Homeಮುಖಪುಟಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಅಮಿತ್ ಶಾ ಪಣ: ಹಗಲುಗನಸು ಎಂದ ಟಿಎಂಸಿ!

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಅಮಿತ್ ಶಾ ಪಣ: ಹಗಲುಗನಸು ಎಂದ ಟಿಎಂಸಿ!

ಬಿಜೆಪಿ ಶ್ರೀಮಂತರ ಪಕ್ಷವಾಗಿದೆ. ಬುಡಕಟ್ಟು ಕುಟುಂಬದ ಮನೆಯಲ್ಲಿ ಊಟ ಮಾಡುವುದು ಕೇವಲ ನಾಟಕ. ಬಂಗಾಳದ ಜನರು ಎಂದಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಿಲ್ಲ - ಸೌಗತಾ ರಾಯ್

- Advertisement -
- Advertisement -

ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಬಿಜೆಪಿ ಹಿರಿಯ ಮುಖಂಡ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

ಆಡಳಿತರೂಢ ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಸರ್ಕಾರದ ಕೊನೆಯ ದಿನಗಳನ್ನು ಎಣಿಸುತ್ತಿದೆ., ಭಾರತೀಯ ಜನತಾ ಪಕ್ಷ (ಬಿಜೆಪಿ) ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಕುರಾ ಜಿಲ್ಲೆಯ ಪುಯಬಾಗನ್‌ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಮಮತಾ ಬ್ಯಾನರ್ಜಿ ಸರ್ಕಾರವು ಬಡವರು, ರೈತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನರನ್ನು, ತುಳಿತಕ್ಕೊಳಗಾದವರನ್ನು ನಿರ್ಲಕ್ಷಿಸಿದೆ. ಅದರಲ್ಲೂ ವಿಶೇಷವಾಗಿ ಬಿಜೆಪಿ ಕಾರ್ಯಕರ್ತರನ್ನು ನಿರ್ಲಕ್ಷಿಸಿರುವ ರೀತಿ, ಅವರ ಹತ್ಯೆಗಳನ್ನು ಸ್ಪಷ್ಟವಾಗಿ ನೋಡಬಹುದು ಎಂದು ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

ಇದಕ್ಕೂ ಮುನ್ನಾ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಚಳವಳಿಯಲ್ಲಿ ಹೋರಾಡಿದ್ದ ಬಂಕುರಾ ಪ್ರದೇಶದ ಬುಡಕಟ್ಟು ಜನರ ನಾಯಕ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಹೂಮಾಲೆ ಹಾಕಿ ನಮನ ಸಲ್ಲಿಸಿದರು.

ಇದನ್ನೂ ಓದಿ: ’ಮೋದಿಜಿಯ ವೋಟಿಂಗ್ ಮಷಿನ್ & ಮೋದಿಜಿಯ ಮೀಡಿಯಾಕ್ಕೆ ನಾನು ಹೆದರುವುದಿಲ್ಲ’- ರಾಹುಲ್

“ಈ ಸರ್ಕಾರವನ್ನು ಉರುಳಿಸಲು ಮತ್ತು ಸುವರ್ಣ ಬಂಗಾಳವನ್ನು ನಿರ್ಮಿಸಲು ಬಿಜೆಪಿಗೆ ಅವಕಾಶ ನೀಡುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾ ಮಾತಿಗೆ ಕೋಲ್ಕತ್ತಾದಲ್ಲಿ ಪ್ರತಿಕ್ರಿಯಿಸಿರುವ ಟಿಎಂಸಿ ಲೋಕಸಭಾ ಸದಸ್ಯ ಮತ್ತು ಪಕ್ಷದ ವಕ್ತಾರ ಸೌಗತಾ ರಾಯ್ “ಅಮಿತ್ ಶಾ ಹಗಲುಗನಸು ಕಾಣುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ. “ಬಿಜೆಪಿ ಸುವರ್ಣ ಬಂಗಾಳವನ್ನು ನಿರ್ಮಿಸುವ ಸಾಮರ್ಥ್ಯ ಹೊಂದಿದ್ದರೆ, ಅದು ಯಾಕೆ ಸುವರ್ಣ ಉತ್ತರ ಪ್ರದೇಶವನ್ನು ನಿರ್ಮಿಸುವುದಿಲ್ಲ?” ಎಂದು ತಿರುಗೇಟು ನೀಡಿದ್ದಾರೆ.

Mamata Banerjee AND Amit Shah
PC: The Statesman

ಕೊಲ್ಕತ್ತಾ ಬಳಿಯ ಮಥೂವಾ ದಲಿತ ಕುಟುಂಬದೊಂದಿಗೆ ಶುಕ್ರವಾರ ಊಟದ ವ್ಯವಸ್ಥೆ ಮಾಡಿರುವ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸೌಗತಾ ರಾಯ್ ಇಬ್ಬರು ಇದನ್ನು ನಾಟಕ ಎಂದಿದ್ದಾರೆ.

