HomeUncategorized75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ....

75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

40ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲ್ಲಿರುವ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ

- Advertisement -
- Advertisement -

ಕಳೆದ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಉತ್ತರ ಭಾರತದ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಅದ್ಭುತ ವಿಜಯ ಸಾಧಿಸುವುದರ ಮೂಲಕ. ಈ ಸಲ ಉತ್ತರ ಭಾರತದಲ್ಲಿ ಅದರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನುತ್ತಾರೆ ಖ್ಯಾತ ವಿಶ್ಲೇಷಕ ದೀಪಂಕರ್ ಬಸು ನತ್ತು ಅವರ ತಂಡದ ಸದಸ್ಯರು. ವಿವಿಧ ಚುನಾವಣಾ ಶಾಸ್ತ್ರಗಳನ್ನು ಬಲ್ಲ ಈ ತಂಡ, ಎರಡು-ಮೂರು ಮಾನದಂಡಗಳಲ್ಲಿ ವಿಶ್ಲೇಷಣೆ ಮಾಡಿದಾಗಲೂ, ಅಂತಿಮ ಫಲಿತಾಂಶ: ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ ಎಂಬುದೇ ಆಗಿದೆ….. ಪಶ್ಚಿಮ ಬಂಗಾಳದಲ್ಲೂ ಅದಕ್ಕೆ ಸಿಗುವ ಲಾಭ ಅಷ್ಟಕ್ಕಷ್ಟೇ …ಈ ಅಧ್ಯಯನವನ್ನು ಓದಿ ಅದರ ಸಂಕ್ಷಿಪ್ತ ರೂಪವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ…

ಹಿಂದಿ ಬೆಲ್ಟ್: ಬಿಜೆಪಿಗೆ 75 ಸೀಟು ನಷ್ಟ
ಕಳೆದ ಸಲ 2014ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಹಿಂದಿ ಬೆಲ್ಟ್ ಎಂದು ಕರೆಯಲ್ಪಡುವ 10 ರಾಜ್ಯಗಳಾದ ಬಿಹಾರ್, ಛತ್ತೀಸ್‍ಘಡ್, ದೆಹಲಿ, ಹಿಮಾಚಲ ಪ್ರದೇಶ, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ್, ಉತ್ತರಾಖಂಡ, ಮತ್ತು ಉತ್ತರ ಪ್ರದೇಶಗಳಲ್ಲಿ ಅದು ಸಾಧಿಸಿದ ಅಭೂತಪೂರ್ವ ಗೆಲುವು. ಈ 10 ರಾಜ್ಯಗಳ ಒಟ್ಟು 225 ಸೀಟುಗಳಲ್ಲಿ ಬಿಜೆಪಿ 190 ಸೀಟುಗಳನ್ನು ಗೆದ್ದಿತ್ತು!
2019ರಲ್ಲಿ ಅದರ ಭವಿಷ್ಯವನ್ನು ಇದೇ ರಾಜ್ಯಗಳು ಬರೆಯಲಿವೆ. ಅದರಲ್ಲೂ ಉತ್ತರ ಪ್ರದೇಶ ರಾಜ್ಯದ ಫಲಿತಾಂಶವೇ ಈ ಇತರ ಹಿಂದಿ ರಾಜ್ಯಗಳ ಮೇಲೂ ಪ್ರಭಾವ ಹೊಂದಿರುತ್ತದೆ.

ಮೊದಲ ಏಟೇ ಯು.ಪಿ.ಯಿಂದ!
ಇಲ್ಲಿ ಈ ಅಧ್ಯಯನದಲ್ಲಿ ಎರಡು ವಿಧಾನ ಆಯ್ದು ಕೊಳ್ಳಲಾಗಿದೆ. ಮೊದಲ ವಿಧಾನದಲ್ಲಿ 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಅಸೆಂಬ್ಲಿ ಚುನಾವಣೆಗಳನ್ನು ಮತ್ತು ಎರಡನೇ ವಿಧಾನದಲ್ಲಿ 2014ರ ಸಂಸತ್ ಚುನಾವಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ವಿಧಾನದ ಪ್ರಕಾರ, ಅದರ ಶೇಕಡಾವಾರು ಮತಗಳಿಕೆ ಶೇ.42.3ರಿಂದ 39.3ಕ್ಕೆ ಇಳಿಯಲಿದೆ. ಅಂದರೆ, ಈಗಿರುವ ಅದರ 71 ಸಂಸದರ ಸಂಖ್ಯೆ 27ಕ್ಕೆ ಕುಸಿಯಲಿದೆ. ಇದರರ್ಥ 44 ಸೀಟುಗಳ ನಷ್ಟ.

