Homeಕರ್ನಾಟಕ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

- Advertisement -
- Advertisement -

‘40 ಪರ್ಸೆಂಟ್‌ ಬಿಜೆಪಿ ಸರ್ಕಾರ’ ಎಂದು ಕಾಂಗ್ರೆಸ್‌ ಪ್ರಚಾರ ಮಾಡುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿಯು ಪ್ರತಿದಾಳಿ ಮಾಡಲು ಯತ್ನಿಸುತ್ತಿದೆ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದೆ. ಇದಕ್ಕೆ ಸಿದ್ದರಾಮಯ್ಯನವರೂ ಸವಾಲು ಹಾಕಿದ್ದಾರೆ. ಕುತೂಹಲಕಾರಿ ಸಂಗತಿ ಏನೆಂದರೆ- ಈ ಹಿಂದೆಯೇ ಬಿಜೆಪಿ ಮಾಡಿದ್ದ ಸಾಲು ಸಾಲು ಆರೋಪಗಳಿಗೆ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂಬುದು ತಿಳಿದು ಬಂದಿದೆ.

“ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ರಾಜಕೀಯ ಜಾಹೀರಾತುಗಳಿಗೆ ಸೂಕ್ತ ಸಾಕ್ಷ್ಯಾಧಾರ ಮತ್ತು ಪುರಾವೆ ಮತ್ತು ಸಮರ್ಪಕ ದಾಖಲೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ, ಪ್ರಮಾಣೀಕರಣ ಸಮಿತಿಗೆ ಬಿಜೆಪಿಗೆ ಒದಗಿಸಿರಲಿಲ್ಲ. ಕೇವಲ ಪತ್ರಿಕಾ ವರದಿಗಳನ್ನಷ್ಟೇ ಸಲ್ಲಿಸಿತ್ತು. ಇವುಗಳನ್ನು ಸಾಕ್ಷ್ಯಗಳಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿತ್ತು” ಎಂದು ‘ದಿ ಫೈಲ್‌’ ತನಿಖಾ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾಖಲೆಗಳನ್ನು ಸಲ್ಲಿಸದೇ ಕೇವಲ ಪತ್ರಿಕಾ ತುಣುಕುಗಳನ್ನಷ್ಟೇ ಸಲ್ಲಿಸಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು” ಎಂದು ವರದಿ ಉಲ್ಲೇಖಿಸಿದೆ.

“2018ರ ಚುನಾವಣೆ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರ ವಿರುದ್ಧ ವಿಫಲ ಸರ್ಕಾರ, ಜನ ವಿರೋಧಿ ಸರ್ಕಾರ, ಮೂರು ಭಾಗ್ಯ ಹೆಸರಿನಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ್ದ ರಾಜಕೀಯ ಜಾಹೀರಾತುಗಳು ಟಿ ವಿ ಗಳಲ್ಲಿ ಪ್ರಸಾರವಾಗಿತ್ತು. ಆದರೆ, ಈ ಆರೋಪಗಳನ್ನು ಸಾಬೀತುಪಡಿಸುವಂತಹ ಯಾವುದೇ ಸಮರ್ಥನೆ, ದಾಖಲೆ, ಸಾಕ್ಷಾಧಾರ ಮತ್ತು ಪುರಾವೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಮತ್ತು ಪ್ರಮಾಣೀಕೃತ ಸಮಿತಿಗೆ ಬಿಜೆಪಿ ಒದಗಿಸಿರಲಿಲ್ಲ. ಹೀಗಾಗಿ ರಾಜಕೀಯ ಆರೋಪಗಳನ್ನೊಳಗೊಂಡ ಜಾಹೀರಾತುಗಳ ಪ್ರಸಾರಕ್ಕೆ ಚುನಾವಣಾ ಆಯೋಗ ತಡೆ ಒಡ್ಡಿತ್ತು” ಎಂಬುದು ತಿಳಿದುಬಂದಿದೆ.

