HomeUncategorized75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ....

75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

40ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲ್ಲಿರುವ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ

- Advertisement -
- Advertisement -

ಕಳೆದ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಉತ್ತರ ಭಾರತದ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಅದ್ಭುತ ವಿಜಯ ಸಾಧಿಸುವುದರ ಮೂಲಕ. ಈ ಸಲ ಉತ್ತರ ಭಾರತದಲ್ಲಿ ಅದರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನುತ್ತಾರೆ ಖ್ಯಾತ ವಿಶ್ಲೇಷಕ ದೀಪಂಕರ್ ಬಸು ನತ್ತು ಅವರ ತಂಡದ ಸದಸ್ಯರು. ವಿವಿಧ ಚುನಾವಣಾ ಶಾಸ್ತ್ರಗಳನ್ನು ಬಲ್ಲ ಈ ತಂಡ, ಎರಡು-ಮೂರು ಮಾನದಂಡಗಳಲ್ಲಿ ವಿಶ್ಲೇಷಣೆ ಮಾಡಿದಾಗಲೂ, ಅಂತಿಮ ಫಲಿತಾಂಶ: ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ ಎಂಬುದೇ ಆಗಿದೆ….. ಪಶ್ಚಿಮ ಬಂಗಾಳದಲ್ಲೂ ಅದಕ್ಕೆ ಸಿಗುವ ಲಾಭ ಅಷ್ಟಕ್ಕಷ್ಟೇ …ಈ ಅಧ್ಯಯನವನ್ನು ಓದಿ ಅದರ ಸಂಕ್ಷಿಪ್ತ ರೂಪವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ…

ಹಿಂದಿ ಬೆಲ್ಟ್: ಬಿಜೆಪಿಗೆ 75 ಸೀಟು ನಷ್ಟ
ಕಳೆದ ಸಲ 2014ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಹಿಂದಿ ಬೆಲ್ಟ್ ಎಂದು ಕರೆಯಲ್ಪಡುವ 10 ರಾಜ್ಯಗಳಾದ ಬಿಹಾರ್, ಛತ್ತೀಸ್‍ಘಡ್, ದೆಹಲಿ, ಹಿಮಾಚಲ ಪ್ರದೇಶ, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ್, ಉತ್ತರಾಖಂಡ, ಮತ್ತು ಉತ್ತರ ಪ್ರದೇಶಗಳಲ್ಲಿ ಅದು ಸಾಧಿಸಿದ ಅಭೂತಪೂರ್ವ ಗೆಲುವು. ಈ 10 ರಾಜ್ಯಗಳ ಒಟ್ಟು 225 ಸೀಟುಗಳಲ್ಲಿ ಬಿಜೆಪಿ 190 ಸೀಟುಗಳನ್ನು ಗೆದ್ದಿತ್ತು!
2019ರಲ್ಲಿ ಅದರ ಭವಿಷ್ಯವನ್ನು ಇದೇ ರಾಜ್ಯಗಳು ಬರೆಯಲಿವೆ. ಅದರಲ್ಲೂ ಉತ್ತರ ಪ್ರದೇಶ ರಾಜ್ಯದ ಫಲಿತಾಂಶವೇ ಈ ಇತರ ಹಿಂದಿ ರಾಜ್ಯಗಳ ಮೇಲೂ ಪ್ರಭಾವ ಹೊಂದಿರುತ್ತದೆ.

ಮೊದಲ ಏಟೇ ಯು.ಪಿ.ಯಿಂದ!
ಇಲ್ಲಿ ಈ ಅಧ್ಯಯನದಲ್ಲಿ ಎರಡು ವಿಧಾನ ಆಯ್ದು ಕೊಳ್ಳಲಾಗಿದೆ. ಮೊದಲ ವಿಧಾನದಲ್ಲಿ 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಅಸೆಂಬ್ಲಿ ಚುನಾವಣೆಗಳನ್ನು ಮತ್ತು ಎರಡನೇ ವಿಧಾನದಲ್ಲಿ 2014ರ ಸಂಸತ್ ಚುನಾವಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ವಿಧಾನದ ಪ್ರಕಾರ, ಅದರ ಶೇಕಡಾವಾರು ಮತಗಳಿಕೆ ಶೇ.42.3ರಿಂದ 39.3ಕ್ಕೆ ಇಳಿಯಲಿದೆ. ಅಂದರೆ, ಈಗಿರುವ ಅದರ 71 ಸಂಸದರ ಸಂಖ್ಯೆ 27ಕ್ಕೆ ಕುಸಿಯಲಿದೆ. ಇದರರ್ಥ 44 ಸೀಟುಗಳ ನಷ್ಟ.

