HomeUncategorized75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ....

75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

40ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲ್ಲಿರುವ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ

- Advertisement -
- Advertisement -

ಕಳೆದ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಉತ್ತರ ಭಾರತದ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಅದ್ಭುತ ವಿಜಯ ಸಾಧಿಸುವುದರ ಮೂಲಕ. ಈ ಸಲ ಉತ್ತರ ಭಾರತದಲ್ಲಿ ಅದರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನುತ್ತಾರೆ ಖ್ಯಾತ ವಿಶ್ಲೇಷಕ ದೀಪಂಕರ್ ಬಸು ನತ್ತು ಅವರ ತಂಡದ ಸದಸ್ಯರು. ವಿವಿಧ ಚುನಾವಣಾ ಶಾಸ್ತ್ರಗಳನ್ನು ಬಲ್ಲ ಈ ತಂಡ, ಎರಡು-ಮೂರು ಮಾನದಂಡಗಳಲ್ಲಿ ವಿಶ್ಲೇಷಣೆ ಮಾಡಿದಾಗಲೂ, ಅಂತಿಮ ಫಲಿತಾಂಶ: ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ ಎಂಬುದೇ ಆಗಿದೆ….. ಪಶ್ಚಿಮ ಬಂಗಾಳದಲ್ಲೂ ಅದಕ್ಕೆ ಸಿಗುವ ಲಾಭ ಅಷ್ಟಕ್ಕಷ್ಟೇ …ಈ ಅಧ್ಯಯನವನ್ನು ಓದಿ ಅದರ ಸಂಕ್ಷಿಪ್ತ ರೂಪವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ…

ಹಿಂದಿ ಬೆಲ್ಟ್: ಬಿಜೆಪಿಗೆ 75 ಸೀಟು ನಷ್ಟ
ಕಳೆದ ಸಲ 2014ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಹಿಂದಿ ಬೆಲ್ಟ್ ಎಂದು ಕರೆಯಲ್ಪಡುವ 10 ರಾಜ್ಯಗಳಾದ ಬಿಹಾರ್, ಛತ್ತೀಸ್‍ಘಡ್, ದೆಹಲಿ, ಹಿಮಾಚಲ ಪ್ರದೇಶ, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ್, ಉತ್ತರಾಖಂಡ, ಮತ್ತು ಉತ್ತರ ಪ್ರದೇಶಗಳಲ್ಲಿ ಅದು ಸಾಧಿಸಿದ ಅಭೂತಪೂರ್ವ ಗೆಲುವು. ಈ 10 ರಾಜ್ಯಗಳ ಒಟ್ಟು 225 ಸೀಟುಗಳಲ್ಲಿ ಬಿಜೆಪಿ 190 ಸೀಟುಗಳನ್ನು ಗೆದ್ದಿತ್ತು!
2019ರಲ್ಲಿ ಅದರ ಭವಿಷ್ಯವನ್ನು ಇದೇ ರಾಜ್ಯಗಳು ಬರೆಯಲಿವೆ. ಅದರಲ್ಲೂ ಉತ್ತರ ಪ್ರದೇಶ ರಾಜ್ಯದ ಫಲಿತಾಂಶವೇ ಈ ಇತರ ಹಿಂದಿ ರಾಜ್ಯಗಳ ಮೇಲೂ ಪ್ರಭಾವ ಹೊಂದಿರುತ್ತದೆ.

ಮೊದಲ ಏಟೇ ಯು.ಪಿ.ಯಿಂದ!
ಇಲ್ಲಿ ಈ ಅಧ್ಯಯನದಲ್ಲಿ ಎರಡು ವಿಧಾನ ಆಯ್ದು ಕೊಳ್ಳಲಾಗಿದೆ. ಮೊದಲ ವಿಧಾನದಲ್ಲಿ 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಅಸೆಂಬ್ಲಿ ಚುನಾವಣೆಗಳನ್ನು ಮತ್ತು ಎರಡನೇ ವಿಧಾನದಲ್ಲಿ 2014ರ ಸಂಸತ್ ಚುನಾವಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ವಿಧಾನದ ಪ್ರಕಾರ, ಅದರ ಶೇಕಡಾವಾರು ಮತಗಳಿಕೆ ಶೇ.42.3ರಿಂದ 39.3ಕ್ಕೆ ಇಳಿಯಲಿದೆ. ಅಂದರೆ, ಈಗಿರುವ ಅದರ 71 ಸಂಸದರ ಸಂಖ್ಯೆ 27ಕ್ಕೆ ಕುಸಿಯಲಿದೆ. ಇದರರ್ಥ 44 ಸೀಟುಗಳ ನಷ್ಟ.

