Homeಮುಖಪುಟ'ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ': ಚರ್ಚೆಗೆ ಕಾರಣವಾದ ಕೇರಳ...

‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ

- Advertisement -
- Advertisement -

ತಮ್ಮ ಪಕ್ಷ ಗೆಲ್ಲಲು ಉದ್ದೇಶಿಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳ ಜನರನ್ನು ಕರೆತರಲಿದೆ ಎಂದು ಬಿಜೆಪಿ ಕೇರಳ ಘಟಕದ ಉಪಾಧ್ಯಕ್ಷ ಬಿ. ಗೋಪಾಲಕೃಷ್ಣನ್ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

“ನಾವು ಗೆಲ್ಲಲು ಉದ್ದೇಶಿಸಿರುವ ಕ್ಷೇತ್ರಗಳಿಗೆ ಜಮ್ಮುಕಾಶ್ಮೀರದಿಂದಲೂ ಜನರನ್ನು ಕರೆತರುತ್ತೇವೆ, ಅವರನ್ನು ಒಂದು ವರ್ಷದ ಅವಧಿಗೆ ಅಲ್ಲಿ ನೆಲೆಗೊಳಿಸಿ ಅವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುತ್ತೇವೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಭವಿಷ್ಯದಲ್ಲಿಯೂ ಅದನ್ನು ಮತ್ತೆ ಮಾಡುತ್ತೇವೆ” ಎಂದು ಗೋಪಾಲಕೃಷ್ಣನ್‌ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2024ರ ಲೋಕಸಭಾ ಚುನಾವಣೆಗೆ ಮುನ್ನ ತ್ರಿಶೂರ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ನೋಂದಣಿ ಅಕ್ರಮಗಳು ನಡೆದಿವೆ ಎಂಬ ಕಾಂಗ್ರೆಸ್ ಆರೋಪಗಳ ನಡುವೆಯೇ ಗೋಪಾಲಕೃಷ್ಣನ್‌ರ ಈ ಹೇಳಿಕೆ ಹೊರಬಿದ್ದಿದೆ. ತ್ರಿಶೂರಿನ ಬಿಜೆಪಿ ಸಂಸದ ಸುರೇಶ್ ಗೋಪಿಯವರು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಸುಳ್ಳು ಘೋಷಣೆಯನ್ನು ಸಲ್ಲಿಸಿದ್ದರು ಎಂದೂ ಕಾಂಗ್ರೆಸ್ ಆರೋಪಿಸಿದೆ.

