Homeಮುಖಪುಟ'ಚುನಾವಣಾ ಬಾಂಡ್' ಯೋಜನೆ ಬಿಜೆಪಿ ಮತ್ತೆ ಜಾರಿಗೆ ತರಲಿದೆ: ನಿರ್ಮಲಾ ಸೀತಾರಾಮನ್

‘ಚುನಾವಣಾ ಬಾಂಡ್’ ಯೋಜನೆ ಬಿಜೆಪಿ ಮತ್ತೆ ಜಾರಿಗೆ ತರಲಿದೆ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಸುಪ್ರೀಂಕೋರ್ಟ್‌ ಅಸಾಂವಿಧಾನಿಕ ಎಂದು ರದ್ದುಗೊಳಿಸಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಜಾರಿಗೆ ತರುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು, ಪ್ರತಿಪಕ್ಷಗಳು ‘ಸ್ವತಂತ್ರ ಭಾರತದ ಅತಿದೊಡ್ಡ ಹಗರಣ’ ಎಂದು ಟೀಕಿಸಿದ್ದ  ವಿವಾದಾತ್ಮಕ ಯೋಜನೆಯನ್ನು ಮತ್ತೆ ಜಾರಿಗೆ ತರುವ ಬಗ್ಗೆ ಹಿಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಿರ್ಮಲಾ ಸೀತರಾಮನ್, ಚುನಾವಣಾ ಬಾಂಡ್‌ ಕುರಿತು ಸುಪ್ರೀಂಕೋರ್ಟ್ ತೀರ್ಪನ್ನು ಕೇಂದ್ರ ಸರ್ಕಾರ ಮರುಪರಿಶೀಲನೆಗೆ ಕೋರುತ್ತದೆಯೇ ಎಂದು ಇನ್ನೂ ನಿರ್ಧರಿಸಲಾಗಿಲ್ಲ. ಈ ಕುರಿತು ಸ್ವೀಕಾರಾರ್ಹವಾಗಿರುವ ಚೌಕಟ್ಟನ್ನು ರೂಪಿಸಲು ಅಥವಾ ತರಲು ನಾವು ಏನು ಮಾಡಬೇಕೆಂದು ನೋಡಬೇಕು ಎಂದು ಹೇಳಿದ್ದಾರೆ.

ಇಂಡಿಯಾ ಟುಡೇ ಜೊತೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಚುನಾವಣಾ ಬಾಂಡ್‌ಗಳ ಅನುಪಸ್ಥಿತಿಯು ನಗದು ದೇಣಿಗೆಯನ್ನು ಹೆಚ್ಚಿಸುತ್ತದೆ, ಚುನಾವಣಾ ಬಾಂಡ್‌ಗಳು ರಾಜಕೀಯ ನಿಧಿ ಸಂಗ್ರಹಕ್ಕಿರುವ ಉತ್ತಮ ವಿಧಾನವಾಗಿದೆ ಮತ್ತು ಅದರಲ್ಲಿ ಯಾವುದೇ ನಕಾರಾತ್ಮಕತೆಗಳಿದ್ದರೂ ಸುಲಭವಾಗಿ ಸರಿಪಡಿಸಬಹುದು ಎಂದು ಜನರು ಅರಿತುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿ ಚುನಾವಣಾ ಬಾಂಡ್‌ಗಳನ್ನು ವಾಪಸ್ ತರುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ನಾವು ಯಾವುದೇ ಮಸೂದೆಯನ್ನು ತರುತ್ತೇವೆ ಎಂದು ಹೇಳುತ್ತಿಲ್ಲ ಆದರೆ ಇದಕ್ಕೆ ಸ್ವಲ್ಪ ಪರಿಹಾರವನ್ನು ಕಂಡುಹಿಡಿಯಬೇಕು ಏಕೆಂದರೆ ನಾವು ರಾಜಕೀಯ ನಿಧಿಯನ್ನು ನಗದು ರೂಪದಲ್ಲಿ ಪಡೆಯುವಂತಿಲ್ಲ. ರಾಜಕೀಯದಲ್ಲಿರುವ ಕಪ್ಪುಹಣವನ್ನು ತೊಡೆದು ಹಾಕುತ್ತೇವೆ, ಇದು 2014ರಿಂದ ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ನೀಡಿದ ಭರವಸೆಯಾಗಿದೆ ಎಂದು ಹೇಳಿದ್ದರು.

ಚುನಾವಣೆಗೆ ಕಪ್ಪುಹಣ ಹರಿಯುವುದನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂಬ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿತ್ತು. ಚುನಾವಣಾ ಬಾಂಡ್ ಯೋಜನೆಯಲ್ಲಿ ಪರಿಚಯಿಸಲಾದ ರಾಜಕೀಯ ನಿಧಿಯ ಮೂಲಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸದಿರುವುದು ಕಪ್ಪುಹಣವನ್ನು ತಡೆಯಲು ಹೇಗೆ ಸಹಾಯ ಮಾಡುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕೇಂದ್ರ ಸರ್ಕಾರವನ್ನು ಈ ಹಿಂದೆ ಪ್ರಶ್ನಿಸಿದ್ದರು.

ಈ ವಿಚಾರದಿಂದ ಬಿಜೆಪಿಗೆ ಹಿನ್ನೆಡೆ ಉಂಟಾಗಿಲ್ಲ ಮತ್ತು ಈ ವಿಚಾರವಾಗಿ ವಿವಾದ ಮಾಡುವವರು ಪಶ್ಚಾತ್ತಾಪ ಪಡುತ್ತಾರೆ ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಗೆ ನೀಡಿದ ಹಣದ ಜಾಡನ್ನು 2014ರ ಮೊದಲು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಚುನಾವಣಾ ಬಾಂಡ್‌ಗಳನ್ನು ಯಾರು ಖರೀದಿಸಿದರು, ಅದು ಎಲ್ಲಿಗೆ ಹೋಯಿತು ಮತ್ತು ಅದನ್ನು ಹೇಗೆ ಖರ್ಚು ಮಾಡಲಾಗಿದೆ ಎಂಬ ವಿವರಗಳನ್ನು ಸಾರ್ವಜನಿಕರಿಗೆ ನೀಡಲು ಚುನಾವಣಾ ಬಾಂಡ್‌ನಿಂದ ಸಾಧ್ಯವಾಯಿತು ಎಂದು ಹೇಳಿದ್ದರು.

ಇದನ್ನು ಓದಿ: ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...