Homeಮುಖಪುಟಗಾಳಿ ಹೆಚ್ಚು ಬಲವಾಗಿ ಬೀಸಿದರೆ ಎನ್‌ಡಿಎಗೆ ಬಹುಮತ ಪಡೆಯುವುದು ಕಷ್ಟ: ಯೋಗೇಂದ್ರ ಯಾದವ್

ಗಾಳಿ ಹೆಚ್ಚು ಬಲವಾಗಿ ಬೀಸಿದರೆ ಎನ್‌ಡಿಎಗೆ ಬಹುಮತ ಪಡೆಯುವುದು ಕಷ್ಟ: ಯೋಗೇಂದ್ರ ಯಾದವ್

- Advertisement -
- Advertisement -

ಪ್ರಸಿದ್ಧ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಮತ್ತು ಯುಎಸ್ ಸಮೀಕ್ಷೆ ತಜ್ಞ ಇಯಾನ್ ಬ್ರೆಮ್ಮರ್ ನಂತರ, ಮತ್ತೋರ್ವ ಚುನಾವಣಾ ವಿಶ್ಲೇಷಕ ಯೋಗೇಂದ್ರ ಯಾದವ್ ಈಗ ಭಾರತೀಯ ಜನತಾ ಪಕ್ಷವು (ಬಿಜೆಪಿ) ಮತ್ತೊಮ್ಮೆ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯ ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಆದರೆ, ಬಿಜೆಪಿ 400 ಸೀಟುಗಳನ್ನು ತಪುಪುವುದು ಕಷ್ಟ ಎಂದು ಹೇಳಿದ್ದಾರೆ.

ಆದಾಗ್ಯೂ, ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಮಾಧಾನ ತರಲಿದ್ದು, ಅದರ ಸ್ಥಾನಗಳ ಸಂಖ್ಯೆ 100 ದಾಟಬಹುದು ಎಂದು ಅಂದಾಜಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಈ ಹೊಸ ವೀಡಿಯೊದಲ್ಲಿ, ಚುನಾವಣಾ ಟ್ರೆಂಡ್‌ಗಳ ಅಂತಿಮ ಮೌಲ್ಯಮಾಪನವನ್ನು ಪ್ರಸ್ತುತಪಡಿಸಲಾಗಿದೆ. 400 ಅಥವಾ 303 ಅನ್ನು ಮರೆತುಬಿಡಿ, ಬಿಜೆಪಿ 272 ಅನ್ನು ದಾಟುವುದಿಲ್ಲ. ಗಾಳಿ ಹೆಚ್ಚು ಬಲವಾಗಿ ಬೀಸಿದರೆ, ಎನ್‌ಡಿಎಗೆ ಬಹುಮತ ಸಿಗದಿರುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ.

“ಚುನಾವಣಾ ಟ್ರೆಂಡ್‌ಗಳ ಬಗ್ಗೆ ಸತ್ಯವನ್ನು ಬಹಿರಂಗಪಡಿಸುವ ನನ್ನ ಹಿಂದಿನ ವೀಡಿಯೊವನ್ನು ಒಂದು ಕೋಟಿಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಎಲ್ಲ ಒಪ್ಪಂದಗಳು, ಭಿನ್ನಾಭಿಪ್ರಾಯಗಳು, ಟೀಕೆಗಳು ಮತ್ತು ಪ್ರಶ್ನೆಗಳಿಗೆ ಧನ್ಯವಾದಗಳು. ಮಾಧ್ಯಮದ ಭ್ರಮೆಗಳಿಂದ ಇತರರನ್ನು ತಪ್ಪಿಸಲು ಮತ್ತು ಉಳಿಸಲು, ಈ ವೀಡಿಯೊವನ್ನು ವೀಕ್ಷಿಸಿ ಮತ್ತು ತೋರಿಸಿ” ಎಂದು ಮನವಿ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ಪರವಾಗಿ ತಮ್ಮ ಭವಿಷ್ಯವಾಣಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ಕಿಶೋರ್, ಯಾದವ್ ಅವರ ಸ್ಥಾನದ ಮುನ್ಸೂಚನೆಯನ್ನು ಬೆಂಬಲಿಸಿದ್ದಾರೆ. ಯಾದವ್ ಪ್ರಕಾರ, ಬಿಜೆಪಿ 240-260 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷಗಳು 34-45 ಸ್ಥಾನಗಳನ್ನು ಗೆಲ್ಲುತ್ತವೆ. ಅಂದರೆ, ಎನ್‌ಡಿಎ ಒಟ್ಟು 275 ಮತ್ತು 305 ಸ್ಥಾನಗಳ ನಡುವೆ ಇರಬಹುದು ಎಂದಿದ್ದಾರೆ.

