Homeಕರ್ನಾಟಕ‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ...

‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ ಸಂಘಟನೆಗಳ ವಿರೋಧ

ಲಜ್ಜೆಗೆಟ್ಟ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ ಎಂದು ಸಂಘಟನೆಗಳು ಆಕ್ರೊಶ ವ್ಯಕ್ತಪಡಿಸಿವೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ತೀರ್ಮಾನದ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ‘‘ರಾಮ ರಾಜ್ಯದ ಬಗ್ಗೆ ಮಾತನಾಡುವ ಬಿಜೆಪಿ ಸರ್ಕಾರ, ನಾಡನ್ನು ಪಾನ ರಾಜ್ಯವನ್ನಾಗಿ ಮಾಡಲು ಹೊರಟಿದೆ’’ ಎಂದು ಹೇಳಿವೆ. ಸರ್ಕಾರದ ನೀತಿಯನ್ನು ತೀವ್ರವಾಗಿ ಖಂಡಿಸಿರುವ ವಿದ್ಯಾರ್ಥಿ ಸಂಘಟನೆಗಳು ಅಧಿಸೂಚನೆಯನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸಿವೆ.

ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ನೀತಿಗೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಲಜ್ಜೆಗೆಟ್ಟ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈ ವರೆಗೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ” ಎಂದು ಅವರು ಹೇಳಿದರು.

“ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಆಗ್ರಹಿಸಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ” ಎಂದು ಹೇಳಿದರು.

“ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...