HomeUncategorized75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ....

75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

40ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲ್ಲಿರುವ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ

- Advertisement -
- Advertisement -

ಕಳೆದ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಉತ್ತರ ಭಾರತದ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಅದ್ಭುತ ವಿಜಯ ಸಾಧಿಸುವುದರ ಮೂಲಕ. ಈ ಸಲ ಉತ್ತರ ಭಾರತದಲ್ಲಿ ಅದರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನುತ್ತಾರೆ ಖ್ಯಾತ ವಿಶ್ಲೇಷಕ ದೀಪಂಕರ್ ಬಸು ನತ್ತು ಅವರ ತಂಡದ ಸದಸ್ಯರು. ವಿವಿಧ ಚುನಾವಣಾ ಶಾಸ್ತ್ರಗಳನ್ನು ಬಲ್ಲ ಈ ತಂಡ, ಎರಡು-ಮೂರು ಮಾನದಂಡಗಳಲ್ಲಿ ವಿಶ್ಲೇಷಣೆ ಮಾಡಿದಾಗಲೂ, ಅಂತಿಮ ಫಲಿತಾಂಶ: ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ ಎಂಬುದೇ ಆಗಿದೆ….. ಪಶ್ಚಿಮ ಬಂಗಾಳದಲ್ಲೂ ಅದಕ್ಕೆ ಸಿಗುವ ಲಾಭ ಅಷ್ಟಕ್ಕಷ್ಟೇ …ಈ ಅಧ್ಯಯನವನ್ನು ಓದಿ ಅದರ ಸಂಕ್ಷಿಪ್ತ ರೂಪವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ…

ಹಿಂದಿ ಬೆಲ್ಟ್: ಬಿಜೆಪಿಗೆ 75 ಸೀಟು ನಷ್ಟ
ಕಳೆದ ಸಲ 2014ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಹಿಂದಿ ಬೆಲ್ಟ್ ಎಂದು ಕರೆಯಲ್ಪಡುವ 10 ರಾಜ್ಯಗಳಾದ ಬಿಹಾರ್, ಛತ್ತೀಸ್‍ಘಡ್, ದೆಹಲಿ, ಹಿಮಾಚಲ ಪ್ರದೇಶ, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ್, ಉತ್ತರಾಖಂಡ, ಮತ್ತು ಉತ್ತರ ಪ್ರದೇಶಗಳಲ್ಲಿ ಅದು ಸಾಧಿಸಿದ ಅಭೂತಪೂರ್ವ ಗೆಲುವು. ಈ 10 ರಾಜ್ಯಗಳ ಒಟ್ಟು 225 ಸೀಟುಗಳಲ್ಲಿ ಬಿಜೆಪಿ 190 ಸೀಟುಗಳನ್ನು ಗೆದ್ದಿತ್ತು!
2019ರಲ್ಲಿ ಅದರ ಭವಿಷ್ಯವನ್ನು ಇದೇ ರಾಜ್ಯಗಳು ಬರೆಯಲಿವೆ. ಅದರಲ್ಲೂ ಉತ್ತರ ಪ್ರದೇಶ ರಾಜ್ಯದ ಫಲಿತಾಂಶವೇ ಈ ಇತರ ಹಿಂದಿ ರಾಜ್ಯಗಳ ಮೇಲೂ ಪ್ರಭಾವ ಹೊಂದಿರುತ್ತದೆ.

ಮೊದಲ ಏಟೇ ಯು.ಪಿ.ಯಿಂದ!
ಇಲ್ಲಿ ಈ ಅಧ್ಯಯನದಲ್ಲಿ ಎರಡು ವಿಧಾನ ಆಯ್ದು ಕೊಳ್ಳಲಾಗಿದೆ. ಮೊದಲ ವಿಧಾನದಲ್ಲಿ 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಅಸೆಂಬ್ಲಿ ಚುನಾವಣೆಗಳನ್ನು ಮತ್ತು ಎರಡನೇ ವಿಧಾನದಲ್ಲಿ 2014ರ ಸಂಸತ್ ಚುನಾವಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ವಿಧಾನದ ಪ್ರಕಾರ, ಅದರ ಶೇಕಡಾವಾರು ಮತಗಳಿಕೆ ಶೇ.42.3ರಿಂದ 39.3ಕ್ಕೆ ಇಳಿಯಲಿದೆ. ಅಂದರೆ, ಈಗಿರುವ ಅದರ 71 ಸಂಸದರ ಸಂಖ್ಯೆ 27ಕ್ಕೆ ಕುಸಿಯಲಿದೆ. ಇದರರ್ಥ 44 ಸೀಟುಗಳ ನಷ್ಟ.

