Homeಮುಖಪುಟ'ಚುನಾವಣಾ ಬಾಂಡ್' ಯೋಜನೆ ಬಿಜೆಪಿ ಮತ್ತೆ ಜಾರಿಗೆ ತರಲಿದೆ: ನಿರ್ಮಲಾ ಸೀತಾರಾಮನ್

‘ಚುನಾವಣಾ ಬಾಂಡ್’ ಯೋಜನೆ ಬಿಜೆಪಿ ಮತ್ತೆ ಜಾರಿಗೆ ತರಲಿದೆ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಸುಪ್ರೀಂಕೋರ್ಟ್‌ ಅಸಾಂವಿಧಾನಿಕ ಎಂದು ರದ್ದುಗೊಳಿಸಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಜಾರಿಗೆ ತರುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು, ಪ್ರತಿಪಕ್ಷಗಳು ‘ಸ್ವತಂತ್ರ ಭಾರತದ ಅತಿದೊಡ್ಡ ಹಗರಣ’ ಎಂದು ಟೀಕಿಸಿದ್ದ  ವಿವಾದಾತ್ಮಕ ಯೋಜನೆಯನ್ನು ಮತ್ತೆ ಜಾರಿಗೆ ತರುವ ಬಗ್ಗೆ ಹಿಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಿರ್ಮಲಾ ಸೀತರಾಮನ್, ಚುನಾವಣಾ ಬಾಂಡ್‌ ಕುರಿತು ಸುಪ್ರೀಂಕೋರ್ಟ್ ತೀರ್ಪನ್ನು ಕೇಂದ್ರ ಸರ್ಕಾರ ಮರುಪರಿಶೀಲನೆಗೆ ಕೋರುತ್ತದೆಯೇ ಎಂದು ಇನ್ನೂ ನಿರ್ಧರಿಸಲಾಗಿಲ್ಲ. ಈ ಕುರಿತು ಸ್ವೀಕಾರಾರ್ಹವಾಗಿರುವ ಚೌಕಟ್ಟನ್ನು ರೂಪಿಸಲು ಅಥವಾ ತರಲು ನಾವು ಏನು ಮಾಡಬೇಕೆಂದು ನೋಡಬೇಕು ಎಂದು ಹೇಳಿದ್ದಾರೆ.

ಇಂಡಿಯಾ ಟುಡೇ ಜೊತೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಚುನಾವಣಾ ಬಾಂಡ್‌ಗಳ ಅನುಪಸ್ಥಿತಿಯು ನಗದು ದೇಣಿಗೆಯನ್ನು ಹೆಚ್ಚಿಸುತ್ತದೆ, ಚುನಾವಣಾ ಬಾಂಡ್‌ಗಳು ರಾಜಕೀಯ ನಿಧಿ ಸಂಗ್ರಹಕ್ಕಿರುವ ಉತ್ತಮ ವಿಧಾನವಾಗಿದೆ ಮತ್ತು ಅದರಲ್ಲಿ ಯಾವುದೇ ನಕಾರಾತ್ಮಕತೆಗಳಿದ್ದರೂ ಸುಲಭವಾಗಿ ಸರಿಪಡಿಸಬಹುದು ಎಂದು ಜನರು ಅರಿತುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿ ಚುನಾವಣಾ ಬಾಂಡ್‌ಗಳನ್ನು ವಾಪಸ್ ತರುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ನಾವು ಯಾವುದೇ ಮಸೂದೆಯನ್ನು ತರುತ್ತೇವೆ ಎಂದು ಹೇಳುತ್ತಿಲ್ಲ ಆದರೆ ಇದಕ್ಕೆ ಸ್ವಲ್ಪ ಪರಿಹಾರವನ್ನು ಕಂಡುಹಿಡಿಯಬೇಕು ಏಕೆಂದರೆ ನಾವು ರಾಜಕೀಯ ನಿಧಿಯನ್ನು ನಗದು ರೂಪದಲ್ಲಿ ಪಡೆಯುವಂತಿಲ್ಲ. ರಾಜಕೀಯದಲ್ಲಿರುವ ಕಪ್ಪುಹಣವನ್ನು ತೊಡೆದು ಹಾಕುತ್ತೇವೆ, ಇದು 2014ರಿಂದ ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ನೀಡಿದ ಭರವಸೆಯಾಗಿದೆ ಎಂದು ಹೇಳಿದ್ದರು.

ಚುನಾವಣೆಗೆ ಕಪ್ಪುಹಣ ಹರಿಯುವುದನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂಬ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿತ್ತು. ಚುನಾವಣಾ ಬಾಂಡ್ ಯೋಜನೆಯಲ್ಲಿ ಪರಿಚಯಿಸಲಾದ ರಾಜಕೀಯ ನಿಧಿಯ ಮೂಲಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸದಿರುವುದು ಕಪ್ಪುಹಣವನ್ನು ತಡೆಯಲು ಹೇಗೆ ಸಹಾಯ ಮಾಡುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕೇಂದ್ರ ಸರ್ಕಾರವನ್ನು ಈ ಹಿಂದೆ ಪ್ರಶ್ನಿಸಿದ್ದರು.

ಈ ವಿಚಾರದಿಂದ ಬಿಜೆಪಿಗೆ ಹಿನ್ನೆಡೆ ಉಂಟಾಗಿಲ್ಲ ಮತ್ತು ಈ ವಿಚಾರವಾಗಿ ವಿವಾದ ಮಾಡುವವರು ಪಶ್ಚಾತ್ತಾಪ ಪಡುತ್ತಾರೆ ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಗೆ ನೀಡಿದ ಹಣದ ಜಾಡನ್ನು 2014ರ ಮೊದಲು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಚುನಾವಣಾ ಬಾಂಡ್‌ಗಳನ್ನು ಯಾರು ಖರೀದಿಸಿದರು, ಅದು ಎಲ್ಲಿಗೆ ಹೋಯಿತು ಮತ್ತು ಅದನ್ನು ಹೇಗೆ ಖರ್ಚು ಮಾಡಲಾಗಿದೆ ಎಂಬ ವಿವರಗಳನ್ನು ಸಾರ್ವಜನಿಕರಿಗೆ ನೀಡಲು ಚುನಾವಣಾ ಬಾಂಡ್‌ನಿಂದ ಸಾಧ್ಯವಾಯಿತು ಎಂದು ಹೇಳಿದ್ದರು.

ಇದನ್ನು ಓದಿ: ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...