HomeUncategorized75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ....

75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

40ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲ್ಲಿರುವ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ

- Advertisement -
- Advertisement -

ಕಳೆದ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಉತ್ತರ ಭಾರತದ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಅದ್ಭುತ ವಿಜಯ ಸಾಧಿಸುವುದರ ಮೂಲಕ. ಈ ಸಲ ಉತ್ತರ ಭಾರತದಲ್ಲಿ ಅದರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನುತ್ತಾರೆ ಖ್ಯಾತ ವಿಶ್ಲೇಷಕ ದೀಪಂಕರ್ ಬಸು ನತ್ತು ಅವರ ತಂಡದ ಸದಸ್ಯರು. ವಿವಿಧ ಚುನಾವಣಾ ಶಾಸ್ತ್ರಗಳನ್ನು ಬಲ್ಲ ಈ ತಂಡ, ಎರಡು-ಮೂರು ಮಾನದಂಡಗಳಲ್ಲಿ ವಿಶ್ಲೇಷಣೆ ಮಾಡಿದಾಗಲೂ, ಅಂತಿಮ ಫಲಿತಾಂಶ: ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ ಎಂಬುದೇ ಆಗಿದೆ….. ಪಶ್ಚಿಮ ಬಂಗಾಳದಲ್ಲೂ ಅದಕ್ಕೆ ಸಿಗುವ ಲಾಭ ಅಷ್ಟಕ್ಕಷ್ಟೇ …ಈ ಅಧ್ಯಯನವನ್ನು ಓದಿ ಅದರ ಸಂಕ್ಷಿಪ್ತ ರೂಪವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ…

ಹಿಂದಿ ಬೆಲ್ಟ್: ಬಿಜೆಪಿಗೆ 75 ಸೀಟು ನಷ್ಟ
ಕಳೆದ ಸಲ 2014ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಹಿಂದಿ ಬೆಲ್ಟ್ ಎಂದು ಕರೆಯಲ್ಪಡುವ 10 ರಾಜ್ಯಗಳಾದ ಬಿಹಾರ್, ಛತ್ತೀಸ್‍ಘಡ್, ದೆಹಲಿ, ಹಿಮಾಚಲ ಪ್ರದೇಶ, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ್, ಉತ್ತರಾಖಂಡ, ಮತ್ತು ಉತ್ತರ ಪ್ರದೇಶಗಳಲ್ಲಿ ಅದು ಸಾಧಿಸಿದ ಅಭೂತಪೂರ್ವ ಗೆಲುವು. ಈ 10 ರಾಜ್ಯಗಳ ಒಟ್ಟು 225 ಸೀಟುಗಳಲ್ಲಿ ಬಿಜೆಪಿ 190 ಸೀಟುಗಳನ್ನು ಗೆದ್ದಿತ್ತು!
2019ರಲ್ಲಿ ಅದರ ಭವಿಷ್ಯವನ್ನು ಇದೇ ರಾಜ್ಯಗಳು ಬರೆಯಲಿವೆ. ಅದರಲ್ಲೂ ಉತ್ತರ ಪ್ರದೇಶ ರಾಜ್ಯದ ಫಲಿತಾಂಶವೇ ಈ ಇತರ ಹಿಂದಿ ರಾಜ್ಯಗಳ ಮೇಲೂ ಪ್ರಭಾವ ಹೊಂದಿರುತ್ತದೆ.

ಮೊದಲ ಏಟೇ ಯು.ಪಿ.ಯಿಂದ!
ಇಲ್ಲಿ ಈ ಅಧ್ಯಯನದಲ್ಲಿ ಎರಡು ವಿಧಾನ ಆಯ್ದು ಕೊಳ್ಳಲಾಗಿದೆ. ಮೊದಲ ವಿಧಾನದಲ್ಲಿ 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಅಸೆಂಬ್ಲಿ ಚುನಾವಣೆಗಳನ್ನು ಮತ್ತು ಎರಡನೇ ವಿಧಾನದಲ್ಲಿ 2014ರ ಸಂಸತ್ ಚುನಾವಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ವಿಧಾನದ ಪ್ರಕಾರ, ಅದರ ಶೇಕಡಾವಾರು ಮತಗಳಿಕೆ ಶೇ.42.3ರಿಂದ 39.3ಕ್ಕೆ ಇಳಿಯಲಿದೆ. ಅಂದರೆ, ಈಗಿರುವ ಅದರ 71 ಸಂಸದರ ಸಂಖ್ಯೆ 27ಕ್ಕೆ ಕುಸಿಯಲಿದೆ. ಇದರರ್ಥ 44 ಸೀಟುಗಳ ನಷ್ಟ.