“ಅವರಿಗೆ ಗೊತ್ತಿಲ್ಲ, ಕಳೆದ 20-25 ವರ್ಷಗಳಿಂದ ಬೊರೊಮಾ (ಮಥೂವಾ ಸಮುದಾಯದ ಹಿರಿಯ ತಾಯಿ) ಜೀವಂತವಾಗಿರುವವರೆಗೂ, ನಾನು ಅವರನ್ನು ನೋಡಿಕೊಳ್ಳುತ್ತಿದ್ದೆ. ನಾನು ಅವರನ್ನು ಆಸ್ಪತ್ರೆಗೆ ಸೇರಿಸುತ್ತಿದ್ದೆ ಆರೈಕೆ ಮಾಡುತ್ತಿದೆ. ಅಲ್ಲಿಗೆ ಮೊದಲು ಭೇಟಿ ನೀಡಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ಪ್ರಾರಂಭಿಸಿದ್ದು ನಾನು. ಕೆಲವರು ಹೊಸಬರು ಈಗ ಅಲ್ಲಿಗೆ ಧುಮಕುಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಇನ್ನೂ ಟಿಎಂಸಿ ಲೋಕಸಭಾ ಸದಸ್ಯ ಸೌಗತಾ ರಾಯ್, “ಬಿಜೆಪಿ ಶ್ರೀಮಂತರ ಪಕ್ಷವಾಗಿದೆ. ಬುಡಕಟ್ಟು ಕುಟುಂಬದ ಮನೆಯಲ್ಲಿ ಊಟ ಮಾಡುವುದು ಕೇವಲ ನಾಟಕ. ಬಂಗಾಳದ ಜನರು ಎಂದಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಿಲ್ಲ ”ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಪಶ್ಚಿಮ ಬಂಗಾಳದಲ್ಲಿ ಶತಾಯಗತಾಯ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಪ್ರಯತ್ನ ಪಡುತ್ತಿರುವ ಬಿಜೆಪಿ ಸರ್ಕಾರ ಬಂಗಾಳದಲ್ಲಿ ಹಲವಾರು ರ್‍ಯಾಲಿಗಳನ್ನು ಆಯೋಜಿಸುತ್ತಿದೆ. ಲಾಕ್‌ಡೌನ್ ಮುಂಚೆ ಕೂಡ ಅಮಿತ್ ಶಾ ಬಂಗಾಳಕ್ಕೆ ಭೇಟಿ ನೀಡಿದ್ದರು. ಆದರೆ ಆ ರ್‍ಯಾಲಿ ಅಷ್ಟು ಯಶಸ್ವಿಯಾಗಿರಲಿಲ್ಲ.

ಈಗ ಮತ್ತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೈಗೊಳ್ಳಬೇಕಾಗಿದ್ದ ಪ್ರವಾಸವನ್ನು ರದ್ದುಗೊಳಿಸಿ ತಾವೇ ಎರಡು ದಿನಗಳ ಪ್ರವಾಸ ಆರಂಭಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಸಂಘಟಿಸುತ್ತಿದ್ದಾರೆ. ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಬೂತ್ ಮಟ್ಟದ ಕಾರ್ಯಕರ್ತರಿಂದ ಹಿಡಿದು ಬಿಜೆಪಿ ರಾಜ್ಯ ಅಧ್ಯಕ್ಷರವರೆಗೂ ಸಭೆಗಳನ್ನು ನಡೆಸುತ್ತಿದ್ದಾರೆ.

ಕಳೆದ ತಿಂಗಳು ಕೂಡ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ಆಡಳಿತವನ್ನು ವಿರೋಧಿಸಿ ನಾಲ್ಕು ಸ್ಥಳಗಳಲ್ಲಿ ರ್‍ಯಾಲಿ ಆಯೋಜಿಸಿತ್ತು. ಪ್ರತಿಭಟನೆಯಲ್ಲಿ ಮಮತಾ ಬ್ಯಾನರ್ಜಿ ಅವರ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನ ಪಟ್ಟಿತ್ತು. ಆದರೆ ಕೊರೊನಾ ಕಾರಣ ನೀಡಿ ಸಿಎಂ ಮಮತಾ ಕಚೇರಿಗೆ ರಜೆ ಘೋಷಿಸಿ ರ್‍ಯಾಲಿಯನ್ನು ವಿಫಲಗೊಳಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ. ಇನ್ನು ಮುಂದಿನ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳುಗಳು ಇರುವ ಕಾರಣ ಈಗಿನಿಂದಲೇ ಪಕ್ಷವನ್ನು ಬಲ ಪಡಿಸಲು ಬಿಜೆಪಿ ಪಣ ತೊಟ್ಟಿದೆ. ಇದಕ್ಕೆ ಪೂರಕವೆಂಬಂತೆ ಬಂಕುರಾ ಜಿಲ್ಲೆಯಲ್ಲಿ ನಡೆದ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಿಸಿತ್ತು.


ಇದನ್ನೂ ಓದಿ: ಪಶ್ಚಿಮ ಬಂಗಾಳ ಪ್ರವಾಸ: ಜೆ.ಪಿ.ನಡ್ಡಾ ಬಿಟ್ಟು ಅಮಿತ್ ಶಾಗೆ ಮಣೆ ಹಾಕಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...