Homeಮುಖಪುಟಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

’ಬಿಜೆಪಿಯು ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. “ಮಹಾತ್ಮಾ ಗಾಂಧಿಯವರ ಕೋರಿಕೆಯ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾದಾನ ಪತ್ರಗಳನ್ನು ಬರೆದಿದ್ದಾರೆ” ಎಂಬ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ

“ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ANI ಯೊಂದಿಗೆ ಮಾತನಾಡಿರುವ ಅಸಾದುದ್ದೀನ್ ಓವೈಸಿ “ಬಿಜೆಪಿಯವರು ವಿಕೃತ ಇತಿಹಾಸವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಇದು ಮುಂದುವರಿದರೆ, ಮಹಾತ್ಮ ಗಾಂಧಿಯನ್ನು ರಾಷ್ಟ್ರಪಿತ ಸ್ಥಾನದಿಂದ ತೆಗೆದುಹಾಕಿ, ಮಹಾತ್ಮಾ ಗಾಂಧಿಯವರ ಹತ್ಯೆಯ ಆರೋಪಿಯಾಗಿದ್ದ ಸಾವರ್ಕರ್‌ರನ್ನು ರಾಷ್ಟ್ರಪಿತ ಎಂದು ಘೋಷಿಸಲಿದ್ದಾರೆ. ಜೊತೆಗೆ ಅವರನ್ನು ನ್ಯಾಯಮೂರ್ತಿ ಜೀವನ್ ಲಾಲ್ ಕಪೂರ್‌ ಅವರ ವಿಚಾರಣೆಗೆ ಸಹಭಾಗಿ ಎಂದು ಘೋಷಿಸುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಎಂಬ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್, ಮಹಾತ್ಮ ಗಾಂಧಿಯವರ ಕೋರಿಕೆಯ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾದಾನ ಪತ್ರಗಳನ್ನು ಬರೆದಿದ್ದಾರೆ ಎಂದು ಹೇಳಿದ್ದಾರೆ.

“ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ಸಾಮಾಜಿಕ ಜಾಲತಣಗಳಲ್ಲಿ ವ್ಯಕ್ತವಾಗಿವೆ.

ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷನ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದಿದ್ದಾರೆ.


ಇದನ್ನೂ ಓದಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಓವೈಸಿ ಬೆಳೆದಿರೋದೇ ದೇಶ ವಿರೋಧಿ ಚಟುವಟಿಕೆಗಳ ಕುಮ್ಮಕ್ಕಿನಿಂದ ,ಇವನ ಅಸಲಿ ಮುಖವೇ ಪಾಕಿಸ್ತಾನ್ ನ ಪರ ಹೀಗಿರುವಾಗ ಈ ಮುಠ್ಠಾಳರು ಹೇಳಿದ ಹಾಗೆ ಗೂಡ್ಸೇ ಸಹ ಹಿಂಧೂ ರಾಷ್ಟ್ರ ಭಕ್ತರು ,ಹಾಗಿರುವಾಗ ಅವರು ಸಹ ರಾಷ್ಟ್ರ ಪಿತರೇ ಎಂದು ಹಿಂದೂಗಳ ಹೃದಯದಲ್ಲಿ ನೆಲೆಸಿದ್ದಾರೆ .ಅದರಲ್ಲಿ ದೇಶ ಒಡೆದಿರುವ ಮುಠ್ಠಾಳರ ಬಾಯಲ್ಲಿ ಹೇಳುವ ಅಗತ್ಯ ಇಲ್ಲವೇ ಇಲ್ಲ .

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...