HomeUncategorized75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ....

75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

40ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲ್ಲಿರುವ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ

- Advertisement -
- Advertisement -

ಕಳೆದ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಉತ್ತರ ಭಾರತದ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಅದ್ಭುತ ವಿಜಯ ಸಾಧಿಸುವುದರ ಮೂಲಕ. ಈ ಸಲ ಉತ್ತರ ಭಾರತದಲ್ಲಿ ಅದರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನುತ್ತಾರೆ ಖ್ಯಾತ ವಿಶ್ಲೇಷಕ ದೀಪಂಕರ್ ಬಸು ನತ್ತು ಅವರ ತಂಡದ ಸದಸ್ಯರು. ವಿವಿಧ ಚುನಾವಣಾ ಶಾಸ್ತ್ರಗಳನ್ನು ಬಲ್ಲ ಈ ತಂಡ, ಎರಡು-ಮೂರು ಮಾನದಂಡಗಳಲ್ಲಿ ವಿಶ್ಲೇಷಣೆ ಮಾಡಿದಾಗಲೂ, ಅಂತಿಮ ಫಲಿತಾಂಶ: ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ ಎಂಬುದೇ ಆಗಿದೆ….. ಪಶ್ಚಿಮ ಬಂಗಾಳದಲ್ಲೂ ಅದಕ್ಕೆ ಸಿಗುವ ಲಾಭ ಅಷ್ಟಕ್ಕಷ್ಟೇ …ಈ ಅಧ್ಯಯನವನ್ನು ಓದಿ ಅದರ ಸಂಕ್ಷಿಪ್ತ ರೂಪವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ…

ಹಿಂದಿ ಬೆಲ್ಟ್: ಬಿಜೆಪಿಗೆ 75 ಸೀಟು ನಷ್ಟ
ಕಳೆದ ಸಲ 2014ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಹಿಂದಿ ಬೆಲ್ಟ್ ಎಂದು ಕರೆಯಲ್ಪಡುವ 10 ರಾಜ್ಯಗಳಾದ ಬಿಹಾರ್, ಛತ್ತೀಸ್‍ಘಡ್, ದೆಹಲಿ, ಹಿಮಾಚಲ ಪ್ರದೇಶ, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ್, ಉತ್ತರಾಖಂಡ, ಮತ್ತು ಉತ್ತರ ಪ್ರದೇಶಗಳಲ್ಲಿ ಅದು ಸಾಧಿಸಿದ ಅಭೂತಪೂರ್ವ ಗೆಲುವು. ಈ 10 ರಾಜ್ಯಗಳ ಒಟ್ಟು 225 ಸೀಟುಗಳಲ್ಲಿ ಬಿಜೆಪಿ 190 ಸೀಟುಗಳನ್ನು ಗೆದ್ದಿತ್ತು!
2019ರಲ್ಲಿ ಅದರ ಭವಿಷ್ಯವನ್ನು ಇದೇ ರಾಜ್ಯಗಳು ಬರೆಯಲಿವೆ. ಅದರಲ್ಲೂ ಉತ್ತರ ಪ್ರದೇಶ ರಾಜ್ಯದ ಫಲಿತಾಂಶವೇ ಈ ಇತರ ಹಿಂದಿ ರಾಜ್ಯಗಳ ಮೇಲೂ ಪ್ರಭಾವ ಹೊಂದಿರುತ್ತದೆ.

ಮೊದಲ ಏಟೇ ಯು.ಪಿ.ಯಿಂದ!
ಇಲ್ಲಿ ಈ ಅಧ್ಯಯನದಲ್ಲಿ ಎರಡು ವಿಧಾನ ಆಯ್ದು ಕೊಳ್ಳಲಾಗಿದೆ. ಮೊದಲ ವಿಧಾನದಲ್ಲಿ 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಅಸೆಂಬ್ಲಿ ಚುನಾವಣೆಗಳನ್ನು ಮತ್ತು ಎರಡನೇ ವಿಧಾನದಲ್ಲಿ 2014ರ ಸಂಸತ್ ಚುನಾವಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ವಿಧಾನದ ಪ್ರಕಾರ, ಅದರ ಶೇಕಡಾವಾರು ಮತಗಳಿಕೆ ಶೇ.42.3ರಿಂದ 39.3ಕ್ಕೆ ಇಳಿಯಲಿದೆ. ಅಂದರೆ, ಈಗಿರುವ ಅದರ 71 ಸಂಸದರ ಸಂಖ್ಯೆ 27ಕ್ಕೆ ಕುಸಿಯಲಿದೆ. ಇದರರ್ಥ 44 ಸೀಟುಗಳ ನಷ್ಟ.

