HomeಅಂಕಣಗಳುKarnataka against SIR"ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ":  ಮೈಸೂರಿನಲ್ಲಿ ಜನಾಕ್ರೋಶ

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

- Advertisement -
- Advertisement -

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು.

ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್ ವಿರೋಧಿ ಜಾಗೃತ ಜಾಥಾದ ಭಾಗವಾಗಿ ಮಾರ್ಗ 5ರ ತಂಡದಿಂದ ಹುಣುಸೂರು ತಾಲ್ಲೂಕಿನ “ಕೊಟ್ಟಿಗೆ ಕಾವಲು” ಹಾಡಿಯಲ್ಲಿ ಎಸ್ಐಆರ್ ಕುರಿತು ಮಾಹಿತಿ ನೀಡಲಾಯಿತು.

ಈ ವೇಳೆ ಡೀಡ್ ಸಂಸ್ಥೆಯ ಶ್ರೀಕಾಂತ್, ಜಿವಿಕೆ ಉಮೇಶ್, ಶಿವಕುಮಾರ್, ಜನಶಕ್ತಿಯ ಹೇಮಂತ್ ಕುಮಾರ್, ಕೆವಿಎಸ್ ನ ಯಮನೂರಪ್ಪ, ಆದಿವಾಸಿ ಹೋರಾಟಗಾರ್ತಿ ಸವಿತಾ ಪಿ.ಬಿ. ಇತರರು ಭಾಗಿಯಾಗಿದ್ದರು. 

ಬೆಳಗ್ಗೆ 10:30ರ ಸುಮಾರಿಗೆ ಹುಣುಸೂರಿನ ‘ಸಂವಿಧಾನ ಸರ್ಕಲ್ ತಲುಪಿದ ಜಾಥಾ’ಗೆ ದಲಿತ ಸಂಘಟನೆಗಳ ಮುಖಂಡರು, ರೈತ ಸಂಘಟನೆಯ ಮುಖ್ಯತ್ಥರು, ಅಲ್ಪಸಂಖ್ಯಾತ ಸಮುದಾಯದ ನಾಯಕರು ಸೇರಿದಂತೆ ಹಲವು ಹೋರಾಟಗಾರರು ಹೂ ನೀಡುವ ಮೂಲಕ ಜಾಥಾ ತಂಡವನ್ನು ಸ್ವಾಗತಿಸಿದರು. 

ಈ ವೇಳೆ ಕೇಂದ್ರದ ಕುತಂತ್ರವಾದ ಎಸ್ಐಆರ್ ಕುರಿತು ಮಾತನಾಡಿದ ದಸಂಸ ಹಿರಿಯ ಮುಖಂಡ ಹರಿಹರ ಆನಂದಸ್ವಾಮಿ ಅವರು “ಸ್ವಾತಂತ್ರ್ಯ ನಂತರದ ಭಾರತ ಸಂವಿಧಾನದ ಕಾರಣಕ್ಕೆ ಜಗತ್ತಿನಲ್ಲಿ ಒಂದು ಮುಂದುವರೆಯುತ್ತಿರುವ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಶಿಕ್ಷಣ, ಸಾಮಾಜಿಕ ನೀತಿಗಳಿಂದ ಇತರೆ ದೇಶಗಳಿಗಿಂತ ಮುಂದುವರೆಯುತ್ತಿದೆ. ಆದರೆ ಇಲ್ಲಿ ಶತ-ಶತಮಾನಗಳಿಂದ ಜಾತಿ ವ್ಯವಸ್ಥೆಯಿಂದ ಎಲ್ಲಾ ಜನರನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿದ್ದ ಮನುವಾದಿಗಳಿಗೆ ಭಾರತ ಮುಂದುವರೆಯುತ್ತಿರುವುದು, ದಲಿತರು, ಅಲ್ಪಸಂಖ್ಯಾತರು, ಆದಿವಾಸಿಗಳು ಶಿಕ್ಷಣ ಕಲಿತು ಸ್ವಾಭಿಮಾನದಿಂದ ಬದುಕುತ್ತಿರುವುದು ಸಹಿಸಲು ಆಗುತ್ತಿಲ್ಲಾ. ಅವರನ್ನು ಮತ್ತೆ ತಮ್ಮ ಅಡಿಯಲ್ಲಿ ಸಿಲುಕಿಸಲು ಎಸ್ಐಆರ್ ಅನ್ನು ಜಾರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ರೈತ ಸಂಘದ ಮುಖಂಡರು, ಅಲ್ಪಸಂಖ್ಯಾತ ಸಮುದಾಯಗಳ ಮುಖಂಡರು ಯಾವುದೇ ಕಾರಣಕ್ಕು ಕರ್ನಾಟಕದಲ್ಲಿ ಒಬ್ಬರ ಮತವನ್ನು ಕಸಿದುಕೊಳ್ಳಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. 