ಎರಡನೆ ವಿಧಾನದಲ್ಲಿ, ಅದರ ಶೇಕಡಾವಾರು ಮತಗಳಿಕೆ ಹೆಚ್ಚೂಕಡಿಮೆ 2014ರಲ್ಲಿ ಇದ್ದಷ್ಟೇ ಇರಲಿದ್ದು, ಸೀಟುಗಳ ಸಂಖ್ಯೆಯಲ್ಲಿ 71ರಿಂದ 30ಕ್ಕೆ ಇಳಿಯಲಿದೆ. ಅಂದರೆ 41 ಸೀಟುಗಳ ನಷ್ಟ.

40ರ ಕೊರತೆ ಎಲ್ಲಿ ತುಂಬುವುದು?
2014ರಲ್ಲಿ ಬಿಜೆಪಿ ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಸ್ವೀಪ್ ಎನ್ನುವ ಮಟ್ಟಿಗೆ ವಿಜಯ ಸಾಧಿಸಿತ್ತು. ಇದರರ್ಥ ಈಗದು ಉತ್ತರ ಪ್ರದೇಶದ 40 ಸೀಟುಗಳ ಕೊರತೆಯನ್ನು ಈ ಭಾಗದಿಂದಲೇ ತುಂಬಿಕೊಳ್ಳಬೇಕು. ಏಕೆಂದರೆ, ಉಳಿದೆಡೆ ಅಂತಹ ವಾತಾವರಣ ಇಲ್ಲ. ಪೂರ್ವ ಮತ್ತು ದಕ್ಷಿಣದಲ್ಲಿ ಅದಕ್ಕೆ ಗಮನಾರ್ಹ ಲಾಭ ತಂದುಕೊಡುವ ಪರಿಸ್ಥಿತಿ ಇಲ್ಲವೇ ಇಲ್ಲ.
ಅಂತಿಮವಾಗಿ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ.

ಇದನ್ನು ಓದಿ: ಡಾಟಾ ಅನಾಲಿಕಲ್ ವರದಿ ಹೇಳುತ್ತಿವೆ ಬಿಜೆಪಿಗೆ ಸೋಲು ಖಚಿತ

ಮಮತಾ ಮುಂದೆ ಮಂಡಿಯೂರಿತೇ?
ಪೂರ್ವ ಭಾರತದ ಪ್ರಮುಖ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಸಲ ಪುಶ್ ಪಡೆಯಲಿದೆ ಎನ್ನುವ ಲೆಕ್ಕಾಚಾರಗಳೂ ಉಲ್ಟಾ ಆಗತೊಡಗಿವೆ. ಇಲ್ಲಿ ಒಟ್ಟು 42 ಸೀಟುಗಳಿದ್ದು 2014ರಲ್ಲಿ ಬಿಜೆಪಿ 2 ಸೀಟು ಗೆದ್ದಿತ್ತು. ಈ ಸಲ 8 ಗೆಲ್ಲಲಿದೆ ಎಂಬ ಲೆಕ್ಕಾಚಾರವನ್ನು ಮಮತಾ ದೀದಿ ಹೊಡೆದು ಹಾಕಿದ್ದಾರೆ. ಇಲ್ಲಿ ಬಿಜೆಪಿ ತನ್ನ ಸಂಖ್ಯೆಯನ್ನು 2ರಿಂದ 6ಕ್ಕೆ ಹೆಚ್ಚಿಸಕೊಳ್ಳಬಹುದು. ಅಂದರೆ 4 ಸೀಟು ಲಾಭ. ಇನ್ನೊಂದು ಲೆಕ್ಕದಲ್ಲಿ ಅದು 2ರಿಂದ ಒಂದಕ್ಕೂ ಕುಸಿಯಬಹುದು….

75 ಸೀಟು ಕೊರತೆಯೇ ಹೊಡೆತ!
ಉತ್ತರದಲ್ಲಿ ಬಿಜೆಪಿಗೆ ಕಳೆದ ಸಲಕ್ಕಿಂತ ಈ ಸಲ 75 ಸೀಟು ಕಡಿಮೆ ಬರಲಿವೆ. ಇದನ್ನು ತುಂಬಿಕೊಂಡರಷ್ಟೇ ಅದು ಮೊದಲಿನ ಸ್ಥಾನಕ್ಕೆ ಬರಬಹುದು. ಎಲ್ಲಿಂದ ತುಂಬಿಕೊಳ್ಳಲಿದೆ? ಪಶ್ಚಿಮದಲ್ಲಿಯಾ? ಅಷ್ಟು ಸುಲಭವಲ್ಲ… ದಕ್ಷಿಣದಲ್ಲಿ? ಬಿಜೆಪಿಗೇ ಗೊತ್ತಿರುವಂತೆ ಇದೂ ಅಸಾಧ್ಯ….
(ಆಧಾರ: ದೀಪಂಕರ್ ಬಸು ಮತ್ತು ತಂಡ, ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...