ಎರಡನೆ ವಿಧಾನದಲ್ಲಿ, ಅದರ ಶೇಕಡಾವಾರು ಮತಗಳಿಕೆ ಹೆಚ್ಚೂಕಡಿಮೆ 2014ರಲ್ಲಿ ಇದ್ದಷ್ಟೇ ಇರಲಿದ್ದು, ಸೀಟುಗಳ ಸಂಖ್ಯೆಯಲ್ಲಿ 71ರಿಂದ 30ಕ್ಕೆ ಇಳಿಯಲಿದೆ. ಅಂದರೆ 41 ಸೀಟುಗಳ ನಷ್ಟ.

40ರ ಕೊರತೆ ಎಲ್ಲಿ ತುಂಬುವುದು?
2014ರಲ್ಲಿ ಬಿಜೆಪಿ ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಸ್ವೀಪ್ ಎನ್ನುವ ಮಟ್ಟಿಗೆ ವಿಜಯ ಸಾಧಿಸಿತ್ತು. ಇದರರ್ಥ ಈಗದು ಉತ್ತರ ಪ್ರದೇಶದ 40 ಸೀಟುಗಳ ಕೊರತೆಯನ್ನು ಈ ಭಾಗದಿಂದಲೇ ತುಂಬಿಕೊಳ್ಳಬೇಕು. ಏಕೆಂದರೆ, ಉಳಿದೆಡೆ ಅಂತಹ ವಾತಾವರಣ ಇಲ್ಲ. ಪೂರ್ವ ಮತ್ತು ದಕ್ಷಿಣದಲ್ಲಿ ಅದಕ್ಕೆ ಗಮನಾರ್ಹ ಲಾಭ ತಂದುಕೊಡುವ ಪರಿಸ್ಥಿತಿ ಇಲ್ಲವೇ ಇಲ್ಲ.
ಅಂತಿಮವಾಗಿ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ.

ಇದನ್ನು ಓದಿ: ಡಾಟಾ ಅನಾಲಿಕಲ್ ವರದಿ ಹೇಳುತ್ತಿವೆ ಬಿಜೆಪಿಗೆ ಸೋಲು ಖಚಿತ

ಮಮತಾ ಮುಂದೆ ಮಂಡಿಯೂರಿತೇ?
ಪೂರ್ವ ಭಾರತದ ಪ್ರಮುಖ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಸಲ ಪುಶ್ ಪಡೆಯಲಿದೆ ಎನ್ನುವ ಲೆಕ್ಕಾಚಾರಗಳೂ ಉಲ್ಟಾ ಆಗತೊಡಗಿವೆ. ಇಲ್ಲಿ ಒಟ್ಟು 42 ಸೀಟುಗಳಿದ್ದು 2014ರಲ್ಲಿ ಬಿಜೆಪಿ 2 ಸೀಟು ಗೆದ್ದಿತ್ತು. ಈ ಸಲ 8 ಗೆಲ್ಲಲಿದೆ ಎಂಬ ಲೆಕ್ಕಾಚಾರವನ್ನು ಮಮತಾ ದೀದಿ ಹೊಡೆದು ಹಾಕಿದ್ದಾರೆ. ಇಲ್ಲಿ ಬಿಜೆಪಿ ತನ್ನ ಸಂಖ್ಯೆಯನ್ನು 2ರಿಂದ 6ಕ್ಕೆ ಹೆಚ್ಚಿಸಕೊಳ್ಳಬಹುದು. ಅಂದರೆ 4 ಸೀಟು ಲಾಭ. ಇನ್ನೊಂದು ಲೆಕ್ಕದಲ್ಲಿ ಅದು 2ರಿಂದ ಒಂದಕ್ಕೂ ಕುಸಿಯಬಹುದು….

75 ಸೀಟು ಕೊರತೆಯೇ ಹೊಡೆತ!
ಉತ್ತರದಲ್ಲಿ ಬಿಜೆಪಿಗೆ ಕಳೆದ ಸಲಕ್ಕಿಂತ ಈ ಸಲ 75 ಸೀಟು ಕಡಿಮೆ ಬರಲಿವೆ. ಇದನ್ನು ತುಂಬಿಕೊಂಡರಷ್ಟೇ ಅದು ಮೊದಲಿನ ಸ್ಥಾನಕ್ಕೆ ಬರಬಹುದು. ಎಲ್ಲಿಂದ ತುಂಬಿಕೊಳ್ಳಲಿದೆ? ಪಶ್ಚಿಮದಲ್ಲಿಯಾ? ಅಷ್ಟು ಸುಲಭವಲ್ಲ… ದಕ್ಷಿಣದಲ್ಲಿ? ಬಿಜೆಪಿಗೇ ಗೊತ್ತಿರುವಂತೆ ಇದೂ ಅಸಾಧ್ಯ….
(ಆಧಾರ: ದೀಪಂಕರ್ ಬಸು ಮತ್ತು ತಂಡ, ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...