HomeಅಂಕಣಗಳುKarnataka against SIR"ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ":  ಮೈಸೂರಿನಲ್ಲಿ ಜನಾಕ್ರೋಶ

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

- Advertisement -
- Advertisement -

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು.

ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್ ವಿರೋಧಿ ಜಾಗೃತ ಜಾಥಾದ ಭಾಗವಾಗಿ ಮಾರ್ಗ 5ರ ತಂಡದಿಂದ ಹುಣುಸೂರು ತಾಲ್ಲೂಕಿನ “ಕೊಟ್ಟಿಗೆ ಕಾವಲು” ಹಾಡಿಯಲ್ಲಿ ಎಸ್ಐಆರ್ ಕುರಿತು ಮಾಹಿತಿ ನೀಡಲಾಯಿತು.

ಈ ವೇಳೆ ಡೀಡ್ ಸಂಸ್ಥೆಯ ಶ್ರೀಕಾಂತ್, ಜಿವಿಕೆ ಉಮೇಶ್, ಶಿವಕುಮಾರ್, ಜನಶಕ್ತಿಯ ಹೇಮಂತ್ ಕುಮಾರ್, ಕೆವಿಎಸ್ ನ ಯಮನೂರಪ್ಪ, ಆದಿವಾಸಿ ಹೋರಾಟಗಾರ್ತಿ ಸವಿತಾ ಪಿ.ಬಿ. ಇತರರು ಭಾಗಿಯಾಗಿದ್ದರು. 

ಬೆಳಗ್ಗೆ 10:30ರ ಸುಮಾರಿಗೆ ಹುಣುಸೂರಿನ ‘ಸಂವಿಧಾನ ಸರ್ಕಲ್ ತಲುಪಿದ ಜಾಥಾ’ಗೆ ದಲಿತ ಸಂಘಟನೆಗಳ ಮುಖಂಡರು, ರೈತ ಸಂಘಟನೆಯ ಮುಖ್ಯತ್ಥರು, ಅಲ್ಪಸಂಖ್ಯಾತ ಸಮುದಾಯದ ನಾಯಕರು ಸೇರಿದಂತೆ ಹಲವು ಹೋರಾಟಗಾರರು ಹೂ ನೀಡುವ ಮೂಲಕ ಜಾಥಾ ತಂಡವನ್ನು ಸ್ವಾಗತಿಸಿದರು. 

ಈ ವೇಳೆ ಕೇಂದ್ರದ ಕುತಂತ್ರವಾದ ಎಸ್ಐಆರ್ ಕುರಿತು ಮಾತನಾಡಿದ ದಸಂಸ ಹಿರಿಯ ಮುಖಂಡ ಹರಿಹರ ಆನಂದಸ್ವಾಮಿ ಅವರು “ಸ್ವಾತಂತ್ರ್ಯ ನಂತರದ ಭಾರತ ಸಂವಿಧಾನದ ಕಾರಣಕ್ಕೆ ಜಗತ್ತಿನಲ್ಲಿ ಒಂದು ಮುಂದುವರೆಯುತ್ತಿರುವ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಶಿಕ್ಷಣ, ಸಾಮಾಜಿಕ ನೀತಿಗಳಿಂದ ಇತರೆ ದೇಶಗಳಿಗಿಂತ ಮುಂದುವರೆಯುತ್ತಿದೆ. ಆದರೆ ಇಲ್ಲಿ ಶತ-ಶತಮಾನಗಳಿಂದ ಜಾತಿ ವ್ಯವಸ್ಥೆಯಿಂದ ಎಲ್ಲಾ ಜನರನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿದ್ದ ಮನುವಾದಿಗಳಿಗೆ ಭಾರತ ಮುಂದುವರೆಯುತ್ತಿರುವುದು, ದಲಿತರು, ಅಲ್ಪಸಂಖ್ಯಾತರು, ಆದಿವಾಸಿಗಳು ಶಿಕ್ಷಣ ಕಲಿತು ಸ್ವಾಭಿಮಾನದಿಂದ ಬದುಕುತ್ತಿರುವುದು ಸಹಿಸಲು ಆಗುತ್ತಿಲ್ಲಾ. ಅವರನ್ನು ಮತ್ತೆ ತಮ್ಮ ಅಡಿಯಲ್ಲಿ ಸಿಲುಕಿಸಲು ಎಸ್ಐಆರ್ ಅನ್ನು ಜಾರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ರೈತ ಸಂಘದ ಮುಖಂಡರು, ಅಲ್ಪಸಂಖ್ಯಾತ ಸಮುದಾಯಗಳ ಮುಖಂಡರು ಯಾವುದೇ ಕಾರಣಕ್ಕು ಕರ್ನಾಟಕದಲ್ಲಿ ಒಬ್ಬರ ಮತವನ್ನು ಕಸಿದುಕೊಳ್ಳಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. 