ಭವಿಷ್ಯ ನುಡಿದಿರುವ ಯಾದವ್, ಕಾಂಗ್ರೆಸ್ 85 ರಿಂದ 100 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಬಿಜೆಪಿ ಜಗ್ಗಾಟವನ್ನು ತನ್ನ ಹಾದಿಯಲ್ಲಿ ನಿಲ್ಲಿಸುವ ಆಶಯ ಹೊಂದಿರುವ ಇಂಡಿಯಾ ಬ್ಲಾಕ್ 120-135 ಸ್ಥಾನಗಳಿಗೆ ಇಳಿಯುವ ಸಾಧ್ಯತೆಯಿದೆ. ಎಂದು ಹೇಳಿದ್ದಾರೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದಿತ್ತು.

ಈ ವಾರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಿಶೋರ್, ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ಗಮನಾರ್ಹ ಅತೃಪ್ತಿ ಇಲ್ಲದ ಕಾರಣ ಬಿಜೆಪಿ ಆರಾಮವಾಗಿ ಬಹುಮತದ ಅಂಕವನ್ನು ದಾಟುತ್ತದೆ ಎಂದು ಹೇಳಿದ್ದರು.

“ನಿರಾಶೆಗಳು, ಈಡೇರದ ಆಕಾಂಕ್ಷೆಗಳು ಇರಬಹುದು. ಆದರೆ, ವ್ಯಾಪಕ ಕೋಪದ ಬಗ್ಗೆ ನಾವು ಕೇಳಿಲ್ಲ” ಎಂದು ಪ್ರಶಾಂತ್ ಕಿಶೋರ್ ಖಾಸಗಿ ಮಾಧ್ಯಮದ ಸಂದರ್ಶನದಲ್ಲಿ ತಿಳಿಸಿದರು. ಬಿಜೆಪಿ ತನ್ನ ಮಹತ್ವಾಕಾಂಕ್ಷೆಯ ‘370 ಸ್ಥಾನ’ ಗುರಿಯನ್ನು ಸಾಧಿಸಲು ಸಾಧ್ಯವಾಗದಿರಬಹುದು ಎಂದು ಸುಳಿವು ನೀಡಿದರು.

ಬಿಜೆಪಿ 295 ರಿಂದ 315 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಮೆರಿಕದ ರಾಜಕೀಯ ವಿಜ್ಞಾನಿ ಇಯಾನ್ ಬ್ರೆಮ್ಮರ್ ವಾಹಿನಿಗೆ ತಿಳಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 303 ಲೋಕಸಭಾ ಸ್ಥಾನಗಳನ್ನು ಗೆದ್ದು, ಹಿಂದಿ ಹೃದಯ ರಾಜ್ಯಗಳಲ್ಲಿ ‘ಮೋದಿ ಅಲೆ’ಯ ಮೇಲೆ ಸವಾರಿ ಮಾಡಿತ್ತು. 370 ಸ್ಥಾನಗಳನ್ನು ಗೆಲ್ಲಬೇಕಾದರೆ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಪಕ್ಷಕ್ಕೆ ಭರ್ಜರಿ ಜಯಗಳಿಸಬೇಕಿದೆ.

ಇದನ್ನೂ ಓದಿ; ಆನಂದ ಬೋಸ್ ವಿರುದ್ಧ ಕಿರುಕುಳ ಪ್ರಕರಣ: ರಾಜಭವನದ ಸಿಬ್ಬಂದಿ ವಿರುದ್ಧದ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...