Homeಮುಖಪುಟಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ನಿಜವಾಗುತ್ತಿದೆ ಪ್ರಶಾಂತ್ ಕಿಶೋರ್ ಭವಿಷ್ಯ!

ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ನಿಜವಾಗುತ್ತಿದೆ ಪ್ರಶಾಂತ್ ಕಿಶೋರ್ ಭವಿಷ್ಯ!

ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 100 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ಈ ರಾಜಕೀಯ ಕ್ಷೇತ್ರವನ್ನು ತ್ಯಜಿಸುತ್ತೇನೆ ಎಂದು ಕಿಶೋರ್ ಸವಾಲು ಹಾಕಿದ್ದರು.

- Advertisement -
- Advertisement -

“ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ವಾಸ್ತವದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಮುಟ್ಟಲು ಹೆಣಗಾಡುತ್ತಿದೆ. ಒಂದು ವೇಳೆ ಅವರು ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇ ಆದಲ್ಲಿ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ, ಬರೆದಿಟ್ಟುಕೊಳ್ಳಿ”.. 2020ರ ಡಿಸೆಂಬರ್ 21 ರಂದು ಹೀಗೆ ಹೇಳಿದ್ದು ಸದ್ಯದ ಚುನಾವಣೆಯಲ್ಲಿ ಬಂಗಾಳದಲ್ಲಿ ಟಿಎಂಸಿ ಪರ ಮತ್ತು ತಮಿಳುನಾಡಿನಲ್ಲಿ ಡಿಎಂಕೆ ಪರ ಚುನಾವಣಾ ತಂತ್ರಜ್ಞನಾಗಿ ಕೆಲಸ ಮಾಡಿದ ರಾಜಕೀಯ ಚತುರ ಪ್ರಶಾಂತ್ ಕಿಶೋರ್..

ಅವರು ಈ ಮಾತು ಹೇಳಿ ನಾಲ್ಕು ತಿಂಗಳ ನಂತರ ಅದು ನಿಜವಾಗುತ್ತಿದೆ. ಇಂದು ಪಶ್ಚಿಮ ಬಂಗಾಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು 294 ವಿಧಾನಸಭಾ ಕ್ಷೇತ್ರಗಳಲ್ಲಿ 204 ಸ್ಥಾನಗಳಲ್ಲಿ ಟಿಎಂಸಿ ಭರ್ಜರಿ ಮುನ್ನಡೆ ಸಾಧಿಸಿ ಜಯದತ್ತ ಮುನ್ನುಗ್ಗುತ್ತಿದೆ. ಆದರೆ ಬಿಜೆಪಿ 84 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿ ತಿಣುಕಾಡುತ್ತಿದೆ. ಇನ್ನು ಅಂತಿಮ ಫಲಿತಾಂಶ ಘೋಷಣೆಯಾಗಿಲ್ಲದಿದ್ದರೂ ಈಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ 100  ಸ್ಥಾನಗಳಲ್ಲಿ ಗೆಲ್ಲುವುದು ಅಸಾಧ್ಯದ ಮಾತು. ಹಾಗಾಗಿ ಪ್ರಶಾಂತ್ ಕಿಶೋರ್ ನುಡಿದಿದ್ದ ಭವಿಷ್ಯ ನಿಜವಾಗುತ್ತಲಿದೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ಈ ಕ್ಷೇತ್ರ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಈ ವರ್ಷದ ಫೆಬ್ರವರಿ 27 ರಂದು ಅವರು ತಮ್ಮ ಮಾತನ್ನು ಪುನರುಚ್ಚರಿಸಿದ್ದರು. “ಪ್ರಜಾಪ್ರಭುತ್ವದ ಉಳಿವಿಗಾಗಿ ಭಾರತದಲ್ಲಿ ನಡೆಯುತ್ತಿರುವ ಪ್ರಮುಖ ಕದನಗಳಲ್ಲಿ ಒಂದು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದೆ. ಇಲ್ಲಿನ ಜನರು ಸರಿಯಾದುದನ್ನು ಆಯ್ಕೆ ಮಾಡುವ ಮೂಲಕ ತಮ್ಮ ಸ್ಪಷ್ಟ ಸಂದೇಶವನ್ನು ತಿಳಿಸಲು ಸಜ್ಜಾಗಿದ್ದಾರೆ. ಪಶ್ಚಿಮ ಬಂಗಾಳ ತನ್ನ ಸ್ವಂತ ಮಗಳನ್ನು ಬಯಸುತ್ತಿದೆ. ನನ್ನ ಕೊನೆಯ ಟ್ವೀಟ್‌ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಟ್ವೀಟ್ ಮಾಡಿದ್ದರು.

ಅಲ್ಲದೇ ಇಂಡಿಯಾ ಟುಡೆ ನಿರೂಪಕ ರಾಹುಲ್ ಕುನ್ವಾಲ್‌ಗೆ ಸಂದರ್ಶನ ನೀಡಿದ್ದಾಗ ಅವರು, ಬಿಜೆಪಿ 100 ಸ್ಥಾನಗಳನ್ನು ದಾಟುವುದಿಲ್ಲ ಎಂದು ಅವರು ಮತ್ತೆ ಸವಾಲು ಹಾಕಿದ್ದರು. ರಾಹುಲ್ ಕುನ್ವಾಲ್, “ಇದು ನಿಜವೇ? ಎಂದು ಪದೇ ಪದೇ ಕೇಳಿದ್ದರು. ಒಂದು ವೇಳೆ 100 ದಾಟಿದರೆ ನೀವು ಬೇರೆ ಏನು ಕೆಲಸ ಮಾಡುತ್ತೀರಿ” ಎಂದೆಲ್ಲಾ ಪ್ರಶ್ನಿಸಿದ್ದರು. ಆಗ ಪ್ರಶಾಂತ್ ಕಿಶೋರ್ ಆ ಸಂದರ್ಭ ಬಂದಾಗ ಯೋಚಿಸುತ್ತೇನೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದರು.

ಈಗ ಪ್ರಶಾಂತ್ ಕಿಶೋರ್ ಮಾತು ನಿಜವಾಗುತ್ತಿದ್ದು, ಬಂಗಾಳದಲ್ಲಿ ಬಿಜೆಪಿ 100 ಸ್ಥಾನಗಳನ್ನು ದಾಟಲು ಹೆಣಗಾಡುತ್ತಿದೆ. ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರು 200 ಸ್ಥಾನ ಗೆಲ್ಲುತ್ತೇವೆ, ಮುಂದಿನ ಸರ್ಕಾರ ನಮ್ಮದೆ ಎಂಬ ಹೇಳಿಕೆ ನೀಡಿದ್ದರು.

ಇನ್ನೊಂದೆಡೆ ಪ್ರಶಾಂತ್ ಕಿಶೋರ್ ಡಿಎಂಕೆ ಪರವಾಗಿ ಈ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ಡಿಎಂಕೆ ಸಹ ತಮಿಳುನಾಡಿನಲ್ಲಿ ಭರ್ಜರಿ ಜಯಗಳಿಸಿದೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....