ಆನಂತರ ಸಂವಿಧಾನ ಸರ್ಕಲ್ ನಿಂದ ಕಲ್ಪತರು ಸರ್ಕಲ್ ವರೆಗೆ ಜಾಥಾದ ಮೆರವಣಿಗೆ ಮೂಲಕ ಎಸ್ಐಆರ್ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಲ್ಪತರು ಸರ್ಕಲ್ ನಲ್ಲಿ ಮಾನವ ಸರಪಳಿ ಮೂಲಕ ಎಸ್ಐಆರ್ ಅನ್ನೋ ವಿರೋಧಿಸುವ ಘೋಷಣೆಗಳು ಮೊಳಗಿದವು.

ಅಲ್ಲಿಂದ ಹೆಚ್.ಡಿ.ಕೋಟೆ ತಲುಪಿದ ಜಾಥಾ ತಂಡದೊಂಡಿಗೆ ಅಲ್ಲಿನ ಹೋರಾಟಗಾರರು, ಜನಸಾಮಾನ್ಯರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಂವಿಧಾನ ವಿರೋಧಿ ಎಸ್ಐಆರ್ ಧಿಕ್ಕರಿಸುವುದಾಗಿ ಘೋಷಣೆ ಕೂಗಿದರು. 

11:30ರ ಸಮಯಕ್ಕೆ ಹೆಚ್‌.ಡಿ‌‌. ಕೋಟೆಯ ಅಂಬೇಡ್ಕರ್ ಭವನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಂಕೇತಿಕವಾಗಿ ಎಲ್ಲಾ ದಲಿತ ಸಮುದಾಯ, ಅಲ್ಪಸಂಖ್ಯಾತ ಸಮುದಾಯದ ಮುಖಂಡರುಗಳಾದ ಪ್ರಗತಿಪರ ಮುಖಂಡರಾದ ಅಕ್ಬರ್ ಪಾಷ, ಸರ್ವಧರ್ಮ ಸಮಾಜ ವೇದಿಕೆ ಅಧ್ಯಕ್ಷ ಇಬ್ರಾಹಿಂ, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಹೈರಿಗೆ ಶಿವರಾಜು, ರೈತ ಸಂಘದ ಜಿಲ್ಲಾಧ್ಯಕ್ಷರಾದ ಪಳನಿಸ್ವಾಮಿ, ಒಕ್ಕೂಟದ ಮಾಜಿ ರಾಜ್ಯಾಧ್ಯಕ್ಷೆ ಮಲ್ಲಿಗಮ್ಮ ಸೇರಿದಂತೆ ಹಲವು ಮುಖಂಡರು ವೇದಿಕೆ ಮೇಲೆ ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ಎಸ್ ಐಆರ್ ಮಾಡುತ್ತಿರುವ ಅನಾಹುತಗಳ ಕುರಿತ ಪಿಪಿಟಿ ಪ್ರಸಂಟೇಷನ್ ತೋರಿಸಲಾಯಿತು.

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತಸಂಘದ ರಫೀಕುಲ್ಲಾ ಅವರು, “ಎಸ್ಐಆರ್ ನಿಂದಾಗಿ ತೊಂದರೆಗೆ ಒಳಗಾಗುತ್ತಿರುವವರು ನಮ್ಮ ತಳಸಮುದಾಯಗಳು, ಅಲ್ಪಸಂಖ್ಯಾತರು, ಕೂಲಿ ಕಾರ್ಮಿಕರೇ ಆಗಿದ್ದಾರೆ. ಹಾಗಾಗಿ ನಾವು ನಮ್ಮ ರೈತ ಸಂಘಟನೆಗಳ ಮೂಲಕ ಯುವ ತಂಡವನ್ನು ಕಟ್ಟಬೇಕು, ಹನ್ನೊಂದು-ಹನ್ನೆರಡು ಯುವಕರ ತಂಡ ಹಳ್ಳಿ ಹಳ್ಳಿಗೆ ಹೋಗಿ ಕೂಲಿ ಕಾರ್ಮಿಕರಿಗೆ, ತಳಸಮುದಾಯಗಳಿಗೆ, ಮತ್ತು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಜನರಿಗೆ ಆ ಪ್ರಕ್ರಿಯೆಯನ್ನ ಮಾಡಿಕೊಡಬೇಕು, ಸಹಾಯ ಮಾಡಬೇಕು” ಎಂದು ಹೇಳಿದರು. 

