬೇಕು ಇಲ್ದಿದ್ರೆ ನಿಮ್ಗೂ ಜೈಲೇ ಗತಿ ಅಂತ ಗಟ್ಟಿಯಾಗಿ ಎದೆತಟ್ಟಿ ಧಮ್ ಇದ್ರೆ ಹೇಳಿ ಬೊಮ್ಮಣ್ಣ!

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...