Homeಮುಖಪುಟಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಅಮಿತ್ ಶಾ ಪಣ: ಹಗಲುಗನಸು ಎಂದ ಟಿಎಂಸಿ!

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಅಮಿತ್ ಶಾ ಪಣ: ಹಗಲುಗನಸು ಎಂದ ಟಿಎಂಸಿ!

ಬಿಜೆಪಿ ಶ್ರೀಮಂತರ ಪಕ್ಷವಾಗಿದೆ. ಬುಡಕಟ್ಟು ಕುಟುಂಬದ ಮನೆಯಲ್ಲಿ ಊಟ ಮಾಡುವುದು ಕೇವಲ ನಾಟಕ. ಬಂಗಾಳದ ಜನರು ಎಂದಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಿಲ್ಲ - ಸೌಗತಾ ರಾಯ್

- Advertisement -
- Advertisement -

ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಬಿಜೆಪಿ ಹಿರಿಯ ಮುಖಂಡ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

ಆಡಳಿತರೂಢ ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಸರ್ಕಾರದ ಕೊನೆಯ ದಿನಗಳನ್ನು ಎಣಿಸುತ್ತಿದೆ., ಭಾರತೀಯ ಜನತಾ ಪಕ್ಷ (ಬಿಜೆಪಿ) ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಕುರಾ ಜಿಲ್ಲೆಯ ಪುಯಬಾಗನ್‌ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಮಮತಾ ಬ್ಯಾನರ್ಜಿ ಸರ್ಕಾರವು ಬಡವರು, ರೈತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನರನ್ನು, ತುಳಿತಕ್ಕೊಳಗಾದವರನ್ನು ನಿರ್ಲಕ್ಷಿಸಿದೆ. ಅದರಲ್ಲೂ ವಿಶೇಷವಾಗಿ ಬಿಜೆಪಿ ಕಾರ್ಯಕರ್ತರನ್ನು ನಿರ್ಲಕ್ಷಿಸಿರುವ ರೀತಿ, ಅವರ ಹತ್ಯೆಗಳನ್ನು ಸ್ಪಷ್ಟವಾಗಿ ನೋಡಬಹುದು ಎಂದು ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

ಇದಕ್ಕೂ ಮುನ್ನಾ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಚಳವಳಿಯಲ್ಲಿ ಹೋರಾಡಿದ್ದ ಬಂಕುರಾ ಪ್ರದೇಶದ ಬುಡಕಟ್ಟು ಜನರ ನಾಯಕ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಹೂಮಾಲೆ ಹಾಕಿ ನಮನ ಸಲ್ಲಿಸಿದರು.

ಇದನ್ನೂ ಓದಿ: ’ಮೋದಿಜಿಯ ವೋಟಿಂಗ್ ಮಷಿನ್ & ಮೋದಿಜಿಯ ಮೀಡಿಯಾಕ್ಕೆ ನಾನು ಹೆದರುವುದಿಲ್ಲ’- ರಾಹುಲ್

“ಈ ಸರ್ಕಾರವನ್ನು ಉರುಳಿಸಲು ಮತ್ತು ಸುವರ್ಣ ಬಂಗಾಳವನ್ನು ನಿರ್ಮಿಸಲು ಬಿಜೆಪಿಗೆ ಅವಕಾಶ ನೀಡುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾ ಮಾತಿಗೆ ಕೋಲ್ಕತ್ತಾದಲ್ಲಿ ಪ್ರತಿಕ್ರಿಯಿಸಿರುವ ಟಿಎಂಸಿ ಲೋಕಸಭಾ ಸದಸ್ಯ ಮತ್ತು ಪಕ್ಷದ ವಕ್ತಾರ ಸೌಗತಾ ರಾಯ್ “ಅಮಿತ್ ಶಾ ಹಗಲುಗನಸು ಕಾಣುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ. “ಬಿಜೆಪಿ ಸುವರ್ಣ ಬಂಗಾಳವನ್ನು ನಿರ್ಮಿಸುವ ಸಾಮರ್ಥ್ಯ ಹೊಂದಿದ್ದರೆ, ಅದು ಯಾಕೆ ಸುವರ್ಣ ಉತ್ತರ ಪ್ರದೇಶವನ್ನು ನಿರ್ಮಿಸುವುದಿಲ್ಲ?” ಎಂದು ತಿರುಗೇಟು ನೀಡಿದ್ದಾರೆ.

Mamata Banerjee AND Amit Shah
PC: The Statesman

ಕೊಲ್ಕತ್ತಾ ಬಳಿಯ ಮಥೂವಾ ದಲಿತ ಕುಟುಂಬದೊಂದಿಗೆ ಶುಕ್ರವಾರ ಊಟದ ವ್ಯವಸ್ಥೆ ಮಾಡಿರುವ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸೌಗತಾ ರಾಯ್ ಇಬ್ಬರು ಇದನ್ನು ನಾಟಕ ಎಂದಿದ್ದಾರೆ.

