Homeಕರ್ನಾಟಕ‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ...

‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ ಸಂಘಟನೆಗಳ ವಿರೋಧ

ಲಜ್ಜೆಗೆಟ್ಟ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ ಎಂದು ಸಂಘಟನೆಗಳು ಆಕ್ರೊಶ ವ್ಯಕ್ತಪಡಿಸಿವೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ತೀರ್ಮಾನದ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ‘‘ರಾಮ ರಾಜ್ಯದ ಬಗ್ಗೆ ಮಾತನಾಡುವ ಬಿಜೆಪಿ ಸರ್ಕಾರ, ನಾಡನ್ನು ಪಾನ ರಾಜ್ಯವನ್ನಾಗಿ ಮಾಡಲು ಹೊರಟಿದೆ’’ ಎಂದು ಹೇಳಿವೆ. ಸರ್ಕಾರದ ನೀತಿಯನ್ನು ತೀವ್ರವಾಗಿ ಖಂಡಿಸಿರುವ ವಿದ್ಯಾರ್ಥಿ ಸಂಘಟನೆಗಳು ಅಧಿಸೂಚನೆಯನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸಿವೆ.

ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ನೀತಿಗೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಲಜ್ಜೆಗೆಟ್ಟ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈ ವರೆಗೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ” ಎಂದು ಅವರು ಹೇಳಿದರು.

“ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಆಗ್ರಹಿಸಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ” ಎಂದು ಹೇಳಿದರು.

“ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು,  ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆ 2019ರಿಂದ ರಾಜಭವನದಲ್ಲಿ ತಾತ್ಕಾಲಿಕ ಸಿಬ್ಬಂದಿಯಾಗಿ ಕೆಲಸ...