ಸುರೇಶ್ ಗೋಪಿ ಮೂಲಕ ಬಿಜೆಪಿ ಕೇರಳದಲ್ಲಿ ತನ್ನ ಮೊದಲ ಲೋಕಸಭಾ ಕ್ಷೇತ್ರವನ್ನು ಗೆದ್ದಿದೆ. ಸುರೇಶ್ ಗೋಪಿ ಸಿಪಿಐ ಅಭ್ಯರ್ಥಿ ವಿ.ಎಸ್ ಸುನಿಲ್‌ ಕುಮಾರ್ ಅವರನ್ನು 74,600ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ, 2019 ಮತ್ತು 2024ರ ನಡುವೆ ತ್ರಿಶೂರಿನಲ್ಲಿ ಮತದಾರರ ಸಂಖ್ಯೆಯಲ್ಲಿ 1,46,656ರಷ್ಟು ಶಂಕಾಸ್ಪದ ಮತ್ತು ಅಸಹಜ ಏರಿಕೆ ಕಂಡು ಬಂದಿದ್ದು,ಇದು ಜನಸಂಖ್ಯಾ ಪ್ರವೃತ್ತಿಗೆ ಅನುಗುಣವಾಗಿಲ್ಲ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ತ್ರಿಶೂರಿನಲ್ಲಿ ಮತದಾರರ ನೋಂದಣಿಗಾಗಿ ಬಿಜೆಪಿಯು ಸುಳ್ಳು ವಿಳಾಸಗಳನ್ನು ಬಳಸಿಕೊಂಡಿತ್ತು ಎಂಬ ಆರೋಪಗಳನ್ನು ನಿರಾಕರಿಸಿದ ಗೋಪಾಲಕೃಷ್ಣನ್,‌ ತಮ್ಮ ವಿಳಾಸಗಳಲ್ಲಿ ಹೊರಗಿನವರ ಹೆಸರುಗಳನ್ನು ಹೇಗೆ ಸೇರಿಸಲಾಗಿದೆ ಎನ್ನುವುದು ಮನೆ ಮಾಲಿಕರಿಗೆ ತಿಳಿದಿರಲಿಲ್ಲ ಎಂಬ ಆರೋಪಗಳು ಕೇಳಿ ಬಂದ ಒಂದೆರಡು ಪ್ರಕರಣಗಳಿರಬಹುದು ಎಂದು ಹೇಳಿದ್ದಾರೆ. ಕ್ಷೇತ್ರದಲ್ಲಿ ನಕಲಿ ಮತದಾನ ನಡೆದಿಲ್ಲ ಎಂದಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಟಿ ರಮೇಶ್ ಅವರೂ ಆರೋಪಗಳನ್ನು ತಳ್ಳಿಹಾಕಿದ್ದು, ತ್ರಿಶೂರ್ ನಿವಾಸಿಗಳನ್ನು ಮಾತ್ರ ಮತದಾರರನ್ನಾಗಿ ನೋಂದಾಯಿಸಲಾಗಿತ್ತು ಎಂದಿದ್ದಾರೆ. ಚುನಾವಣಾ ಆಯೋಗವು ಮಾನ್ಯತೆ ನೀಡಿರುವ ಆರು ಗುರುತಿನ ಚೀಟಿಗಳಲ್ಲಿ ಒಂದನ್ನು, ಆರು ತಿಂಗಳು ವಾಸವಾಗಿರುವ ಪುರಾವೆ ಮತ್ತು ನೆರೆಹೊರೆಯವರ ದೃಢೀಕರಣ ಹೊಂದಿರುವ ಯಾರೇ ಆದರೂ ಕಾಶ್ಮೀರ ಸೇರಿದಂತೆ ಭಾರತದಲ್ಲಿ ಎಲ್ಲಿಯೇ ಆದರೂ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ಬೆಟ್ಟು ಮಾಡಿದ ಅವರು, ನಕಲಿ ಮತದಾರರನ್ನು ಸೇರಿಸಿದ್ದು ಬಿಜೆಪಿಯಲ್ಲ, ಸಿಪಿಎಂ ಮತ್ತು ಕಾಂಗ್ರೆಸ್ ಎಂದು ಆರೋಪಿಸಿದ್ದಾರೆ.

ಕಳೆದ ವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಕಾಂಗ್ರೆಸ್‌ನ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಸುರೇಶ್ ಗೋಪಿ,‌ “ಮತದಾರರ ಪಟ್ಟಿಯಲ್ಲಿ ಕೈವಾಡ ನಡೆದಿದೆ ಎಂಬ ಆರೋಪಕ್ಕೆ ಚುನಾವಣಾ ಆಯೋಗವು ಉತ್ತರಿಸಬೇಕು. ನಾನು ಓರ್ವ ಸಚಿವ ಮತ್ತು ನಾನು ನನ್ನ ಕರ್ತವ್ಯಗಳನ್ನು ಪೂರೈಸಿದ್ದೇನೆ. ಉತ್ತರಿಸಬೇಕಾದವರು ಉತ್ತರಿಸುತ್ತಾರೆ. ನಿಮಗೆ ಹೆಚ್ಚಿನ ಪ್ರಶ್ನೆಗಳಿದ್ದರೆ ಅವರನ್ನು ಕೇಳಿ ಅಥವಾ ವಿಷಯವು ಸರ್ವೋಚ್ಚ ನ್ಯಾಯಾಲಯದ ಮುಂದೆ ಬರುವವರೆಗೆ ಕಾಯಿರಿ” ಎಂದು ಹೇಳಿದ್ದರು.

ಸಮಾಜವಾದಿ ಪಕ್ಷದಿಂದ ಟಿಎಂಸಿ, ಬಿಜೆಡಿ ಮತ್ತು ಎಎಪಿಯವರೆಗೆ: ಮತದಾರರ ಪಟ್ಟಿಯ ಅಕ್ರಮಗಳೊಂದಿಗೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ಬಾಗಿಲು ತಟ್ಟಿದ ಬಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....