Homeಮುಖಪುಟಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

’ಬಿಜೆಪಿಯು ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. “ಮಹಾತ್ಮಾ ಗಾಂಧಿಯವರ ಕೋರಿಕೆಯ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾದಾನ ಪತ್ರಗಳನ್ನು ಬರೆದಿದ್ದಾರೆ” ಎಂಬ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ

“ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ANI ಯೊಂದಿಗೆ ಮಾತನಾಡಿರುವ ಅಸಾದುದ್ದೀನ್ ಓವೈಸಿ “ಬಿಜೆಪಿಯವರು ವಿಕೃತ ಇತಿಹಾಸವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಇದು ಮುಂದುವರಿದರೆ, ಮಹಾತ್ಮ ಗಾಂಧಿಯನ್ನು ರಾಷ್ಟ್ರಪಿತ ಸ್ಥಾನದಿಂದ ತೆಗೆದುಹಾಕಿ, ಮಹಾತ್ಮಾ ಗಾಂಧಿಯವರ ಹತ್ಯೆಯ ಆರೋಪಿಯಾಗಿದ್ದ ಸಾವರ್ಕರ್‌ರನ್ನು ರಾಷ್ಟ್ರಪಿತ ಎಂದು ಘೋಷಿಸಲಿದ್ದಾರೆ. ಜೊತೆಗೆ ಅವರನ್ನು ನ್ಯಾಯಮೂರ್ತಿ ಜೀವನ್ ಲಾಲ್ ಕಪೂರ್‌ ಅವರ ವಿಚಾರಣೆಗೆ ಸಹಭಾಗಿ ಎಂದು ಘೋಷಿಸುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಎಂಬ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್, ಮಹಾತ್ಮ ಗಾಂಧಿಯವರ ಕೋರಿಕೆಯ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾದಾನ ಪತ್ರಗಳನ್ನು ಬರೆದಿದ್ದಾರೆ ಎಂದು ಹೇಳಿದ್ದಾರೆ.

“ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ಸಾಮಾಜಿಕ ಜಾಲತಣಗಳಲ್ಲಿ ವ್ಯಕ್ತವಾಗಿವೆ.

ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷನ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದಿದ್ದಾರೆ.


ಇದನ್ನೂ ಓದಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಓವೈಸಿ ಬೆಳೆದಿರೋದೇ ದೇಶ ವಿರೋಧಿ ಚಟುವಟಿಕೆಗಳ ಕುಮ್ಮಕ್ಕಿನಿಂದ ,ಇವನ ಅಸಲಿ ಮುಖವೇ ಪಾಕಿಸ್ತಾನ್ ನ ಪರ ಹೀಗಿರುವಾಗ ಈ ಮುಠ್ಠಾಳರು ಹೇಳಿದ ಹಾಗೆ ಗೂಡ್ಸೇ ಸಹ ಹಿಂಧೂ ರಾಷ್ಟ್ರ ಭಕ್ತರು ,ಹಾಗಿರುವಾಗ ಅವರು ಸಹ ರಾಷ್ಟ್ರ ಪಿತರೇ ಎಂದು ಹಿಂದೂಗಳ ಹೃದಯದಲ್ಲಿ ನೆಲೆಸಿದ್ದಾರೆ .ಅದರಲ್ಲಿ ದೇಶ ಒಡೆದಿರುವ ಮುಠ್ಠಾಳರ ಬಾಯಲ್ಲಿ ಹೇಳುವ ಅಗತ್ಯ ಇಲ್ಲವೇ ಇಲ್ಲ .

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...