HomeUncategorized75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ....

75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

40ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲ್ಲಿರುವ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ

- Advertisement -
- Advertisement -

ಕಳೆದ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಉತ್ತರ ಭಾರತದ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಅದ್ಭುತ ವಿಜಯ ಸಾಧಿಸುವುದರ ಮೂಲಕ. ಈ ಸಲ ಉತ್ತರ ಭಾರತದಲ್ಲಿ ಅದರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನುತ್ತಾರೆ ಖ್ಯಾತ ವಿಶ್ಲೇಷಕ ದೀಪಂಕರ್ ಬಸು ನತ್ತು ಅವರ ತಂಡದ ಸದಸ್ಯರು. ವಿವಿಧ ಚುನಾವಣಾ ಶಾಸ್ತ್ರಗಳನ್ನು ಬಲ್ಲ ಈ ತಂಡ, ಎರಡು-ಮೂರು ಮಾನದಂಡಗಳಲ್ಲಿ ವಿಶ್ಲೇಷಣೆ ಮಾಡಿದಾಗಲೂ, ಅಂತಿಮ ಫಲಿತಾಂಶ: ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ ಎಂಬುದೇ ಆಗಿದೆ….. ಪಶ್ಚಿಮ ಬಂಗಾಳದಲ್ಲೂ ಅದಕ್ಕೆ ಸಿಗುವ ಲಾಭ ಅಷ್ಟಕ್ಕಷ್ಟೇ …ಈ ಅಧ್ಯಯನವನ್ನು ಓದಿ ಅದರ ಸಂಕ್ಷಿಪ್ತ ರೂಪವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ…

ಹಿಂದಿ ಬೆಲ್ಟ್: ಬಿಜೆಪಿಗೆ 75 ಸೀಟು ನಷ್ಟ
ಕಳೆದ ಸಲ 2014ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಹಿಂದಿ ಬೆಲ್ಟ್ ಎಂದು ಕರೆಯಲ್ಪಡುವ 10 ರಾಜ್ಯಗಳಾದ ಬಿಹಾರ್, ಛತ್ತೀಸ್‍ಘಡ್, ದೆಹಲಿ, ಹಿಮಾಚಲ ಪ್ರದೇಶ, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ್, ಉತ್ತರಾಖಂಡ, ಮತ್ತು ಉತ್ತರ ಪ್ರದೇಶಗಳಲ್ಲಿ ಅದು ಸಾಧಿಸಿದ ಅಭೂತಪೂರ್ವ ಗೆಲುವು. ಈ 10 ರಾಜ್ಯಗಳ ಒಟ್ಟು 225 ಸೀಟುಗಳಲ್ಲಿ ಬಿಜೆಪಿ 190 ಸೀಟುಗಳನ್ನು ಗೆದ್ದಿತ್ತು!
2019ರಲ್ಲಿ ಅದರ ಭವಿಷ್ಯವನ್ನು ಇದೇ ರಾಜ್ಯಗಳು ಬರೆಯಲಿವೆ. ಅದರಲ್ಲೂ ಉತ್ತರ ಪ್ರದೇಶ ರಾಜ್ಯದ ಫಲಿತಾಂಶವೇ ಈ ಇತರ ಹಿಂದಿ ರಾಜ್ಯಗಳ ಮೇಲೂ ಪ್ರಭಾವ ಹೊಂದಿರುತ್ತದೆ.

ಮೊದಲ ಏಟೇ ಯು.ಪಿ.ಯಿಂದ!
ಇಲ್ಲಿ ಈ ಅಧ್ಯಯನದಲ್ಲಿ ಎರಡು ವಿಧಾನ ಆಯ್ದು ಕೊಳ್ಳಲಾಗಿದೆ. ಮೊದಲ ವಿಧಾನದಲ್ಲಿ 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಅಸೆಂಬ್ಲಿ ಚುನಾವಣೆಗಳನ್ನು ಮತ್ತು ಎರಡನೇ ವಿಧಾನದಲ್ಲಿ 2014ರ ಸಂಸತ್ ಚುನಾವಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ವಿಧಾನದ ಪ್ರಕಾರ, ಅದರ ಶೇಕಡಾವಾರು ಮತಗಳಿಕೆ ಶೇ.42.3ರಿಂದ 39.3ಕ್ಕೆ ಇಳಿಯಲಿದೆ. ಅಂದರೆ, ಈಗಿರುವ ಅದರ 71 ಸಂಸದರ ಸಂಖ್ಯೆ 27ಕ್ಕೆ ಕುಸಿಯಲಿದೆ. ಇದರರ್ಥ 44 ಸೀಟುಗಳ ನಷ್ಟ.

