Homeಮುಖಪುಟ'ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ': ಚರ್ಚೆಗೆ ಕಾರಣವಾದ ಕೇರಳ...

‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ

- Advertisement -
- Advertisement -

ತಮ್ಮ ಪಕ್ಷ ಗೆಲ್ಲಲು ಉದ್ದೇಶಿಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳ ಜನರನ್ನು ಕರೆತರಲಿದೆ ಎಂದು ಬಿಜೆಪಿ ಕೇರಳ ಘಟಕದ ಉಪಾಧ್ಯಕ್ಷ ಬಿ. ಗೋಪಾಲಕೃಷ್ಣನ್ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

“ನಾವು ಗೆಲ್ಲಲು ಉದ್ದೇಶಿಸಿರುವ ಕ್ಷೇತ್ರಗಳಿಗೆ ಜಮ್ಮುಕಾಶ್ಮೀರದಿಂದಲೂ ಜನರನ್ನು ಕರೆತರುತ್ತೇವೆ, ಅವರನ್ನು ಒಂದು ವರ್ಷದ ಅವಧಿಗೆ ಅಲ್ಲಿ ನೆಲೆಗೊಳಿಸಿ ಅವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುತ್ತೇವೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಭವಿಷ್ಯದಲ್ಲಿಯೂ ಅದನ್ನು ಮತ್ತೆ ಮಾಡುತ್ತೇವೆ” ಎಂದು ಗೋಪಾಲಕೃಷ್ಣನ್‌ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2024ರ ಲೋಕಸಭಾ ಚುನಾವಣೆಗೆ ಮುನ್ನ ತ್ರಿಶೂರ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ನೋಂದಣಿ ಅಕ್ರಮಗಳು ನಡೆದಿವೆ ಎಂಬ ಕಾಂಗ್ರೆಸ್ ಆರೋಪಗಳ ನಡುವೆಯೇ ಗೋಪಾಲಕೃಷ್ಣನ್‌ರ ಈ ಹೇಳಿಕೆ ಹೊರಬಿದ್ದಿದೆ. ತ್ರಿಶೂರಿನ ಬಿಜೆಪಿ ಸಂಸದ ಸುರೇಶ್ ಗೋಪಿಯವರು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಸುಳ್ಳು ಘೋಷಣೆಯನ್ನು ಸಲ್ಲಿಸಿದ್ದರು ಎಂದೂ ಕಾಂಗ್ರೆಸ್ ಆರೋಪಿಸಿದೆ.