ಆನಂತರ ಮೈಸೂರಿನ ಟೌನ್ ಹಾಲ್ ಬಳಿ ಎಸ್ಐಆರ್ ವಿರೋಧಿಸಿ ಮೈಸೂರಿನ ಪ್ರಜ್ಞಾವಂತರು, ಹೋರಾಟಗಾರರು ಜನಸಾಮಾನ್ಯರು ಹೋರಾಟ ನಡೆಸಿದರು. ಈ ಹೋರಾಟದಲ್ಲಿ ನಾಡಿನ ಖ್ಯಾತ ಜನಪದ ಕಲಾವಿದ, ಹೋರಾಟಗಾರ ಜನಾರ್ಧನ ಜೆನ್ನಿ ಅವರು ಹೋರಾಟದ ಹಾಡುಗಳ ಮೂಲಕ ಜನಜಾಗೃತಿ ಮೂಡಿಸಿದರು. ಈ ವೇಳೆ ಎಸ್ಐಆರ್ ಮೂಲಕ ಮನುವಾದವನ್ನು ಜಾರಿಗೆ ತರಲು ಹೊಂಚುಹಾಕುತ್ತಿರುವ ಬಿಜೆಪಿಗೆ ಯಾವುದೇ ಕಾರಣಕ್ಕೆ ಅದು ಗೆಲುವು ಸಾಧಿಸಲು ಬಿಡುವುದಿಲ್ಲ ಎಂಬ ಎಚ್ಚರಿಕೆ ನೀಡಿದರು. 

ಆನಂತರ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಜಾಥಾದ ಮೂಲಕ ಎಸ್ಐಆರ್ ಕುರಿತು ಜಾಗೃತಿ ಮೂಡಿಸಲಾಯಿತು. 

ಸಂಜೆ 6-30ರ ಸುಮಾರಿಗೆ ಮೈಸೂರಿನ ಮಿಲಾದ್ ಬಾಗ್ ಉದ್ಯಾನವನದ ಬಳಿ  ಎಸ್ಐಆರ್ ವಿರೋಧಿ‌ ಜಾಥಾದ ಭಾಗವಾಗಿ ಹೋರಾಟ ಮಾಡಲಾಯಿತು. 

ಎಸ್ಐಆರ್ ಮೂಲಕ ದೇಶದ ಜನತೆಗೆ ದ್ರೋಹ ಬಗೆಯುತ್ತಿರುವ ಚುನಾವಣಾ ಆಯೋಗಕ್ಕೆ ಧಿಕ್ಕಾರ ಕೂಗುವ ಮೂಲಕ ಎಸ್ಐಆರ್ ಅನ್ನು ವಿರೋಧಿಸಿದರು.

ನಾವು ಇಲ್ಲೇ ಹುಟ್ಟಿ ಇಲ್ಲೇ ಸಾಯುವವರು ನಮ್ಮ ಮತವನ್ನು ಕದಿಯುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೋರಾಟಗಾರರು ಹೇಳಿದರು. 

ಬಿಜೆಪಿ, ಚುನಾವಣಾ ಆಯೋಗ ಸೇರಿ ಈ ದೇಶದ ಪ್ರಜೆಗಳ ಮೇಲೆ ದಾಳಿ ಮಾಡುವುದನ್ನು ಮುಂದುವರೆಸಿದರೆ ನಾವು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ಸಂಜೆ 7ಗಂಟೆ ಸುಮಾರಿಗೆ ಮೈಸೂರಿನ ‘ಬುದ್ಧ ವಿಹಾರ’ ಮುಂಭಾಗದಲ್ಲಿ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾದ ಭಾಗವಾಗಿ ಸಂವಾದ ನಡೆಯಿತು. 

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಅವರು ನೂರಕ್ಕೆ ತೊಂಬತ್ತೆಂಟು ಭಾಗದಷ್ಟು ಜನರಿಗೆ ಎಸ್ಐಆರ್ ಬಗ್ಗೆ ತಿಳಿದಿಲ್ಲ. 

ನಮ್ಮ ಜನರು ಜೀವನೋಪಾಯಕ್ಕೆ ಪರದಾಡುತ್ತಿದ್ದಾರೆ. ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ‌. ನಾವು ನೀಡುತ್ತಿರುವ ಈ ಜಾಗೃತಿ ನೀಡೋಕೆ ದೊಡ್ಡ ತಂಡ ಬೇಕು. 

ನನ್ನಂಥವರಿಗೆ ಸಹ ಈ ವಿಚಾರದ ಬಗ್ಗೆ ಈವರೆಗೆ ತಿಳಿದಿರುವುದು ಕೇವಲ 8% ಮಾತ್ರ. ನನ್ನ ತಲೆಗೆ ಹೋಗದಿರುವುದು, ನನಗೆ ಅರ್ಥವಾಗದಿರುವುದು ವಿಚಾರವೇ ಹೆಚ್ಚಿದೆ. ಇನ್ನೂ ಸಾಮಾನ್ಯ ಜನರಿಗೆ ಇದು ಅರ್ಥವಾಗುವುದು ಸುಲಭವಲ್ಲ. 

