Homeಅಂತರಾಷ್ಟ್ರೀಯಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನರೇಂದ್ರ ಮೋದಿ ನೇತೃತ್ವದ ಪಕ್ಷದ ಸದಸ್ಯರು ಮಾಡುವ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡಿದರೆ ಮುಂದಿನ ದಿನಗಳಲ್ಲಿ ಸಂಸ್ಥೆಯ ವ್ಯವಹಾರಕ್ಕೆ ಸಮಸ್ಯೆಯಾಗಬಹುದು ಎಂದು ಸಿಬ್ಬಂದಿಗೆ ಸೂಚಿಸಿದ್ದರು ಎಂದು ಹೆಸರು ಹೇಳದ ಸಿಬ್ಬಂದಿಯೋರ್ವರು ಹೇಳಿದ್ದಾರೆ.

- Advertisement -
- Advertisement -

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ. ಅವರು ಪ್ರತಿನಿತ್ಯ ಸುಳ್ಳು ಸುದ್ದಿಗಳು ಮತ್ತು ದ್ವೇಷಭಾಷಣವನ್ನು ಹರಡುವ ಮೂಲಕ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಕೊನೆಗೂ ಅಮೆರಿಕ ಮೂಲದ ಪತ್ರಿಕೆಯೊಂದು ಫೇಸ್‌ಬುಕ್‌ ಬಗೆಗಿನ ಸತ್ಯವನ್ನು ಹೊರತೆಗೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ತಮ್ಮ ಸಂಸ್ಥೆಯ ನಿಯಮಗಳಿಗೆ ವಿರುದ್ಧವಿದ್ದರೂ ಸಹ ಬಿಜೆಪಿ ಮತ್ತು ಹಿಂದುತ್ವ ನಾಯಕರ ದ್ವೇಷದ ಭಾಷಣಗಳನ್ನು ತೆಗೆದುಹಾಕಲು ಫೇಸ್‌ಬುಕ್ ನಿರಾಕರಿಸಿದೆ ಎಂದು ಫೇಸ್‌ಬುಕ್‌ ಭಾರತದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಅಮೇರಿಕದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಸಾಮಾಜಿಕ ಮಾಧ್ಯಮದ ಕಾರ್ಯನಿರ್ವಾಹಕರೊಬ್ಬರು ಹೇಳಿದ್ದಾರೆ ಎಂದು ಜರ್ನಲ್ ವರದಿ ಮಾಡಿದೆ.

 

 

 

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಆಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ.

ನರೇಂದ್ರ ಮೋದಿ ನೇತೃತ್ವದ ಪಕ್ಷದ ಸದಸ್ಯರು ಮಾಡುವ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡಿದರೆ ಮುಂದಿನ ದಿನಗಳಲ್ಲಿ ಸಂಸ್ಥೆಯ ವ್ಯವಹಾರಕ್ಕೆ ಸಮಸ್ಯೆಯಾಗಬಹುದು ಎಂದು ಸಿಬ್ಬಂದಿಗೆ ಸೂಚಿಸಿದ್ದರು ಎಂದು ಹೆಸರು ಹೇಳದ ಸಿಬ್ಬಂದಿಯೋರ್ವರು ಹೇಳಿದ್ದಾರೆ.

ಮುಸ್ಲೀಮರ ವಿರುದ್ಧದ ಹಲವಾರು ಸುಳ್ಳು ಸುದ್ಧಿ ಹರಡುವ ಪೋಸ್ಟ್ ಗಳನ್ನು ಬಿಜೆಪಿ ನಾಯಕರು ಹಾಕುತ್ತಿದ್ದರೂ ಸಹ ದಾಸ್ ಮತ್ತವರ ತಂಡ ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಚುನಾವಣೆಗೆ ಸಂಬಂಧಿಸಿದ ವಿಷಯಗಳಲ್ಲಿ ದಾಸ್ ಮತ್ತವರ ತಂಡ ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಂಡಿದ್ದರು ಎಂದು ಫೇಸ್‌ಬುಕ್‌ನ ಸಿಬ್ಬಂಧಿಯೊಬ್ಬರು ಮಾಹಿತಿ ನೀಡಿರುವುದಾಗಿ ಪತ್ರಿಕೆ ಹೇಳಿದೆ.


ಇದನ್ನೂ ಓದಿ: ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...