ಎರಡನೆ ವಿಧಾನದಲ್ಲಿ, ಅದರ ಶೇಕಡಾವಾರು ಮತಗಳಿಕೆ ಹೆಚ್ಚೂಕಡಿಮೆ 2014ರಲ್ಲಿ ಇದ್ದಷ್ಟೇ ಇರಲಿದ್ದು, ಸೀಟುಗಳ ಸಂಖ್ಯೆಯಲ್ಲಿ 71ರಿಂದ 30ಕ್ಕೆ ಇಳಿಯಲಿದೆ. ಅಂದರೆ 41 ಸೀಟುಗಳ ನಷ್ಟ.

40ರ ಕೊರತೆ ಎಲ್ಲಿ ತುಂಬುವುದು?
2014ರಲ್ಲಿ ಬಿಜೆಪಿ ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಸ್ವೀಪ್ ಎನ್ನುವ ಮಟ್ಟಿಗೆ ವಿಜಯ ಸಾಧಿಸಿತ್ತು. ಇದರರ್ಥ ಈಗದು ಉತ್ತರ ಪ್ರದೇಶದ 40 ಸೀಟುಗಳ ಕೊರತೆಯನ್ನು ಈ ಭಾಗದಿಂದಲೇ ತುಂಬಿಕೊಳ್ಳಬೇಕು. ಏಕೆಂದರೆ, ಉಳಿದೆಡೆ ಅಂತಹ ವಾತಾವರಣ ಇಲ್ಲ. ಪೂರ್ವ ಮತ್ತು ದಕ್ಷಿಣದಲ್ಲಿ ಅದಕ್ಕೆ ಗಮನಾರ್ಹ ಲಾಭ ತಂದುಕೊಡುವ ಪರಿಸ್ಥಿತಿ ಇಲ್ಲವೇ ಇಲ್ಲ.
ಅಂತಿಮವಾಗಿ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ.

ಇದನ್ನು ಓದಿ: ಡಾಟಾ ಅನಾಲಿಕಲ್ ವರದಿ ಹೇಳುತ್ತಿವೆ ಬಿಜೆಪಿಗೆ ಸೋಲು ಖಚಿತ

ಮಮತಾ ಮುಂದೆ ಮಂಡಿಯೂರಿತೇ?
ಪೂರ್ವ ಭಾರತದ ಪ್ರಮುಖ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಸಲ ಪುಶ್ ಪಡೆಯಲಿದೆ ಎನ್ನುವ ಲೆಕ್ಕಾಚಾರಗಳೂ ಉಲ್ಟಾ ಆಗತೊಡಗಿವೆ. ಇಲ್ಲಿ ಒಟ್ಟು 42 ಸೀಟುಗಳಿದ್ದು 2014ರಲ್ಲಿ ಬಿಜೆಪಿ 2 ಸೀಟು ಗೆದ್ದಿತ್ತು. ಈ ಸಲ 8 ಗೆಲ್ಲಲಿದೆ ಎಂಬ ಲೆಕ್ಕಾಚಾರವನ್ನು ಮಮತಾ ದೀದಿ ಹೊಡೆದು ಹಾಕಿದ್ದಾರೆ. ಇಲ್ಲಿ ಬಿಜೆಪಿ ತನ್ನ ಸಂಖ್ಯೆಯನ್ನು 2ರಿಂದ 6ಕ್ಕೆ ಹೆಚ್ಚಿಸಕೊಳ್ಳಬಹುದು. ಅಂದರೆ 4 ಸೀಟು ಲಾಭ. ಇನ್ನೊಂದು ಲೆಕ್ಕದಲ್ಲಿ ಅದು 2ರಿಂದ ಒಂದಕ್ಕೂ ಕುಸಿಯಬಹುದು….

75 ಸೀಟು ಕೊರತೆಯೇ ಹೊಡೆತ!
ಉತ್ತರದಲ್ಲಿ ಬಿಜೆಪಿಗೆ ಕಳೆದ ಸಲಕ್ಕಿಂತ ಈ ಸಲ 75 ಸೀಟು ಕಡಿಮೆ ಬರಲಿವೆ. ಇದನ್ನು ತುಂಬಿಕೊಂಡರಷ್ಟೇ ಅದು ಮೊದಲಿನ ಸ್ಥಾನಕ್ಕೆ ಬರಬಹುದು. ಎಲ್ಲಿಂದ ತುಂಬಿಕೊಳ್ಳಲಿದೆ? ಪಶ್ಚಿಮದಲ್ಲಿಯಾ? ಅಷ್ಟು ಸುಲಭವಲ್ಲ… ದಕ್ಷಿಣದಲ್ಲಿ? ಬಿಜೆಪಿಗೇ ಗೊತ್ತಿರುವಂತೆ ಇದೂ ಅಸಾಧ್ಯ….
(ಆಧಾರ: ದೀಪಂಕರ್ ಬಸು ಮತ್ತು ತಂಡ, ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...