Homeಕರ್ನಾಟಕ‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ...

‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ ಸಂಘಟನೆಗಳ ವಿರೋಧ

ಲಜ್ಜೆಗೆಟ್ಟ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ ಎಂದು ಸಂಘಟನೆಗಳು ಆಕ್ರೊಶ ವ್ಯಕ್ತಪಡಿಸಿವೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ತೀರ್ಮಾನದ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ‘‘ರಾಮ ರಾಜ್ಯದ ಬಗ್ಗೆ ಮಾತನಾಡುವ ಬಿಜೆಪಿ ಸರ್ಕಾರ, ನಾಡನ್ನು ಪಾನ ರಾಜ್ಯವನ್ನಾಗಿ ಮಾಡಲು ಹೊರಟಿದೆ’’ ಎಂದು ಹೇಳಿವೆ. ಸರ್ಕಾರದ ನೀತಿಯನ್ನು ತೀವ್ರವಾಗಿ ಖಂಡಿಸಿರುವ ವಿದ್ಯಾರ್ಥಿ ಸಂಘಟನೆಗಳು ಅಧಿಸೂಚನೆಯನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸಿವೆ.

ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ನೀತಿಗೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಲಜ್ಜೆಗೆಟ್ಟ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈ ವರೆಗೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ” ಎಂದು ಅವರು ಹೇಳಿದರು.

“ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಆಗ್ರಹಿಸಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ” ಎಂದು ಹೇಳಿದರು.

“ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...