ಇವತ್ತಿನ ಅಧಿಕಾರಿ ವರ್ಗ, ಯಾರ ಮಾತನ್ನು ಯಾರು ಕೇಳುತ್ತಿಲ್ಲ, ಈಗ ವಾಸ ಧೃಡೀಕರಣ ಪತ್ರ ಕೊಡಿ ಅಂದರೆ ಅವರು ಕೊಡುವುದಿಲ್ಲ, ಅವರು ಯಾರು ಇರಬೇಕು ಯಾರು ಇರಬಾರದು ಅಂತಾ ನಿರ್ಧರಿಸ್ತಾರೆ. 

ಶಿಕ್ಷಣ ಪಡೆದವರ ಸಂಖ್ಯೆ ಹೆಚ್ಚಿದೆ ಆದರೆ ಈ ಎಸ್ಐಆರ್ ಬಗ್ಗೆ ಯಾರಿಗು ಅಷ್ಟು ಮಾಹಿತಿ ಇಲ್ಲಾ, ಒಂದು ಐದು ಕಮ್ಯುಮಿಟಿಗಳಿಗೆ, ಕೆಲವು ಅಲ್ಪಸಂಖ್ಯಾತ ಧರ್ಮಗಳಿಗೆ ಹೆಚ್ಚು ಸಮಸ್ಯೆ ಆಗುತ್ತಿದೆ. ಅದರಲ್ಲಿ ನಮಗೂ ಸಮಸ್ಯೆ ಆಗುತ್ತಿದೆ.

ಇವತ್ತು ಜಾಗೃತಿ ಮಾಡುತ್ತಿರುವ ಎಸ್ಐಆರ್ ವಿರುದ್ಧ ಹೋರಾಟ ಮಾಡುತ್ತೇವೆ ಅಂತ ಹೇಳುತ್ತಿರುವ ಹಲವು ಹೋರಾಟಗಾರರ ಹೆಸರೇ ಹೊಸ ಪಟ್ಟಿಯಲ್ಲಿ ಇಲ್ಲ ಎಂಬ ಮಾಹಿತಿ ಸಿಕ್ಕಿದೆ. 

ನನಗೆ ಈ ಬಗ್ಗೆ ಇಷ್ಟು ಮಾಹಿತಿ ಮೊದಲೇ ಸಿಕ್ಕಿದ್ದರೆ. ಈ ಹೋರಾಟಕ್ಕಾಗಿ ಇಂದು ನೂರಾರು ಜನರನ್ನ ಸೇರಿಸುತ್ತಿದ್ದೆ, ಅಶೋಕ ಸರ್ಕಲ್ಲಿನಲ್ಲೆ ಮೈಕ್ ಕಟ್ಟಿಸಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿಸುತ್ತಿದ್ದೆ ಎಂದು ಹೇಳಿದರು. 

ಅಲ್ಲದೆ ಬಹುಜನರ ಅಸ್ಥಿತ್ವ ಉಳಿಸೋಕೆ ನಾವು ಇದ್ದೀವಿ. ಈ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾದ ಜೊತೆಗೂ ನಾವು ನಿಲ್ಲುತ್ತೇವೆ. ನಮ್ಮ ಶಕ್ತಿ ಮೀರಿ ಈ ಹೋರಾಟದ ಗೆಲುವಿಗಾಗಿ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಜಾಥಾ ತಂಡಕ್ಕೆ ಭರವಸೆ ನೀಡಿದರು. 

ಸಂವಾದದಲ್ಲಿ ನೂರ್ ಖಾನ್, ಪ್ರೊ.ಕಾಳಚೆನ್ನೇಗೌಡ, ಹಿರಿಯ ಪತ್ರಕರ್ತರಾದ ಜಿ.ಬಿ. ಬಸವರಾಜು, ಪಿಯುಸಿಎಲ್ ಅಧ್ಯಕ್ಷರಾದ ಕಮಲ್ ಗೋಪಿನಾಥ್, ಜನಾರ್ಧನ ಜೆನ್ನಿ, ಅಪ್ಪಗೆರೆ ತಿಮ್ಮರಾಜು, ಡಾ. ಪೂರ್ಣಾನಂದ, ದೇವಾನಂದ ವರಪ್ರಸಾದ್, ವಿಎಸ್ ಶ್ರೀಧರ್, ಸೇರಿದಂತೆ ಹಲವು ಹಿರಿಯ ಹೋರಾಟಗಾರರು, ಪ್ರಜ್ಞಾವಂತರು ಭಾಗಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...