ಎರಡನೆ ವಿಧಾನದಲ್ಲಿ, ಅದರ ಶೇಕಡಾವಾರು ಮತಗಳಿಕೆ ಹೆಚ್ಚೂಕಡಿಮೆ 2014ರಲ್ಲಿ ಇದ್ದಷ್ಟೇ ಇರಲಿದ್ದು, ಸೀಟುಗಳ ಸಂಖ್ಯೆಯಲ್ಲಿ 71ರಿಂದ 30ಕ್ಕೆ ಇಳಿಯಲಿದೆ. ಅಂದರೆ 41 ಸೀಟುಗಳ ನಷ್ಟ.

40ರ ಕೊರತೆ ಎಲ್ಲಿ ತುಂಬುವುದು?
2014ರಲ್ಲಿ ಬಿಜೆಪಿ ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಸ್ವೀಪ್ ಎನ್ನುವ ಮಟ್ಟಿಗೆ ವಿಜಯ ಸಾಧಿಸಿತ್ತು. ಇದರರ್ಥ ಈಗದು ಉತ್ತರ ಪ್ರದೇಶದ 40 ಸೀಟುಗಳ ಕೊರತೆಯನ್ನು ಈ ಭಾಗದಿಂದಲೇ ತುಂಬಿಕೊಳ್ಳಬೇಕು. ಏಕೆಂದರೆ, ಉಳಿದೆಡೆ ಅಂತಹ ವಾತಾವರಣ ಇಲ್ಲ. ಪೂರ್ವ ಮತ್ತು ದಕ್ಷಿಣದಲ್ಲಿ ಅದಕ್ಕೆ ಗಮನಾರ್ಹ ಲಾಭ ತಂದುಕೊಡುವ ಪರಿಸ್ಥಿತಿ ಇಲ್ಲವೇ ಇಲ್ಲ.
ಅಂತಿಮವಾಗಿ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ.

ಇದನ್ನು ಓದಿ: ಡಾಟಾ ಅನಾಲಿಕಲ್ ವರದಿ ಹೇಳುತ್ತಿವೆ ಬಿಜೆಪಿಗೆ ಸೋಲು ಖಚಿತ

ಮಮತಾ ಮುಂದೆ ಮಂಡಿಯೂರಿತೇ?
ಪೂರ್ವ ಭಾರತದ ಪ್ರಮುಖ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಸಲ ಪುಶ್ ಪಡೆಯಲಿದೆ ಎನ್ನುವ ಲೆಕ್ಕಾಚಾರಗಳೂ ಉಲ್ಟಾ ಆಗತೊಡಗಿವೆ. ಇಲ್ಲಿ ಒಟ್ಟು 42 ಸೀಟುಗಳಿದ್ದು 2014ರಲ್ಲಿ ಬಿಜೆಪಿ 2 ಸೀಟು ಗೆದ್ದಿತ್ತು. ಈ ಸಲ 8 ಗೆಲ್ಲಲಿದೆ ಎಂಬ ಲೆಕ್ಕಾಚಾರವನ್ನು ಮಮತಾ ದೀದಿ ಹೊಡೆದು ಹಾಕಿದ್ದಾರೆ. ಇಲ್ಲಿ ಬಿಜೆಪಿ ತನ್ನ ಸಂಖ್ಯೆಯನ್ನು 2ರಿಂದ 6ಕ್ಕೆ ಹೆಚ್ಚಿಸಕೊಳ್ಳಬಹುದು. ಅಂದರೆ 4 ಸೀಟು ಲಾಭ. ಇನ್ನೊಂದು ಲೆಕ್ಕದಲ್ಲಿ ಅದು 2ರಿಂದ ಒಂದಕ್ಕೂ ಕುಸಿಯಬಹುದು….

75 ಸೀಟು ಕೊರತೆಯೇ ಹೊಡೆತ!
ಉತ್ತರದಲ್ಲಿ ಬಿಜೆಪಿಗೆ ಕಳೆದ ಸಲಕ್ಕಿಂತ ಈ ಸಲ 75 ಸೀಟು ಕಡಿಮೆ ಬರಲಿವೆ. ಇದನ್ನು ತುಂಬಿಕೊಂಡರಷ್ಟೇ ಅದು ಮೊದಲಿನ ಸ್ಥಾನಕ್ಕೆ ಬರಬಹುದು. ಎಲ್ಲಿಂದ ತುಂಬಿಕೊಳ್ಳಲಿದೆ? ಪಶ್ಚಿಮದಲ್ಲಿಯಾ? ಅಷ್ಟು ಸುಲಭವಲ್ಲ… ದಕ್ಷಿಣದಲ್ಲಿ? ಬಿಜೆಪಿಗೇ ಗೊತ್ತಿರುವಂತೆ ಇದೂ ಅಸಾಧ್ಯ….
(ಆಧಾರ: ದೀಪಂಕರ್ ಬಸು ಮತ್ತು ತಂಡ, ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...