“ಒಂದು ವಾಚ್‌ನ ಕಥೆ, ಅನ್ನಭಾಗ್ಯ ಕನ್ನ ಭಾಗ್ಯ, ಕೆಪಿಸಿ ಕಲ್ಲಿದ್ದಲು ಟೆಂಡರ್‌ನಲ್ಲಿ ರೂಪಾಯಿ 400 ಕೋಟಿ ಗುಳುಂ, ಶೇ.10 ಕಮಿಷನ್ ವಾಚ್, ಇಂದಿರಾ ಕ್ಯಾಂಟೀನ್ ಕೋಟಿ ಕೋಟಿ ಲೂಟಿ, ಬಿಬಿಎಂಪಿ ಕಸ ವಿಲೇವಾರಿ ರೂಪಾಯಿ 400 ಕೋಟಿ ಗುಳುಂ, ಹ್ಯುಬ್ಲಾಟ್ ವಾಚ್: 40 ಲಕ್ಷ, ಸೋಲಾರ್‌ ಪವರ್‌ ಟೆಂಡರ್ ಕೆಪಿಸಿ ಕಲ್ಲಿದ್ದಲು ಟೆಂಡರ್, ಬಿಬಿಎಂಪಿ ಕಸ ವಿಲೇವಾರಿ ಟೆಂಡರ್ ರೂ 1,500 ಕೋಟಿ ಗುಳುಂ, ಗೂಂಡಾ ಸರ್ಕಾರ, ರೈತರನ್ನು ಬಲಿಕೊಟ್ಟ ಸರ್ಕಾರ, ನಗರಗಳನ್ನು ನರಕ ಮಾಡಿದ ಸರ್ಕಾರ, ದೇಶಭಕ್ತರ ಕೊಲೆಗಳನ್ನು ತಡೆಯದ ಸರ್ಕಾರ, ಸಮಾಜ ಒಡೆಯುವ ಸರ್ಕಾರ, ನಕಲಿ ಭಾಗ್ಯಗಳ ಭ್ರಷ್ಟ ಸರ್ಕಾರ, ಲೋಕಾಯುಕ್ತರಿಗೆ ರಕ್ಷಣೆ ಇಲ್ಲ” ಇತ್ಯಾದಿ ಆರೋಪಗಳನ್ನು ಒಳಗೊಂಡ ಜಾಹೀರಾತುಗಳನ್ನು ನೀಡಿದ್ದ ಬಿಜೆಪಿ, ಇದಕ್ಕೆ ಪುರಾವೆಗಳನ್ನೇ ಒದಗಿಸಿರಲಿಲ್ಲ.

ಬಿಜೆಪಿ ನೀಡಿದ್ದ ಈ ಜಾಹೀರಾತುಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಆಕ್ಷೇಪಣೆ ಎತ್ತಿತ್ತು. ಈ ಸಂಬಂಧ ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಕಳಿಸಿದ್ದ ನೋಟೀಸ್‌ಗೆ ಉತ್ತರಿಸಿದ್ದ ಬಿಜೆಪಿ, ಆರೋಪಗಳನ್ನು ಸಾಬೀತುಪಡಿಸುವಲ್ಲಿ ಸಮರ್ಪಕವಾದ ದಾಖಲೆಗಳನ್ನು ಒದಗಿಸಿರಲಿಲ್ಲ ಎಂಬ ಅಂಶ 2018ರ ಮೇ 5ರಂದು ಚುನಾವಣಾ ಆಯೋಗ ನಡೆಸಿದ್ದ ಸಭೆಯ ನಡವಳಿಯಿಂದ ತಿಳಿದು ಬಂದಿದೆ ಎಂದು ‘ದಿ ಫೈಲ್‌’ ವರದಿ ಮಾಡಿದೆ.