ಎರಡನೆ ವಿಧಾನದಲ್ಲಿ, ಅದರ ಶೇಕಡಾವಾರು ಮತಗಳಿಕೆ ಹೆಚ್ಚೂಕಡಿಮೆ 2014ರಲ್ಲಿ ಇದ್ದಷ್ಟೇ ಇರಲಿದ್ದು, ಸೀಟುಗಳ ಸಂಖ್ಯೆಯಲ್ಲಿ 71ರಿಂದ 30ಕ್ಕೆ ಇಳಿಯಲಿದೆ. ಅಂದರೆ 41 ಸೀಟುಗಳ ನಷ್ಟ.

40ರ ಕೊರತೆ ಎಲ್ಲಿ ತುಂಬುವುದು?
2014ರಲ್ಲಿ ಬಿಜೆಪಿ ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಸ್ವೀಪ್ ಎನ್ನುವ ಮಟ್ಟಿಗೆ ವಿಜಯ ಸಾಧಿಸಿತ್ತು. ಇದರರ್ಥ ಈಗದು ಉತ್ತರ ಪ್ರದೇಶದ 40 ಸೀಟುಗಳ ಕೊರತೆಯನ್ನು ಈ ಭಾಗದಿಂದಲೇ ತುಂಬಿಕೊಳ್ಳಬೇಕು. ಏಕೆಂದರೆ, ಉಳಿದೆಡೆ ಅಂತಹ ವಾತಾವರಣ ಇಲ್ಲ. ಪೂರ್ವ ಮತ್ತು ದಕ್ಷಿಣದಲ್ಲಿ ಅದಕ್ಕೆ ಗಮನಾರ್ಹ ಲಾಭ ತಂದುಕೊಡುವ ಪರಿಸ್ಥಿತಿ ಇಲ್ಲವೇ ಇಲ್ಲ.
ಅಂತಿಮವಾಗಿ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ.

ಇದನ್ನು ಓದಿ: ಡಾಟಾ ಅನಾಲಿಕಲ್ ವರದಿ ಹೇಳುತ್ತಿವೆ ಬಿಜೆಪಿಗೆ ಸೋಲು ಖಚಿತ

ಮಮತಾ ಮುಂದೆ ಮಂಡಿಯೂರಿತೇ?
ಪೂರ್ವ ಭಾರತದ ಪ್ರಮುಖ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಸಲ ಪುಶ್ ಪಡೆಯಲಿದೆ ಎನ್ನುವ ಲೆಕ್ಕಾಚಾರಗಳೂ ಉಲ್ಟಾ ಆಗತೊಡಗಿವೆ. ಇಲ್ಲಿ ಒಟ್ಟು 42 ಸೀಟುಗಳಿದ್ದು 2014ರಲ್ಲಿ ಬಿಜೆಪಿ 2 ಸೀಟು ಗೆದ್ದಿತ್ತು. ಈ ಸಲ 8 ಗೆಲ್ಲಲಿದೆ ಎಂಬ ಲೆಕ್ಕಾಚಾರವನ್ನು ಮಮತಾ ದೀದಿ ಹೊಡೆದು ಹಾಕಿದ್ದಾರೆ. ಇಲ್ಲಿ ಬಿಜೆಪಿ ತನ್ನ ಸಂಖ್ಯೆಯನ್ನು 2ರಿಂದ 6ಕ್ಕೆ ಹೆಚ್ಚಿಸಕೊಳ್ಳಬಹುದು. ಅಂದರೆ 4 ಸೀಟು ಲಾಭ. ಇನ್ನೊಂದು ಲೆಕ್ಕದಲ್ಲಿ ಅದು 2ರಿಂದ ಒಂದಕ್ಕೂ ಕುಸಿಯಬಹುದು….

75 ಸೀಟು ಕೊರತೆಯೇ ಹೊಡೆತ!
ಉತ್ತರದಲ್ಲಿ ಬಿಜೆಪಿಗೆ ಕಳೆದ ಸಲಕ್ಕಿಂತ ಈ ಸಲ 75 ಸೀಟು ಕಡಿಮೆ ಬರಲಿವೆ. ಇದನ್ನು ತುಂಬಿಕೊಂಡರಷ್ಟೇ ಅದು ಮೊದಲಿನ ಸ್ಥಾನಕ್ಕೆ ಬರಬಹುದು. ಎಲ್ಲಿಂದ ತುಂಬಿಕೊಳ್ಳಲಿದೆ? ಪಶ್ಚಿಮದಲ್ಲಿಯಾ? ಅಷ್ಟು ಸುಲಭವಲ್ಲ… ದಕ್ಷಿಣದಲ್ಲಿ? ಬಿಜೆಪಿಗೇ ಗೊತ್ತಿರುವಂತೆ ಇದೂ ಅಸಾಧ್ಯ….
(ಆಧಾರ: ದೀಪಂಕರ್ ಬಸು ಮತ್ತು ತಂಡ, ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...