ಆನಂತರ ಸಂವಿಧಾನ ಸರ್ಕಲ್ ನಿಂದ ಕಲ್ಪತರು ಸರ್ಕಲ್ ವರೆಗೆ ಜಾಥಾದ ಮೆರವಣಿಗೆ ಮೂಲಕ ಎಸ್ಐಆರ್ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಲ್ಪತರು ಸರ್ಕಲ್ ನಲ್ಲಿ ಮಾನವ ಸರಪಳಿ ಮೂಲಕ ಎಸ್ಐಆರ್ ಅನ್ನೋ ವಿರೋಧಿಸುವ ಘೋಷಣೆಗಳು ಮೊಳಗಿದವು.

ಅಲ್ಲಿಂದ ಹೆಚ್.ಡಿ.ಕೋಟೆ ತಲುಪಿದ ಜಾಥಾ ತಂಡದೊಂಡಿಗೆ ಅಲ್ಲಿನ ಹೋರಾಟಗಾರರು, ಜನಸಾಮಾನ್ಯರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಂವಿಧಾನ ವಿರೋಧಿ ಎಸ್ಐಆರ್ ಧಿಕ್ಕರಿಸುವುದಾಗಿ ಘೋಷಣೆ ಕೂಗಿದರು. 

11:30ರ ಸಮಯಕ್ಕೆ ಹೆಚ್‌.ಡಿ‌‌. ಕೋಟೆಯ ಅಂಬೇಡ್ಕರ್ ಭವನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಂಕೇತಿಕವಾಗಿ ಎಲ್ಲಾ ದಲಿತ ಸಮುದಾಯ, ಅಲ್ಪಸಂಖ್ಯಾತ ಸಮುದಾಯದ ಮುಖಂಡರುಗಳಾದ ಪ್ರಗತಿಪರ ಮುಖಂಡರಾದ ಅಕ್ಬರ್ ಪಾಷ, ಸರ್ವಧರ್ಮ ಸಮಾಜ ವೇದಿಕೆ ಅಧ್ಯಕ್ಷ ಇಬ್ರಾಹಿಂ, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಹೈರಿಗೆ ಶಿವರಾಜು, ರೈತ ಸಂಘದ ಜಿಲ್ಲಾಧ್ಯಕ್ಷರಾದ ಪಳನಿಸ್ವಾಮಿ, ಒಕ್ಕೂಟದ ಮಾಜಿ ರಾಜ್ಯಾಧ್ಯಕ್ಷೆ ಮಲ್ಲಿಗಮ್ಮ ಸೇರಿದಂತೆ ಹಲವು ಮುಖಂಡರು ವೇದಿಕೆ ಮೇಲೆ ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ಎಸ್ ಐಆರ್ ಮಾಡುತ್ತಿರುವ ಅನಾಹುತಗಳ ಕುರಿತ ಪಿಪಿಟಿ ಪ್ರಸಂಟೇಷನ್ ತೋರಿಸಲಾಯಿತು.

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತಸಂಘದ ರಫೀಕುಲ್ಲಾ ಅವರು, “ಎಸ್ಐಆರ್ ನಿಂದಾಗಿ ತೊಂದರೆಗೆ ಒಳಗಾಗುತ್ತಿರುವವರು ನಮ್ಮ ತಳಸಮುದಾಯಗಳು, ಅಲ್ಪಸಂಖ್ಯಾತರು, ಕೂಲಿ ಕಾರ್ಮಿಕರೇ ಆಗಿದ್ದಾರೆ. ಹಾಗಾಗಿ ನಾವು ನಮ್ಮ ರೈತ ಸಂಘಟನೆಗಳ ಮೂಲಕ ಯುವ ತಂಡವನ್ನು ಕಟ್ಟಬೇಕು, ಹನ್ನೊಂದು-ಹನ್ನೆರಡು ಯುವಕರ ತಂಡ ಹಳ್ಳಿ ಹಳ್ಳಿಗೆ ಹೋಗಿ ಕೂಲಿ ಕಾರ್ಮಿಕರಿಗೆ, ತಳಸಮುದಾಯಗಳಿಗೆ, ಮತ್ತು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಜನರಿಗೆ ಆ ಪ್ರಕ್ರಿಯೆಯನ್ನ ಮಾಡಿಕೊಡಬೇಕು, ಸಹಾಯ ಮಾಡಬೇಕು” ಎಂದು ಹೇಳಿದರು. 