ಕಾಂಗ್ರೆಸ್‌ನಿಂದ ಡರ್ಟಿ ಪಾಲಿಟಿಕ್ಸ್‌: ಬೊಮ್ಮಾಯಿ ಆರೋಪ

“ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿನದ್ದು ಡರ್ಟಿ ಪಾಲಿಟಿಕ್ಸ್” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶನಿವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಯಾವುದಾದರೂ ವಿಚಾರವಿದ್ದರೆ, ನೇರವಾಗಿ ಮಾತಾಡಬೇಕು, ದಾಖಲೆ ನೀಡಬೇಕು ಹಾಗೂ ತನಿಖೆಯಾಗಬೇಕು. ಯಾವುದೇ ವಿಚಾರವಿಲ್ಲದೆ, ಪೂರ್ಣಪ್ರಮಾಣದ ತಯಾರಿ ಇಲ್ಲದೆ ಸದನಕ್ಕೆ ಬರುತ್ತಾರೆ. ಇದು ಅವರ ನೈತಿಕತೆಯ ಅಧ:ಪತನ ತೋರುತ್ತದೆ. ನೈತಿಕತೆ ಇಲ್ಲದೆ ಹೆಸರು ಕೆಡಿಸುವ ಕಾರ್ಯಕ್ರಮವಿದು” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ಜನಪರ ಕಾಳಜಿ ಇಲ್ಲದೆ ಡರ್ಟಿ ಪಾಲಿಟಿಕ್ಸ್ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಇದೆಲ್ಲಾ ಕರ್ನಾಟಕದಲ್ಲಿ ಸಾಧ್ಯವಿಲ್ಲ. ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳನ್ನು ಗುರಿಯಾಗಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, “ನಾನು ಅದರ ಭಾಗವಲ್ಲ. ಹಾಗಾಗಿ ಏನೋ ಹೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Paycm ಸರಿಯಿದೆ! ಬೊಮ್ಮಣ್ಣ ನಿಮ್ಮದೇ ಸರ್ಕಾರ ಅಧಿಕಾರದಲ್ಲಿ ಇದೆಯಲ್ಲ, ನೀವು ಕಂಡುಹಿಡಿದಿರುವ ಕಾಂಗ್ರೆಸ್ಸ್ ನವರ ಎಲ್ಲಾ ಭ್ರಷ್ಟಾಚಾರಗಳನ್ನು ತನಿಖೆಗೆ ಆದೇಶಿಸಿ ಎಲ್ಲಾ ಕಾಂಗ್ರೆಸ್ಸಿನ ಭ್ರಷ್ಟರನ್ನು ಜೈಲಿಗೆ ಹಾಕಿಸಿ. ಆಗ ಕರ್ನಾಟಕದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿದ ಕೀರ್ತಿ ತಮಗೆ ಬರುತ್ತದೆಯಲ್ಲ. ಹಾಗೆಯೇ ದೇಶದಲ್ಲಿ ಭ್ರಷ್ಟ ಕಾಂಗ್ರೆಸ್ ಮುಕ್ತವಾಗಿ. ಕೇವಲ 40% ಬಿಜೆಪಿ ಸರ್ಕಾರ ಮಾತ್ರ ಉಳಿಸಿಕೊಳ್ಳಬಹುದು! ಮುಂದಿನ ಚುನಾವಣೆಗಳಲ್ಲಿ ಜನರ ಬಳಿ ಹೋಗಿ ನೀವೇ ಹೇಳಿ ನಾವು ಕೇವಲ 40% ಮಾತ್ರ ಕಮಿಷನ್ ತೆಗೊಳ್ಳುತ್ತೀವಿ ಆದ್ರೆ ಕಾಂಗ್ರೇಸ್ ನವರು 100% ತೆಗೊಂಡು ಎಲ್ಲವನ್ನೂ ಗುಳುಂ ಮಾಡ್ತಿದ್ರು ಅದಕ್ಕೆ ಈಗ ಅವರನ್ನೆಲ್ಲ ಜೈಲಿಗೆ ಕಳುಹಿಸಿದ್ದೇವೆ. ನಮ್ದು ಕೇವಲ 40% ಸರ್ಕಾರ ಅಂತ ಎದೆ ತಟ್ಟಿ ಹೇಳಿ. ಮುಂದೆ ನೀವೆಲ್ಲಾ ನಮ್ಮ ಪಕ್ಷಕ್ಕೆ ಓಟ್ ಹಾಕಬೇಕು ಇಲ್ದಿದ್ರೆ ನಿಮ್ಗೂ ಜೈಲೇ ಗತಿ ಅಂತ ಗಟ್ಟಿಯಾಗಿ ಎದೆತಟ್ಟಿ ಧಮ್ ಇದ್ರೆ ಹೇಳಿ ಬೊಮ್ಮಣ್ಣ!

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...