ಎರಡನೆ ವಿಧಾನದಲ್ಲಿ, ಅದರ ಶೇಕಡಾವಾರು ಮತಗಳಿಕೆ ಹೆಚ್ಚೂಕಡಿಮೆ 2014ರಲ್ಲಿ ಇದ್ದಷ್ಟೇ ಇರಲಿದ್ದು, ಸೀಟುಗಳ ಸಂಖ್ಯೆಯಲ್ಲಿ 71ರಿಂದ 30ಕ್ಕೆ ಇಳಿಯಲಿದೆ. ಅಂದರೆ 41 ಸೀಟುಗಳ ನಷ್ಟ.

40ರ ಕೊರತೆ ಎಲ್ಲಿ ತುಂಬುವುದು?
2014ರಲ್ಲಿ ಬಿಜೆಪಿ ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಸ್ವೀಪ್ ಎನ್ನುವ ಮಟ್ಟಿಗೆ ವಿಜಯ ಸಾಧಿಸಿತ್ತು. ಇದರರ್ಥ ಈಗದು ಉತ್ತರ ಪ್ರದೇಶದ 40 ಸೀಟುಗಳ ಕೊರತೆಯನ್ನು ಈ ಭಾಗದಿಂದಲೇ ತುಂಬಿಕೊಳ್ಳಬೇಕು. ಏಕೆಂದರೆ, ಉಳಿದೆಡೆ ಅಂತಹ ವಾತಾವರಣ ಇಲ್ಲ. ಪೂರ್ವ ಮತ್ತು ದಕ್ಷಿಣದಲ್ಲಿ ಅದಕ್ಕೆ ಗಮನಾರ್ಹ ಲಾಭ ತಂದುಕೊಡುವ ಪರಿಸ್ಥಿತಿ ಇಲ್ಲವೇ ಇಲ್ಲ.
ಅಂತಿಮವಾಗಿ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ.

ಇದನ್ನು ಓದಿ: ಡಾಟಾ ಅನಾಲಿಕಲ್ ವರದಿ ಹೇಳುತ್ತಿವೆ ಬಿಜೆಪಿಗೆ ಸೋಲು ಖಚಿತ

ಮಮತಾ ಮುಂದೆ ಮಂಡಿಯೂರಿತೇ?
ಪೂರ್ವ ಭಾರತದ ಪ್ರಮುಖ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಸಲ ಪುಶ್ ಪಡೆಯಲಿದೆ ಎನ್ನುವ ಲೆಕ್ಕಾಚಾರಗಳೂ ಉಲ್ಟಾ ಆಗತೊಡಗಿವೆ. ಇಲ್ಲಿ ಒಟ್ಟು 42 ಸೀಟುಗಳಿದ್ದು 2014ರಲ್ಲಿ ಬಿಜೆಪಿ 2 ಸೀಟು ಗೆದ್ದಿತ್ತು. ಈ ಸಲ 8 ಗೆಲ್ಲಲಿದೆ ಎಂಬ ಲೆಕ್ಕಾಚಾರವನ್ನು ಮಮತಾ ದೀದಿ ಹೊಡೆದು ಹಾಕಿದ್ದಾರೆ. ಇಲ್ಲಿ ಬಿಜೆಪಿ ತನ್ನ ಸಂಖ್ಯೆಯನ್ನು 2ರಿಂದ 6ಕ್ಕೆ ಹೆಚ್ಚಿಸಕೊಳ್ಳಬಹುದು. ಅಂದರೆ 4 ಸೀಟು ಲಾಭ. ಇನ್ನೊಂದು ಲೆಕ್ಕದಲ್ಲಿ ಅದು 2ರಿಂದ ಒಂದಕ್ಕೂ ಕುಸಿಯಬಹುದು….

75 ಸೀಟು ಕೊರತೆಯೇ ಹೊಡೆತ!
ಉತ್ತರದಲ್ಲಿ ಬಿಜೆಪಿಗೆ ಕಳೆದ ಸಲಕ್ಕಿಂತ ಈ ಸಲ 75 ಸೀಟು ಕಡಿಮೆ ಬರಲಿವೆ. ಇದನ್ನು ತುಂಬಿಕೊಂಡರಷ್ಟೇ ಅದು ಮೊದಲಿನ ಸ್ಥಾನಕ್ಕೆ ಬರಬಹುದು. ಎಲ್ಲಿಂದ ತುಂಬಿಕೊಳ್ಳಲಿದೆ? ಪಶ್ಚಿಮದಲ್ಲಿಯಾ? ಅಷ್ಟು ಸುಲಭವಲ್ಲ… ದಕ್ಷಿಣದಲ್ಲಿ? ಬಿಜೆಪಿಗೇ ಗೊತ್ತಿರುವಂತೆ ಇದೂ ಅಸಾಧ್ಯ….
(ಆಧಾರ: ದೀಪಂಕರ್ ಬಸು ಮತ್ತು ತಂಡ, ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...