ಸುರೇಶ್ ಗೋಪಿ ಮೂಲಕ ಬಿಜೆಪಿ ಕೇರಳದಲ್ಲಿ ತನ್ನ ಮೊದಲ ಲೋಕಸಭಾ ಕ್ಷೇತ್ರವನ್ನು ಗೆದ್ದಿದೆ. ಸುರೇಶ್ ಗೋಪಿ ಸಿಪಿಐ ಅಭ್ಯರ್ಥಿ ವಿ.ಎಸ್ ಸುನಿಲ್‌ ಕುಮಾರ್ ಅವರನ್ನು 74,600ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ, 2019 ಮತ್ತು 2024ರ ನಡುವೆ ತ್ರಿಶೂರಿನಲ್ಲಿ ಮತದಾರರ ಸಂಖ್ಯೆಯಲ್ಲಿ 1,46,656ರಷ್ಟು ಶಂಕಾಸ್ಪದ ಮತ್ತು ಅಸಹಜ ಏರಿಕೆ ಕಂಡು ಬಂದಿದ್ದು,ಇದು ಜನಸಂಖ್ಯಾ ಪ್ರವೃತ್ತಿಗೆ ಅನುಗುಣವಾಗಿಲ್ಲ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ತ್ರಿಶೂರಿನಲ್ಲಿ ಮತದಾರರ ನೋಂದಣಿಗಾಗಿ ಬಿಜೆಪಿಯು ಸುಳ್ಳು ವಿಳಾಸಗಳನ್ನು ಬಳಸಿಕೊಂಡಿತ್ತು ಎಂಬ ಆರೋಪಗಳನ್ನು ನಿರಾಕರಿಸಿದ ಗೋಪಾಲಕೃಷ್ಣನ್,‌ ತಮ್ಮ ವಿಳಾಸಗಳಲ್ಲಿ ಹೊರಗಿನವರ ಹೆಸರುಗಳನ್ನು ಹೇಗೆ ಸೇರಿಸಲಾಗಿದೆ ಎನ್ನುವುದು ಮನೆ ಮಾಲಿಕರಿಗೆ ತಿಳಿದಿರಲಿಲ್ಲ ಎಂಬ ಆರೋಪಗಳು ಕೇಳಿ ಬಂದ ಒಂದೆರಡು ಪ್ರಕರಣಗಳಿರಬಹುದು ಎಂದು ಹೇಳಿದ್ದಾರೆ. ಕ್ಷೇತ್ರದಲ್ಲಿ ನಕಲಿ ಮತದಾನ ನಡೆದಿಲ್ಲ ಎಂದಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಟಿ ರಮೇಶ್ ಅವರೂ ಆರೋಪಗಳನ್ನು ತಳ್ಳಿಹಾಕಿದ್ದು, ತ್ರಿಶೂರ್ ನಿವಾಸಿಗಳನ್ನು ಮಾತ್ರ ಮತದಾರರನ್ನಾಗಿ ನೋಂದಾಯಿಸಲಾಗಿತ್ತು ಎಂದಿದ್ದಾರೆ. ಚುನಾವಣಾ ಆಯೋಗವು ಮಾನ್ಯತೆ ನೀಡಿರುವ ಆರು ಗುರುತಿನ ಚೀಟಿಗಳಲ್ಲಿ ಒಂದನ್ನು, ಆರು ತಿಂಗಳು ವಾಸವಾಗಿರುವ ಪುರಾವೆ ಮತ್ತು ನೆರೆಹೊರೆಯವರ ದೃಢೀಕರಣ ಹೊಂದಿರುವ ಯಾರೇ ಆದರೂ ಕಾಶ್ಮೀರ ಸೇರಿದಂತೆ ಭಾರತದಲ್ಲಿ ಎಲ್ಲಿಯೇ ಆದರೂ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ಬೆಟ್ಟು ಮಾಡಿದ ಅವರು, ನಕಲಿ ಮತದಾರರನ್ನು ಸೇರಿಸಿದ್ದು ಬಿಜೆಪಿಯಲ್ಲ, ಸಿಪಿಎಂ ಮತ್ತು ಕಾಂಗ್ರೆಸ್ ಎಂದು ಆರೋಪಿಸಿದ್ದಾರೆ.

ಕಳೆದ ವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಕಾಂಗ್ರೆಸ್‌ನ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಸುರೇಶ್ ಗೋಪಿ,‌ “ಮತದಾರರ ಪಟ್ಟಿಯಲ್ಲಿ ಕೈವಾಡ ನಡೆದಿದೆ ಎಂಬ ಆರೋಪಕ್ಕೆ ಚುನಾವಣಾ ಆಯೋಗವು ಉತ್ತರಿಸಬೇಕು. ನಾನು ಓರ್ವ ಸಚಿವ ಮತ್ತು ನಾನು ನನ್ನ ಕರ್ತವ್ಯಗಳನ್ನು ಪೂರೈಸಿದ್ದೇನೆ. ಉತ್ತರಿಸಬೇಕಾದವರು ಉತ್ತರಿಸುತ್ತಾರೆ. ನಿಮಗೆ ಹೆಚ್ಚಿನ ಪ್ರಶ್ನೆಗಳಿದ್ದರೆ ಅವರನ್ನು ಕೇಳಿ ಅಥವಾ ವಿಷಯವು ಸರ್ವೋಚ್ಚ ನ್ಯಾಯಾಲಯದ ಮುಂದೆ ಬರುವವರೆಗೆ ಕಾಯಿರಿ” ಎಂದು ಹೇಳಿದ್ದರು.

ಸಮಾಜವಾದಿ ಪಕ್ಷದಿಂದ ಟಿಎಂಸಿ, ಬಿಜೆಡಿ ಮತ್ತು ಎಎಪಿಯವರೆಗೆ: ಮತದಾರರ ಪಟ್ಟಿಯ ಅಕ್ರಮಗಳೊಂದಿಗೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ಬಾಗಿಲು ತಟ್ಟಿದ ಬಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...