“ಅವರಿಗೆ ಗೊತ್ತಿಲ್ಲ, ಕಳೆದ 20-25 ವರ್ಷಗಳಿಂದ ಬೊರೊಮಾ (ಮಥೂವಾ ಸಮುದಾಯದ ಹಿರಿಯ ತಾಯಿ) ಜೀವಂತವಾಗಿರುವವರೆಗೂ, ನಾನು ಅವರನ್ನು ನೋಡಿಕೊಳ್ಳುತ್ತಿದ್ದೆ. ನಾನು ಅವರನ್ನು ಆಸ್ಪತ್ರೆಗೆ ಸೇರಿಸುತ್ತಿದ್ದೆ ಆರೈಕೆ ಮಾಡುತ್ತಿದೆ. ಅಲ್ಲಿಗೆ ಮೊದಲು ಭೇಟಿ ನೀಡಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ಪ್ರಾರಂಭಿಸಿದ್ದು ನಾನು. ಕೆಲವರು ಹೊಸಬರು ಈಗ ಅಲ್ಲಿಗೆ ಧುಮಕುಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಇನ್ನೂ ಟಿಎಂಸಿ ಲೋಕಸಭಾ ಸದಸ್ಯ ಸೌಗತಾ ರಾಯ್, “ಬಿಜೆಪಿ ಶ್ರೀಮಂತರ ಪಕ್ಷವಾಗಿದೆ. ಬುಡಕಟ್ಟು ಕುಟುಂಬದ ಮನೆಯಲ್ಲಿ ಊಟ ಮಾಡುವುದು ಕೇವಲ ನಾಟಕ. ಬಂಗಾಳದ ಜನರು ಎಂದಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಿಲ್ಲ ”ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಪಶ್ಚಿಮ ಬಂಗಾಳದಲ್ಲಿ ಶತಾಯಗತಾಯ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಪ್ರಯತ್ನ ಪಡುತ್ತಿರುವ ಬಿಜೆಪಿ ಸರ್ಕಾರ ಬಂಗಾಳದಲ್ಲಿ ಹಲವಾರು ರ್‍ಯಾಲಿಗಳನ್ನು ಆಯೋಜಿಸುತ್ತಿದೆ. ಲಾಕ್‌ಡೌನ್ ಮುಂಚೆ ಕೂಡ ಅಮಿತ್ ಶಾ ಬಂಗಾಳಕ್ಕೆ ಭೇಟಿ ನೀಡಿದ್ದರು. ಆದರೆ ಆ ರ್‍ಯಾಲಿ ಅಷ್ಟು ಯಶಸ್ವಿಯಾಗಿರಲಿಲ್ಲ.

ಈಗ ಮತ್ತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೈಗೊಳ್ಳಬೇಕಾಗಿದ್ದ ಪ್ರವಾಸವನ್ನು ರದ್ದುಗೊಳಿಸಿ ತಾವೇ ಎರಡು ದಿನಗಳ ಪ್ರವಾಸ ಆರಂಭಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಸಂಘಟಿಸುತ್ತಿದ್ದಾರೆ. ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಬೂತ್ ಮಟ್ಟದ ಕಾರ್ಯಕರ್ತರಿಂದ ಹಿಡಿದು ಬಿಜೆಪಿ ರಾಜ್ಯ ಅಧ್ಯಕ್ಷರವರೆಗೂ ಸಭೆಗಳನ್ನು ನಡೆಸುತ್ತಿದ್ದಾರೆ.

ಕಳೆದ ತಿಂಗಳು ಕೂಡ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ಆಡಳಿತವನ್ನು ವಿರೋಧಿಸಿ ನಾಲ್ಕು ಸ್ಥಳಗಳಲ್ಲಿ ರ್‍ಯಾಲಿ ಆಯೋಜಿಸಿತ್ತು. ಪ್ರತಿಭಟನೆಯಲ್ಲಿ ಮಮತಾ ಬ್ಯಾನರ್ಜಿ ಅವರ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನ ಪಟ್ಟಿತ್ತು. ಆದರೆ ಕೊರೊನಾ ಕಾರಣ ನೀಡಿ ಸಿಎಂ ಮಮತಾ ಕಚೇರಿಗೆ ರಜೆ ಘೋಷಿಸಿ ರ್‍ಯಾಲಿಯನ್ನು ವಿಫಲಗೊಳಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ. ಇನ್ನು ಮುಂದಿನ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳುಗಳು ಇರುವ ಕಾರಣ ಈಗಿನಿಂದಲೇ ಪಕ್ಷವನ್ನು ಬಲ ಪಡಿಸಲು ಬಿಜೆಪಿ ಪಣ ತೊಟ್ಟಿದೆ. ಇದಕ್ಕೆ ಪೂರಕವೆಂಬಂತೆ ಬಂಕುರಾ ಜಿಲ್ಲೆಯಲ್ಲಿ ನಡೆದ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಿಸಿತ್ತು.


ಇದನ್ನೂ ಓದಿ: ಪಶ್ಚಿಮ ಬಂಗಾಳ ಪ್ರವಾಸ: ಜೆ.ಪಿ.ನಡ್ಡಾ ಬಿಟ್ಟು ಅಮಿತ್ ಶಾಗೆ ಮಣೆ ಹಾಕಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....