ಆನಂತರ ಮೈಸೂರಿನ ಟೌನ್ ಹಾಲ್ ಬಳಿ ಎಸ್ಐಆರ್ ವಿರೋಧಿಸಿ ಮೈಸೂರಿನ ಪ್ರಜ್ಞಾವಂತರು, ಹೋರಾಟಗಾರರು ಜನಸಾಮಾನ್ಯರು ಹೋರಾಟ ನಡೆಸಿದರು. ಈ ಹೋರಾಟದಲ್ಲಿ ನಾಡಿನ ಖ್ಯಾತ ಜನಪದ ಕಲಾವಿದ, ಹೋರಾಟಗಾರ ಜನಾರ್ಧನ ಜೆನ್ನಿ ಅವರು ಹೋರಾಟದ ಹಾಡುಗಳ ಮೂಲಕ ಜನಜಾಗೃತಿ ಮೂಡಿಸಿದರು. ಈ ವೇಳೆ ಎಸ್ಐಆರ್ ಮೂಲಕ ಮನುವಾದವನ್ನು ಜಾರಿಗೆ ತರಲು ಹೊಂಚುಹಾಕುತ್ತಿರುವ ಬಿಜೆಪಿಗೆ ಯಾವುದೇ ಕಾರಣಕ್ಕೆ ಅದು ಗೆಲುವು ಸಾಧಿಸಲು ಬಿಡುವುದಿಲ್ಲ ಎಂಬ ಎಚ್ಚರಿಕೆ ನೀಡಿದರು. 

ಆನಂತರ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಜಾಥಾದ ಮೂಲಕ ಎಸ್ಐಆರ್ ಕುರಿತು ಜಾಗೃತಿ ಮೂಡಿಸಲಾಯಿತು. 

ಸಂಜೆ 6-30ರ ಸುಮಾರಿಗೆ ಮೈಸೂರಿನ ಮಿಲಾದ್ ಬಾಗ್ ಉದ್ಯಾನವನದ ಬಳಿ  ಎಸ್ಐಆರ್ ವಿರೋಧಿ‌ ಜಾಥಾದ ಭಾಗವಾಗಿ ಹೋರಾಟ ಮಾಡಲಾಯಿತು. 

ಎಸ್ಐಆರ್ ಮೂಲಕ ದೇಶದ ಜನತೆಗೆ ದ್ರೋಹ ಬಗೆಯುತ್ತಿರುವ ಚುನಾವಣಾ ಆಯೋಗಕ್ಕೆ ಧಿಕ್ಕಾರ ಕೂಗುವ ಮೂಲಕ ಎಸ್ಐಆರ್ ಅನ್ನು ವಿರೋಧಿಸಿದರು.

ನಾವು ಇಲ್ಲೇ ಹುಟ್ಟಿ ಇಲ್ಲೇ ಸಾಯುವವರು ನಮ್ಮ ಮತವನ್ನು ಕದಿಯುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೋರಾಟಗಾರರು ಹೇಳಿದರು. 

ಬಿಜೆಪಿ, ಚುನಾವಣಾ ಆಯೋಗ ಸೇರಿ ಈ ದೇಶದ ಪ್ರಜೆಗಳ ಮೇಲೆ ದಾಳಿ ಮಾಡುವುದನ್ನು ಮುಂದುವರೆಸಿದರೆ ನಾವು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ಸಂಜೆ 7ಗಂಟೆ ಸುಮಾರಿಗೆ ಮೈಸೂರಿನ ‘ಬುದ್ಧ ವಿಹಾರ’ ಮುಂಭಾಗದಲ್ಲಿ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾದ ಭಾಗವಾಗಿ ಸಂವಾದ ನಡೆಯಿತು. 

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಅವರು ನೂರಕ್ಕೆ ತೊಂಬತ್ತೆಂಟು ಭಾಗದಷ್ಟು ಜನರಿಗೆ ಎಸ್ಐಆರ್ ಬಗ್ಗೆ ತಿಳಿದಿಲ್ಲ. 

ನಮ್ಮ ಜನರು ಜೀವನೋಪಾಯಕ್ಕೆ ಪರದಾಡುತ್ತಿದ್ದಾರೆ. ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ‌. ನಾವು ನೀಡುತ್ತಿರುವ ಈ ಜಾಗೃತಿ ನೀಡೋಕೆ ದೊಡ್ಡ ತಂಡ ಬೇಕು. 

ನನ್ನಂಥವರಿಗೆ ಸಹ ಈ ವಿಚಾರದ ಬಗ್ಗೆ ಈವರೆಗೆ ತಿಳಿದಿರುವುದು ಕೇವಲ 8% ಮಾತ್ರ. ನನ್ನ ತಲೆಗೆ ಹೋಗದಿರುವುದು, ನನಗೆ ಅರ್ಥವಾಗದಿರುವುದು ವಿಚಾರವೇ ಹೆಚ್ಚಿದೆ. ಇನ್ನೂ ಸಾಮಾನ್ಯ ಜನರಿಗೆ ಇದು ಅರ್ಥವಾಗುವುದು ಸುಲಭವಲ್ಲ. 

