Homeಕರ್ನಾಟಕ7 ಸೀಟುಗಳಲ್ಲಿ ಮಾತ್ರ ಬಿಜೆಪಿ ಗ್ಯಾರಂಟಿ: ಬಿಜೆಪಿ ಕೋರ್ ಕಮಿಟಿ ಅಂದಾಜು

7 ಸೀಟುಗಳಲ್ಲಿ ಮಾತ್ರ ಬಿಜೆಪಿ ಗ್ಯಾರಂಟಿ: ಬಿಜೆಪಿ ಕೋರ್ ಕಮಿಟಿ ಅಂದಾಜು

- Advertisement -
- Advertisement -

ಅನರ್ಹತೆ ಎತ್ತಿ ಹಿಡಿದು, ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿಲು ಅವಕಾಶ ನೀಡಿದ ಸುಪ್ರೀಂಕೋರ್ಟಿನ ತೀರ್ಪಿನ ನಂತರ ಅನರ್ಹ ಶಾಸಕರು ದೆಹಲಿಯಲ್ಲೇ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ನಂತರ ಬೆಂಗಳೂರಿಗೆ ಬಂದವರು ಸೀದಾ ಯಡಿಯೂರಪ್ಪನವರ ಜೊತೆ ಸಭೆ ನಡೆಸಿದ್ದಾರೆ. ಅಲ್ಲಿಂದ ಯಡಿಯೂರಪ್ಪನವರು ಹೋಗಿದ್ದು ಬಿಜೆಪಿ ಕೋರ್ ಕಮಿಟಿ ಸಭೆಗೆ. ಅಲ್ಲಿ ನಡೆದ ಚರ್ಚೆಯಲ್ಲಿ ಕಮಿಟಿ ಯಾವ ಅಭಿಪ್ರಾಯಕ್ಕೆ ಬಂದಿತು ಎಂಬುದು ನಾನುಗೌರಿ.ಕಾಂಗೆ ಬಿಜೆಪಿ ಮೂಲಗಳು ತಿಳಿಸಿವೆ.

ಚುನಾವಣೆಗೆ ಹೋಗುತ್ತಿರುವ ಒಟ್ಟು 15 ಕ್ಷೇತ್ರಗಳಲ್ಲಿ ಬಿಜೆಪಿ ಎಷ್ಟರ ಮಟ್ಟಿಗೆ ವಿಜಯ ಸಾಧಿಸಬಹುದು ಎಂಬುದು ಕೋರ್ ಕಮಿಟಿಯ ಚರ್ಚೆಗಳಲ್ಲಿ ಒಂದು ಮುಖ್ಯ ಅಜೆಂಡಾ ಆಗಿತ್ತು. ಅನರ್ಹರು ಸ್ಪರ್ಧೆ ಮಾಡಬಹುದು ಎಂದು ಹೇಳಿರುವುದರಿಂದ, ಯಾವ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಬೇಕು ಎಂಬುದು ಚರ್ಚೆಯ ಮತ್ತೊಂದು ಅಂಶವಾಗಿತ್ತು. ರೋಷನ್ ಬೇಗ್ ಹೊರತುಪಡಿಸಿದರೆ ಮಿಕ್ಕೆಲ್ಲರನ್ನೂ ಬಿಜೆಪಿ ಪುರಸ್ಕರಿಸಬೇಕು ಎಂಬುದರ ಬಗ್ಗೆ ಯಾರಿಗೂ ಭಿನ್ನ ಅಭಿಪ್ರಾಯ ಇರಲಿಲ್ಲ.

ರೋಷನ್ ಬೇಗ್ ಐಎಂಎ ಕೇಸಿನಲ್ಲಿ ಭಾಗಿಯಾಗಿರುವುದು, ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿರುವುದು ಮಾತ್ರವಲ್ಲದೇ, ಆರೆಸ್ಸೆಸ್ ಮೂಲದವರಿಗೆ (ಮುಖ್ಯವಾಗಿ ಬಿ.ಎಲ್.ಸಂತೋಷ್‌ಗೆ) ಅವರ ಮೇಲೆ ನಿರ್ದಿಷ್ಟವಾದ ಬೇರೆ ಸಿಟ್ಟೂ ಇದೆಯೆಂದು ಹೇಳಲಾಗುತ್ತಿದೆ.

ಉಳಿದಂತೆ ಇನ್ನೂ ಮೂರು ಕ್ಷೇತ್ರಗಳಲ್ಲಿ ಅನರ್ಹ ಶಾಸಕರಿಗೇ ಟಿಕೆಟ್ ನೀಡಲು ಇನ್ನೂ ಸಹಮತ ಏರ್ಪಟ್ಟಿಲ್ಲ. ಅವುಗಳೆಂದರೆ ಹುಣಸೂರು, ಅಥಣಿ ಮತ್ತು ರಾಣಿಬೆನ್ನೂರು.

ಇನ್ನೆಲ್ಲಾ ಕ್ಷೇತ್ರಗಳಲ್ಲೂ ಅನರ್ಹರಿಗೇ ಟಿಕೆಟ್ ನೀಡಲಾಗುತ್ತದೆ. ಆದರೆ, ಗೆಲುವಿನ ಗ್ಯಾರಂಟಿ ಇರುವುದು 10 ಕ್ಷೇತ್ರಗಳಲ್ಲಿ ಎಂದು ಬಿಜೆಪಿಯ ವತಿಯಿಂದ ಬಹಿರಂಗವಾಗಿ ಹೇಳಲಾಗುತ್ತಿದೆಯಾದರೂ, ಒಳಗೆ ಚರ್ಚೆ ನಡೆದಿರುವುದು 7 ಕ್ಷೇತ್ರಗಳಲ್ಲಿ ಮಾತ್ರ ಆ ಸಾಧ್ಯತೆ ಇದೆ ಎಂದು.

ಇದನ್ನೂ ಓದಿ: ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಸರ್ಕಾರ ಸ್ವಂತಬಲದ ಮೇಲೆ ಉಳಿದುಕೊಳ್ಳಬೇಕೆಂದರೆ, 8ರಲ್ಲಿ ಗೆಲ್ಲಬೇಕು. ಆ ಖಾತ್ರಿ ಇಲ್ಲವಾದುದರಿಂದಲೇ ಜೆಡಿಎಸ್ ಬೆಂಬಲ ಪಡೆಯುವ ವಿಷಯಕ್ಕೆ ಬಿಜೆಪಿಯು ‘ಬೇಡವೇ ಬೇಡ’ ಎಂಬ ಧೋರಣೆ ತೋರುತ್ತಿಲ್ಲ. ದೇವೇಗೌಡರ ನಿನ್ನೆಯ ಮಾತುಗಳೂ ಅದಕ್ಕೆ ಪುಷ್ಟಿ ಕೊಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...