ಎರಡನೆ ವಿಧಾನದಲ್ಲಿ, ಅದರ ಶೇಕಡಾವಾರು ಮತಗಳಿಕೆ ಹೆಚ್ಚೂಕಡಿಮೆ 2014ರಲ್ಲಿ ಇದ್ದಷ್ಟೇ ಇರಲಿದ್ದು, ಸೀಟುಗಳ ಸಂಖ್ಯೆಯಲ್ಲಿ 71ರಿಂದ 30ಕ್ಕೆ ಇಳಿಯಲಿದೆ. ಅಂದರೆ 41 ಸೀಟುಗಳ ನಷ್ಟ.

40ರ ಕೊರತೆ ಎಲ್ಲಿ ತುಂಬುವುದು?
2014ರಲ್ಲಿ ಬಿಜೆಪಿ ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಸ್ವೀಪ್ ಎನ್ನುವ ಮಟ್ಟಿಗೆ ವಿಜಯ ಸಾಧಿಸಿತ್ತು. ಇದರರ್ಥ ಈಗದು ಉತ್ತರ ಪ್ರದೇಶದ 40 ಸೀಟುಗಳ ಕೊರತೆಯನ್ನು ಈ ಭಾಗದಿಂದಲೇ ತುಂಬಿಕೊಳ್ಳಬೇಕು. ಏಕೆಂದರೆ, ಉಳಿದೆಡೆ ಅಂತಹ ವಾತಾವರಣ ಇಲ್ಲ. ಪೂರ್ವ ಮತ್ತು ದಕ್ಷಿಣದಲ್ಲಿ ಅದಕ್ಕೆ ಗಮನಾರ್ಹ ಲಾಭ ತಂದುಕೊಡುವ ಪರಿಸ್ಥಿತಿ ಇಲ್ಲವೇ ಇಲ್ಲ.
ಅಂತಿಮವಾಗಿ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ.

ಇದನ್ನು ಓದಿ: ಡಾಟಾ ಅನಾಲಿಕಲ್ ವರದಿ ಹೇಳುತ್ತಿವೆ ಬಿಜೆಪಿಗೆ ಸೋಲು ಖಚಿತ

ಮಮತಾ ಮುಂದೆ ಮಂಡಿಯೂರಿತೇ?
ಪೂರ್ವ ಭಾರತದ ಪ್ರಮುಖ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಸಲ ಪುಶ್ ಪಡೆಯಲಿದೆ ಎನ್ನುವ ಲೆಕ್ಕಾಚಾರಗಳೂ ಉಲ್ಟಾ ಆಗತೊಡಗಿವೆ. ಇಲ್ಲಿ ಒಟ್ಟು 42 ಸೀಟುಗಳಿದ್ದು 2014ರಲ್ಲಿ ಬಿಜೆಪಿ 2 ಸೀಟು ಗೆದ್ದಿತ್ತು. ಈ ಸಲ 8 ಗೆಲ್ಲಲಿದೆ ಎಂಬ ಲೆಕ್ಕಾಚಾರವನ್ನು ಮಮತಾ ದೀದಿ ಹೊಡೆದು ಹಾಕಿದ್ದಾರೆ. ಇಲ್ಲಿ ಬಿಜೆಪಿ ತನ್ನ ಸಂಖ್ಯೆಯನ್ನು 2ರಿಂದ 6ಕ್ಕೆ ಹೆಚ್ಚಿಸಕೊಳ್ಳಬಹುದು. ಅಂದರೆ 4 ಸೀಟು ಲಾಭ. ಇನ್ನೊಂದು ಲೆಕ್ಕದಲ್ಲಿ ಅದು 2ರಿಂದ ಒಂದಕ್ಕೂ ಕುಸಿಯಬಹುದು….

75 ಸೀಟು ಕೊರತೆಯೇ ಹೊಡೆತ!
ಉತ್ತರದಲ್ಲಿ ಬಿಜೆಪಿಗೆ ಕಳೆದ ಸಲಕ್ಕಿಂತ ಈ ಸಲ 75 ಸೀಟು ಕಡಿಮೆ ಬರಲಿವೆ. ಇದನ್ನು ತುಂಬಿಕೊಂಡರಷ್ಟೇ ಅದು ಮೊದಲಿನ ಸ್ಥಾನಕ್ಕೆ ಬರಬಹುದು. ಎಲ್ಲಿಂದ ತುಂಬಿಕೊಳ್ಳಲಿದೆ? ಪಶ್ಚಿಮದಲ್ಲಿಯಾ? ಅಷ್ಟು ಸುಲಭವಲ್ಲ… ದಕ್ಷಿಣದಲ್ಲಿ? ಬಿಜೆಪಿಗೇ ಗೊತ್ತಿರುವಂತೆ ಇದೂ ಅಸಾಧ್ಯ….
(ಆಧಾರ: ದೀಪಂಕರ್ ಬಸು ಮತ್ತು ತಂಡ, ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...