ಇವತ್ತಿನ ಅಧಿಕಾರಿ ವರ್ಗ, ಯಾರ ಮಾತನ್ನು ಯಾರು ಕೇಳುತ್ತಿಲ್ಲ, ಈಗ ವಾಸ ಧೃಡೀಕರಣ ಪತ್ರ ಕೊಡಿ ಅಂದರೆ ಅವರು ಕೊಡುವುದಿಲ್ಲ, ಅವರು ಯಾರು ಇರಬೇಕು ಯಾರು ಇರಬಾರದು ಅಂತಾ ನಿರ್ಧರಿಸ್ತಾರೆ. 

ಶಿಕ್ಷಣ ಪಡೆದವರ ಸಂಖ್ಯೆ ಹೆಚ್ಚಿದೆ ಆದರೆ ಈ ಎಸ್ಐಆರ್ ಬಗ್ಗೆ ಯಾರಿಗು ಅಷ್ಟು ಮಾಹಿತಿ ಇಲ್ಲಾ, ಒಂದು ಐದು ಕಮ್ಯುಮಿಟಿಗಳಿಗೆ, ಕೆಲವು ಅಲ್ಪಸಂಖ್ಯಾತ ಧರ್ಮಗಳಿಗೆ ಹೆಚ್ಚು ಸಮಸ್ಯೆ ಆಗುತ್ತಿದೆ. ಅದರಲ್ಲಿ ನಮಗೂ ಸಮಸ್ಯೆ ಆಗುತ್ತಿದೆ.

ಇವತ್ತು ಜಾಗೃತಿ ಮಾಡುತ್ತಿರುವ ಎಸ್ಐಆರ್ ವಿರುದ್ಧ ಹೋರಾಟ ಮಾಡುತ್ತೇವೆ ಅಂತ ಹೇಳುತ್ತಿರುವ ಹಲವು ಹೋರಾಟಗಾರರ ಹೆಸರೇ ಹೊಸ ಪಟ್ಟಿಯಲ್ಲಿ ಇಲ್ಲ ಎಂಬ ಮಾಹಿತಿ ಸಿಕ್ಕಿದೆ. 

ನನಗೆ ಈ ಬಗ್ಗೆ ಇಷ್ಟು ಮಾಹಿತಿ ಮೊದಲೇ ಸಿಕ್ಕಿದ್ದರೆ. ಈ ಹೋರಾಟಕ್ಕಾಗಿ ಇಂದು ನೂರಾರು ಜನರನ್ನ ಸೇರಿಸುತ್ತಿದ್ದೆ, ಅಶೋಕ ಸರ್ಕಲ್ಲಿನಲ್ಲೆ ಮೈಕ್ ಕಟ್ಟಿಸಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿಸುತ್ತಿದ್ದೆ ಎಂದು ಹೇಳಿದರು. 

ಅಲ್ಲದೆ ಬಹುಜನರ ಅಸ್ಥಿತ್ವ ಉಳಿಸೋಕೆ ನಾವು ಇದ್ದೀವಿ. ಈ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾದ ಜೊತೆಗೂ ನಾವು ನಿಲ್ಲುತ್ತೇವೆ. ನಮ್ಮ ಶಕ್ತಿ ಮೀರಿ ಈ ಹೋರಾಟದ ಗೆಲುವಿಗಾಗಿ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಜಾಥಾ ತಂಡಕ್ಕೆ ಭರವಸೆ ನೀಡಿದರು. 

ಸಂವಾದದಲ್ಲಿ ನೂರ್ ಖಾನ್, ಪ್ರೊ.ಕಾಳಚೆನ್ನೇಗೌಡ, ಹಿರಿಯ ಪತ್ರಕರ್ತರಾದ ಜಿ.ಬಿ. ಬಸವರಾಜು, ಪಿಯುಸಿಎಲ್ ಅಧ್ಯಕ್ಷರಾದ ಕಮಲ್ ಗೋಪಿನಾಥ್, ಜನಾರ್ಧನ ಜೆನ್ನಿ, ಅಪ್ಪಗೆರೆ ತಿಮ್ಮರಾಜು, ಡಾ. ಪೂರ್ಣಾನಂದ, ದೇವಾನಂದ ವರಪ್ರಸಾದ್, ವಿಎಸ್ ಶ್ರೀಧರ್, ಸೇರಿದಂತೆ ಹಲವು ಹಿರಿಯ ಹೋರಾಟಗಾರರು, ಪ್ರಜ್ಞಾವಂತರು ಭಾಗಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...